Homeಕರ್ನಾಟಕ‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

- Advertisement -
- Advertisement -

ಅಕ್ರಮ ಕಟ್ಟಡಗಳ ತೆರವು ಕುರಿತು ನಡೆಯುತ್ತಿರುವ ಕೋಲಾಹಲದ ನಡುವೆ, ರಾಜ್ಯ ಕಂದಾಯ ಸಚಿವ ಆರ್. ಅಶೋಕ್,“ಬೆಂಗಳೂರು ತೀವ್ರ ಜಲಾವೃತಕ್ಕೆ ಒಳಗಾಗುವುದರಿಂದ ಮುಂದಿನ ಮಳೆಗಾಲದ ವೇಳೆಗೆ ನೋಯ್ಡಾ ಅವಳಿ ಗೋಪುರದ ಶೈಲಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಕಟ್ಟಡಗಳನ್ನು ಕೆಡವಲಾಗುವುದು” ಎಂದು ಮಂಗಳವಾರ ಹೇಳಿದ್ದಾರೆ.

ಕಳೆದ ತಿಂಗಳು ದೇಶದ ಗಮನ ಸೆಳೆದಿದ್ದ ನೋಯ್ಡಾ ಸೂಪರ್‌ಟೆಕ್ ಅವಳಿ ಗೋಪುರಗಳ ನೆಲಸಮವನ್ನು ಉಲ್ಲೇಖಿಸಿದ ಅಶೋಕ್‌,“ಮುಂದಿನ ಮಳೆಗಾಲದ ವೇಳೆಗೆ ನಾವು ಬಾಕಿ ಉಳಿದಿರುವ ಎಲ್ಲಾ ನೆಲಸಮವನ್ನು ತೆರವುಗೊಳಿಸಬೇಕು. ನೋಯ್ಡಾದಂತೆ ಎಲ್ಲಾ ಅಪಾರ್ಟ್‌ಮೆಂಟ್‌ಗಳನ್ನು ಕೆಡವಲಾಗುವುದು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧಿಕಾರಿಗಳು-ಬಿಲ್ಡರ್‌ಗಳ ವಿರುದ್ಧ ಕ್ರಮ ಮತ್ತು ಪ್ರವಾಹದಂತಹ ಪರಿಸ್ಥಿತಿಯ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಅವರು ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

ಈ ನಡುವೆ ಬೆಂಗಳೂರಿನ ಮುನೇನಕೊಳಲು ಪ್ರದೇಶದಲ್ಲಿ ಬಿಬಿಎಂಪಿ ಕಟ್ಟಡಗಳನ್ನು ಕೆಡವುತ್ತಿದೆ. ಆದರೆ ಈ ವರೆಗೂ ಯಾವುದೆ ದೊಡ್ಡ ಕಟ್ಟಡಗಳು ಮತ್ತು ಐಟಿ ಪಾರ್ಕ್‌ಗಳಿಗೆ ಯಾವುದೆ ಹಾನಿ ಮಾಡಲಾಗಿಲ್ಲ ಎಂದು ವರದಿಯಾಗಿದೆ.

ರಾಜಾ ಕಾಲುವೆಯಲ್ಲಿ ಮುಕ್ತವಾಗಿ ನೀರು ಹರಿದು ಹೋಗಲು ಸಮಸ್ಯೆ ಉಂಟು ಮಾಡಿ ಮನೆ ಕಟ್ಟಿಕೊಂಡಿರುವವರಿಗೆ ಒತ್ತುವರಿ ತೆರವು ನೋಟಿಸ್‌ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿಳಿಸಿದ್ದರು.

ಕಳೆದ ಕೆಲವು ವಾರಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜಲಾವೃತದಿಂದ ತತ್ತರಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಪ್ರಯಾಣಿಕರು ಹಲವಾರು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಳ್ಳುವಂತೆ ಆಗಿತ್ತು. ರಸ್ತೆಯಲ್ಲಿ ನೀರು ನಿಂತ ವೇಳೆ ವಿದ್ಯುತ್ ಸ್ಪರ್ಶದಿಂದಾಗಿ ಯುವತಿಯೊಬ್ಬರು ಮೃತಪಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ಹಿಂದಿನ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಅಕ್ರಮ ನಿರ್ಮಾಣಗಳಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಸರ್ಕಾರ ಪರಿಸ್ಥಿತಿಗೆ ಕಾಂಗ್ರೆಸ್‌ ಪಕ್ಷವನ್ನು ದೂರಿಕೊಂಡಿತ್ತು. ಆದರೆ ವಿರೋಧ ಪಕ್ಷದ ನಾಯಕರು ಮೂಲಸೌಕರ್ಯಗಳ ನಿರ್ಲಕ್ಷ್ಯಕ್ಕಾಗಿ ಆಡಳಿತಾರೂಢ ಬಿಜೆಪಿಯ ಮೇಲೆ ಹರಿಹಾಯ್ದಿದ್ದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮದೇ ಆದ ಯಾವುದೇ ಶೈಲಿ ಇಲ್ಲವೇ ಎಲ್ಲಾ UP ಮಾಡೆಲ್ ಹೇಳುತ್ತ ಇರುತ್ತೀರಿ ನಾವು ಕರ್ನಾಟಕದವರು ಕಾನೂನು ಕ್ರಮ ಕೈಗೊಲ್ಲಲು UP ಯಿಂದ ಕಲಿಯ ಬೇಕೆ 🙏

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...