Homeಕರ್ನಾಟಕರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಕಡೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಪೂರ್ವ ಬೆಂಗಳೂರು ತತ್ತರಿಸಿದ ಬೆನ್ನಲ್ಲೇ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಇದರ ಬೆನ್ನಲ್ಲೇ ಕಾಲುವೆ ಒತ್ತುವರಿ ಮಾಡಿಕೊಂಡ ಘಟಾನುಘಟಿಗಳ ಪಟ್ಟಿಯನ್ನು ಬಿಬಿಎಂಪಿ ಮಹದೇವಪುರ ವಲಯ ಕಚೇರಿ ಬಿಡುಗಡೆ ಮಾಡಿದೆ.

ಐಟಿ ಪಾರ್ಕ್ ಮತ್ತು ಡೆವಲಪರ್‌ಗಳಿಂದ ಆಗಿರುವ ಒತ್ತುವರಿಯ ಜಾಗಗಳನ್ನು ಗುರುತಿಸಿರುವ ಬಿಬಿಎಂಪಿ ಅಧಿಕಾರಿಗಳು, ಮೌಖಿಕ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೆ ಸೋಮವಾರ ಹದಿನೈದು ಕಡೆ ನೀರುಕಾಲುವೆ ಒತ್ತುವರಿಯನ್ನು ತೆರವು ಮಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾಲುವೆ ಒತ್ತುವರಿ ಪ್ರದೇಶಗಳು: ಬಿಬಿಎಂಪಿ ಪಟ್ಟಿ

ಮಹಾದೇವಪುರದ ಸರ್ವೇ ನಂ. 35, 38, 103, 102, 104, 89, 92, 95, 94, 97, 96, 88ರಲ್ಲಿ ಬಾಗಮನೆ ಟೆಕ್‌ಪಾರ್ಕ್, ಪೂರ್ವ ಪ್ಯಾರಡೈಸ್‌ ಮತ್ತು ಇತರರು ಒತ್ತುವರಿ ಮಾಡಿಕೊಂಡಿದ್ದಾರೆ.

ಜುನ್ನಸಂದ್ರದ ಸ.ನಂ. 19, ಹಾಲನಾಯಕನಹಳ್ಳಿಯ ಸರ್ವೇ ನಂಬರ್‌ 18, 19, 3, 16, 14, 10, 22, 20, 21, 4, ದೊಡ್ಡಕನ್ನಹಳ್ಳಿಯ ಸ.ನಂ. 36, 40, 41ರಲ್ಲಿ ಆರ್‌.ಬಿ.ಡಿ. ಸಂಸ್ಥೆಯವರು ಅತಿಕ್ರಮಣ ಮಾಡಿದ್ದಾರೆ.

ದೊಡ್ಡಕನ್ನಹಳ್ಳಿಯ ಸ.ನಂ. 80, 79, 77, 78, 69ರಲ್ಲಿ ವಿಪ್ರೋ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಬೆಳ್ಳಂದೂರಿನ ಸ.ನಂ. 66, 64, 62, 63, 60, 59, 56, 55, 50, 49, 46, 44, 45, 20, 21, 61ರಲ್ಲಿ ಇಕೋಸ್ಪೇನ್‌ನಿಂದ ಒತ್ತುವರಿಯಾಗಿದೆ.

ಗೋಪಾಲನ್‌ ಸಂಸ್ಥೆಯವರು ಬೆಳ್ಳಂದೂರಿನ ಸ.ನಂ. 68, 67, 61, 58, 57, 54, 53, 51, 48, 47, 43, 23, 25ರಲ್ಲಿ ಹಾಗೂ ಹೂಡಿಯ ಸ.ನಂ. 17, 183, 182, 181, 168, 166, 167ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ದಿವ್ಯಾ ಸ್ಕೂಲ್‌ ಮತ್ತು ಇತರರು ಹೂಡಿಯ ಸ.ನಂ. 71, 72, 73ರಲ್ಲಿ, ಗೋಪಾಲನ್ ಮತ್ತು ಇತರರು ಹೂಡಿಯ ಸ.ನಂ. 180, ಸೊನ್ನೆಹಳ್ಳಿಯ ಸ.ನಂ. 44ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ.

ಆದರ್ಶ ಸಂಸ್ಥೆಯವರು ಆರ್‌.ನಾರಾಯಣಪುರದ ಸ.ನಂ. 1, 36, 35, 34, 33, 29, 24, 25, 26ರಲ್ಲಿ; ಕೊಲಂಬಿಯಾ ಏಷಿಯಾ ಆಸ್ಪತ್ರೆಯವರು ರಾಮಗೊಂಡನಹಳ್ಳಿಯ ಸ.ನಂ. 38, 28, 17, 18ರಲ್ಲಿ, ನ್ಯೂ ಹಾರಿಝೋನ್‌ ಕಾಲೇಜಿನವರು ಕಾಡುಬೇಸನಹಳ್ಳಿ ಸ.ನಂ. 10, 13, 17, 18, 22, 14, 23, 16ರಲ್ಲಿ, ಆದರ್ಶ ರೀಟ್ರೀಟ್‌ನವರು ದೇವರಬೇಸನಹಳ್ಳಿಯ ಸ.ನಂ. 19, 17, 15, 16, 25, 31, 30, 36ರಲ್ಲಿ, Epyslon ಮತ್ತು ದಿವ್ಯಶ್ರೀ ಸಂಸ್ಥೆಯವರು ಎಬಿಕೆ ಹಾಗೂ ಯಮಲೂರಿನಲ್ಲಿ, ಪ್ರಸ್ಟೀಜ್‌, ಸಲಪುರಿಯ ಮತ್ತು ಆದರ್ಶ ಸಂಸ್ಥೆಯವರು ಮಾರತಹಳ್ಳಿ, ಕರಿಯಮ್ಮನ ಅಗ್ರಹಾರದಲ್ಲಿ ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ. ನಲಪಾಡ್‌ನವರು ಚಲಘಟ್ಟದ ಸರ್ವೇ ನಂಬರ್‌ 66, 67, 68, 69, 70ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ವಿವಿಧ ಸ್ಥಳಗಳಲ್ಲಿ ಒತ್ತುವರಿ ಕಾರ್ಯಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಅದರಂತೆ ಸೋಮವಾರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಮಹದೇಪುರ ವಲಯ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಘವೇಂದ್ರ ತಿಳಿಸಿದ್ದಾರೆ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಚೆಲ್ಲಘಟ್ಟ, ಚಿನ್ನಪ್ಪನ ಹಳ್ಳಿ, ಬಸವಣ್ಣನಗರ, ಸ್ಪೈಸಿ ಗಾರ್ಡನ್ ಹಾಗೂ ಬಸವನಪುರ ವಾರ್ಡ್‌ನ ಎಸ್.ಆರ್. ಲೇಔಟ್ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ ಭೂಮಾಪಕರು ಗುರುತಿಸಿದಂತಹ ಒತ್ತುವರಿ ಪ್ರದೇಶವನ್ನು ತೆರವು ಮಾಡಲಾಗುತ್ತಿದೆ. ಪಾಲಿಕೆಯ ಅಧಿಕಾರಿಗಳು, ಮಾರ್ಷಲ್‌ಗಳ ತಂಡವು ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹದೇವಪುರ ವಲಯದಲ್ಲಿ ಚಿನ್ನಪ್ಪನಹಳ್ಳಿಯಿಂದ ಮುನ್ನೇಕೊಳಾಳ ಕೆರೆಯ ನಡುವೆ ಎಇಸಿಎಸ್ ಲೇಔಟ್ ವ್ಯಾಪ್ತಿಯಲ್ಲಿ ಸಾಯಿ ಕಣ್ಣಿನ ಆಸ್ಪತ್ರೆಯ ಕಾಂಪೌಂಡ್ ಗೋಡೆ, ರಾಘವ ಸೂಪರ್ ಮಾರ್ಕೆಟ್ ಮುಂಭಾಗದ ಒಳ ಹರಿವಿನ ಕಾಲುವೆ ಸೇರಿದಂತೆ ಅತಿಕ್ರಮಿಸಿದ್ದ 3 ಕಟ್ಟಡಗಳು, 4 ಕಾಂಪೌಂಡ್ ಗೋಡೆ ಹಾಗೂ ರಸ್ತೆಯನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಚೆಲ್ಲಘಟ್ಟ ವ್ಯಾಪ್ತಿಯಲ್ಲಿ ಪ್ರಸ್ಟೀಜ್‌ನ ಖಾಲಿ ಜಾಗ, ಕಾಂಪೌಂಡ್ ಗೋಡೆ ಹಾಗೂ ಹೂಡಿ ಬಳಿ ಗೋಪಾಲನ್ ಶಾಲೆ ಹಾಗೂ ಮಹಾವೀರ್ ಅಪಾರ್ಟ್ಮ್ಮೆಂಟ್ ನ ಕಾಂಪೌಂಡ್ ಗೋಡೆ ಸೇರಿದಂತೆ 3 ಕಾಂಪೌಂಡ್ ಗೋಡೆಗಳನ್ನು ತೆರವುಗೊಳಿಸಲಾಗಿದೆ. ಸ್ಪೈಸಿ ಗಾರ್ಡನ್(ಮುನ್ನೆಕೊಳಳು) ಬಳಿ 4 ಕಾಂಪೌಂಡ್ ಗೋಡೆಗಳು ಹಾಗೂ ರಸ್ತೆ ತೆರವುಗೊಳಿಸಲಾಗಿದೆ.

ಕೆ.ಆರ್.ಪುರದ ಬಸವನಪುರ ವಾರ್ಡ್ ಎಸ್.ಆರ್. ಲೇಔಟ್ ವ್ಯಾಪ್ತಿಯ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ 77 ಮೀಟರ್ ಉದ್ದ ಹಾಗೂ 2.6 ಮೀಟರ್ ಅಗಲದ ಮಲೆ ನೀರುಗಾಲುವೆಯ ಮೇಲೆ ಸ್ಲ್ಯಾಬ್ ಅಳವಡಿಸಲಾಗಿತ್ತು. ಇಂದು ಪಾಲಿಕೆ ಅಧಿಕಾರಿಗಳು ಎರಡು ಜೆ.ಸಿ.ಬಿ ಗಳ ಮೂಲಕ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಮಳೆ ನೀರುಗಾಲವೆ ಮೇಲೆ ಅಳವಡಿಸಿದ್ದ ಸ್ಲ್ಯಾಬ್ ಗಳನ್ನು ತೆರವುಗೊಳಿಸಲಾಗಿದೆ.

ಇದನ್ನೂ ಓದಿರಿ: ‘ನಮ್ಮನ್ನು ನೀರಿಗೆ ತಳ್ಳಿದ್ದೇ ಸರ್ಕಾರದ ಸಾಧನೆ!’: ಪ್ರವಾಹದಲ್ಲಿ ನೊಂದ ಕಾರ್ಮಿಕರ ಅಳಲು

ಇಂದು ಒತ್ತುವರಿ ತೆರವುಕಾರ್ಯಚರಣೆ ನಡೆಸಿರುವ ಎಲ್ಲಾ ಕಡೆಗಳಲ್ಲಿಯೂ ಮತ್ತೊಮ್ಮೆ ಒತ್ತುವರಿ ಮಾಡದಂತೆ ಹಾಗೂ ಮಳೆ ನೀರುಗಾಲುವೆಯ ಮೇಲೆ ಕಾಂಪೌಂಡ್ ಗೋಡೆ ನಿರ್ಮಿಸದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಒತ್ತುವರಿ ಆಗಿರುವ ಪ್ರದೇಶಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...