ರಾಹುಲ್ ಗಾಂಧಿ ಅವರು ಪ್ರಾರಂಭಿಸಿರುವ 150 ದಿನಗಳ ಭಾರತ್ ಜೋಡೋ ಯಾತ್ರೆಯ ಮಧ್ಯೆಯೆ ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿರುವ ಘಟನೆ ಬುಧವಾರ ನಡೆದಿದೆ. ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಶಾಸಕ ಮೈಕೆಲ್ ಲೋಬೋ ಹೇಳಿದ್ದಾರೆ.
ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದು, ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಮೂರಕ್ಕೆ ಇಳಿದಿದೆ. ಈ ಹಿಂದೆ ಅಲ್ಲಿ ಪಕ್ಷಕ್ಕೆ 11 ಶಾಸಕರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ನಾವು ಬಿಜೆಪಿ ಸೇರಿದ್ದೇವೆ… ಕಾಂಗ್ರೆಸ್ ಬಿಟ್ಟು, ಬಿಜೆಪಿ ಒಗ್ಗೂಡಿಸಿ (ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ)” ಎಂದು ಕಾಂಗ್ರೆಸ್ ಮಾಜಿ ಶಾಸಕ ಮೈಕಲ್ ಲೋಬೋ ಹೇಳಿದ್ದಾರೆ.
Goa | 8 Congress MLAs including Digambar Kamat, Michael Lobo, Delilah Lobo, Rajesh Phaldesai, Kedar Naik, Sankalp Amonkar, Aleixo Sequeira & Rudolf Fernandes join BJP in presence of CM Pramod Sawant pic.twitter.com/uxp7YaZAUN
— ANI (@ANI) September 14, 2022
ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ
ಗೋವಾ ಕಾಂಗ್ರೆಸ್ ಶಾಸಕರು ರಾಜ್ಯದ ಆಡಳಿತರೂಢ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಚಿತ್ರದೊಂದಿಗೆ “ಗೋ ಗೋವಾ ಗಾನ್” ಎಂದು ಟ್ವೀಟ್ ಮಾಡಿದ್ದಾರೆ.
Go Goa Gone pic.twitter.com/PBm5eIalMB
— Shehzad Jai Hind (@Shehzad_Ind) September 14, 2022
ಬಿಜೆಪಿಗೆ ಸೇರಿದ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ. ಈ ಎಲ್ಲಾ ಶಾಸಕರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಇದನ್ನೂ ಓದಿ: ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ
“ಇಂದು ಬಿಜೆಪಿಗೆ ಸೇರ್ಪಡೆಗೊಂಡ 8 ಶಾಸಕರನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿದೆ. ಆದರೆ ನನ್ನ ಪ್ರಕಾರ ‘ಕಾಂಗ್ರೆಸ್ ಛೋಡೋ ಯಾತ್ರೆ’ ಗೋವಾದಲ್ಲಿ ಪ್ರಾರಂಭವಾಗಿದೆ. ದೇಶಾದ್ಯಂತ ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ” ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ರಾಘವ್ ಚಡ್ಡಾ, “ದೆಹಲಿ ಮತ್ತು ಪಂಜಾಬ್ನಲ್ಲಿ ಆಪರೇಷನ್ ಕಮಲ ವಿಫಲವಾಗಿದೆ, ಗೋವಾದಲ್ಲಿ ಯಶಸ್ವಿಯಾಗಿದೆ” ಎಂದು ಹೇಳಿದ್ದಾರೆ.
Operation Lotus: Fails in Delhi and Punjab, succeeds in Goa.
Why?
Because…
When you vote for Congress, you elect a future BJP MLA.
Congress is over, resting in pieces.
— Raghav Chadha (@raghav_chadha) September 14, 2022
ಎಂಟು ಕಾಂಗ್ರೆಸ್ ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ ಬೆನ್ನಲ್ಲೇ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ವಿಲೀನಗೊಳ್ಳುವ ನಿರ್ಣಯವನ್ನು ಅಂಗೀಕರಿಸಿದೆ.
ಇದನ್ನೂ ಓದಿ: ಗೋವಾದಲ್ಲಿ ಬಿಜೆಪಿಯ ಗೆಲುವಿನ ಓಟ ಮುಂದುವರಿಯುತ್ತಿರುವುದು ಹೇಗೆ?
ಏಳು ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷದ ನಾಯಕ ಮೈಕೆಲ್ ಲೋಬೊ ನಿರ್ಣಯ ಮಂಡಿಸಿದ್ದು, ಈ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ದಿಗಂಬರ್ ಕಾಮತ್ ಅನುಮೋದಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿವೆ.
40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಶಾಸಕರನ್ನು ಹೊಂದಿತ್ತು ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು. 2019ರ ಜುಲೈ ತಿಂಗಳಲ್ಲಿ ಕೂಡಾ ಇದೇ ರೀತಿಯಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದರು.
ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೊ ಅವರು ಪಕ್ಷದಲ್ಲಿ ಮೂರನೇ ಎರಡರಷ್ಟು ವಿಭಜನೆಗೆ ಪ್ರಯತ್ನಿಸಿದ್ದಾರೆ ಎಂದು ಜುಲೈನಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಬಿಜೆಪಿ ಸೇರಿರುವ ಪಕ್ಷದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, “ಬಿಜೆಪಿ ಪಕ್ಷದ ಶಾಸಕರಿಗೆ 25 ಕೋಟಿ ರೂ. ಗಳನ್ನು ನೀಡಿದೆ” ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ
ಪಕ್ಷದಲ್ಲಿ ಪಕ್ಷಾಂತರಕ್ಕೆ ಸಂಚು ರೂಪಿಸಿದ್ದಕ್ಕಾಗಿ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಅವರನ್ನು ಕಾಂಗ್ರೆಸ್ ಪದಚ್ಯುತಗೊಳಿಸಿದೆ. ಪಕ್ಷದಲ್ಲಿ ಒಡಕು ಮೂಡಿಸಲು ಯತ್ನಿಸಿದ ಶಾಸಕರಾದ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಅವರನ್ನು ಅನರ್ಹಗೊಳಿಸುವಂತೆ ಕೋರಿ ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರಿಗೆ ಮನವಿ ಸಲ್ಲಿಸಿದೆ.