Homeಕರ್ನಾಟಕ‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿ ಮತ್ತು ವೆಬ್ ಸೈಟ್‌‌ ಅನ್ನು ಕೂಡಾ ಕಾಂಗ್ರೆಸ್ ಪ್ರಾರಂಭಿಸಿದೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ‘40% ಸರ್ಕಾರ- ಬಿಜೆಪಿ ಅಂದ್ರೆ ಭ್ರಷ್ಟಾಚಾರ’ ಅಭಿಯಾನವನ್ನು ಕಾಂಗ್ರೆಸ್‌ ಮಂಗಳವಾರ ಉದ್ಘಾಟನೆ ಮಾಡಿದೆ. ಬಿಜೆಪಿ ಸರ್ಕಾರದ 40% ಕಮಿಷನ್ ಸೇರಿದಂತೆ ಲಂಚದ ರೇಟ್ ಕಾರ್ಡ್‌ ಅನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರೀಶ್‌ ಕುಮಾರ್‌‌ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ್ದಾರೆ.

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’ ಎಂಬ ಹಾಡನ್ನು ಕಾಂಗ್ರೆಸ್‌ ಈಗಾಗಲೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದು ಜನರ ಗಮನ ಸೆಳೆದಿದೆ. ಕಳೆದ ಹಲವು ತಿಂಗಳಿನಿಂದ 40% ಕಮಿಷನ್ ವಿಚಾರವು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆ ಉಂಟು ಮಾಡುತ್ತಿದೆ. ಗುತ್ತಿಗೆದಾರರ ಸಂಘದ ಮುಖಂಡ ಕೆಂಪ್ಪಯ್ಯ ಅವರು ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದು ಈ ಬಗ್ಗೆ ದೂರು ಕೂಡಾ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ನಾವು ಭ್ರಷ್ಟಾಚಾರದ ವಿಚಾರವನ್ನು ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಿರುದೇಕೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಅಧಿವೇಶನ 10 ದಿನಗಳ ಕಾಲ ನಡೆಯಲಿದ್ದು, ಇಂದು ಪ್ರಕೃತಿ ವಿಕೋಪದ ಚರ್ಚೆ ಆಗುತ್ತಿದೆ. ಅಧಿವೇಶನದಲ್ಲಿ ಭ್ರಷ್ಟಾಚಾರದ ವಿಚಾರವನ್ನು ವ್ಯಾಪಕವಾಗಿ ಚರ್ಚೆ ಮಾಡಬೇಕಿದ್ದು, ಕಾಂಗ್ರೆಸ್ ಈ ಜವಾಬ್ದಾರಿ ವಹಿಸಿಕೊಂಡಿದೆ. ನಮ್ಮ ಶಾಸಕರುಗಳಿಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ತಿಳಿಸಿದ್ದೇವೆ. ಅಧಿವೇಶನದಲ್ಲಿ ಹಾಗೂ ಹೊರಗೆ ರಾಜ್ಯದ ಇತರೆ ಭಾಗಗಳಲ್ಲಿ ಸಾರ್ವಜನಿಕವಾಗಿ ಈ ಬಗ್ಗೆ ಚರ್ಚೆ ಆಗಬೇಕಿದೆ” ಎಂದು ಹೇಳಿದ್ದಾರೆ.

“ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ, ಎಜುಕೇಶನ್ ಹಬ್ ಎಂದು ಖ್ಯಾತಿ ಪಡೆದಿದೆ. ಇದಕ್ಕೆ ಹಲವರ ಕೊಡುಗೆ ಇದೆ. ಆದರೆ ಈಗ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ‘ದೇಶದ ಭ್ರಷ್ಟಾಚಾರದ ರಾಜಧಾನಿ’ ಎಂದು ಕುಖ್ಯಾತಿ ಬಂದಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಮಾಧ್ಯಮಗಳು ನಮಗಿಂತ ಹೆಚ್ಚಿನ ತನಿಖೆ ಮಾಡಿದ್ದು, ನಿಮಗೆ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಅವರು ಮಾಧ್ಯಮಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

“ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದರು. ಆದರೆ ಈ ಡಬಲ್ ಇಂಜಿನ್ ಸರ್ಕಾರ ಬಂದ ನಂತರ ದೆಹಲಿಯಿಂದ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬ ಪಟ್ಟಿಯನ್ನು ಸರ್ಕಾರ ನೀಡಲಿ. ಬೇರೆ ರಾಜ್ಯಗಳಲ್ಲಿ ಪ್ರವಾಹ ಬಂದಾಗ ಖುದ್ದು ವೀಕ್ಷಣೆ ಮಾಡುವ ಪ್ರಧಾನಿಗಳು ನಮ್ಮ ರಾಜ್ಯ ಸತತವಾಗಿ ಪ್ರವಾಹದಿಂದ ತತ್ತರಿಸುತ್ತಿದ್ದರೂ ಈ ಕಡೆ ತಿರುಗಿ ನೋಡಿಲ್ಲ. ನಮ್ಮ ರಾಜ್ಯಕ್ಕೆ ನೀಡಬೇಕಾಗಿದ್ದ ನ್ಯಾಯ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಮಂತ್ರಿಗಳು ಬೆಂಗಳೂರಿಗೆ ಬಂದು ಸಬ್ ಅರ್ಬನ್ ರೈಲು ಯೋಜನೆ ಉದ್ಘಾಟಿಸಿ ಹೋದರು. ಈ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಜಾಹೀರಾತಿನಲ್ಲೇ ಉಳಿದಿದೆಯೇ ಹೊರತು ಚಾಲ್ತಿ ಆಗಲಿಲ್ಲ. ಈ ಸರ್ಕಾರ ಬಂದ ನಂತರ ರಾಜ್ಯಕ್ಕೆ ಯಾವುದಾದರೂ ರಾಷ್ಟ್ರೀಯ ಯೋಜನೆ ನೀಡಿದ್ದೀರಾ? ಇಲ್ಲ. ಆದರೆ ಈ ಸರ್ಕಾರಕ್ಕೆ ಭ್ರಷ್ಟಾಚಾರದ ಹೆಸರು ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಎಲ್ಲ ಹುದ್ದೆಗಳಿಗೂ ಒಂದೊಂದು ದರ ನಿಗದಿ ಮಾಡಿದ್ದೀರಿ. ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಯಲ್ಲಂತೂ ಭ್ರಷ್ಟಾಚಾರ ತಾಂಡವವಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್ ಬ್ಯಾನರ್ ಹಾಕಿ ಶಿವಾನಂದ ಮೇಲ್ಸೇತುವೆ ಉದ್ಘಾಟಿಸಿದ ಆಪ್ ಕಾರ್ಯಕರ್ತರ ಬಂಧನ

‘‘ಬಿಜೆಪಿ ಚುನಾವಣೆ ಪೂರ್ವದಲ್ಲಿ 600 ಭರವಸೆ ನೀಡಿತ್ತು. ಅದರಲ್ಲಿ 90%ದಷ್ಟು ಮಾತನ್ನು ಉಳಿಸಿಕೊಂಡಿಲ್ಲ. ಬಸವಣ್ಣನ ನಾಡಿನಲ್ಲಿ ನುಡಿದಂತೆ ನಡೆಯಬೇಕು. ಆದರೆ ನಿಮ್ಮಿಂದ ಅದು ಸಾಧ್ಯವಾಗಿಲ್ಲ. ನಾವು ದಿನನಿತ್ಯ ಪ್ರಶ್ನೆ ಕೇಳುತ್ತಿದ್ದು ಒಂದು ಪ್ರಶ್ನೆಗೂ ಉತ್ತರ ನೀಡಲು ನಿಮ್ಮಿಂದ ಸಾಧ್ಯವಾಗಿಲ್ಲ. ಬೆಂಗಳೂರು ವಿವಿಯ ರಿಜಿಸ್ಟಾರ್ ಪ್ರೊ. ಅಶೋಕ್ ಉಪಕುಲಪತಿ ಆಗಲು ಹೋಗಿ ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ಸರ್ಕಾರ ತನಿಖೆ ಮಾಡಲಿಲ್ಲ ಯಾಕೆ? ಯಾವ ಕಾಲದಲ್ಲೂ ಈ ಮಟ್ಟದ ಭ್ರಷ್ಟಾಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿಯನ್ನೂ ತೆರೆದಿದ್ದು, ಭ್ರಷ್ಟಾಚಾರ ಕಂಡಲ್ಲಿ 8447704040 ನಂಬರ್‌‌ಗೆ ಕರೆ ಅಥವಾ ವಾಟ್ಸಪ್ ಮೂಲಕ ತಿಳಿಸುವಂತೆ ಕೇಳಿದೆ. ಅಷ್ಟೆ ಅಲ್ಲದೆ www.40percentsarkaara.com ಎಂಬ ವೆಬ್ ಸೈಟ್‌‌ನಲ್ಲಿ ಕೂಡಾ ತಿಳಿಸಬಹುದು ಎಂದು ಹೇಳಿದ್ದು, ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡುತ್ತೇವೆ ಎಂದು ಭರವಸೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...