HomeಮುಖಪುಟCAA ವಿರುದ್ಧದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರಿಂಕೋರ್ಟ್‌

CAA ವಿರುದ್ಧದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರಿಂಕೋರ್ಟ್‌

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ (ಇಂದು) ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ತ್ರಿಸದಸ್ಯ ಪೀಠವು ಈ ಕಾಯಿದೆಯು ಭಾರತೀಯ ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸುತ್ತದೆಯೇ ಎಂದು ವಿಚಾರಣೆ ನಡೆಸಲಿದೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿದ್ದು, ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ, ವಿಶೇಷವಾಗಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಂತಹ ದೇಶಗಳಲ್ಲಿ ಕಿರುಕುಳಕ್ಕೊಳಗಾದವರಿಗೆ ಭಾರತೀಯ ಪೌರತ್ವವನ್ನು ಖಾತರಿಪಡಿಸುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರವು ತಿದ್ದುಪಡಿಯನ್ನು ‘ಸಹಾನುಭೂತಿ ಮತ್ತು ಸೇರ್ಪಡೆ’ ಎಂದು ವಿವರಿಸಿದ್ದರೂ, ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು, ತಿದ್ದುಪಡಿಯಿಂದ ಮುಸ್ಲಿಂ ಸಮುದಾಯವನ್ನು ಪಟ್ಟಿಯಿಂದ ಹೊರಗಿಟ್ಟಿದ್ದು ‘ತಾರತಮ್ಯ’ ಎಂದು ಕರೆದಿದೆ.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಅಸಾದುದ್ದೀನ್ ಓವೈಸಿ, ಜೈರಾಮ್ ರಮೇಶ್, ರಮೇಶ್ ಚೆನ್ನಿತಲ ಮತ್ತು ಮಹುವಾ ಮೊಯಿತ್ರಾ ಅವರಂತಹ ರಾಜಕಾರಣಿಗಳು ಮತ್ತು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ, ದ್ರಾವಿಡ ಮುನ್ನೇತ್ರ ಕಳಗಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ಅಸೋಮ್ ಗಣ ಪರಿಷತ್‌ನಂತಹ ರಾಜಕೀಯ ಪಕ್ಷಗಳು ಕೂಡಾ ಕಾಯ್ದೆಯ ವಿರುದ್ಧ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

ಪ್ರಕರಣ ಈಗ ಎಲ್ಲಿ ನಿಂತಿದೆ?

ವಲಸಿಗರ ಸಾಂದ್ರತೆ ಹೆಚ್ಚಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪೌರತ್ವ ಅರ್ಜಿಗಳನ್ನು ಸ್ವೀಕರಿಸಲು ಅಧಿಕಾರ ನೀಡುವ 2021ರ ಮೇ 28 ರಂದು ಒಕ್ಕೂಟ ಸರ್ಕಾರದ ನಿರ್ದೇಶನದ ವಿರುದ್ಧ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ಕೋರಿದೆ. ಒಕ್ಕೂಟ ಸರ್ಕಾರವು ಪ್ರತಿ ಪ್ರತಿಕ್ರಿಯೆ ಸಲ್ಲಿಸಿದಾಗಿನಿಂದ ನ್ಯಾಯಾಲಯವು ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲ.

ಕಾಯ್ದೆಯ ಸವಾಲುಗಳೇನು?

ನ್ಯಾಯಾಲಯವು ಪ್ರಾಥಮಿಕವಾಗಿ ಆರ್ಟಿಕಲ್ 14 ರ ವಿರುದ್ಧವಾಗಿ ಕಾಯಿದೆಯ ಸಿಂಧುತ್ವವನ್ನು ಪರಿಶೀಲಿಸುತ್ತಿದೆ ಎಂದು ಹೇಳಲಾಗುತ್ತದೆ. ಭಾರತೀಯ ಭೂಪ್ರದೇಶದಲ್ಲಿ ಜಾತಿ, ನಂಬಿಕೆ ಮತ್ತು ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ರಕ್ಷಣೆ ನೀಡುವ ವಿಷಯದಲ್ಲಿ ಈ ಕಾಯ್ದೆ ಸಂವಿಧಾನದ ಉಲ್ಲಂಘನೆ ಮಾಡುತ್ತದೆಯೇ ಅಥವಾ ಕಾನೂನಿನ ಮುಂದೆ ಸಮಾನತೆಯ ಹಕ್ಕನ್ನು ನಿರಾಕರಿಸುತ್ತದೆಯೇ ಎಂಬುದನ್ನು ಸುಪ್ರೀಂಕೋರ್ಟ್‌ ಪರಿಶೀಲನೆ ಮಾಡಲಿದೆ.

ಇದನ್ನೂ ಓದಿ: ದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

ಕೆಲವು ಧರ್ಮಗಳನ್ನು ಹೆಸರಿಸಿ, ಮುಸ್ಲಿಂ ಸಮುದಾಯವನ್ನು ಹೊರತುಪಡಿಸುವ ವಿಷಯದಲ್ಲಿ ಈ ಕಾಯಿದೆ ತಾರತಮ್ಯ ಮಾಡಿದೆಯೇ ಎಂಬುದು ಸಿಎಎಗೆ ಪ್ರಾಥಮಿಕ ಸವಾಲಾಗಿದೆ. ಮುಖ್ಯವಾಗಿ ನೆರೆಯ ಮೂರು ರಾಷ್ಟ್ರಗಳಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ರಕ್ಷಣೆ ಮಾತ್ರ ಕಾನೂನಿನ ಗುರಿಯಾಗಿದ್ದರೆ, ಇತರ ನೆರೆಯ ದೇಶಗಳನ್ನು ಮತ್ತು ಮುಸ್ಲಿಂ ಸಮುದಾಯವನ್ನು ಹೊರಗಿಡುವುದು ಕಾನೂನಿಗೆ ಸವಾಲಾಗಿ ಪರಿಣಮಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....