Homeಕರ್ನಾಟಕಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ...

ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ವಾರ ಉಂಟಾದ ನೆರೆಗೆ ಕಾರಣವಾದ ಸುಮಾರು 700 ಮಳೆ ನೀರಿನ ಚರಂಡಿಗಳನ್ನು ಮುಚ್ಚಿದ ಅತಿಕ್ರಮಣದಾರರ ಪಟ್ಟಿಯಲ್ಲಿ ಹೈ-ಪ್ರೊಫೈಲ್ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಟೆಕ್ ಪಾರ್ಕ್‌ಗಳು ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಈ ಪಟ್ಟಿಯಲ್ಲಿ ವಿಪ್ರೋ, ಪ್ರೆಸ್ಟೀಜ್, ಇಕೋ ಸ್ಪೇಸ್, ​​ಬಾಗ್‌ಮನೆ ಟೆಕ್ ಪಾರ್ಕ್, ಕೊಲಂಬಿಯಾ ಏಷ್ಯಾ ಆಸ್ಪತ್ರೆ ಮತ್ತು ದಿವ್ಯಶ್ರೀ ವಿಲ್ಲಾಸ್ ಸೇರಿದಂತೆ ಹಲವು ದೊಡ್ಡ ಕಂಪೆನಿಗಳ ಹೆಸರು ಇವೆ ಅದು ಉಲ್ಲೇಖಿಸಿದೆ.

ಬಿಬಿಎಂಪಿ ಕಳೆದ ಎರಡು ದಿನಗಳಿಂದ ಅತಿಕ್ರಮಣಕಾರರು ಎಂದು ಆರೋಪಿಸಿ ಜನ ಸಾಮಾನ್ಯರ ಆಸ್ತಿಗಳನ್ನು ಬುಲ್ಡೋಝರ್‌ ಮೂಲಕ ಕೆಡವಲಾಗುತ್ತಿದೆ. ಅದಾಗ್ಯೂ ಈ ವೇಳೆ ಈ ಯಾವುದೆ ದೊಡ್ಡ ಕಂಪೆನಿಗಳ ಆಸ್ತಿಗಳನ್ನು ಕೆಡವಿದ್ದು ಈ ವರೆಗೆ ವರದಿಯಾಗಿಲ್ಲ ಎಂದು ಎನ್‌ಡಿಟವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾನ್ಯ ಮನುಷ್ಯರ ಆಸ್ತಿಗಳನ್ನು ನೆಲಸಮಗೊಳಿಸುವ ಕಾರ್ಯಗಳು ಭರದಿಂದ ಸಾಗುತ್ತಿರುವಾಗ, ಬೃಹತ್‌ ಕಂಪನಿಗಳು ಇನ್ನೂ ಮುಟ್ಟಿಲ್ಲ” ಎಂದು ತನ್ನ ವರದಿಯಲ್ಲಿ ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

“ಅತಿಕ್ರಮ ಮಾಡಿರುವ ಯಾವುದೆ ಕಂಪೆನಿಗಳನ್ನು ಬಿಡುವುದಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿ ಇಂಜಿನಿಯರ್‌ ಹೇಳಿದ್ದಾರಾದರೂ, ಯಾವುದೆ ದೊಡ್ಡ ಕಂಪೆನಿಗಳ ಮೇಲೆ ಇನ್ನೂ ಕ್ರಮ ಪ್ರಾರಂಭವಾಗಿಲ್ಲ” ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಈ ನಡುವೆ ಬೆಂಗಳೂರಿನಲ್ಲಿ ನೆರೆ ಬಂದಿದ್ದರ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ತೀವ್ರ ಟೀಕೆ ಮಾಡಿದ್ದ ಯುವ ಕಾಂಗ್ರೆಸ್‌‌ ಅಧ್ಯಕ್ಷ ಮಹಮ್ಮದ್ ನಲಪಾಡ್ ಸೇರಿದ ಪೂರ್ವ ಬೆಂಗಳೂರಿನ ನಲಪಾಡ್ ಅಕಾಡೆಮಿ ಆಫ್ ಇಂಟರ್‌ನ್ಯಾಶನಲ್ ಸ್ಕೂಲ್ ಆವರಣದಲ್ಲಿ ಧ್ವಂಸ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಶಾಲೆಯು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿದ್ದು ಗಮನಕ್ಕೆ ಬಾರದೆ ಹೋದದ್ದು ಹೇಗೆ ಎಂಬ ಪ್ರಶ್ನೆಗೆ, ಕಟ್ಟಡ ನಿರ್ವಣದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುಖ್ಯ ಎಂಜಿನಿಯರ್ ಮಾಲತಿ ಅವರು ಕಂದಾಯ ಇಲಾಖೆಯನ್ನು ದೂಷಿಸಿದ್ದಾರೆ. “ಈ ಬಗ್ಗೆ ನಮಗೆ ತಿಳಿದಿರಲಿಲ್ಲ, ಇದು ಕಂದಾಯ ಇಲಾಖೆಯ ಅಡಿಯಲ್ಲಿ ಬರುತ್ತದೆ. ಅವರು ಪರಿಶೀಲಿಸಬೇಕಿತ್ತು. ಈಗ ನಾವು ಅತಿಕ್ರಮಣವನ್ನು ಕೆಡವುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

ಕೆಲವು ದಿನಗಳಿಂದ ಬೆಂಗಳೂರಿನ ಹಲವು ವಸತಿ ಪ್ರದೇಶದಲ್ಲಿ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಆದರೆ ಯಾವುದೇ ಅಧಿಕೃತ ಅಂಕಿಅಂಶಗಳು ಇನ್ನೂ ಬಂದಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನ ಪೂರ್ವ ಭಾಗದಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯನ್ನು ನಿವಾಸಿಗಳು ತಮ್ಮ ಮನೆಗಳಲ್ಲಿದ್ದಾಗ ನೆಲಸಮಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕಟ್ಟಡದ ಮಾಲೀಕ ದಿನೇಶ್ ರೆಡ್ಡಿ ಅವರು, “ಕಟ್ಟಡದ ನಿರ್ಮಾಣಕ್ಕೆ ಮುಂದಾದಾಗಲೆ ಎಲ್ಲಾ ಅಗತ್ಯ ಅನುಮತಿಗಳನ್ನು ತೆಗೆದುಕೊಂಡಿದ್ದೇವೆ. ಈ ಮಳೆನೀರು ಚರಂಡಿ ಬಹಳ ದಿನಗಳಿಂದ ಇದೆ, ಈ ವಿಚಾರ ಗೊತ್ತಿದ್ದರೂ ಅಧಿಕಾರಿಗಳು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ. ನಾನು ಯಾವುದೇ ನಿಯಮ ಉಲ್ಲಂಘಿಸಿಲ್ಲ.ಯಾವುದೇ ಸೂಚನೆ ನೀಡದೆ ಬಂದು ಕಾಂಪೌಂಡ್ ಗೋಡೆ ಕೆಡವಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ, ಕಟ್ಟಡ ಧ್ವಂಸವನ್ನು ಮೇಲ್ವಿಚಾರಣೆ ನಡೆಸುತ್ತಿರುವ ಕಾರ್ಯನಿರ್ವಾಹಕ ಇಂಜಿನಿಯರ್, ಕಟ್ಟಡ ನಿರ್ಮಾಣಕ್ಕೆ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ. “ಈ ಕಟ್ಟಡಕ್ಕೆ ಯಾವುದೇ ಮಂಜೂರಾತಿ ಯೋಜನೆ ನೀಡಲಾಗಿಲ್ಲ. ಅವರು ಕಾನೂನು ಉಲ್ಲಂಘಿಸಿ ಮಳೆನೀರು ಹರಿಯುವ ಚರಂಡಿಯಲ್ಲಿ ಕಟ್ಟಡ ನಿರ್ಮಿಸಿದ್ದಾರೆ” ಎಂದು ಕಾರ್ಯಪಾಲಕ ಎಂಜಿನಿಯರ್ ಮುನಿರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ಆದಾಗ್ಯೂ, ಕಟ್ಟಡ ಧ್ವಂಸದ ಬಗ್ಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದು ಅನೇಕ ನಿವಾಸಿಗಳು ದೂರಿದ್ದಾರೆ. “ಸರ್ಕಾರ ನಮಗೆ ಯಾವುದೆ ಮಾಹಿತಿ ನೀಡಿಲ್ಲ. ಕಟ್ಟಡಗಳನ್ನು ಕೆಡವಲು ಆರಂಭಿಸಿದಾಗ ನಾವು ನಮ್ಮ ಮನೆಯೊಳಗಿದ್ದೆವು” ಎಂದು ಕೆಡವಲಾಗುತ್ತಿರುವ ನಾಲ್ಕು ಅಂತಸ್ತಿನ ಕಟ್ಟಡದ ನಿವಾಸಿ ಅಲೋಕ್ ಹೇಳಿದ್ದಾರೆ.

“ನಾನು ರಾತ್ರಿ ಪಾಳಿ ಕೆಲಸದಲ್ಲಿದ್ದು, ಅದನ್ನು ಮುಗಿಸಿ ಗಾಢ ನಿದ್ದೆಯಲ್ಲಿದ್ದೆ. ಕೆಡವುವಿಕೆಯ ದೊಡ್ಡ ಶಬ್ದಕ್ಕೆ ನಾನು ಇದ್ದಕ್ಕಿದ್ದಂತೆ ಎಚ್ಚರವಾಯಿತು” ಎಂದು ಮತ್ತೊಬ್ಬ ನಿವಾಸಿ ಪ್ರವೀಣ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...