Homeಮುಖಪುಟನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹೆಮ್ಮಯಿಂದ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ?

- Advertisement -
- Advertisement -

ಹರಿಯಾಣದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾರವರ ಪ್ರದರ್ಶನ ರದ್ದುಗೊಳಿಸಿದ VHP ವಿರುದ್ಧ ಕಡಿಕಾರಿರುವ ಅವರು ‘ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ’ ಎಂದು ಸವಾಲು ಹಾಕಿದ್ದಾರೆ.

ಸೆಪ್ಟಂಬರ್ 17 ಮತ್ತು 18 ರಂದು ಗುರ್ಗಾವ್‌ನ ಸೆಕ್ಟರ್‌ 29ರಲ್ಲಿನ ಸ್ಟುಡಿಯೊ ಎಕ್ಸ್‌ಒ ಬಾರ್‌ನಲ್ಲಿ ಕುನಾಲ್ ಕಮ್ರಾರವರ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಜರಂಗದಳ ಮತ್ತು VHP ಕುನಾಲ್ ಕಮ್ರಾರನ್ನು ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್‌ ಮೂಲಕ ಒತ್ತಡ ತಂದಿದ್ದರೆ ಪರಿಣಾಮವಾಗಿ ಪ್ರದರ್ಶನ ರದ್ದಾಗಿದೆ.

ಈ ಕುರಿತು VHPಗೆ ಬಹಿರಂಗ ಪತ್ರ ಬರೆದಿರುವ ಕುನಾಲ್ ಕಮ್ರಾ, “ನಾನುಗಿಂತ VHPಗಿಂತ ದೊಡ್ಡ ಹಿಂದೂ. ಏಕೆಂದರೆ ನಿಮ್ಮ ರೀತಿ ಜನರಲ್ಲಿ ಭಯ ಹುಟ್ಟಿಸಿ, ಬೆದರಿಕೆ ಹಾಕಿ ಗಳಿಸಿದ ಹಣದಿಂದ ಜೀವನ ನಡೆಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ನಾನು ಹೆಮ್ಮಯಿಂದ, ಜೋರಾಗಿ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ? ಕೂಗಿದಿದ್ದರೆ ನೀವು ದೊಡ್ಡ ಹಿಂದೂ ವಿರೋಧಿಗಳು ಮತ್ತು ಭಯೋತ್ಪಾದನೆ ಬೆಂಬಲಿಗರು ಎಂದು ಕುನಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಡ್ಸೆಯನ್ನು ದೇವರೆಂದು ಪರಿಗಣಿಸುತ್ತೀರೆಂದು ನನ್ನ ಬಳಿ ಹೇಳಬೇಡಿ. ಅದು ನಿಜವಾದರೆ ನೀವು ಮುಂದಕ್ಕೂ ನನ್ನ ಪ್ರದರ್ಶನಗಳನ್ನು ರದ್ದುಗೊಳಿಸಿ. ಈ ಪರೀಕ್ಷೆಯಲ್ಲಿ ನಾನು ಸಂತೋಷದಿಂದ ಗೆದ್ದುಬರುತ್ತೇನೆ ಮತ್ತು ನಿಮಗಿಂತ ದೊಡ್ಡ ಹಿಂದೂ ಎಂದು ನಿರೂಪಿಸುತ್ತೇನೆ. ನಾನು ಕಷ್ಟಪಟ್ಟು ಗಳಿಸಿದ ಹಣದಿಂದ ಜೀವನ ನಡೆಸುತ್ತಿದ್ದೇನೆ ಹೊರತು ನಿಮ್ಮ ರೀತಿ ಜನರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿಲ್ಲ. ಇದೊಂದು ನಿಮ್ಮ ಕಾಯಿಲೆಯಾಗಿದೆ ಎಂದು ಅವರು ಬರೆದಿದ್ದಾರೆ.

ನನ್ನ ಇದುವರೆಗಿನ ಕಾಮಿಡಿ ಶೋಗಳಲ್ಲಿ ಹಿಂದೂ ದೇವರನ್ನು ನಿಂದಿಸಿರುವ, ಅವಹೇಳನ ಮಾಡಿರುವ ಪುರಾವೆಗಳಿದ್ದರೆ, ಆ ವಿಡಿಯೋಗಳಿದ್ದರೆ ನನಗೆ ತೋರಿಸಿ. ನಾನು ಸರ್ಕಾರಗಳನ್ನು ಅಣಕ ಮಾಡುತ್ತೇನೆ, ನೀವು ಸರ್ಕಾರದ ಚಮಚಗಳಾಗಿದ್ದರೆ ನಿಮಗೆ ನೋವಾಗುವುದಕ್ಕೆ ಅರ್ಥವಿದೆ. ಆದರೆ ಇದರಲ್ಲಿ ಹಿಂದೂ ಧರ್ಮವನ್ನು ಏಕೆ ಎಳೆದು ತರುತ್ತೀರಿ ಎಂದು ಕಮ್ರಾ ಪ್ರಶ್ನಿಸಿದ್ದಾರೆ.

ಬಾರ್ ಮಾಲೀಕರಿಗೆ ಬೆದರಿಕೆ ಹಾಕಿದ್ದಕ್ಕೆ ನನ್ನ ಪ್ರದರ್ಶನ ರದ್ದುಗೊಂಡಿದೆ. ಹಾಗಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ತಮ್ಮ ವ್ಯವಹಾರ ಮಾಡುತ್ತಿದ್ದಾರೆ ಅಷ್ಟೆ. ಅವರು ಈ ಗೂಂಡಾಗಳೊಂದಿಗೆ ವ್ಯವಹರಿಸಲು ಸಾಧ್ಯವೇ? ಅವರು ಪೊಲೀಸರ ಬಳಿ ಸಹ ಹೋಗಲು ಸಾಧ್ಯವಿಲ್ಲ. ಒಂದು ವೇಳೆ ಹೋದರೂ ಸಹ ಪೊಲೀಸರು ದಯವಿಟ್ಟು ಪ್ರದರ್ಶನ ರದ್ದುಗೊಳಿಸಿ ಎಂದು ಮನವಿ ಮಾಡುತ್ತಾರೆ ಅಷ್ಟೆ. ಏಕೆಂದರೆ ಇಡೀ ವ್ಯವಸ್ಥೆಯ ನಿಮ್ಮ ಜೊತೆ ಇದೆ ಎಂದು VHP ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...