Homeಮುಖಪುಟರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

- Advertisement -
- Advertisement -

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ರಾಹುಲ್ ಗಾಂಧಿ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ‘ವಿದೇಶಿ ಟಿ-ಶರ್ಟ್’ ಧರಿಸಿ ದೇಶವನ್ನು ಒಂದುಗೂಡಿಸುವ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಜಸ್ಥಾನದ ಜೋಧ್‌ಪುರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ತನ್ನ ಸರ್ಕಾರಗಳನ್ನು ಹೊಂದಿದೆ. 2023 ರ ವಿಧಾನಸಭಾ ಚುನಾವಣೆಯ ನಂತರ ಅವರಿಗೆ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. “ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ, ಕಾಂಗ್ರೆಸ್‌ಗೆ ಏನೂ ಉಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2024 ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್‌‌ 150 ದಿನಗಳ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದೆ. ಇದರಲ್ಲಿ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 3,570 ಕಿಮೀ ಉದ್ದದ ದಾರಿನ್ನು ಪಾದಯಾತ್ರೆಗೆ ಕಾಂಗ್ರೆಸ್ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

ತಮ್ಮ ಭಾಷಣದ ವೇಳೆ ಪಾದಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸಿದ್ದ ಟೀ ಶರ್ಟ್ ಅನ್ನು ಉಲ್ಲೇಖಿಸಿದ ಅಮಿತ್‌ ಶಾ,“ಈಗ ಈ ರಾಹುಲ್ ಬಾಬಾ…ಭಾರತವನ್ನು ಒಗ್ಗೂಡಿಸಲು ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ ಆದರೆ ಅವರು ಧರಿಸಿದ್ದು ವಿದೇಶಿ ಟಿ-ಶರ್ಟ್” ಎಂದು ಹೇಳಿದ್ದಾರೆ. ಭಾರತ್‌ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಧರಿಸಿದ್ದ ಟಿ-ಶರ್ಟ್‌ನ ಬೆಲೆ 41 ಸಾವಿರ ಎಂದು ಬಿಜೆಪಿ ಪ್ರತಿಪಾದಿಸಿದೆ.

“ಅವರು ಒಮ್ಮೆ ಸಂಸತ್ತಿನಲ್ಲಿ ಭಾಷಣ ಮಾಡುವಾಗ ಭಾರತವು ಒಂದು ದೇಶವಲ್ಲ ಎಂದು ಹೇಳುತ್ತಾರೆ. ಹಲವಾರು ಧೀರ ಹೃದಯಗಳು ತ್ಯಾಗ ಬಲಿದಾನ ಮಾಡಿದ ದೇಶವಿದು. ರಾಹುಲ್ ಬಾಬಾ ಭಾರತವನ್ನು ಒಗ್ಗೂಡಿಸಲು ಪ್ರಯತ್ನಿಸುವ ಮೊದಲು ದೇಶದ ಇತಿಹಾಸವನ್ನು ಓದಬೇಕು” ಎಂದು ಅಮಿತ್‌ ಶಾ ಹೇಳಿದ್ದಾರೆ.

ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧವೂ ಅಮಿತ್ ಶಾ ವಾಗ್ದಾಳಿ ನಡೆಸಿದ್ದು, “2018 ರಲ್ಲಿ ನೀವು ರಾಹುಲ್ ಗಾಂಧಿಯವರೊಂದಿಗೆ ಸೇರಿ ನೀಡಿದ ಭರವಸೆಗನ್ನು ನೆನಪಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಯುವಕರಿಗೆ 3,500 ರೂ.ಗಳ ನಿರುದ್ಯೋಗ ಭತ್ಯೆ ಏನಾಯಿತು? 20 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಯೋಜನೆ ಏನಾಯಿತು? ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ನೀಡಬಲ್ಲದೆ ಹೊರತು, ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ಬಿಜೆಪಿಯ ರಾಷ್ಟ್ರೀಯ ಒಬಿಸಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅಮಿತ್ ಶಾ ರಾಜಸ್ಥಾನದ ಜೋಧಪುರಕ್ಕೆ ಭೇಟಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಮೋದಿ ಹತ್ತು ಲಕ್ಷ ರೂ.ಬೆಲೆಯ ಸೂಟ್ ದರಿಸಿದಾಗ ಅಮಿತ್ ಶಾ ಕಣ್ಣು ಕುರುಡಾಗಿತ್ತಾ?

  2. ಹೌದ ಗುಂಡು ಬಾಬಾ. ನಿಮ್ಮ ಚೌಕಿದಾರ ಹಾಕುವ ಬಟ್ಟೆ ಬೆಲೆ ಗೊತ್ತಾ ನಿಂಗೆ?? ಅವನು ಸೈನ್ ಮಾಡುವ ಪೆನ್ನಿನ ಬೆಲೆ ಗೊತ್ತಾ ನಿಂಗೆ? ಅದು ಬಿಡು ಗುಂಡು ಬಾಬಾ ನಿಮ್ಮ ಪಕ್ಷ 2014ರ ಲೋಕ ಸಭಾ ಚುನಾವಣೆ ಅಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಯೋಗ್ಯತೆ ನಿಮಗೆ ಇಲ್ಲ. ಎಲ್ಲಿ ಹೋದವು ವರ್ಷಕ್ಕೆ 2ಕೋಟಿ ಉದ್ಯೋಗ? ಎಲ್ಲಿ 40 ರೂಪಾಯಿಯ ಪೆಟ್ರೋಲ್? ಎಲ್ಲಿ ಒಂದು ರೂಪಾಯಿಗೆ ಒಂದು ಡಾಲರ್? ಎಲ್ಲಿ ಅಚ್ಚೆ ದಿನ? ಒಂದು ತಿಳಿದು ಗುಂಡು ಬಾಬಾ ನಿಮ್ಮದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ ಇಂದು ಅತಿವೃಷ್ಟಿ ಯಿಂದ ರಾಜ್ಯದ ಸುಮಾರು ಅರ್ಧಕ್ಕೂ ಹೆಚ್ಚಿನ ಭಾಗ ಜಲವೃತ್ತ ಗೊಂಡು ಬೆಲೆ ನಾಶ, ಮನೆಗಳು ಬಿದ್ದು, ಅನ್ನ ಆಹಾರ ಇಲ್ಲದೆ ಸಂಕಷ್ಟದಲ್ಲಿ ಇದ್ದಾರೆ. ಆದರೆ ನಿಮ್ಮ ಡಬ್ಬಲ್ ಇಂಜಿನ್ ಸರ್ಕಾರ ಇದರ ಪರಿವೆ ಇಲ್ಲದೆ ಏನೋ ಸಾಧಿಸಿರುವ ಹಾಗೆ ಜನಸ್ಪಂದನ ಕಾರ್ಯಕ್ರಮ ಮಾಡಿದ್ದಾರೆ. ಮೇಲಿನ ಯಾವುದಕ್ಕೂ ಸ್ಪಂದನೆ ನೀಡದ ನಿಮ್ಮ ಪಕ್ಷ ಸಾರ್ವಜನಿಕರಿಂದ ಪಡೆದ ತೆರಿಗೆ ಹಣದಲ್ಲಿ ಕಾರ್ಯಕ್ರಮ ಮಾಡುವುದು ಎಷ್ಟು ಯೋಗ್ಯ? ನಿಮ್ಮ ಪಕ್ಷಕ್ಕೆ ಜನತೆಯ ಅಭಿವೃದ್ದಿ ಮುಖ್ಯ ಅಲ್ಲ. ನಿಮ್ಮವರ ನಿಮ್ಮ ಪಕ್ಷದ ಅಭಿವೃದ್ದಿ ಅಷ್ಟೇ ಮುಖ್ಯ. ನಿಮ್ಮ ಆಡಳಿತ ವ್ಯವಸ್ಥೆ ನೋಡಿದರೆ ಒಂದು ಪುರಾತನ ಗಾದೆ ಮಾತು ನೆನಪಿಗೆ ಬರುತ್ತೆ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತು ಅಂತ ಅದಕ್ಕೆ ಅನ್ವರ್ಥಕ ವಾಗಿ ನಿಮ್ಮ ಪಕ್ಷ ನಡೆದುಕೊಳ್ಳುತ್ತಿದ್ದಾರೆ

  3. Amith shah a great buffoon has he forgotten the 2cr job , 15 lakh,dollars =rupees,petrol 30 rs ,gas above this PM changes his dress 3 times a day costing around lakhs , imported mushroom etc 🤣

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....