Homeಮುಖಪುಟಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

ಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

- Advertisement -
- Advertisement -

ತೆಲಂಗಾಣದ ಸಿಕಂದರಾಬಾದ್‌ನ ರೂಬಿ ಪ್ರೈಡ್ ಐಷಾರಾಮಿ ಹೋಟೆಲ್‌ನ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸ್ಫೋಟದಿಂದಾಗಿ ಉಂಟಾದ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಅಪಘಾತದ ವೇಳೆ ಹೋಟೆಲ್‌ನಲ್ಲಿ 25 ಮಂದಿ ಇದ್ದರು ಎನ್ನಲಾಗಿದ್ದು, ಮೃತಪಟ್ಟವರಲ್ಲಿ ಹೆಚ್ಚಿನವರು ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಬಿ ಮೋಟಾರ್ಸ್ ಶೋರೂಂನಲ್ಲಿ ಇರಿಸಲಾಗಿದ್ದ ಇ-ಬೈಕ್ ಅಥವಾ ಜನರೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ. ಬೆಂಕಿಯ ಜ್ವಾಲೆಯು ಮೆಟ್ಟಿಲನ್ನು ಮೀರಿ ಹರಿಡಿದ್ದರಿಂದ ಕಟ್ಟಡದ ನೆಲಮಾಳಿಗೆ, ನೆಲ ಮಹಡಿ, ಮೊದಲ ಮತ್ತು ಎರಡನೇ ಮಹಡಿಗಳನ್ನು ಆವರಿಸಿದೆ. ಬೆಂಕಿಗಿಂತ ಅಫಘಾತದಲ್ಲಿ ಉಂಟಾದ ಹೊಗೆಯಿಂದಾಗಿಯೆ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

ಶೋರೂಮ್‌ನಿಂದ ಭುಗಿಲೆದ್ದ ಬೆಂಕಿ ಮತ್ತು ಹೊಗೆಯಿಂದಾಗಿ ಶೋರೂಮ್‌ನ ಮೇಲೆ ಇದ್ದ ಹೋಟೆಲ್ ರೂಬಿ ಪ್ರೈಡ್ ಅನ್ನು ಆವರಿಸಿ ಅಲ್ಲಿರುವ ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಕೆಲವು ಗಂಟೆಗಳ ನಂತರ ದಟ್ಟವಾದ ಹೊಗೆ ಹೊರಹೊಮ್ಮುತ್ತಲೇ ಇತ್ತು ಎಂದು ವರದಿ ಉಲ್ಲೇಖಿಸಿದೆ. ಸ್ಥಳೀಯರು ಕೂಡ ಜೀವ ರಕ್ಷಣೆಗೆ ಸಹಕರಿಸಿದ್ದಾರೆ ಎಂದು ಅದು ಹೇಳಿದೆ.

“ಹೋಟೆಲ್‌ನ ಎಲ್ಲಾ ನಾಲ್ಕು ಮಹಡಿಗಳಲ್ಲಿ 23 ಕೊಠಡಿಗಳಿವೆ ಎಂದು ತೋರುತ್ತಿದೆ. ಹೊಗೆ ಕೆಳಗಿನಿಂದ ಮೇಲಿನ ಮಹಡಿಯವರೆಗೆ ಮೆಟ್ಟಿಲುಗಳ ಮೂಲಕ ಹಾದುಹೋಯಿತು ಮತ್ತು ಎಲ್ಲಾ ಮಹಡಿಗಳನ್ನು ಸಂಪೂರ್ಣವಾಗಿ ಆವರಿಸಿದೆ. ಮೊದಲ ಮತ್ತು ಎರಡನೇ ಮಹಡಿಯಲ್ಲಿ ಮಲಗಿದ್ದ ಕೆಲವರು ದಟ್ಟ ಹೊಗೆಯ ಕಾರಣಕ್ಕೆ ಕಾರಿಡಾರ್‌ಗೆ ಬಂದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣವೋ ಅಥವಾ ನೆಲಮಾಳಿಗೆಯ ಬ್ಯಾಟರಿಗಳ ಚಾರ್ಜ್‌‌ನಿಂದಾಗಿ ಆಗಿದೆಯೊ ಅಥವಾ ಮೊದಲ ಮಹಡಿಯಲ್ಲಿ ಇರುವ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆಯೆ ಎಂದು ಅಗ್ನಿಶಾಮಕ ಇಲಾಖೆಯ ತನಿಖೆಯ ನಂತರ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಜಿಗ್ನೇಶ್‌‌ ಮೇವಾನಿ ಮೇಲೆ ಗುಜರಾತ್‌ ಮಾಜಿ ಗೃಹ ಸಚಿವರ ಗೂಂಡಾಗಳಿಂದ ಹಲ್ಲೆ

“ಸಾಮಾನ್ಯವಾಗಿ ಪಾರ್ಕಿಂಗ್‌ಗೆ ಬಳಸಬೇಕಾದ ನೆಲಮಾಳಿಗೆಯನ್ನು ನಿಸ್ಸಂಶಯವಾಗಿ ಅವರು ಬೇರೆ ಯಾವುದಕ್ಕೊ ಬಳಸುತ್ತಿದ್ದರು. ಅದನ್ನು ವಿಚಾರಣೆ ನಡೆಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಕಟ್ಟಡದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಿದ್ದಾರೆ. “ರಾತ್ರಿ 9.20 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ಟೆಂಡರ್‌ಗಳನ್ನು ಇಲ್ಲಿ ಬಳಸಲಾಗಿದೆ. ಕಟ್ಟಡದಲ್ಲಿ ಫೈರ್ ಸ್ಪ್ರಿಂಕ್ಲರ್‌ಗಳಿವೆ ಆದರೆ ಆ ಸಮಯದಲ್ಲಿ ಅವು ಕಾರ್ಯನಿರ್ವಹಿಸಲಿಲ್ಲ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಯಶೋದಾ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಅಗ್ನಿಶಾಮಕ ಇಲಾಖೆ ಡಿಜಿ ಸಂಜಯ್ ಜೈನ್ ಹೇಳಿದ್ದಾರೆ.

ಹೋಟೆಲ್ 23 ಕೊಠಡಿಗಳನ್ನು ಹೊಂದಿದ್ದು, ಬೆಂಕಿ ಕಾಣಿಸಿಕೊಂಡಾಗ ಸರಿಸುಮಾರು 50% ಕೊಠಡಿಗಳಲ್ಲಿ ಜನರಿದ್ದರು ಎಂದು TNIE ವರದಿ ಹೇಳಿದೆ. ಸಚಿವ ಹಾಗೂ ಸನತ್‌ನಗರ ಶಾಸಕ ತಲಸಾನಿ ಶ್ರೀನಿವಾಸ್ ಯಾದವ್‌ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್‌: ಶ್ರೀಲಂಕಾ ಭಾವುಟ ಹಿಡಿದು ಸಂಭ್ರಮಿಸಿದ ಗೌತಮ್‌ ಗಂಭೀರ್‌

ನೆಲ ಮಹಡಿ ಸೇರಿದಂತೆ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ತುರ್ತು ನಿರ್ಗಮನದ ಮಾರ್ಗವಿಲ್ಲದ ಕಾರಣ ಏಳು ಮಂದಿ ವಿವಿಧ ಮಹಡಿಗಳಿಂದ ಜಿಗಿದಿದ್ದಾರೆ. ಕೆಲವರು ಪೈಪ್‌ಲೈನ್‌ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳ ಹೈಡ್ರಾಲಿಕ್ ಎಲಿವೇಟರ್ ಬಳಸಿ ನಾಲ್ವರನ್ನು ರಕ್ಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...