Homeಕರ್ನಾಟಕರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಕಡೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಪೂರ್ವ ಬೆಂಗಳೂರು ತತ್ತರಿಸಿದ ಬೆನ್ನಲ್ಲೇ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಇದರ ಬೆನ್ನಲ್ಲೇ ಕಾಲುವೆ ಒತ್ತುವರಿ ಮಾಡಿಕೊಂಡ ಘಟಾನುಘಟಿಗಳ ಪಟ್ಟಿಯನ್ನು ಬಿಬಿಎಂಪಿ ಮಹದೇವಪುರ ವಲಯ ಕಚೇರಿ ಬಿಡುಗಡೆ ಮಾಡಿದೆ.

ಐಟಿ ಪಾರ್ಕ್ ಮತ್ತು ಡೆವಲಪರ್‌ಗಳಿಂದ ಆಗಿರುವ ಒತ್ತುವರಿಯ ಜಾಗಗಳನ್ನು ಗುರುತಿಸಿರುವ ಬಿಬಿಎಂಪಿ ಅಧಿಕಾರಿಗಳು, ಮೌಖಿಕ ಸೂಚನೆಯನ್ನೂ ನೀಡಿದ್ದಾರೆ. ಅಲ್ಲದೆ ಸೋಮವಾರ ಹದಿನೈದು ಕಡೆ ನೀರುಕಾಲುವೆ ಒತ್ತುವರಿಯನ್ನು ತೆರವು ಮಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕಾಲುವೆ ಒತ್ತುವರಿ ಪ್ರದೇಶಗಳು: ಬಿಬಿಎಂಪಿ ಪಟ್ಟಿ

ಮಹಾದೇವಪುರದ ಸರ್ವೇ ನಂ. 35, 38, 103, 102, 104, 89, 92, 95, 94, 97, 96, 88ರಲ್ಲಿ ಬಾಗಮನೆ ಟೆಕ್‌ಪಾರ್ಕ್, ಪೂರ್ವ ಪ್ಯಾರಡೈಸ್‌ ಮತ್ತು ಇತರರು ಒತ್ತುವರಿ ಮಾಡಿಕೊಂಡಿದ್ದಾರೆ.

ಜುನ್ನಸಂದ್ರದ ಸ.ನಂ. 19, ಹಾಲನಾಯಕನಹಳ್ಳಿಯ ಸರ್ವೇ ನಂಬರ್‌ 18, 19, 3, 16, 14, 10, 22, 20, 21, 4, ದೊಡ್ಡಕನ್ನಹಳ್ಳಿಯ ಸ.ನಂ. 36, 40, 41ರಲ್ಲಿ ಆರ್‌.ಬಿ.ಡಿ. ಸಂಸ್ಥೆಯವರು ಅತಿಕ್ರಮಣ ಮಾಡಿದ್ದಾರೆ.

ದೊಡ್ಡಕನ್ನಹಳ್ಳಿಯ ಸ.ನಂ. 80, 79, 77, 78, 69ರಲ್ಲಿ ವಿಪ್ರೋ ಸಂಸ್ಥೆ ಒತ್ತುವರಿ ಮಾಡಿಕೊಂಡಿದೆ. ಬೆಳ್ಳಂದೂರಿನ ಸ.ನಂ. 66, 64, 62, 63, 60, 59, 56, 55, 50, 49, 46, 44, 45, 20, 21, 61ರಲ್ಲಿ ಇಕೋಸ್ಪೇನ್‌ನಿಂದ ಒತ್ತುವರಿಯಾಗಿದೆ.

ಗೋಪಾಲನ್‌ ಸಂಸ್ಥೆಯವರು ಬೆಳ್ಳಂದೂರಿನ ಸ.ನಂ. 68, 67, 61, 58, 57, 54, 53, 51, 48, 47, 43, 23, 25ರಲ್ಲಿ ಹಾಗೂ ಹೂಡಿಯ ಸ.ನಂ. 17, 183, 182, 181, 168, 166, 167ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ದಿವ್ಯಾ ಸ್ಕೂಲ್‌ ಮತ್ತು ಇತರರು ಹೂಡಿಯ ಸ.ನಂ. 71, 72, 73ರಲ್ಲಿ, ಗೋಪಾಲನ್ ಮತ್ತು ಇತರರು ಹೂಡಿಯ ಸ.ನಂ. 180, ಸೊನ್ನೆಹಳ್ಳಿಯ ಸ.ನಂ. 44ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ.

ಆದರ್ಶ ಸಂಸ್ಥೆಯವರು ಆರ್‌.ನಾರಾಯಣಪುರದ ಸ.ನಂ. 1, 36, 35, 34, 33, 29, 24, 25, 26ರಲ್ಲಿ; ಕೊಲಂಬಿಯಾ ಏಷಿಯಾ ಆಸ್ಪತ್ರೆಯವರು ರಾಮಗೊಂಡನಹಳ್ಳಿಯ ಸ.ನಂ. 38, 28, 17, 18ರಲ್ಲಿ, ನ್ಯೂ ಹಾರಿಝೋನ್‌ ಕಾಲೇಜಿನವರು ಕಾಡುಬೇಸನಹಳ್ಳಿ ಸ.ನಂ. 10, 13, 17, 18, 22, 14, 23, 16ರಲ್ಲಿ, ಆದರ್ಶ ರೀಟ್ರೀಟ್‌ನವರು ದೇವರಬೇಸನಹಳ್ಳಿಯ ಸ.ನಂ. 19, 17, 15, 16, 25, 31, 30, 36ರಲ್ಲಿ, Epyslon ಮತ್ತು ದಿವ್ಯಶ್ರೀ ಸಂಸ್ಥೆಯವರು ಎಬಿಕೆ ಹಾಗೂ ಯಮಲೂರಿನಲ್ಲಿ, ಪ್ರಸ್ಟೀಜ್‌, ಸಲಪುರಿಯ ಮತ್ತು ಆದರ್ಶ ಸಂಸ್ಥೆಯವರು ಮಾರತಹಳ್ಳಿ, ಕರಿಯಮ್ಮನ ಅಗ್ರಹಾರದಲ್ಲಿ ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ. ನಲಪಾಡ್‌ನವರು ಚಲಘಟ್ಟದ ಸರ್ವೇ ನಂಬರ್‌ 66, 67, 68, 69, 70ರಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ವಿವಿಧ ಸ್ಥಳಗಳಲ್ಲಿ ಒತ್ತುವರಿ ಕಾರ್ಯಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಅದರಂತೆ ಸೋಮವಾರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಮಹದೇಪುರ ವಲಯ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಘವೇಂದ್ರ ತಿಳಿಸಿದ್ದಾರೆ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಚೆಲ್ಲಘಟ್ಟ, ಚಿನ್ನಪ್ಪನ ಹಳ್ಳಿ, ಬಸವಣ್ಣನಗರ, ಸ್ಪೈಸಿ ಗಾರ್ಡನ್ ಹಾಗೂ ಬಸವನಪುರ ವಾರ್ಡ್‌ನ ಎಸ್.ಆರ್. ಲೇಔಟ್ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ ಭೂಮಾಪಕರು ಗುರುತಿಸಿದಂತಹ ಒತ್ತುವರಿ ಪ್ರದೇಶವನ್ನು ತೆರವು ಮಾಡಲಾಗುತ್ತಿದೆ. ಪಾಲಿಕೆಯ ಅಧಿಕಾರಿಗಳು, ಮಾರ್ಷಲ್‌ಗಳ ತಂಡವು ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹದೇವಪುರ ವಲಯದಲ್ಲಿ ಚಿನ್ನಪ್ಪನಹಳ್ಳಿಯಿಂದ ಮುನ್ನೇಕೊಳಾಳ ಕೆರೆಯ ನಡುವೆ ಎಇಸಿಎಸ್ ಲೇಔಟ್ ವ್ಯಾಪ್ತಿಯಲ್ಲಿ ಸಾಯಿ ಕಣ್ಣಿನ ಆಸ್ಪತ್ರೆಯ ಕಾಂಪೌಂಡ್ ಗೋಡೆ, ರಾಘವ ಸೂಪರ್ ಮಾರ್ಕೆಟ್ ಮುಂಭಾಗದ ಒಳ ಹರಿವಿನ ಕಾಲುವೆ ಸೇರಿದಂತೆ ಅತಿಕ್ರಮಿಸಿದ್ದ 3 ಕಟ್ಟಡಗಳು, 4 ಕಾಂಪೌಂಡ್ ಗೋಡೆ ಹಾಗೂ ರಸ್ತೆಯನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಚೆಲ್ಲಘಟ್ಟ ವ್ಯಾಪ್ತಿಯಲ್ಲಿ ಪ್ರಸ್ಟೀಜ್‌ನ ಖಾಲಿ ಜಾಗ, ಕಾಂಪೌಂಡ್ ಗೋಡೆ ಹಾಗೂ ಹೂಡಿ ಬಳಿ ಗೋಪಾಲನ್ ಶಾಲೆ ಹಾಗೂ ಮಹಾವೀರ್ ಅಪಾರ್ಟ್ಮ್ಮೆಂಟ್ ನ ಕಾಂಪೌಂಡ್ ಗೋಡೆ ಸೇರಿದಂತೆ 3 ಕಾಂಪೌಂಡ್ ಗೋಡೆಗಳನ್ನು ತೆರವುಗೊಳಿಸಲಾಗಿದೆ. ಸ್ಪೈಸಿ ಗಾರ್ಡನ್(ಮುನ್ನೆಕೊಳಳು) ಬಳಿ 4 ಕಾಂಪೌಂಡ್ ಗೋಡೆಗಳು ಹಾಗೂ ರಸ್ತೆ ತೆರವುಗೊಳಿಸಲಾಗಿದೆ.

ಕೆ.ಆರ್.ಪುರದ ಬಸವನಪುರ ವಾರ್ಡ್ ಎಸ್.ಆರ್. ಲೇಔಟ್ ವ್ಯಾಪ್ತಿಯ ಕೇಂಬ್ರಿಡ್ಜ್ ಕಾಲೇಜು ಆವರಣದಲ್ಲಿ 77 ಮೀಟರ್ ಉದ್ದ ಹಾಗೂ 2.6 ಮೀಟರ್ ಅಗಲದ ಮಲೆ ನೀರುಗಾಲುವೆಯ ಮೇಲೆ ಸ್ಲ್ಯಾಬ್ ಅಳವಡಿಸಲಾಗಿತ್ತು. ಇಂದು ಪಾಲಿಕೆ ಅಧಿಕಾರಿಗಳು ಎರಡು ಜೆ.ಸಿ.ಬಿ ಗಳ ಮೂಲಕ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ ಮಳೆ ನೀರುಗಾಲವೆ ಮೇಲೆ ಅಳವಡಿಸಿದ್ದ ಸ್ಲ್ಯಾಬ್ ಗಳನ್ನು ತೆರವುಗೊಳಿಸಲಾಗಿದೆ.

ಇದನ್ನೂ ಓದಿರಿ: ‘ನಮ್ಮನ್ನು ನೀರಿಗೆ ತಳ್ಳಿದ್ದೇ ಸರ್ಕಾರದ ಸಾಧನೆ!’: ಪ್ರವಾಹದಲ್ಲಿ ನೊಂದ ಕಾರ್ಮಿಕರ ಅಳಲು

ಇಂದು ಒತ್ತುವರಿ ತೆರವುಕಾರ್ಯಚರಣೆ ನಡೆಸಿರುವ ಎಲ್ಲಾ ಕಡೆಗಳಲ್ಲಿಯೂ ಮತ್ತೊಮ್ಮೆ ಒತ್ತುವರಿ ಮಾಡದಂತೆ ಹಾಗೂ ಮಳೆ ನೀರುಗಾಲುವೆಯ ಮೇಲೆ ಕಾಂಪೌಂಡ್ ಗೋಡೆ ನಿರ್ಮಿಸದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಒತ್ತುವರಿ ಆಗಿರುವ ಪ್ರದೇಶಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....