Homeಕರ್ನಾಟಕಹಿಂದಿ ದಿವಸ ಆಚರಣೆ ವಿರೋಧಿಸಿ ಮುಖ್ಯಮಂತ್ರಿಗೆ ಕುಮಾರಸ್ವಾಮಿ ಪತ್ರ

ಹಿಂದಿ ದಿವಸ ಆಚರಣೆ ವಿರೋಧಿಸಿ ಮುಖ್ಯಮಂತ್ರಿಗೆ ಕುಮಾರಸ್ವಾಮಿ ಪತ್ರ

- Advertisement -
- Advertisement -

ಸೆಪ್ಟಂಬರ್‌‌ 14ರಂದು ಆಚರಿಸಲಾಗುವ ಹಿಂದಿ ದಿವಸವನ್ನು ವಿರೋಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

“ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಅನ್ಯಾಯವಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸೆಪ್ಟಂಬರ್‌ 14ರಂದು ಭಾರತ ಒಕ್ಕೂಟ ಸರ್ಕಾರದ ಪ್ರಯೋಜಿತ ಕಾರ್ಯಕ್ರಮವಾದ ‘ಹಿಂದಿ ದಿವಸ’ವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ, ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದು” ಎಂದು ಅವರು ಆಗ್ರಹಿಸಿದ್ದಾರೆ.

ಹಿಂದಿ ದಿವಸಕ್ಕೆ ಕರವೇ ವಿರೋಧ

ಸೆ 14 ರಂದು ಒಕ್ಕೂಟ ಸರ್ಕಾರ ನಡೆಸಲು ಉದ್ದೇಶಿಸಿರುವ ಹಿಂದಿ ದಿವಸ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಿಡಿಯಾಗಿದ್ದು, ಕರ್ನಾಟಕದಲ್ಲಿ ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ ಆಚರಿಸಲು ಅವಕಾಶ ನೀಡುವುದಿಲ್ಲ ಎಂದು ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕಿಡಿಕಾರಿದ್ದಾರೆ.

ಹಿಂದಿ ದಿವಸ ಆಚರಣೆ ಸಂಬಂಧ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಸೆ.14ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್‌ ನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಮಾನತೆಯ ಮೇಲೆ ರಚಿತವಾದ ಈ ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ಭಾಷೆಯನ್ನು ಮಾತ್ರ ಮೆರೆಸಿ ಉಳಿದ ಭಾಷೆಗಳನ್ನು ತುಳಿಯುವ  ಹುನ್ನಾರವನ್ನು ನಾವೆಲ್ಲರೂ ವಿರೋಧಿಸಬೇಕು, ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ. ಒಕ್ಕೂಟದ ಎಲ್ಲಾ ನುಡಿಗಳಂತೆ ಹಿಂದಿಯೂ ಒಂದು ನುಡಿಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ʼಇಂದ್ರ ವೈಭೋಗʼ ನೀಡಿ ಇತರ ನುಡಿಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು ಎಂದು ಎಚ್ಚರಿಸಿದ್ದಾರೆ.

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ನುಡಿ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ನುಡಿ. ನಮ್ಮ ಕನ್ನಡ ಏಳು ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ. ಇಂಥ ನುಡಿಯ ಮೇಲೆ ಹಿಂದಿಯನ್ನು ಹೇರುವ ಕುತಂತ್ರಗಳನ್ನು ವಿಫಲಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ  ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...