Homeಮುಖಪುಟನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

ನೀವು ಪದೇ ಪದೇ ಸಮಸ್ಯೆಗೆ ಸಿಕ್ಕಿಹಾಕಿಕೊಳ್ಳುತ್ತೀರಾ? ಹಾಗಾದರೆ ಅವುಗಳ ವೈಜ್ಞಾನಿಕ ಪರಿಹಾರಕ್ಕೆ ಏನು ಮಾಡಬೇಕು ಗೊತ್ತೆ?

ಪರಿಹಾರ ಹುಡುಕುವ ದೈಹಿಕ/ಮಾನಸಿಕ ಸ್ಥಿತಿಯಲ್ಲಿ ನಾವು ಇರದಿದ್ದಲ್ಲಿ ಕೂಡಲೇ ಸಹಾಯ ಯಾಚಿಸಬೇಕು. ದೊಡ್ಡಸ್ತಿಕೆ ಮಾಡಲುಹೋಗಬಾರದು. ಚಿಕ್ಕ ಮಗುವೂ ಕೂಡ ತನಗೆ ಯಾವುದನ್ನು ಮಾಡಲು ಸಾಧ್ಯವಿಲ್ಲ ಎಂದು ಅರಿಯುತ್ತದೆಯೋ, ಕೂಡಲೇ ದೊಡ್ಡವರ ಗಮನ ಸೆಳೆಯುತ್ತದೆ. ಎಷ್ಟೋ ಬಾರಿ ನಾವು ಈ ಸರಳ ವಿಷಯವನ್ನು ಮರೆತುಬಿಡುತ್ತೇವೆ.

- Advertisement -
- Advertisement -

ಜೀವನ ಕಲೆಗಳು: ಅಂಕಣ – 22

ಸಮಸ್ಯೆಗಳ ಪರಿಹಾರ

ಸಮಸ್ಯೆಗಳು ಜೀವನದ ಒಂದು ಅವಿಭಾಜ್ಯ ಅಂಗ. ಹಾಗೆಂದು ಸಮಸ್ಯೆಯಿಂದ ಓಡಿ ಹೋಗುವುದಾಗಲೀ, ಆತ್ಮಹತ್ಯೆಯಾಗಲೀ ಪರಿಹಾರವಲ್ಲ. ಜೀವನಾವಶ್ಯಕ ಕಲೆಗಳಲ್ಲಿ ಸಮಸ್ಯೆ ಬಗೆಹರಿಸುವುದು ಮತ್ತು ನಿರ್ಧಾರ ತೆಗೆದುಕೊಳ್ಳುವುದು ಜೊತೆ ಜೊತೆಯಾಗಿ ಹೋಗುತ್ತವೆ. ಸಮಸ್ಯೆ ಪರಿಹಾರಕ್ಕೆ ಎಲ್ಲೋ ಒಂದು ನಿರ್ಧಾರ ತೆಗೆದುಕೊಳ್ಳುವ ಅವಶ್ಯಕತೆ ಇದ್ದರೆ, ತೆಗೆದುಕೊಂಡ ನಿರ್ಧಾರ ಇನ್ನೆಲ್ಲೋ ಒಂದು ಸಮಸ್ಯೆಯನ್ನು ಸೃಷ್ಟಿಸಲೂಬಹುದು. ಹಾಗಾಗಿ ಅವೆರಡಕ್ಕೂ ಒಂದು ರೀತಿಯ ನಂಟು ಇರುವಂತಿದ್ದರೂ ಎಲ್ಲಾ ಸಮಸ್ಯೆಗೂ ನಿರ್ಧಾರವೇ ಪರಿಹಾರ ಎಂತಲೂ ಇಲ್ಲ; ಎಲ್ಲಾ ನಿರ್ಧಾರಗಳೂ ಹೊಸ ಸಮಸ್ಯೆಗೆ ಕಾರಣವಾಗುತ್ತವೆ ಎಂತಲೂ ಇಲ್ಲ.

ಇಲ್ಲಿ ಸಮಸ್ಯೆಯನ್ನು ನಾವು ಎರಡು ವಿಧವಾಗಿ ಪರಿಗಣಿಸಬಹುದು. ಒಂದು ವೈಯುಕ್ತಿಕ ಅಥವಾ ಸಾಮಾಜಿಕ. ಇದು ಮನಶಾಸ್ತ್ರಕ್ಕೆ ಸಂಬಂಧಿಸಿದ್ದು, ಮತ್ತೊಂದು ವಿಜ್ಞಾನಕ್ಕೆ ಸಂಬಂಧಿಸಿದ್ದು, ಅಂದರೆ ಗಣಿತ, ವ್ಯಾಕರಣ, ವೈದ್ಯಕೀಯ, ಇತ್ಯಾದಿ.. ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ, ಕೇವಲ ವೈಯುಕ್ತಿಕ ಅಥವಾ ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚಿಸೋಣ. ಒಟ್ಟಿನಲ್ಲಿ ಸಮಸ್ಯೆ ಏನೇ ಇರಲಿ, ಅದು ಸ್ಪಷ್ಟವಾಗಿದ್ದಷ್ಟೂ ಪರಿಹಾರ ಸುಲಭ. ಸಮಸ್ಯೆ ಏನು ಎಂಬುದೇ ತಿಳಿಯದಿದ್ದಲ್ಲಿ ಪರಿಹಾರವೂ ಕಷ್ಟಸಾಧ್ಯ. ಪರಿಹಾರಕ್ಕೆ ನಮಗೆ ಬೇಕಾಗಿರುವುದು ವಿಮರ್ಶಾತ್ಮಕ ಮತ್ತು ಸೃಜನಾತ್ಮಕ ಚಿಂತನೆ. ಇವೆರಡರ ಬಗ್ಗೆ ನಾನು ಈಗಾಗಲೇ ತಿಳಿಸಿದ್ದೇನೆ.

ಸಮಸ್ಯೆಯ ಪರಿಹಾರದಲ್ಲಿ ನಮ್ಮ ಮನಃಸ್ಥಿತಿಯೂ ಮುಖ್ಯ ಭೂಮಿಕೆ ವಹಿಸುತ್ತದೆ. ಪರಿಹಾರ ಹುಡುಕುವ ದೈಹಿಕ/ಮಾನಸಿಕ ಸ್ಥಿತಿಯಲ್ಲಿ ನಾವು ಇರದಿದ್ದಲ್ಲಿ ಕೂಡಲೇ ಸಹಾಯ ಯಾಚಿಸಬೇಕು. ದೊಡ್ಡಸ್ತಿಕೆ ಮಾಡಲುಹೋಗಬಾರದು. ಚಿಕ್ಕ ಮಗುವೂ ಕೂಡ ತನಗೆ ಯಾವುದನ್ನು ಮಾಡಲು ಸಾಧ್ಯವಿಲ್ಲ ಎಂದು ಅರಿಯುತ್ತದೆಯೋ, ಕೂಡಲೇ ದೊಡ್ಡವರ ಗಮನ ಸೆಳೆಯುತ್ತದೆ. ಎಷ್ಟೋ ಬಾರಿ ನಾವು ಈ ಸರಳ ವಿಷಯವನ್ನು ಮರೆತುಬಿಡುತ್ತೇವೆ. ಅದೇ ರೀತಿ ಸಮಸ್ಯೆಯ ಎಲ್ಲಾ ಪಾರ್ಶ್ವಗಳನ್ನು ಸರಿಯಾಗಿ ತಿಳಿಯಲು ಸಾಧ್ಯವಾಗಿಲ್ಲದಿದ್ದಲ್ಲಿ, ನಮಗೆ ಗೊತ್ತಿರುವ ಅಲ್ಪ ಮಾಹಿತಿಯ ಆಧಾರದ ಮೇಲೆ, ಪರಿಹಾರಕ್ಕೆ ಕೈ ಹಾಕಿ ವಿಪರೀತ ಪರಿಣಾಮ ಎದುರಿಸಬೇಕಾಗುತ್ತದೆ. ಉದಾ: ಎಲೆಕ್ಟ್ರಿಕ್ ಮೀಟರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಥವಾ ಒಲೆಯ ಮೇಲಿರಿಸಿದ ಕಾಯ್ದ ಎಣ್ಣೆಗೆ ಬೆಂಕಿ ತಗುಲಿದಾಗ, ನಾವು ಬೆಂಕಿ ನಂದಿಸಲು ಅದರ ಮೇಲೆ ನೀರು ಎರಚಲು ಹೋದಲ್ಲಿ, ವಿದ್ಯುತ್ ಶಾಕಿನಿಂದ ಅಥವಾ ದೊಡ್ಡ ಬೆಂಕಿ ಅನಾಹುತದಿಂದ ಹೆಚ್ಚಿನ ತೊಂದರೆಗೆ ಸಿಲುಕುತ್ತೇವೆ. ಆದ್ದರಿಂದ ಸಮಸ್ಯೆ ಅರ್ಥವಾಗದಿದ್ದಲ್ಲಿ, ನಮ್ಮಲ್ಲಿ ಸಾಮರ್ಥ್ಯ/ಸಂಪನ್ಮೂಲದ ಕೊರತೆ ಇದ್ದಲ್ಲಿ, ಪರಿಹಾರಕ್ಕೆ ನಾವೊಬ್ಬರೇ ಯತ್ನಿಸದೇ, ಕೂಡಲೇ ಬೇರೆಯವರ ಸಹಾಯ ಪಡೆಯಬೇಕು. ಇದು ಸಮಸ್ಯೆ ಪರಿಹಾರ ಕಲೆಯ ಮುಖ್ಯ ಎಚ್ಚರಿಕೆ.

ಮೊಟ್ಟ ಮೊದಲಿಗೆ ನಾವು ಸಮಸ್ಯೆ ಏನು ಎಂಬುದನ್ನು ಸರಿಯಾಗಿ ಅರಿಯಬೇಕು. ಸಮಸ್ಯೆ ನೇರವಾಗಿ ನಮ್ಮ ಕಣ್ಣಿಗೆ ಕಾಣುವುದು ಅಪರೂಪ, ಕೇವಲ ಅದರ ಲಕ್ಷಣಗಳು ನಮಗೆ ಗೋಚರಿಸುತ್ತವೆ. ಸಮಸ್ಯೆ ಎಲ್ಲೋ ಇರುತ್ತದೆ, ಲಕ್ಷಣಗಳು ಇನ್ನೆಲ್ಲೋ ಕಾಣಿಸಿಕೊಳ್ಳುತ್ತವೆ. ಹೇಗೆ ವೈದ್ಯರು ನಮ್ಮ ಕಾಯಿಲೆ ಕಂಡು ಹಿಡಿಯುವಾಗ ನಮ್ಮಿಂದ ತೊಂದರೆಯ ಲಕ್ಷಣಗಳನ್ನು ಕೇಳಿ ತಿಳಿದುಕೊಳ್ಳುತ್ತಾರೋ ಹಾಗೆ ನಾವೂ ಸಹ ಸಮಸ್ಯೆಯ ಗುಣ-ಲಕ್ಷಣಗಳನ್ನು ಗುರುತಿಸಿ, ವಿಶ್ಲೇಷಿಸಿ ಅದರಿಂದ ಸಮಸ್ಯೆ ಏನು ಎಂಬ ನಿರ್ಧಾರಕ್ಕೆ ಬರಬೇಕಾಗುತ್ತದೆ. ಅದರಲ್ಲೂ ಸಮಸ್ಯೆಗೆ “ಮೂಲ ಕಾರಣ” ಏನು ಎಂಬುದನ್ನು ತಿಳಿದು, ನಂತರ ಮೂಲ ಕಾರಣ ಹೋಗಲಾಡಿಸುವಂತಹ ಪರಿಹಾರ ಹುಡುಕಬೇಕಾಗುತ್ತದೆ. ಮೂಲ ಕಾರಣ ತಿಳಿಯದಿದ್ದರೆ ನಾವು ಪರಿಹಾರಕ್ಕೆ ದಾರಿ ಸಿಕ್ಕದೆ, ಅದರ ಚಕ್ರವ್ಯೂಹದಲ್ಲಿ ಸಿಲುಕುವುದು ನಿಶ್ಚಿತ.

ಮೂಲ ಕಾರಣ (ರೂಟ್ ಕಾಸ್) ಹುಡುಕಲು ಹಲವಾರು ಉಪಕರಣಗಳಿವೆ. ಅವುಗಳಲ್ಲಿ ಒಂದು “ಫೈವ್ ವೈ” (Five Why) ಇದರಲ್ಲಿ ಸಮಸ್ಯೆಯ ಬಗ್ಗೆ ಐದು ಬಾರಿ “ಏಕೆ?“ ಎಂದು ಪ್ರಶ್ನಿಸುವುದು. ಈ ಐದು ಬಾರಿಯ ಪ್ರಶ್ನೆಗೆ ಉತ್ತರ ಸಿಗುವಂತಿದ್ದರೆ ನಮಗೆ ಸಮಸ್ಯೆಯ ಮೂಲ ಕಾರಣ ಸ್ಪಷ್ಟವಾಗುತ್ತದೆ.

ಇನ್ನೊಂದು ಉಪಕರಣ ”ಫಿಷ್ ಬೋನ್” ಡಯಾಗ್ರಾಮ್. ಇದರಲ್ಲಿ ಸಮಸ್ಯೆಗೆ ಯಾವುದು ಕಾರಣ – ನಮ್ಮ ವ್ಯವಸ್ಥೆಯೇ, ಸಲಕರಣೆಗಳೇ, ಪರ್ಯಾವರಣವೇ, ಬಳಕೆಯ ವಸ್ತುಗಳೇ, ಜನರೇ ಅಥವಾ ಪ್ರಕ್ರಿಯೆಯೇ? ಎಂಬುದಾಗಿ ಅವುಗಳ ಕಾರ್ಯವನ್ನು ನಿರೀಕ್ಷಿಸಿ, ವಿಶ್ಲೇಶಿಸಿ ಯಾವುದು “ಕಾರಣ”, ಯಾವುದು ಲಕ್ಷಣ ಎಂಬ ತೀರ್ಮಾನಕ್ಕೆ ಬರುವುದು. ಚಿತ್ರ ಮೀನಿನ ಮೂಳೆಯ ಆಕಾರದಲ್ಲಿರುವುದರಿಂದ ಇದಕ್ಕೆ ಫಿಶ್ ಬೋನ್ ಎನ್ನುತ್ತಾರೆ.

ಮೇಲಿನ ರೀತಿಗಳಲ್ಲದೆ ಸಮಸ್ಯೆ ಪರಿಹಾರಕ್ಕೆ ಇನ್ನೂ ಕೆಲವು ತಂತ್ರಗಳನ್ನು ಬಳಸಬಹುದು. ಅವೆಂದರೆ:

·         ಸಮಸ್ಯೆಯ ಒಂದು ನಿಜರೂಪ ಮಾದರಿ (ಮೊಡೆಲ್) ಮಾಡಿಕೊಂಡು ಅದರ ಮೇಲೆ ಮೊದಲು ಪ್ರಯೋಗ ಮಾಡುವುದು. ನಂತರ ಅದನ್ನು ನಿಜವಾದ ಸಮಸ್ಯೆಯ ಮೇಲೆ ಉಪಯೋಗಿಸುವುದು (ವೈದ್ಯರು ತಮ್ಮ ಔಷಧಿಗಳನ್ನು ಮೊದಲು ಬಲಿಪಶುಗಳ ಮೇಲೆ ಉಪಯೋಗಿಸುವ ರೀತಿಯಲ್ಲಿ).

·         ಸಮಸ್ಯೆಯ ತರಹವೇ ಇರುವ ಅನುರೂಪ ಮಾದರಿಯ ಮೇಲೆ ಪ್ರಯೋಗ ಮಾಡಿ ನೋಡುವುದು.

·         “ಹೀಗೆ ಮಾಡಿದರೆ ಹೀಗೆ ಆಗುತ್ತದೆ” ಎನ್ನುವ ಪಠ್ಯಪುಸ್ತಕ ತತ್ವವಾದವನ್ನು ಪ್ರಯೋಗಿಸಿ ನೋಡುವುದು.

·         ಸಂಕೀರ್ಣ ಸಮಸ್ಯೆಯನ್ನು ಚಿಕ್ಕ-ಚಿಕ್ಕದಾಗಿ ತುಂಡರಿಸಿ ಪರಿಹಾರ ಹುಡುಕುವುದು.

·         ಯಾವ ಯಾವ ತುಂಡುಗಳಿಗೆ ಪರಿಹಾರ ಸಿಗುತ್ತದೋ ಅಲ್ಲಿಂದ ಮುಂದಕ್ಕೆ ಹೊಸದಾಗಿ ಯೋಚಿಸುವುದು.

·         ಪರಿಹಾರ ಸಿಗದ ತುಂಡುಗಳನ್ನು ಒಟ್ಟು ಸೇರಿಸಿ ಪರಿಹಾರ ಕಂಡುಕೊಳ್ಳುವುದು

·         ಸಮಸ್ಯೆಯನ್ನು ಪರಿವರ್ತಿಸಿ ಪರಿಹಾರವಿರುವಂತಹ ಸಮಸ್ಯೆಯನ್ನಾಗಿ ಮಾಡುವುದು.

ಸಮಸ್ಯೆ ಪರಿಹಾರದ ಐದು ಹೆಜ್ಜೆಗಳು:

1.      ಸಮಸ್ಯೆಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ, ಸರಿಯಾಗಿ ಗುರುತಿಸಿ, ವ್ಯಾಖ್ಯಾನಿಸುವುದು.

2.      ಅದರ ಪರಿಹಾರಕ್ಕೆ ಬೇಕಾದ ಪರ್ಯಾಯ ಮಾರ್ಗಗಳನ್ನು, ಬೇಕಾದ ಸಂಪನ್ಮೂಲ ಹುಡುಕುವುದು/ಕ್ರೋಢೀಕರಿಸುವುದು.

3.      ಪರ್ಯಾಯ ಮಾರ್ಗಗಳ ಉಪಯುಕ್ತತೆ/ಮೌಲ್ಯ ಕಂಡುಹಿಡಿದು, ಅವುಗಳಲ್ಲಿ ಅತ್ಯಂತ ಸೂಕ್ತವಾದುದನ್ನು ಆಯ್ದುಕೊಳ್ಳುವುದು.

4.      ಆಯ್ದ ಯೋಜನೆಯನ್ನು ಚಾಚೂ ತಪ್ಪದಂತೆ ಜಾರಿಗೊಳಿಸುವುದು.

5.      ಸಮಸ್ಯೆ ಪರಿಹಾರವಾಯಿತೋ, ಇಲ್ಲವೋ ಎಂದು ನೋಡುವುದು. ಆಗಿಲ್ಲದಿದ್ದಲ್ಲಿ ಮತ್ತೆ. ಹೆಜ್ಜೆ ಕ್ರಮಾಂಕ 1 ರಿಂದ ಪ್ರಾರಂಭಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...