Homeಕರ್ನಾಟಕಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

ಸಿದ್ದವಾಗೇ ಹೋಯ್ತಾ ಬಿಜೆಪಿ ಸಚಿವ ಸಂಪುಟ? ಇರ್ತಾರಾ ಮೂರು ಡಿಸಿಎಂಗಳು?

- Advertisement -
- Advertisement -

| ಗೌರಿ ಡೆಸ್ಕ್ |

ಸುಪ್ರೀಂ ಕೋರ್ಟ್ ನಿರ್ದೇಶನದಿಂದಾಗಿ ಕರ್ನಾಟಕದ ರಾಜಕೀಯ ಹೈಡ್ರಾಮ ಹೆಚ್ಚೂಕಮ್ಮಿ ಸಮಿಫೈನಲ್ ಹಂತಕ್ಕೆ ಬಂದು ತಲುಪಿದಂತಾಗಿದೆ. ಇವತ್ತೇ ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ೧೦ ಬಂಡಾಯ ಶಾಸಕರಿಗೆ ಸೂಚಿಸಿರುವ ಸರ್ವೋಚ್ಛ ನ್ಯಾಯಾಲಯ, ಆದಷ್ಟು ಬೇಗ ಇದಕ್ಕೊಂದು ಮಂಗಳ ಹಾಡುವಂತೆ ಸ್ಪೀಕರ್‌ಗೆ ಸೂಚನೆ ನೀಡಿದೆ. ಅದು ಕೇವಲ ಸೂಚನೆಯಾಗಿರೋದ್ರಿಂದ, ಸ್ಪೀಕರ್ ಮೇಲೆ ಯಾವ ಒತ್ತಡವನ್ನೂ ನ್ಯಾಯಾಲಯ ಹಾಕಿಲ್ಲ. ಹಾಗಾಗಿ, ನನಗೆ ರಾಜೀನಾಮೆಗಳನ್ನು ಪರಾಮರ್ಶಿಸಲು ಒಂದಷ್ಟು ಸಮಯ ಬೇಕು ಅಂತ ರಮೇಶ್ ಕುಮಾರರು ಸುರ್ಪೀಂ ಕೋರ್ಟಿಗೆ ಅರ್ಜಿ ಹಾಕಿರುವ ಲೇಟೆಸ್ಟ್ ಸುದ್ದಿ ಹೊರ ಬರುತ್ತಿದೆ.

ಆದರೆ ಬಿಜೆಪಿ ಈ ಸಾರಿ ತನ್ನ ಆಪರೇಷನ್ ಬಗ್ಗೆ ಅದೆಷ್ಟು ಅದಮ್ಯ ವಿಶ್ವಾಸದಲ್ಲಿದೆಯೆಂದರೆ, ಸಚಿವ ಸಂಪುಟದ ಪಟ್ಟಿಯೇ ತಯಾರಾಗಿ ಯಾರ್‍ಯಾರಿಗೆ ಯಾವ್ಯಾವ ಖಾತೆ ಅನ್ನೋ ಹಂಚಿಕೆಯೂ ಮುಗಿದುಹೋಗಿದೆ ಅನ್ನೋ ಲೇಟೆಸ್ಟ್ ವರ್ತಮಾನ ಕಮಲ ಪಾಳಯದಲ್ಲಿ ಕೇಳಿಬರುತ್ತಿದೆ. ಇದು ಎಷ್ಟರಮಟ್ಟಿಗೆ ಸತ್ಯವೋ ಅಲ್ಲವೋ ಗೊತ್ತಿಲ್ಲ, ಆದರೆ ವಿಧಾನಸೌಧ, ಯಡಿಯೂರಪ್ಪನವರ ನಿವಾಸ ಧವಳಗಿರಿ, ಪ್ರೆಸ್ಸ್‌ಕ್ಲಬ್, ಮಲ್ಲೇಶ್ವರಂ ಬಿಜೆಪಿ ಕಚೇರಿಯ ಆವರಣದಲ್ಲಿ ಈ ಮಾತುಕತೆಗಳು ಜೋರಾಗಿ ಚರ್ಚೆಯಲ್ಲಿವೆ.

ಆ ಚರ್ಚೆಯ ಒಟ್ಟಾರೆ ಸಾರಾಂಶ ಇಷ್ಟು. ಹೊಸ ಸರ್ಕಾರದಲ್ಲಿ ಯಡ್ಯೂರಪ್ಪನವರು ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋದು ಫಿಕ್ಸು. ಬಿ.ಎಲ್.ಸಂತೋಷ್ ಸೇರಿದಂತೆ ಬಿಜೆಪಿಯ ಒಂದು ಬಣಕ್ಕೆ ಯಡ್ಯೂರಪ್ಪ ಸಿಎಂ ಆಗೋದು ಇಷ್ಟವಿಲ್ಲ. ಅವರು ಈಗ ಸರ್ಕಾರ ರಚನೆ ಮಾಡೋದರ ಬದಲು, ಮಧ್ಯಂತರ ಚುನಾವಣೆಗೆ ಹೋಗುವ ವಾದವನ್ನು ಮುಂದೆ ಮಾಡಿದ್ದುಂಟು. ಅದಕ್ಕಾಗೆ, ಈಗ ಕೈ-ತೆನೆಗೆ ಕೈಕೊಟ್ಟು ಕಮಲ ಮುಡಿಯುತ್ತಿರುವ ಒಂದಷ್ಟು ಶಾಸಕರ ಬಿಜೆಪಿ ಸೇರ್ಪಡೆಗೆ ಈ ಬಣದಿಂದ ವಿರೋಧ ವ್ಯಕ್ತವಾದದ್ದು. ಮಧ್ಯಂತರ ಚುನಾವಣೆ ನಡೆದರೆ ಏನಿಲ್ಲವೆಂದರು 140 ರಿಂದ 150 ಸೀಟು ನಿರಾಯಾಸವಾಗಿ ಬಿಜೆಪಿ ಗೆಲ್ಲುತ್ತೆ, ಆಗ ಯಡ್ಯೂರಪ್ಪನವರ ಹಂಗು ಇರೋದಿಲ್ಲ, ಅವರನ್ನು ಪಕ್ಕಕ್ಕೆ ಸರಿಸಿ ನಮ್ಮಲ್ಲೇ ಬೇರೆ ಯಾರಾದರು ಸಿಎಂ ಆಗಬೇಕು ಅನ್ನೋದು ಅವರ ಲೆಕ್ಕಾಚಾರವಾಗಿತ್ತು. ಆದರೆ ಸದ್ಯಕ್ಕೆ ಅವರ ವಾದ ಕೈಮೇಲಾಗಿಲ್ಲ. ಹಾಗಾಗಿ ಯಡಿಯೂರಪ್ಪ ಸಿಎಂ ಆಗಲಿದ್ದಾರೆ.

ಇನ್ನು ಬಿಜೆಪಿ ಹೊಸ ಸರ್ಕಾರದಲ್ಲಿ ಬಿಜೆಪಿಯ 20 ಶಾಸಕರಿಗೆ ಮತ್ತು ಹೊರಗಿನಿಂದ ಬಂದ 14 ಶಾಸಕರಿಗೆ ಮಂತ್ರಿ ಭಾಗ್ಯ ಕರುಣಿಸಲಾಗಿದೆ ಎನ್ನಲಾಗುತ್ತಿದೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀರಾಮುಲು, ಮಾಧುಸ್ವಾಮಿ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ ಇನ್ನೂ ಮೊದಲಾದವರಿದ್ದರೆ ವಲಸಿಗ ಶಾಸಕರಲ್ಲಿ ಇಬ್ಬರು ಪಕ್ಷೇತರರನ್ನೂ ಸೇರಿಸಿ ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಹೆಸರುಗಳು ಅಂತಿಮಗೊಂಡಿವೆಯಂತೆ!

ಇನ್ನೂ ಕುತೂಹಲಕರ ಸಂಗತಿ ಅಂದ್ರೆ, ಯಡ್ಯೂರಪ್ಪನವರ ಹೊಸ ಸರ್ಕಾರದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನ ಫಿಕ್ಸ್ ಆಗಿದೆಯಂತೆ. ಈಶ್ವರಪ್ಪ,ಆರ್.ಅಶೋಕ್ ಜೊತೆಗೆ ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಹೋಗಿ ಅಲ್ಲಿನ ಅಧ್ಯಕ್ಷಗಾದಿಯಿಂದ ನೇರವಾಗಿ ಎದ್ದುಬಂದು ಕಮಲದ ‘ಗೃಹಪ್ರವೇಶ’ಗೈದಿರುವ ಬಾಂಬೆಹಕ್ಕಿ ಎಚ್.ವಿಶ್ವನಾಥ್‌ರಿಗೂ ಡಿಸಿಎಂ ಭಾಗ್ಯ ಒಲಿದು ಬಂದಿದೆ ಎನ್ನಲಾಗಿದೆ! ಇದೇವೇಳೆ ಈಶ್ವರಪ್ಪ ಮತ್ತು ವಿಶ್ವನಾಥ್ ಇಬ್ಬರೂ ಕುರುಬ ಸಮುದಾಯಕ್ಕೆ ಸೇರಿರೋದ್ರಿಂದ ಒಂದೇ ಜಾತಿಗೆ ಎರಡು ಹುದ್ದೆ ಕೊಡಬಾರದೆಂಬ ಚರ್ಚೆಯೂ ಕೇಳಿಬಂದಿದ್ದು, ಈಶ್ವರಪ್ಪನವರಿಗೆ ಪ್ರಭಾವಿ ಖಾತೆಯ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನವನ್ನೂ ಬಿಟ್ಟುಕೊಟ್ಟು ಆ ಮೂರನೇ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಆಯ್ಕೆ ಮಾಡಬೇಕೆನ್ನುವ ಪ್ರಸ್ತಾಪ ಚರ್ಚೆಯಾಗುತ್ತಿದೆಯಂತೆ!

ಇದನ್ನು ಕೂಸು ಹುಟ್ಟುವ ಮುನ್ನ ಕುಲಾವಿ ಎನ್ನಬೇಕೋ, ಮಾಮೂಲಿ ರಾಜಕೀಯ ವದಂತಿ ಎನ್ನಬೇಕೋ ತಿಳಿಯದಾಗಿದೆ. ಒಟ್ಟಾರೆ ಬೆಳವಣಿಗೆಗಳನ್ನು ನೋಡಿದರೆ, ಕರ್ನಾಟಕಕ್ಕೊಂದು ಸ್ಥಿರ ಜನಪರ ಸರ್ಕಾರ ದೊರೆಯುವ ಲಕ್ಷಣಗಳಂತೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಡಿಯೂರಪ್ಪನವರ ಪರಿ ಲಜ್ಜೆಗೆಟ್ಟ ರಾಜಕೀಯ ವ್ಯಕ್ತಿ ಇನ್ನೊಬ್ಬ ಇಲ್ಲ ಅನುಕೂಲಸಿಂಧು ರಾಜಕೀಯ ನಡೆಯಿಂದ ಮೈತ್ರಿ ಸರ್ಕಾರ ಹುಟ್ಟಿಕೊಂಡು ನಡೆದುಕೊಂಡು ಹೋಗುತ್ತಿದೆ ಆದರೆ ಮುಖ್ಯಮಂತ್ರಿಯಾಗುವ ಆಗಲೇಬೇಕೆಂದು ಹೆಬ್ಬಯಕೆಯಿಂದ ಈ ರೀತಿಯಾಗಿ ನಿಂತು ಸರ್ಕಾರವನ್ನು ಬೀಳಿಸುವ ಲಜ್ಜೆಗೇಡಿ ವರ್ತನೆ ಯಡಿಯೂರಪ್ಪನಿಗೆ ಮಾತ್ರ ಸಾಧ್ಯ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...