Homeಮುಖಪುಟಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

ಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

- Advertisement -
- Advertisement -

ತೆಲಂಗಾಣದ ಸಿಕಂದರಾಬಾದ್‌ನ ರೂಬಿ ಪ್ರೈಡ್ ಐಷಾರಾಮಿ ಹೋಟೆಲ್‌ನ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸ್ಫೋಟದಿಂದಾಗಿ ಉಂಟಾದ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಅಪಘಾತದ ವೇಳೆ ಹೋಟೆಲ್‌ನಲ್ಲಿ 25 ಮಂದಿ ಇದ್ದರು ಎನ್ನಲಾಗಿದ್ದು, ಮೃತಪಟ್ಟವರಲ್ಲಿ ಹೆಚ್ಚಿನವರು ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಬಿ ಮೋಟಾರ್ಸ್ ಶೋರೂಂನಲ್ಲಿ ಇರಿಸಲಾಗಿದ್ದ ಇ-ಬೈಕ್ ಅಥವಾ ಜನರೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ. ಬೆಂಕಿಯ ಜ್ವಾಲೆಯು ಮೆಟ್ಟಿಲನ್ನು ಮೀರಿ ಹರಿಡಿದ್ದರಿಂದ ಕಟ್ಟಡದ ನೆಲಮಾಳಿಗೆ, ನೆಲ ಮಹಡಿ, ಮೊದಲ ಮತ್ತು ಎರಡನೇ ಮಹಡಿಗಳನ್ನು ಆವರಿಸಿದೆ. ಬೆಂಕಿಗಿಂತ ಅಫಘಾತದಲ್ಲಿ ಉಂಟಾದ ಹೊಗೆಯಿಂದಾಗಿಯೆ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

ಶೋರೂಮ್‌ನಿಂದ ಭುಗಿಲೆದ್ದ ಬೆಂಕಿ ಮತ್ತು ಹೊಗೆಯಿಂದಾಗಿ ಶೋರೂಮ್‌ನ ಮೇಲೆ ಇದ್ದ ಹೋಟೆಲ್ ರೂಬಿ ಪ್ರೈಡ್ ಅನ್ನು ಆವರಿಸಿ ಅಲ್ಲಿರುವ ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಕೆಲವು ಗಂಟೆಗಳ ನಂತರ ದಟ್ಟವಾದ ಹೊಗೆ ಹೊರಹೊಮ್ಮುತ್ತಲೇ ಇತ್ತು ಎಂದು ವರದಿ ಉಲ್ಲೇಖಿಸಿದೆ. ಸ್ಥಳೀಯರು ಕೂಡ ಜೀವ ರಕ್ಷಣೆಗೆ ಸಹಕರಿಸಿದ್ದಾರೆ ಎಂದು ಅದು ಹೇಳಿದೆ.

“ಹೋಟೆಲ್‌ನ ಎಲ್ಲಾ ನಾಲ್ಕು ಮಹಡಿಗಳಲ್ಲಿ 23 ಕೊಠಡಿಗಳಿವೆ ಎಂದು ತೋರುತ್ತಿದೆ. ಹೊಗೆ ಕೆಳಗಿನಿಂದ ಮೇಲಿನ ಮಹಡಿಯವರೆಗೆ ಮೆಟ್ಟಿಲುಗಳ ಮೂಲಕ ಹಾದುಹೋಯಿತು ಮತ್ತು ಎಲ್ಲಾ ಮಹಡಿಗಳನ್ನು ಸಂಪೂರ್ಣವಾಗಿ ಆವರಿಸಿದೆ. ಮೊದಲ ಮತ್ತು ಎರಡನೇ ಮಹಡಿಯಲ್ಲಿ ಮಲಗಿದ್ದ ಕೆಲವರು ದಟ್ಟ ಹೊಗೆಯ ಕಾರಣಕ್ಕೆ ಕಾರಿಡಾರ್‌ಗೆ ಬಂದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣವೋ ಅಥವಾ ನೆಲಮಾಳಿಗೆಯ ಬ್ಯಾಟರಿಗಳ ಚಾರ್ಜ್‌‌ನಿಂದಾಗಿ ಆಗಿದೆಯೊ ಅಥವಾ ಮೊದಲ ಮಹಡಿಯಲ್ಲಿ ಇರುವ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆಯೆ ಎಂದು ಅಗ್ನಿಶಾಮಕ ಇಲಾಖೆಯ ತನಿಖೆಯ ನಂತರ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಜಿಗ್ನೇಶ್‌‌ ಮೇವಾನಿ ಮೇಲೆ ಗುಜರಾತ್‌ ಮಾಜಿ ಗೃಹ ಸಚಿವರ ಗೂಂಡಾಗಳಿಂದ ಹಲ್ಲೆ

“ಸಾಮಾನ್ಯವಾಗಿ ಪಾರ್ಕಿಂಗ್‌ಗೆ ಬಳಸಬೇಕಾದ ನೆಲಮಾಳಿಗೆಯನ್ನು ನಿಸ್ಸಂಶಯವಾಗಿ ಅವರು ಬೇರೆ ಯಾವುದಕ್ಕೊ ಬಳಸುತ್ತಿದ್ದರು. ಅದನ್ನು ವಿಚಾರಣೆ ನಡೆಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಕಟ್ಟಡದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಿದ್ದಾರೆ. “ರಾತ್ರಿ 9.20 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ಟೆಂಡರ್‌ಗಳನ್ನು ಇಲ್ಲಿ ಬಳಸಲಾಗಿದೆ. ಕಟ್ಟಡದಲ್ಲಿ ಫೈರ್ ಸ್ಪ್ರಿಂಕ್ಲರ್‌ಗಳಿವೆ ಆದರೆ ಆ ಸಮಯದಲ್ಲಿ ಅವು ಕಾರ್ಯನಿರ್ವಹಿಸಲಿಲ್ಲ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಯಶೋದಾ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಅಗ್ನಿಶಾಮಕ ಇಲಾಖೆ ಡಿಜಿ ಸಂಜಯ್ ಜೈನ್ ಹೇಳಿದ್ದಾರೆ.

ಹೋಟೆಲ್ 23 ಕೊಠಡಿಗಳನ್ನು ಹೊಂದಿದ್ದು, ಬೆಂಕಿ ಕಾಣಿಸಿಕೊಂಡಾಗ ಸರಿಸುಮಾರು 50% ಕೊಠಡಿಗಳಲ್ಲಿ ಜನರಿದ್ದರು ಎಂದು TNIE ವರದಿ ಹೇಳಿದೆ. ಸಚಿವ ಹಾಗೂ ಸನತ್‌ನಗರ ಶಾಸಕ ತಲಸಾನಿ ಶ್ರೀನಿವಾಸ್ ಯಾದವ್‌ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್‌: ಶ್ರೀಲಂಕಾ ಭಾವುಟ ಹಿಡಿದು ಸಂಭ್ರಮಿಸಿದ ಗೌತಮ್‌ ಗಂಭೀರ್‌

ನೆಲ ಮಹಡಿ ಸೇರಿದಂತೆ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ತುರ್ತು ನಿರ್ಗಮನದ ಮಾರ್ಗವಿಲ್ಲದ ಕಾರಣ ಏಳು ಮಂದಿ ವಿವಿಧ ಮಹಡಿಗಳಿಂದ ಜಿಗಿದಿದ್ದಾರೆ. ಕೆಲವರು ಪೈಪ್‌ಲೈನ್‌ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳ ಹೈಡ್ರಾಲಿಕ್ ಎಲಿವೇಟರ್ ಬಳಸಿ ನಾಲ್ವರನ್ನು ರಕ್ಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...