Homeಅಂಕಣಗಳು'ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?'

‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

- Advertisement -
- Advertisement -

ಆರೆಸ್ಸೆಸ್ ತತ್ವ ಅಳವಡಿಸಿಕೊಂಡರೆ ನಾವು ಕಾಂಗ್ರೆಸ್ ಪರವಾಗಿಯೂ ಕೆಲಸ ಮಾಡಲು ಸಿದ್ಧ ಎಂದು ಆರೆಸ್ಸೆಸ್ ಸಂಘದ ಅರುಣಕುಮಾರ ಹೇಳಿದ್ದಾರಲ್ಲಾ ಇದೊಂದು ರೀತಿ ಅಜ್ಞಾನದಿಂದ ಕೂಡಿರುವ ಮಾತು. ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಹಲವರು ಹಿಂದೂ ಪರವಾದ ಸಿದ್ಧಾಂತಗಳಲ್ಲೇ ಬದುಕಿದ್ದಾರೆ. ಆದರೆ ಜೈನ, ಬೌದ್ಧ, ಸಿಖ್ ಮತ್ತು ಬಸವ ತತ್ವಗಳೆಲ್ಲಾ ಹಿಂದೂಧರ್ಮದಿಂದಲೇ ಸಿಡಿದುಹೋಗಿ ಪ್ರಜ್ವಲಿಸುತ್ತಿರುವ ಧರ್ಮದ ಕಿಡಿಗಳು. ಇನ್ನೂ ಲೋಕಲ್ಲಾಗಿ ಮಾತನಾಡುವುದಾದರೆ ಕಾಂಗ್ರೆಸಿನಲ್ಲಿದ್ದು ತಮ್ಮವನೇನಾದರು ಬಿಜೆಪಿ ಕ್ಯಾಂಡಿಡೇಟ್ ಆದರೆ ಅವನಿಗೆ ಓಟು ಮಾಡುವ ಅಸಾಮಿಗಳೂ ಹೇರಳವಾಗಿದ್ದಾರೆ. ಈ ಪೈಕಿ ಎರಡು ಉದಾಹರಣೆ ಕೊಡುವುದಾದರೆ, ಚಿಕ್ಕಮಗಳೂರಲ್ಲಿ ಅನಾದಿಕಾಲದಿಂದಲೂ ಕಾಂಗ್ರೆಸ್ಸಿಗರಾಗಿರುವ ಒಕ್ಕಲಿಗರು ತಮ್ಮ ಹುಡುಗನನ್ನ ಕೈಬಿಡಲಾದೀತೆ ಎಂದು ಸಿ.ಟಿ.ರವಿಗೆ ಓಟು ಮಾಡುತ್ತಿರಲಾಗಿ, ಅತ್ತ ಶಿವಮೊಗ್ಗದ ಕಾಂಗ್ರೆಸ್ ಕುರುಬರು ಈಶ್ವರಪ್ಪ ನಮ್ಮವನೆಂದು ಓಟು ಮಾಡುವ ಉದಾಹರಣೆಗಳು ನಮ್ಮ ಮುಂದಿವೆ. ಆದರೆ ಬಿಜೆಪಿ ವಿಷಯದಲ್ಲಿ ಈ ಆಟ ನಡೆಯುವುದಿಲ್ಲ. ಅಲ್ಲಿ ಹೆರಿಗೆ ಡಾಕ್ಟರ್ ಹೆರಿಗೆ ಪೇಷಂಟ್ ಕಾಯುವಂತೆ ಬಿಜೆಪಿ ಮತದಾರರನ್ನು ಕಾಯುವ ವಾಚ್‌ಮನ್‌ಗಳು ಹೇರಳವಾಗಿದ್ದಾರಂತಲ್ಲಾ, ಥೂತ್ತೇರಿ.

*****

ನಮ್ಮ ಸಂಸ್ಕೃತಿ ವಿಷಯ ಮಾತನಾಡುವುದಾದರೆ, ಸಾಮಾಜಿಕವಾಗಿ ಏನೇ ನಡೆದರೂ, ಅದು ಮಹಿಳೆ ಮತ್ತು ಮಕ್ಕಳ ಮೇಲೆ ಪರಿಣಾಮ ಬೀರುತ್ತಾ ಬಂದಿರುವುದು ಅನಾದಿಕಾಲದಿಂದ ನಡೆದುಬಂದಿದೆ. ಮುರುಘಾ ಶರಣರ ಆರೋಪಿತ ದುಷ್ಕೃತ್ಯದಲ್ಲಿ ಸಿಲುಕಿದ್ದವರೆಲ್ಲಾ ಮಕ್ಕಳು. ಇನ್ನು ಪ್ರವಾಹದಿಂದ ಸಂತ್ರಸ್ತರಾಗಿ ಶಾಸಕನಿಂದ ಅನಾಗರಿಕವಾದ ಅವಾಚ್ಯ ಬೈಗುಳ ಕೇಳಿದವರು ಮಹಿಳೆ. ಈ ಪ್ರಕರಣದ ವಿಷಯದಲ್ಲಿ ಮಾಧ್ಯಮದೊಳಗಿರುವ ಶ್ಯಾನುಭೋಗರ ಮಕ್ಕಳು ಕೃತ್ಯದ ವಿಶ್ಲೇಷಣೆ ಬಿಟ್ಟು, ಕಾಂಗ್ರೆಸ್ ಕೈಗೆ ಅನಾಯಾಸವಾಗಿ ಸಿಕ್ಕ ಅಸ್ತ್ರವಿದು ಎಂದುದಲ್ಲದೆ ಶಿಸ್ತಿನ ಪಕ್ಷ ಬಿಜೆಪಿ ಏನು ಮಾಡುತ್ತದೋ ಎಂದು ಕೂಗಿವೆಯಲ್ಲಾ. ಅಂತೂ ಲಿಂಬಾವಳಿ ನಡವಳಿಕೆಯಿಂದ ಅಘಾತವಾಗಿರುವುದು ಟಿವಿಯೊಳಗಿರುವ ಸಂಘಿ ಅಂಕರ್‌ಗಳಿಗೆ. ಶಿಸ್ತಿನ ಪಕ್ಷ ಬಿಜೆಪಿ ಎನ್ನುವುದನ್ನು ವಿಶ್ಲೇಷಿಸುವುವಾದರೆ ಲಿಂಬಾವಳಿಯ ಅನಾಗರಿಕ ನಡತೆಯ ವಿಷಯದಲ್ಲಿ ಯಾವೊಬ್ಬ ಬಿಜೆಪಿಯೂ ಪ್ರತಿಕ್ರಿಯಿಸಿಲ್ಲ. ಇನ್ನು ಬಿಜೆಪಿ ಮಹಿಳೆಯರಂತೂ ಆಕೆಗೆ ತಕ್ಕಶಾಸ್ತಿಯಾಯ್ತು ಎನ್ನುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಕರ್ನಾಟಕದ ಇತಿಹಾಸದಲ್ಲಿ ಈವರೆಗೆ ಯಾವೊಬ್ಬ ಶಾಸಕನೂ ಇಷ್ಟು ಅನಾಗರಿಕವಾಗಿ ನಡೆದುಕೊಂಡಿರದ ಕಾರಣವಾಗಿ, ಪ್ರಕರಣದ ಪ್ರಮುಖ ಆರೋಪಿ ಲಿಂಬಾವಳಿಯನ್ನ ಮಾತನಾಡಿಸಬೇಕೆನಿಸಿತಲ್ಲಾ. ಆ ಕೂಡಲೇ ಪೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ “ನಮಸ್ತೆ ಸದಾ ವತ್ಸಲೇ ಮಾತೃಭೂಮಿ”.

“ಹಲೋ ಯಾರ್ರಿ”

“ಸಾರ್ ನಾನು ಯಾಹು ಅಂತ, ಸಾರ್”

“ಯಾಹು ಅಂದರೆ ಯಾರ್ರಿ”

“ಪತ್ರಕರ್ತ ಸಾರ್”

“ಏನೇಳ್ರಿ”

“ನಿಮಗೆ ಧಮಕಿ ಹಾಕಿದ ಮಹಿಳೆ ಮೇಲೆ ಎಫ್‌ಐಆರ್ ಆಯ್ತಂತಲ್ಲಾ ಸಾರ್”

“ಎಫ್‌ಐಆರ್‌ಗಿಂತ ಮೊದ್ಲು ನಾಲ್ಕು ವದಿರಿ ಅವುಳಿಗೆ ಅಂತ ಹೇಳಿದ್ದೆ ನಮ್ಮ ಪೊಲೀಸರಿಗೆ”

“ಯಾಕ್ ಸಾರ್”

“ಮತ್ತೆ ಅವಳ ದುರಹಂಕಾರ ನೋಡ್ರಿ, ರಾಜಕಾಲುವೆ ಒತ್ತುವರಿ ಮಾಡಿದ್ಲು, ಅಲ್ದೆ ನನಿಗೇ ಆವಾಜ್ ಹಾಕ್ತಳೆ”

“ತಪ್ಪು ಸಾರ್ ಜನಪ್ರತಿನಿಧಿಗೆ ಆವಾಜ್ ಹಾಕಬಾರ್ದು”

“ಅದಕ್ಕೆ ಎಫ್‌ಐಆರ್ ಹಾಕಿಸಿದ್ದೀನಿ”

“ವಳೆದಾಯ್ತು ಬುಡಿ ಸಾರ್. ಇನ್ನ ಮುಂದೆ ಯಾರೂ ನಿಮ್ಮತ್ರ ಅರ್ಜಿ ಹಿಡಕೊಂಡು ಬರಲ್ಲ”

“ಜನಕ್ಕೆ ಸದರ ಕೊಡಬಾರ್ದು ಕಂಡ್ರಿ. ಶಾಸಕರು ಅಂದ್ರೆ ಭಯ ಇರಬೇಕು. ಇಲ್ಲ ಅಂದ್ರೆ ಯಲ್ಲಾದಕ್ಕೂ ಅರ್ಜಿ ತಗೊಂಡು ಬರ್ತಾರೆ”

“ಮಹಿಳಾ ಹೋರಾಟಗಾರ್ರು ಆ ಹೆಣ್ಣು ಮಗಳ ಪರ ಪ್ರತಿಭಟನೆ ಮಾಡ್ತೆ ಅವುರೆ.”

“ಮಾಡ್ಲಿ ಬುಡ್ರಿ. ಈ ಮಹಿಳೆಯರು ಆಕೆ ಪರ ಬರ್ತಾರೆ ಅಂದ್ರೆ ಇವುರು ಅವುಳ ತರದೋರೆಯಾ”

“ಅಲ್ಲ ಸಾರ್, ನಿಮ್ಮಲ್ಲಿ ಮಹಿಳೆಯರ ಬಗ್ಗೆ ಇರೋ ಗೌರವ ನೋಡಿದ್ರೆ, ನಿಮ್ಮ ಮಾತಿನ ಪರಿಣಾಮನೆ ನಿಮಗೆ ಗೊತ್ತಿಲ್ಲ ಅನ್ಸುತ್ತೆ”

“ಏನೇಳ್ತಾಯಿದ್ದಿರಿ ನೀವು”

“ಅವತ್ತಿನಿಂದ ಇವತ್ತಿನವರೆಗೂ ಶಿಸ್ತಿನ ಪಕ್ಷವಾದ ನಿಮ್ಮಲ್ಲಿ ಶೀಲವಂತನೇ ಕಾಣಲಿಲ್ಲ. ವಿಕೃತ ಮನಸ್ಸಿನವರೇ ಜಾಸ್ತಿ ಬಿಡಿ ಸಾರ್”

ಥೂತ್ತೇರಿ.


ಇದನ್ನೂ ಓದಿ: ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...