Homeಕರ್ನಾಟಕಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

- Advertisement -
- Advertisement -

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಇಬ್ಬರು ನಾಯಕರೂ ಶನಿವಾರ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆದ “ಜನಸ್ಪಂದನ” ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚುನಾವಣೆಗಾಗಿ ರಾಹುಲ್ ಗಾಂಧಿ ಈಗಾಗಲೇ ಎಲ್ಲೆಲ್ಲಿ ಹೋಗಿದ್ದಾರೋ, ಎಲ್ಲ ಕಡೆಯಲ್ಲಿಯೂ ಕಾಂಗ್ರೆಸ್ ಸೋತಿದೆ.‌ ಈಗ ಕಾಂಗ್ರೆಸ್ ಪಕ್ಷ ಆರಂಭಿಸಿದ ‘ಭಾರತ್ ಜೋಡೋ ಯಾತ್ರೆ’ಯು ಕಾಂಗ್ರೆಸ್ ಮುಕ್ತ ಭಾರತದ ಮುನ್ಸೂಚನೆಯಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಖಚಿತ” ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಬೊಮ್ಮಾಯಿಯವರು ‘ವಿದ್ಯಾಸಿರಿ’ಯನ್ನು ಆರಂಭಿಸಿದ್ದಾರೆ. ಕಿಸಾನ್ ಸಮ್ಮಾನ್‌ಗೆ ಹೆಚ್ಚುವರಿ ಮೊತ್ತ ಸೇರಿಸಿ ಕೊಡಲಾಗುತ್ತಿದೆ. ಸೋನಿಯಾ ಗಾಂಧಿ, ರಾಹುಲ್, ಡಿ ಕೆ ಶಿವಕುಮಾರ್ ಸೇರಿ ಎಲ್ಲರೂ ಜಾಮೀನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರಿಗಳ ಪಕ್ಷ. ಸಿದ್ದರಾಮಯ್ಯರ ಕಾಲದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಹಗರಣ ಆಗಿದೆ” ಎಂದು ನಳಿನ್ ಕುಮಾರ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ,“ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದು ಹೇಳಿದ್ದಾರೆ.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಅವರು ಹೇಳಿದ್ದಾರೆ.

“ಯಾವಾಗಲೂ ಸಂವಿಧಾನ ಪರವಾಗಿ ಮಾತನಾಡುವ ಸಿದ್ದರಾಮಣ್ಣ ಅಂದು ನಿಮ್ಮ ನೈತಿಕತೆ ಎಲ್ಲಿತ್ತು? ನೀವು ಯಾರಿಗೆ ಉಪದೇಶ ಹೇಳುತ್ತೀರಾ, ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ. ಅಧಿಕಾರಕ್ಕಾಗಿ ನೀವು ಏನು ಮಾಡದ್ರಿ ಎಂಬುದು ಅಂದು ಜಗಜ್ಜಾಹೀರಾಗಿದೆ” ಎಂದು ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದವರು ವೀರರು

“ಮೈತ್ರಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ ಎಂದು 17 ಜನರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಸುಮ್ಮನೆ ಬರಲಿಲ್ಲ. ರಾಜೀನಾಮೆ ನೀಡಿ ಮತ್ತೊಮ್ಮೆ ಜನರ ನಡುವೆ ಹೋಗುತ್ತೇವೆ ಎಂದು ಮತ್ತೆ ಗೆದ್ದು ಬಂದರು. ಅವರೆಲ್ಲರೂ ವೀರರು” ಎಂದು ಬೊಮ್ಮಾಯಿ ಅವರು ಆಪರೇಷನ್‌ ಕಮಲ ವೇಳೆ ಬಿಜೆಪಿ ಸೇರಿದ ಕಾಂಗ್ರೆಸ್‌ನ ನಾಯಕರನ್ನು ಕೊಂಡಾಡಿದ್ದಾರೆ.

“ಕೋವಿಡ್ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅಧಿಕಾರದಲ್ಲಿ ಇರದಿದ್ದರೆ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ, ಜನ ನರಕಕ್ಕೆ ಹೋಗುತ್ತಿದ್ದರು. ಕಾಂಗ್ರೆಸ್‌ನವರದ್ದು ಕೇವಲ ಅಧಿಕಾರದ ದಾಹ ಮಾತ್ರ. ಅವರಿಗೆ ಜಸೇವೆಯ ಯಾವ ಉದ್ದೇಶವೂ ಇಲ್ಲ; ಎಲ್ಲವೂ ನಾಟಕ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೆರೆ ಖಾಲಿ ಬೀಳುತ್ತದೆ: ಸಿ ಟಿ ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿ, “ಬಿಜೆಪಿ ಅಧಿಕಾರಕ್ಕೆ ಬಂದಾಗ ಕೆರೆ ತುಂಬುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಹಾಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಕೆರೆ ಖಾಲಿ ಬೀಳುತ್ತದೆ. ಬಿಜೆಪಿ ಕಾಲ್ಗುಣ ಒಳ್ಳೆಯದಿದೆ. ಈ ಬಾರಿ ಇಲ್ಲಿನ 18 ಶಾಸಕರ ಸ್ಥಾನದಲ್ಲಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಿ” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭರವಸೆಗಳು ಇಲ್ಲದೆ ಹೋದಾಗ ಚಡಪಡಿಕೆಯ ಮಾತುಗಳು ಸ್ವಾಭಾವಿಕ ಎಲ್ಲಾ ಕಳೆದು ಹೋದ ಮೇಲೆ ಬರುವ ಮಾತುಗಳು ಇಂಥವುಗಳೆ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....