Homeಕರ್ನಾಟಕ‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿ ಮತ್ತು ವೆಬ್ ಸೈಟ್‌‌ ಅನ್ನು ಕೂಡಾ ಕಾಂಗ್ರೆಸ್ ಪ್ರಾರಂಭಿಸಿದೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ‘40% ಸರ್ಕಾರ- ಬಿಜೆಪಿ ಅಂದ್ರೆ ಭ್ರಷ್ಟಾಚಾರ’ ಅಭಿಯಾನವನ್ನು ಕಾಂಗ್ರೆಸ್‌ ಮಂಗಳವಾರ ಉದ್ಘಾಟನೆ ಮಾಡಿದೆ. ಬಿಜೆಪಿ ಸರ್ಕಾರದ 40% ಕಮಿಷನ್ ಸೇರಿದಂತೆ ಲಂಚದ ರೇಟ್ ಕಾರ್ಡ್‌ ಅನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರೀಶ್‌ ಕುಮಾರ್‌‌ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ್ದಾರೆ.

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’ ಎಂಬ ಹಾಡನ್ನು ಕಾಂಗ್ರೆಸ್‌ ಈಗಾಗಲೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದು ಜನರ ಗಮನ ಸೆಳೆದಿದೆ. ಕಳೆದ ಹಲವು ತಿಂಗಳಿನಿಂದ 40% ಕಮಿಷನ್ ವಿಚಾರವು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆ ಉಂಟು ಮಾಡುತ್ತಿದೆ. ಗುತ್ತಿಗೆದಾರರ ಸಂಘದ ಮುಖಂಡ ಕೆಂಪ್ಪಯ್ಯ ಅವರು ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದು ಈ ಬಗ್ಗೆ ದೂರು ಕೂಡಾ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ನಾವು ಭ್ರಷ್ಟಾಚಾರದ ವಿಚಾರವನ್ನು ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಿರುದೇಕೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಅಧಿವೇಶನ 10 ದಿನಗಳ ಕಾಲ ನಡೆಯಲಿದ್ದು, ಇಂದು ಪ್ರಕೃತಿ ವಿಕೋಪದ ಚರ್ಚೆ ಆಗುತ್ತಿದೆ. ಅಧಿವೇಶನದಲ್ಲಿ ಭ್ರಷ್ಟಾಚಾರದ ವಿಚಾರವನ್ನು ವ್ಯಾಪಕವಾಗಿ ಚರ್ಚೆ ಮಾಡಬೇಕಿದ್ದು, ಕಾಂಗ್ರೆಸ್ ಈ ಜವಾಬ್ದಾರಿ ವಹಿಸಿಕೊಂಡಿದೆ. ನಮ್ಮ ಶಾಸಕರುಗಳಿಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ತಿಳಿಸಿದ್ದೇವೆ. ಅಧಿವೇಶನದಲ್ಲಿ ಹಾಗೂ ಹೊರಗೆ ರಾಜ್ಯದ ಇತರೆ ಭಾಗಗಳಲ್ಲಿ ಸಾರ್ವಜನಿಕವಾಗಿ ಈ ಬಗ್ಗೆ ಚರ್ಚೆ ಆಗಬೇಕಿದೆ” ಎಂದು ಹೇಳಿದ್ದಾರೆ.

“ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ, ಎಜುಕೇಶನ್ ಹಬ್ ಎಂದು ಖ್ಯಾತಿ ಪಡೆದಿದೆ. ಇದಕ್ಕೆ ಹಲವರ ಕೊಡುಗೆ ಇದೆ. ಆದರೆ ಈಗ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ‘ದೇಶದ ಭ್ರಷ್ಟಾಚಾರದ ರಾಜಧಾನಿ’ ಎಂದು ಕುಖ್ಯಾತಿ ಬಂದಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಮಾಧ್ಯಮಗಳು ನಮಗಿಂತ ಹೆಚ್ಚಿನ ತನಿಖೆ ಮಾಡಿದ್ದು, ನಿಮಗೆ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಅವರು ಮಾಧ್ಯಮಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

“ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದರು. ಆದರೆ ಈ ಡಬಲ್ ಇಂಜಿನ್ ಸರ್ಕಾರ ಬಂದ ನಂತರ ದೆಹಲಿಯಿಂದ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬ ಪಟ್ಟಿಯನ್ನು ಸರ್ಕಾರ ನೀಡಲಿ. ಬೇರೆ ರಾಜ್ಯಗಳಲ್ಲಿ ಪ್ರವಾಹ ಬಂದಾಗ ಖುದ್ದು ವೀಕ್ಷಣೆ ಮಾಡುವ ಪ್ರಧಾನಿಗಳು ನಮ್ಮ ರಾಜ್ಯ ಸತತವಾಗಿ ಪ್ರವಾಹದಿಂದ ತತ್ತರಿಸುತ್ತಿದ್ದರೂ ಈ ಕಡೆ ತಿರುಗಿ ನೋಡಿಲ್ಲ. ನಮ್ಮ ರಾಜ್ಯಕ್ಕೆ ನೀಡಬೇಕಾಗಿದ್ದ ನ್ಯಾಯ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಮಂತ್ರಿಗಳು ಬೆಂಗಳೂರಿಗೆ ಬಂದು ಸಬ್ ಅರ್ಬನ್ ರೈಲು ಯೋಜನೆ ಉದ್ಘಾಟಿಸಿ ಹೋದರು. ಈ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಜಾಹೀರಾತಿನಲ್ಲೇ ಉಳಿದಿದೆಯೇ ಹೊರತು ಚಾಲ್ತಿ ಆಗಲಿಲ್ಲ. ಈ ಸರ್ಕಾರ ಬಂದ ನಂತರ ರಾಜ್ಯಕ್ಕೆ ಯಾವುದಾದರೂ ರಾಷ್ಟ್ರೀಯ ಯೋಜನೆ ನೀಡಿದ್ದೀರಾ? ಇಲ್ಲ. ಆದರೆ ಈ ಸರ್ಕಾರಕ್ಕೆ ಭ್ರಷ್ಟಾಚಾರದ ಹೆಸರು ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಎಲ್ಲ ಹುದ್ದೆಗಳಿಗೂ ಒಂದೊಂದು ದರ ನಿಗದಿ ಮಾಡಿದ್ದೀರಿ. ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಯಲ್ಲಂತೂ ಭ್ರಷ್ಟಾಚಾರ ತಾಂಡವವಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್ ಬ್ಯಾನರ್ ಹಾಕಿ ಶಿವಾನಂದ ಮೇಲ್ಸೇತುವೆ ಉದ್ಘಾಟಿಸಿದ ಆಪ್ ಕಾರ್ಯಕರ್ತರ ಬಂಧನ

‘‘ಬಿಜೆಪಿ ಚುನಾವಣೆ ಪೂರ್ವದಲ್ಲಿ 600 ಭರವಸೆ ನೀಡಿತ್ತು. ಅದರಲ್ಲಿ 90%ದಷ್ಟು ಮಾತನ್ನು ಉಳಿಸಿಕೊಂಡಿಲ್ಲ. ಬಸವಣ್ಣನ ನಾಡಿನಲ್ಲಿ ನುಡಿದಂತೆ ನಡೆಯಬೇಕು. ಆದರೆ ನಿಮ್ಮಿಂದ ಅದು ಸಾಧ್ಯವಾಗಿಲ್ಲ. ನಾವು ದಿನನಿತ್ಯ ಪ್ರಶ್ನೆ ಕೇಳುತ್ತಿದ್ದು ಒಂದು ಪ್ರಶ್ನೆಗೂ ಉತ್ತರ ನೀಡಲು ನಿಮ್ಮಿಂದ ಸಾಧ್ಯವಾಗಿಲ್ಲ. ಬೆಂಗಳೂರು ವಿವಿಯ ರಿಜಿಸ್ಟಾರ್ ಪ್ರೊ. ಅಶೋಕ್ ಉಪಕುಲಪತಿ ಆಗಲು ಹೋಗಿ ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ಸರ್ಕಾರ ತನಿಖೆ ಮಾಡಲಿಲ್ಲ ಯಾಕೆ? ಯಾವ ಕಾಲದಲ್ಲೂ ಈ ಮಟ್ಟದ ಭ್ರಷ್ಟಾಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿಯನ್ನೂ ತೆರೆದಿದ್ದು, ಭ್ರಷ್ಟಾಚಾರ ಕಂಡಲ್ಲಿ 8447704040 ನಂಬರ್‌‌ಗೆ ಕರೆ ಅಥವಾ ವಾಟ್ಸಪ್ ಮೂಲಕ ತಿಳಿಸುವಂತೆ ಕೇಳಿದೆ. ಅಷ್ಟೆ ಅಲ್ಲದೆ www.40percentsarkaara.com ಎಂಬ ವೆಬ್ ಸೈಟ್‌‌ನಲ್ಲಿ ಕೂಡಾ ತಿಳಿಸಬಹುದು ಎಂದು ಹೇಳಿದ್ದು, ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡುತ್ತೇವೆ ಎಂದು ಭರವಸೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...