HomeಮುಖಪುಟCAA ವಿರುದ್ಧದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರಿಂಕೋರ್ಟ್‌

CAA ವಿರುದ್ಧದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರಿಂಕೋರ್ಟ್‌

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ (ಇಂದು) ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ತ್ರಿಸದಸ್ಯ ಪೀಠವು ಈ ಕಾಯಿದೆಯು ಭಾರತೀಯ ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸುತ್ತದೆಯೇ ಎಂದು ವಿಚಾರಣೆ ನಡೆಸಲಿದೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿದ್ದು, ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ, ವಿಶೇಷವಾಗಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಂತಹ ದೇಶಗಳಲ್ಲಿ ಕಿರುಕುಳಕ್ಕೊಳಗಾದವರಿಗೆ ಭಾರತೀಯ ಪೌರತ್ವವನ್ನು ಖಾತರಿಪಡಿಸುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರವು ತಿದ್ದುಪಡಿಯನ್ನು ‘ಸಹಾನುಭೂತಿ ಮತ್ತು ಸೇರ್ಪಡೆ’ ಎಂದು ವಿವರಿಸಿದ್ದರೂ, ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು, ತಿದ್ದುಪಡಿಯಿಂದ ಮುಸ್ಲಿಂ ಸಮುದಾಯವನ್ನು ಪಟ್ಟಿಯಿಂದ ಹೊರಗಿಟ್ಟಿದ್ದು ‘ತಾರತಮ್ಯ’ ಎಂದು ಕರೆದಿದೆ.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಅಸಾದುದ್ದೀನ್ ಓವೈಸಿ, ಜೈರಾಮ್ ರಮೇಶ್, ರಮೇಶ್ ಚೆನ್ನಿತಲ ಮತ್ತು ಮಹುವಾ ಮೊಯಿತ್ರಾ ಅವರಂತಹ ರಾಜಕಾರಣಿಗಳು ಮತ್ತು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ, ದ್ರಾವಿಡ ಮುನ್ನೇತ್ರ ಕಳಗಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ಅಸೋಮ್ ಗಣ ಪರಿಷತ್‌ನಂತಹ ರಾಜಕೀಯ ಪಕ್ಷಗಳು ಕೂಡಾ ಕಾಯ್ದೆಯ ವಿರುದ್ಧ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

ಪ್ರಕರಣ ಈಗ ಎಲ್ಲಿ ನಿಂತಿದೆ?

ವಲಸಿಗರ ಸಾಂದ್ರತೆ ಹೆಚ್ಚಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪೌರತ್ವ ಅರ್ಜಿಗಳನ್ನು ಸ್ವೀಕರಿಸಲು ಅಧಿಕಾರ ನೀಡುವ 2021ರ ಮೇ 28 ರಂದು ಒಕ್ಕೂಟ ಸರ್ಕಾರದ ನಿರ್ದೇಶನದ ವಿರುದ್ಧ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ಕೋರಿದೆ. ಒಕ್ಕೂಟ ಸರ್ಕಾರವು ಪ್ರತಿ ಪ್ರತಿಕ್ರಿಯೆ ಸಲ್ಲಿಸಿದಾಗಿನಿಂದ ನ್ಯಾಯಾಲಯವು ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲ.

ಕಾಯ್ದೆಯ ಸವಾಲುಗಳೇನು?

ನ್ಯಾಯಾಲಯವು ಪ್ರಾಥಮಿಕವಾಗಿ ಆರ್ಟಿಕಲ್ 14 ರ ವಿರುದ್ಧವಾಗಿ ಕಾಯಿದೆಯ ಸಿಂಧುತ್ವವನ್ನು ಪರಿಶೀಲಿಸುತ್ತಿದೆ ಎಂದು ಹೇಳಲಾಗುತ್ತದೆ. ಭಾರತೀಯ ಭೂಪ್ರದೇಶದಲ್ಲಿ ಜಾತಿ, ನಂಬಿಕೆ ಮತ್ತು ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ರಕ್ಷಣೆ ನೀಡುವ ವಿಷಯದಲ್ಲಿ ಈ ಕಾಯ್ದೆ ಸಂವಿಧಾನದ ಉಲ್ಲಂಘನೆ ಮಾಡುತ್ತದೆಯೇ ಅಥವಾ ಕಾನೂನಿನ ಮುಂದೆ ಸಮಾನತೆಯ ಹಕ್ಕನ್ನು ನಿರಾಕರಿಸುತ್ತದೆಯೇ ಎಂಬುದನ್ನು ಸುಪ್ರೀಂಕೋರ್ಟ್‌ ಪರಿಶೀಲನೆ ಮಾಡಲಿದೆ.

ಇದನ್ನೂ ಓದಿ: ದ್ವೇಷ ಪ್ರಚೋದನೆ; ಕನ್ನಡ ಸುದ್ದಿವಾಹಿನಿಗಳ ವಿರುದ್ಧ 17 ದೂರು ನೀಡಿದರೂ ಪೊಲೀಸರಿಂದ ಸಿಗದ ಪ್ರತಿಕ್ರಿಯೆ- ಸಿಎಎಚ್‌ಎಸ್‌

ಕೆಲವು ಧರ್ಮಗಳನ್ನು ಹೆಸರಿಸಿ, ಮುಸ್ಲಿಂ ಸಮುದಾಯವನ್ನು ಹೊರತುಪಡಿಸುವ ವಿಷಯದಲ್ಲಿ ಈ ಕಾಯಿದೆ ತಾರತಮ್ಯ ಮಾಡಿದೆಯೇ ಎಂಬುದು ಸಿಎಎಗೆ ಪ್ರಾಥಮಿಕ ಸವಾಲಾಗಿದೆ. ಮುಖ್ಯವಾಗಿ ನೆರೆಯ ಮೂರು ರಾಷ್ಟ್ರಗಳಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ರಕ್ಷಣೆ ಮಾತ್ರ ಕಾನೂನಿನ ಗುರಿಯಾಗಿದ್ದರೆ, ಇತರ ನೆರೆಯ ದೇಶಗಳನ್ನು ಮತ್ತು ಮುಸ್ಲಿಂ ಸಮುದಾಯವನ್ನು ಹೊರಗಿಡುವುದು ಕಾನೂನಿಗೆ ಸವಾಲಾಗಿ ಪರಿಣಮಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...