Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

- Advertisement -
- Advertisement -

ಮಧ್ಯಪ್ರದೇಶದ ಸಾಗರ್‌ನಲ್ಲಿ ಜೈನ ದೇವಾಲಯದ ಪಂಡಿತರೊಬ್ಬರು 11 ವರ್ಷದ ದಲಿತ ಬಾಲಕನನ್ನು ಥಳಿಸಿರುವ ಘಟನೆ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟ್ವಿಟ್ಟರ್ ಬಳಕೆದಾರರು ಈ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದಲಿತ ಬಾಲಕ ಸಾಗರದ ಜೈನ ದೇವಾಲಯದ ಹೊರಗೆ ನಿಂತಿದ್ದಾಗ ಕಳ್ಳತನದ ಆರೋಪ ಹೊರಿಸಲಾಗಿದೆ. ಪಂಡಿತ್ ರಾಜೇಶ್ ಜೈನ್ ಬಾಲಕನನ್ನು ಥಳಿಸಿ, ನಂತರ ಕಟ್ಟಿಹಾಕಿದ್ದಾರೆ. ಪೂಜೆಯ ತಟ್ಟೆಯಲ್ಲಿದ್ದ ಬಾದಾಮಿಯನ್ನು ತೆಗೆದು ಜೇಬಿನಲ್ಲಿ ಇಟ್ಟುಕೊಂಡಿದ್ದಾಗಿ ರಾಜೇಶ್ ಜೈನ್‌ ಆರೋಪಿಸಿದ್ದಾರೆ.

ನಗರದ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದಲಿತ ಮಕ್ಕಳ ಮೇಲೆ ಇತ್ತೀಚಿನ ದಿನಗಳಲ್ಲಿ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಉತ್ತರಪ ಪ್ರದೇಶದ ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

“ನಾವು ಊಟದ ಸಮಯದಲ್ಲಿದ್ದ 800 ವಿದ್ಯಾರ್ಥಿಗಳ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಅದರ ವಿವರವಾದ ವರದಿಯನ್ನು ಮ್ಯಾಜಿಸ್ಟ್ರೇಟ್‌ಗೆ ಹಸ್ತಾಂತರಿಸಲಾಗುವುದು” ಎಂದು ಪಾಂಡೆ ಹೇಳಿದರು.

ಸೆಪ್ಟೆಂಬರ್ 3 ರಂದು ಮಹಿಳೆಯೊಬ್ಬರು ದೂರು ನೀಡಿದ್ದು, “ಮಧ್ಯಾಹ್ನದ ಊಟವನ್ನು ಬಡಿಸುವಾಗ ಸರ್ಕಾರಿ ಶಾಲೆಯ ಪ್ರಾಂಶುಪಾಲರು ನನ್ನ ಮಗಳ ಕೈಗಳನ್ನು ಸುಟ್ಟುಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

17 ವರ್ಷದ ದಲಿತ ಬಾಲಕ ನಾಪತ್ತೆಯಾದ ಒಂದು ದಿನದ ನಂತರ ಶವವಾಗಿ ಸಿಕ್ಕಿದ್ದಾನೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಗಣಿಗಾರಿಕೆಯ ಹೊಂಡದಲ್ಲಿ ಆತನ ಶವ ಸೆಪ್ಟೆಂಬರ್ 9ರಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವಾಗಿ ಪತ್ತೆಯಾಗಿರುವ ಬಾಲಕನ ಸಹಪಾಠಿಯ ತಂದೆ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ತನ್ನ ಮಗಳಿಗೆ ಈ ಹುಡುಗ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ದೂರು ನೀಡಿದ ಬಳಿಕ ಈ ಘಟನೆಯಾಗಿದೆ.

ಶುಕ್ರವಾರ ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಆತನ ಶವವನ್ನು ಶಾಲೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಬಾಲಕನಿಗೆ ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಸರ್ಕಲ್ ಆಫೀಸರ್, ಬೀವರ್ ಸುಮಿತ್ ಮೆಹ್ರೇದಾ ತಿಳಿಸಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಬಾಲಕನ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾಮಾಜಿಕ ನ್ಯಾಯಕ್ಕಾಗಿ :
    ತೊಂದರೆ ಅಂದರೆ, ಜೀವಹಾನಿ, ಮಾನಹಾನಿ, ದೈಹಿಕ ಹಲ್ಲೆ ಮಾಡಿದವರನ್ನು ಒಮ್ಮೆ ಸಾಭಿತಾದರೆ ನಿರ್ಣಯಿಸಿದ ವ್ಯಕ್ತಿ, ಗುಂಪು, ಯಾವುದೇ ಶ್ರೇಣಿಯಲ್ಲಿದ್ದರೂ ಅದೇ ತೆರನಾದ ಶಿಕ್ಷೆಯನ್ನು ಸಾರ್ವಜನಿಕವಾಗಿ ನೀಡದ ಹೊರತು ಈ ವ್ಯವಸ್ಥೆ ಬದಲಾಗದು. ಮಾತ್ರವಲ್ಲ ಯಾವುದೇ ರೀತಿಯ ಹಲ್ಲೆ ನಡೆಸುವ ಮುಂಚೆ ಯೋಚಿಸಲು ಶುರುಮಾಡುತ್ತಾರೆ.

    ಆಗ ಮಾತ್ರ ಬದಲಾವಣೆಗಳನ್ನು ನೋಡಬಹುದೇ ಹೊರತು ಅಲ್ಲಿಯವರೆಗೂ ಇಂತಹ ಅಮಾನವೀಯ ಕೃತ್ಯಗಳು ಜರುಗುತ್ತಲೇ ಇರುತ್ತವೆ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...