Homeಕರ್ನಾಟಕಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

ಬಿಜೆಪಿಯ ಕೊನೆಯ ದಿನಗಳು ಆರಂಭ, ಬೊಮ್ಮಾಯಿ ಧಮ್ ಇಳಿಯುತ್ತದೆ: ಡಿ.ಕೆ. ಶಿವಕುಮಾರ್‌

- Advertisement -
- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಅವರು ಧಮ್‌ ವಿಚಾರ ಮಾತನಾಡಿದ್ದಾರೆ. ನಾನು ಅವರಿಗೆ ಅದೇ ಧಮ್‌ ನಿಂದ ಹೇಳುತ್ತಿದ್ದೇನೆ; ಬಿಜೆಪಿಯ ಕೊನೆಯ ದಿನಗಳು ಆರಂಭವಾಗಿವೆ. ಅವರ ಧಮ್ ಇಳಿಯುತ್ತದೆ, ನಮ್ಮ ಧಮ್‌ ಏರುತ್ತದೆ ಎಂದು ರಾಜ್ಯ ಕಾಂಗ್ರೆಸ್‌‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಭಾನುವಾರ ಹೇಳಿದ್ದಾರೆ. ಅವರು ಬಳ್ಳಾರಿಯಲ್ಲಿ ನಡೆದ ʼಭಾರತ ಜೋಡೋ ಯಾತ್ರೆʼ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡುತ್ತಿದ್ದರು.

“ಬಿಜೆಪಿಯವರು ಈ ದೇಶವನ್ನು ಕತ್ತರಿಸುವ ಕತ್ತರಿಯಾದರೆ, ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗೂಡಿಸುವ ಸೂಜಿಯಂತೆ ಕೆಲಸ ಮಾಡಲಿದೆ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿ ಕ್ಷೇತ್ರದಲ್ಲಿ 25000 ಜನರನ್ನು ಸೇರಿಸಿ

“ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3510 ಕಿ.ಮೀ. ಪಾದಯಾತ್ರೆ ಮಾಡುತ್ತಿರುವುದನ್ನು ಕಂಡು ಬಿಜೆಪಿ ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಅವರು ರಾಜ್ಯದಲ್ಲಿ ಬೇರೆ ಮಾರ್ಗವಾಗಿ ಪಾದಯಾತ್ರೆ ಮಾಡಬಹುದಿತ್ತು. ಆದರೆ ನನ್ನ ತಾಯಿಗೆ ರಾಜಕೀಯವಾಗಿ ಜೀವ ಕೊಟ್ಟ ಬಳ್ಳಾರಿ ಕ್ಷೇತ್ರದಲ್ಲಿ ನಾನು ಪಾದಯಾತ್ರೆ ಮಾಡಬೇಕು ಎಂದು ಅವರು ತೀರ್ಮಾನಿಸಿದ್ದಾರೆ” ಎಂದು ಹೇಳಿದ್ದಾರೆ.

“ಬಳ್ಳಾರಿಯ ಪಾಲಿಕೆ ಸದಸ್ಯರು ಭಾರತ ಜೋಡೋ ಯಾತ್ರೆ ಕುರಿತು ಭಿತ್ತಿಪತ್ರಗಳನ್ನು ಮನೆ, ಮನೆಗೆ ತಲುಪಿಸಬೇಕು. ಪ್ರತಿ ಹಳ್ಳಿಯಲ್ಲಿ ಎಲ್ಲರೂ ಪ್ರವಾಸ ಮಾಡಿ ಈ ಕಾರ್ಯಕ್ರಮದ ಬಗ್ಗೆ ಪ್ರಚಾರ ಮಾಡಬೇಕು. ಈ ವಿಚಾರವಾಗಿ ಪಂಚಾಯತಿ ಮಟ್ಟದಲ್ಲಿ ಪೂರ್ವತಯಾರಿ ಸಭೆಗಳನ್ನು ನಡೆಸಬೇಕು. ಚುನಾವಣೆಯಲ್ಲಿ ಗೆದ್ದಿರುವವರು ಹಾಗೂ ಸೋತಿರುವವರು ನಾಯಕರಾಗಿ ಬೆಳೆದಿದ್ದೀರಿ. ಪ್ರತಿ ಕ್ಷೇತ್ರದಿಂದ 25 ಸಾವಿರ ಜನರನ್ನು ಪಾದಯಾತ್ರೆಗೆ ಕರೆತನ್ನಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿದೇಶಿ ಟಿ-ಶರ್ಟ್ ಧರಿಸಿದ್ದಾರೆ: ಅಮಿತ್‌ ಶಾ

“ರಾಜ್ಯದ ರೈತರು ಹಾಗೂ ಕಾರ್ಮಿಕರ ಬದುಕನ್ನು ಹಸನು ಮಾಡಬೇಕಾಗಿದೆ. ರೈತರ ಬೆಳೆಗೆ ಬೆಂಬಲ ಬೆಲೆ ಸಿಗಬೇಕಿದೆ. ಹಾಲು ಉತ್ಪಾದಿಸುವ ರೈತರಿಗೂ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರು ಬಳಸುವ ರಸಗೊಬ್ಬರ, ಕೀಟನಾಶಕ, ಯಂತ್ರೋಪಕರಣಗಳ ಬೆಲೆ ಹೆಚ್ಚಾಗಿದೆ. ರಾಹುಲ್ ಗಾಂಧಿಯವರು ತಮಗೆ ಸಿಕ್ಕಿದ್ದ ಅಧಿಕಾರದ ಅವಕಾಶಗಳನ್ನು ತ್ಯಾಗ ಮಾಡಿ ಜನರಿಗಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಯಾತ್ರೆಗೆ ಹಣ ಕೊಟ್ಟು ಜನ ಕರೆದುಕೊಂಡು ಬರೋದು ಬೇಡ. ಪ್ರೀತಿ, ವಿಶ್ವಾಸ, ಅಭಿಮಾನದಿಂದ ದೇಶವನ್ನು ಒಗ್ಗೂಡಿಸಲು ಆಸಕ್ತಿ ಇರುವವರು ಈ ಯಾತ್ರೆಗೆ ಆಗಮಿಸಲಿ. ಬಿಜೆಪಿಯವರು ನಾವು ಹಿಂದುಗಳು, ನಾವು ಮುಂದು ಎಂದು ಹೇಳುತ್ತಾರೆ. ಆದರೆ ನಾವು ಹಿಂದು, ಕ್ರೈಸ್ತರು, ಸಿಖ್ಖರು, ಪರಿಶಿಷ್ಟರು, ಬ್ರಾಹ್ಮಣರು, ವೀರಶೈವ ಲಿಂಗಾಯತರು, ಒಕ್ಕಲಿಗರು ಎಲ್ಲರೂ ಒಂದು ಎಂದು ಹೇಳುತ್ತೇವೆ” ಎಂದು ಅವರು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...