Homeಕರ್ನಾಟಕ‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

- Advertisement -
- Advertisement -

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಡಿರುವ ಭಾಷಣಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ತಿರುಗೇಟು ನೀಡಿರುವ ಅವರು, “ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು, ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ನನ್ನ ಆಡಳಿತದ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ” ಎಂದು ಕುಹಕವಾಡಿದ್ದಾರೆ.

“ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುವ ಬದಲು ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ನಿಮ್ಮ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ.‘ ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ” ಎಂದು ಆಶಿಸಿದ್ದಾರೆ.

“ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ” ಎಂದಿದ್ದಾರೆ.

ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ –ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದಿದ್ದರು.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...