Homeಕರ್ನಾಟಕಬಳ್ಳಾರಿ: ಗಣಪತಿ ಮೆರವಣಿಗೆ ವೇಳೆ ಮಸೀದಿಗೆ ಚಪ್ಪಲಿ ಎಸೆದ ನಾಲ್ವರ ಬಂಧನ

ಬಳ್ಳಾರಿ: ಗಣಪತಿ ಮೆರವಣಿಗೆ ವೇಳೆ ಮಸೀದಿಗೆ ಚಪ್ಪಲಿ ಎಸೆದ ನಾಲ್ವರ ಬಂಧನ

- Advertisement -
- Advertisement -

ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿಯೊಂದಕ್ಕೆ ಚಪ್ಪಲಿ ಎಸೆದ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯಲ್ಲಿ  ನಾಲ್ವರನ್ನು ಪೊಲೀಸರು ಬಂಧಿಸಲಾಗಿದೆ.

“ಕೋಮು ಗಲಭೆ ಸೃಷ್ಟಿಸಲು ಈ ಕೃತ್ಯವನ್ನು ಎಸಗಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ. ಸಿರುಗುಪ್ಪ ಪಟ್ಟಣದಲ್ಲಿ ಘಟನೆ ನಡೆದಿದೆ.

ಆರೋಪಿಗಳನ್ನು ನಿತೇಶ್ ಕುಮಾರ್, ಭೀಮಣ್ಣ, ಅಶೋಕ್ ಮತ್ತು ಆಂಜನೇಯಲು ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. “ನಾವು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.

“ಮೆರವಣಿಗೆಯ ಮಾರ್ಗದಲ್ಲಿ ಗಮನ ಹರಿಸಲು ನಿಯೋಜಿಸಲಾಗಿದ್ದ ಪೊಲೀಸ್ ಅಧಿಕಾರಿಗಳು ಘಟನೆಗೆ ಸಾಕ್ಷಿಯಾಗಿದ್ದರು. ಆದರೆ ಆರಂಭದಲ್ಲಿ ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಆರೋಪಿಗಳು ಚಪ್ಪಲಿ ಎಸೆದಿರುವ ವಿಡಿಯೋ ವೈರಲ್ ಆದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಸಿರುಗುಪ್ಪ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶ), 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಮತ್ತು 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದಲ್ಲಿ ಸಾವರ್ಕರ್‌, ಗೋಡ್ಸೆ ಫೋಟೋ ಪ್ರದರ್ಶನ

ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಗಣೇಶೋತ್ಸವವೂ ವಿವಾದಕ್ಕೆ ಗುರಿಯಾಗಿತ್ತು. ಹಿಂದೂ ಮಹಾಸಭಾದಿಂದ ನಡೆದ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ ಹಾಗೂ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದ ವಿ.ಡಿ.ಸಾವರ್ಕರ್‌ ಫೋಟೋವನ್ನು ಪ್ರದರ್ಶಿಸಲಾಗಿತ್ತು.

ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ವೇಳೆ ಈ ಫೋಟೋಗಳನ್ನು ಪ್ರದರ್ಶಿಸಿದ್ದರು.

ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಸುಭಾಷ್‌ಚಂದ್ರ ಬೋಸ್, ಭಗತ್‌ಸಿಂಗ್ ಜೊತೆಗೆ ಶಿವಮೊಗ್ಗದಲ್ಲಿ ಕೊಲೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ, ವಿ.ಡಿ.ಸಾವರ್ಕರ್ ಹಾಗೂ ನಾಥೂರಾಮ್ ಗೋಡ್ಸೆಯ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿತ್ತು.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್‌!

ಗಣಪತಿಯ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಅಮೀರ್‌ಅಹಮದ್ ವೃತ್ತದಲ್ಲಿ ವೀರಸಾವರ್ಕರ್ ಹೆಸರಿನಲ್ಲಿ ಬೃಹತ್ ಮಹಾದ್ವಾರ ನಿರ್ಮಿಸಲಾಗಿತ್ತು. ವಿಶೇಷವೆಂದರೆ ಕೆಲವು ದಿನಗಳ ಹಿಂದಷ್ಟೇ ಇಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.

ಮೆರವಣಿಗೆಯಲ್ಲಿ ಸಾಗಿ ಬಂದ ಗಣಪತಿ ಮೂರ್ತಿ ಹಿಂಭಾಗದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಳವಡಿಸಲಾಗಿತ್ತು. ಅಮೀರ್ ಅಹಮದ್ ವೃತ್ತ ಹಾಗೂ ಬಸ್ ನಿಲ್ದಾಣದ ಎದುರು ಅಶೋಕ ಲಾಂಛನದ ಮೇಲೆ ಕೇಸರಿ ಧ್ವಜಗಳು ಹಾರಾಡಿದ್ದವು.

ಮೆರವಣಿಗೆಯಲ್ಲಿ ಡಿಜೆ ಹಾಕಲು ಜಿಲ್ಲಾಡಳಿತ ಮೊದಲು ಅವಕಾಶ ನಿರಾಕರಿಸಿತ್ತು. ನಂತರ ಸಂಘಟಕರ ಒತ್ತಡಕ್ಕೆ ಮಣಿದು ಗೋಪಿ ವೃತ್ತದಲ್ಲಿ ಡಿಜೆಗೆ ಅವಕಾಶ ಕಲ್ಪಿಸಲಾಗಿದೆ. ಶಾಸಕ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ಹುರಿದುಂಬಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...