Homeಕರ್ನಾಟಕಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ...

ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ವಾರ ಉಂಟಾದ ನೆರೆಗೆ ಕಾರಣವಾದ ಸುಮಾರು 700 ಮಳೆ ನೀರಿನ ಚರಂಡಿಗಳನ್ನು ಮುಚ್ಚಿದ ಅತಿಕ್ರಮಣದಾರರ ಪಟ್ಟಿಯಲ್ಲಿ ಹೈ-ಪ್ರೊಫೈಲ್ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಟೆಕ್ ಪಾರ್ಕ್‌ಗಳು ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಈ ಪಟ್ಟಿಯಲ್ಲಿ ವಿಪ್ರೋ, ಪ್ರೆಸ್ಟೀಜ್, ಇಕೋ ಸ್ಪೇಸ್, ​​ಬಾಗ್‌ಮನೆ ಟೆಕ್ ಪಾರ್ಕ್, ಕೊಲಂಬಿಯಾ ಏಷ್ಯಾ ಆಸ್ಪತ್ರೆ ಮತ್ತು ದಿವ್ಯಶ್ರೀ ವಿಲ್ಲಾಸ್ ಸೇರಿದಂತೆ ಹಲವು ದೊಡ್ಡ ಕಂಪೆನಿಗಳ ಹೆಸರು ಇವೆ ಅದು ಉಲ್ಲೇಖಿಸಿದೆ.

ಬಿಬಿಎಂಪಿ ಕಳೆದ ಎರಡು ದಿನಗಳಿಂದ ಅತಿಕ್ರಮಣಕಾರರು ಎಂದು ಆರೋಪಿಸಿ ಜನ ಸಾಮಾನ್ಯರ ಆಸ್ತಿಗಳನ್ನು ಬುಲ್ಡೋಝರ್‌ ಮೂಲಕ ಕೆಡವಲಾಗುತ್ತಿದೆ. ಅದಾಗ್ಯೂ ಈ ವೇಳೆ ಈ ಯಾವುದೆ ದೊಡ್ಡ ಕಂಪೆನಿಗಳ ಆಸ್ತಿಗಳನ್ನು ಕೆಡವಿದ್ದು ಈ ವರೆಗೆ ವರದಿಯಾಗಿಲ್ಲ ಎಂದು ಎನ್‌ಡಿಟವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಮಾನ್ಯ ಮನುಷ್ಯರ ಆಸ್ತಿಗಳನ್ನು ನೆಲಸಮಗೊಳಿಸುವ ಕಾರ್ಯಗಳು ಭರದಿಂದ ಸಾಗುತ್ತಿರುವಾಗ, ಬೃಹತ್‌ ಕಂಪನಿಗಳು ಇನ್ನೂ ಮುಟ್ಟಿಲ್ಲ” ಎಂದು ತನ್ನ ವರದಿಯಲ್ಲಿ ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: ‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

“ಅತಿಕ್ರಮ ಮಾಡಿರುವ ಯಾವುದೆ ಕಂಪೆನಿಗಳನ್ನು ಬಿಡುವುದಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿ ಇಂಜಿನಿಯರ್‌ ಹೇಳಿದ್ದಾರಾದರೂ, ಯಾವುದೆ ದೊಡ್ಡ ಕಂಪೆನಿಗಳ ಮೇಲೆ ಇನ್ನೂ ಕ್ರಮ ಪ್ರಾರಂಭವಾಗಿಲ್ಲ” ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಈ ನಡುವೆ ಬೆಂಗಳೂರಿನಲ್ಲಿ ನೆರೆ ಬಂದಿದ್ದರ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ತೀವ್ರ ಟೀಕೆ ಮಾಡಿದ್ದ ಯುವ ಕಾಂಗ್ರೆಸ್‌‌ ಅಧ್ಯಕ್ಷ ಮಹಮ್ಮದ್ ನಲಪಾಡ್ ಸೇರಿದ ಪೂರ್ವ ಬೆಂಗಳೂರಿನ ನಲಪಾಡ್ ಅಕಾಡೆಮಿ ಆಫ್ ಇಂಟರ್‌ನ್ಯಾಶನಲ್ ಸ್ಕೂಲ್ ಆವರಣದಲ್ಲಿ ಧ್ವಂಸ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಶಾಲೆಯು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿದ್ದು ಗಮನಕ್ಕೆ ಬಾರದೆ ಹೋದದ್ದು ಹೇಗೆ ಎಂಬ ಪ್ರಶ್ನೆಗೆ, ಕಟ್ಟಡ ನಿರ್ವಣದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮುಖ್ಯ ಎಂಜಿನಿಯರ್ ಮಾಲತಿ ಅವರು ಕಂದಾಯ ಇಲಾಖೆಯನ್ನು ದೂಷಿಸಿದ್ದಾರೆ. “ಈ ಬಗ್ಗೆ ನಮಗೆ ತಿಳಿದಿರಲಿಲ್ಲ, ಇದು ಕಂದಾಯ ಇಲಾಖೆಯ ಅಡಿಯಲ್ಲಿ ಬರುತ್ತದೆ. ಅವರು ಪರಿಶೀಲಿಸಬೇಕಿತ್ತು. ಈಗ ನಾವು ಅತಿಕ್ರಮಣವನ್ನು ಕೆಡವುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

ಕೆಲವು ದಿನಗಳಿಂದ ಬೆಂಗಳೂರಿನ ಹಲವು ವಸತಿ ಪ್ರದೇಶದಲ್ಲಿ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಆದರೆ ಯಾವುದೇ ಅಧಿಕೃತ ಅಂಕಿಅಂಶಗಳು ಇನ್ನೂ ಬಂದಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನ ಪೂರ್ವ ಭಾಗದಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯನ್ನು ನಿವಾಸಿಗಳು ತಮ್ಮ ಮನೆಗಳಲ್ಲಿದ್ದಾಗ ನೆಲಸಮಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕಟ್ಟಡದ ಮಾಲೀಕ ದಿನೇಶ್ ರೆಡ್ಡಿ ಅವರು, “ಕಟ್ಟಡದ ನಿರ್ಮಾಣಕ್ಕೆ ಮುಂದಾದಾಗಲೆ ಎಲ್ಲಾ ಅಗತ್ಯ ಅನುಮತಿಗಳನ್ನು ತೆಗೆದುಕೊಂಡಿದ್ದೇವೆ. ಈ ಮಳೆನೀರು ಚರಂಡಿ ಬಹಳ ದಿನಗಳಿಂದ ಇದೆ, ಈ ವಿಚಾರ ಗೊತ್ತಿದ್ದರೂ ಅಧಿಕಾರಿಗಳು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ. ನಾನು ಯಾವುದೇ ನಿಯಮ ಉಲ್ಲಂಘಿಸಿಲ್ಲ.ಯಾವುದೇ ಸೂಚನೆ ನೀಡದೆ ಬಂದು ಕಾಂಪೌಂಡ್ ಗೋಡೆ ಕೆಡವಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ, ಕಟ್ಟಡ ಧ್ವಂಸವನ್ನು ಮೇಲ್ವಿಚಾರಣೆ ನಡೆಸುತ್ತಿರುವ ಕಾರ್ಯನಿರ್ವಾಹಕ ಇಂಜಿನಿಯರ್, ಕಟ್ಟಡ ನಿರ್ಮಾಣಕ್ಕೆ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ. “ಈ ಕಟ್ಟಡಕ್ಕೆ ಯಾವುದೇ ಮಂಜೂರಾತಿ ಯೋಜನೆ ನೀಡಲಾಗಿಲ್ಲ. ಅವರು ಕಾನೂನು ಉಲ್ಲಂಘಿಸಿ ಮಳೆನೀರು ಹರಿಯುವ ಚರಂಡಿಯಲ್ಲಿ ಕಟ್ಟಡ ನಿರ್ಮಿಸಿದ್ದಾರೆ” ಎಂದು ಕಾರ್ಯಪಾಲಕ ಎಂಜಿನಿಯರ್ ಮುನಿರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ಆದಾಗ್ಯೂ, ಕಟ್ಟಡ ಧ್ವಂಸದ ಬಗ್ಗೆ ಯಾವುದೇ ಸೂಚನೆಯನ್ನು ನೀಡಿಲ್ಲ ಎಂದು ಅನೇಕ ನಿವಾಸಿಗಳು ದೂರಿದ್ದಾರೆ. “ಸರ್ಕಾರ ನಮಗೆ ಯಾವುದೆ ಮಾಹಿತಿ ನೀಡಿಲ್ಲ. ಕಟ್ಟಡಗಳನ್ನು ಕೆಡವಲು ಆರಂಭಿಸಿದಾಗ ನಾವು ನಮ್ಮ ಮನೆಯೊಳಗಿದ್ದೆವು” ಎಂದು ಕೆಡವಲಾಗುತ್ತಿರುವ ನಾಲ್ಕು ಅಂತಸ್ತಿನ ಕಟ್ಟಡದ ನಿವಾಸಿ ಅಲೋಕ್ ಹೇಳಿದ್ದಾರೆ.

“ನಾನು ರಾತ್ರಿ ಪಾಳಿ ಕೆಲಸದಲ್ಲಿದ್ದು, ಅದನ್ನು ಮುಗಿಸಿ ಗಾಢ ನಿದ್ದೆಯಲ್ಲಿದ್ದೆ. ಕೆಡವುವಿಕೆಯ ದೊಡ್ಡ ಶಬ್ದಕ್ಕೆ ನಾನು ಇದ್ದಕ್ಕಿದ್ದಂತೆ ಎಚ್ಚರವಾಯಿತು” ಎಂದು ಮತ್ತೊಬ್ಬ ನಿವಾಸಿ ಪ್ರವೀಣ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...