Homeಮುಖಪುಟನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ: VHP ಗೆ ಕುನಾಲ್ ಕಮ್ರಾ ಸವಾಲು

ನಾನು ಹೆಮ್ಮಯಿಂದ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ?

- Advertisement -
- Advertisement -

ಹರಿಯಾಣದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾರವರ ಪ್ರದರ್ಶನ ರದ್ದುಗೊಳಿಸಿದ VHP ವಿರುದ್ಧ ಕಡಿಕಾರಿರುವ ಅವರು ‘ನಾನು ಹಿಂದೂ ವಿರೋಧಿಯೆಂಬುದುಕ್ಕೆ ಪುರಾವೆ ತೋರಿಸಿ’ ಎಂದು ಸವಾಲು ಹಾಕಿದ್ದಾರೆ.

ಸೆಪ್ಟಂಬರ್ 17 ಮತ್ತು 18 ರಂದು ಗುರ್ಗಾವ್‌ನ ಸೆಕ್ಟರ್‌ 29ರಲ್ಲಿನ ಸ್ಟುಡಿಯೊ ಎಕ್ಸ್‌ಒ ಬಾರ್‌ನಲ್ಲಿ ಕುನಾಲ್ ಕಮ್ರಾರವರ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಬಜರಂಗದಳ ಮತ್ತು VHP ಕುನಾಲ್ ಕಮ್ರಾರನ್ನು ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್‌ ಮೂಲಕ ಒತ್ತಡ ತಂದಿದ್ದರೆ ಪರಿಣಾಮವಾಗಿ ಪ್ರದರ್ಶನ ರದ್ದಾಗಿದೆ.

ಈ ಕುರಿತು VHPಗೆ ಬಹಿರಂಗ ಪತ್ರ ಬರೆದಿರುವ ಕುನಾಲ್ ಕಮ್ರಾ, “ನಾನುಗಿಂತ VHPಗಿಂತ ದೊಡ್ಡ ಹಿಂದೂ. ಏಕೆಂದರೆ ನಿಮ್ಮ ರೀತಿ ಜನರಲ್ಲಿ ಭಯ ಹುಟ್ಟಿಸಿ, ಬೆದರಿಕೆ ಹಾಕಿ ಗಳಿಸಿದ ಹಣದಿಂದ ಜೀವನ ನಡೆಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ನಾನು ಹೆಮ್ಮಯಿಂದ, ಜೋರಾಗಿ ಜೈ ಶ್ರೀ ಸೀತಾ-ರಾಮ್, ಜೈ ರಾಧ ಕೃಷ್ಣ ಎಂದು ಘೋಷಣೆ ಕೂಗುತ್ತೇನೆ. ನೀವು ನಿಜವಾದ ಭಾರತದ ಮಕ್ಕಳೆ ಆಗಿದ್ದರೆ ಗೋಡ್ಸೆ ಮುರ್ದಾಬಾದ್ ಎಂದು ಘೋಷಣೆ ಕೂಗುವಿರಾ? ಕೂಗಿದಿದ್ದರೆ ನೀವು ದೊಡ್ಡ ಹಿಂದೂ ವಿರೋಧಿಗಳು ಮತ್ತು ಭಯೋತ್ಪಾದನೆ ಬೆಂಬಲಿಗರು ಎಂದು ಕುನಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಡ್ಸೆಯನ್ನು ದೇವರೆಂದು ಪರಿಗಣಿಸುತ್ತೀರೆಂದು ನನ್ನ ಬಳಿ ಹೇಳಬೇಡಿ. ಅದು ನಿಜವಾದರೆ ನೀವು ಮುಂದಕ್ಕೂ ನನ್ನ ಪ್ರದರ್ಶನಗಳನ್ನು ರದ್ದುಗೊಳಿಸಿ. ಈ ಪರೀಕ್ಷೆಯಲ್ಲಿ ನಾನು ಸಂತೋಷದಿಂದ ಗೆದ್ದುಬರುತ್ತೇನೆ ಮತ್ತು ನಿಮಗಿಂತ ದೊಡ್ಡ ಹಿಂದೂ ಎಂದು ನಿರೂಪಿಸುತ್ತೇನೆ. ನಾನು ಕಷ್ಟಪಟ್ಟು ಗಳಿಸಿದ ಹಣದಿಂದ ಜೀವನ ನಡೆಸುತ್ತಿದ್ದೇನೆ ಹೊರತು ನಿಮ್ಮ ರೀತಿ ಜನರನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿಲ್ಲ. ಇದೊಂದು ನಿಮ್ಮ ಕಾಯಿಲೆಯಾಗಿದೆ ಎಂದು ಅವರು ಬರೆದಿದ್ದಾರೆ.

ನನ್ನ ಇದುವರೆಗಿನ ಕಾಮಿಡಿ ಶೋಗಳಲ್ಲಿ ಹಿಂದೂ ದೇವರನ್ನು ನಿಂದಿಸಿರುವ, ಅವಹೇಳನ ಮಾಡಿರುವ ಪುರಾವೆಗಳಿದ್ದರೆ, ಆ ವಿಡಿಯೋಗಳಿದ್ದರೆ ನನಗೆ ತೋರಿಸಿ. ನಾನು ಸರ್ಕಾರಗಳನ್ನು ಅಣಕ ಮಾಡುತ್ತೇನೆ, ನೀವು ಸರ್ಕಾರದ ಚಮಚಗಳಾಗಿದ್ದರೆ ನಿಮಗೆ ನೋವಾಗುವುದಕ್ಕೆ ಅರ್ಥವಿದೆ. ಆದರೆ ಇದರಲ್ಲಿ ಹಿಂದೂ ಧರ್ಮವನ್ನು ಏಕೆ ಎಳೆದು ತರುತ್ತೀರಿ ಎಂದು ಕಮ್ರಾ ಪ್ರಶ್ನಿಸಿದ್ದಾರೆ.

ಬಾರ್ ಮಾಲೀಕರಿಗೆ ಬೆದರಿಕೆ ಹಾಕಿದ್ದಕ್ಕೆ ನನ್ನ ಪ್ರದರ್ಶನ ರದ್ದುಗೊಂಡಿದೆ. ಹಾಗಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ತಮ್ಮ ವ್ಯವಹಾರ ಮಾಡುತ್ತಿದ್ದಾರೆ ಅಷ್ಟೆ. ಅವರು ಈ ಗೂಂಡಾಗಳೊಂದಿಗೆ ವ್ಯವಹರಿಸಲು ಸಾಧ್ಯವೇ? ಅವರು ಪೊಲೀಸರ ಬಳಿ ಸಹ ಹೋಗಲು ಸಾಧ್ಯವಿಲ್ಲ. ಒಂದು ವೇಳೆ ಹೋದರೂ ಸಹ ಪೊಲೀಸರು ದಯವಿಟ್ಟು ಪ್ರದರ್ಶನ ರದ್ದುಗೊಳಿಸಿ ಎಂದು ಮನವಿ ಮಾಡುತ್ತಾರೆ ಅಷ್ಟೆ. ಏಕೆಂದರೆ ಇಡೀ ವ್ಯವಸ್ಥೆಯ ನಿಮ್ಮ ಜೊತೆ ಇದೆ ಎಂದು VHP ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...