Homeಮುಖಪುಟ‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

- Advertisement -
- Advertisement -

ರಾಹುಲ್ ಗಾಂಧಿ ಅವರು ಪ್ರಾರಂಭಿಸಿರುವ 150 ದಿನಗಳ ಭಾರತ್‌ ಜೋಡೋ ಯಾತ್ರೆಯ ಮಧ್ಯೆಯೆ ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿರುವ ಘಟನೆ ಬುಧವಾರ ನಡೆದಿದೆ. ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಶಾಸಕ ಮೈಕೆಲ್ ಲೋಬೋ ಹೇಳಿದ್ದಾರೆ.

ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದು, ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯೆ ಮೂರಕ್ಕೆ ಇಳಿದಿದೆ. ಈ ಹಿಂದೆ ಅಲ್ಲಿ ಪಕ್ಷಕ್ಕೆ 11 ಶಾಸಕರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ನಾವು ಬಿಜೆಪಿ ಸೇರಿದ್ದೇವೆ… ಕಾಂಗ್ರೆಸ್ ಬಿಟ್ಟು, ಬಿಜೆಪಿ ಒಗ್ಗೂಡಿಸಿ (ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ)” ಎಂದು ಕಾಂಗ್ರೆಸ್ ಮಾಜಿ ಶಾಸಕ ಮೈಕಲ್ ಲೋಬೋ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

ಗೋವಾ ಕಾಂಗ್ರೆಸ್ ಶಾಸಕರು ರಾಜ್ಯದ ಆಡಳಿತರೂಢ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಚಿತ್ರದೊಂದಿಗೆ “ಗೋ ಗೋವಾ ಗಾನ್” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಸೇರಿದ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ. ಈ ಎಲ್ಲಾ ಶಾಸಕರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

“ಇಂದು ಬಿಜೆಪಿಗೆ ಸೇರ್ಪಡೆಗೊಂಡ 8 ಶಾಸಕರನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿದೆ. ಆದರೆ ನನ್ನ ಪ್ರಕಾರ ‘ಕಾಂಗ್ರೆಸ್ ಛೋಡೋ ಯಾತ್ರೆ’ ಗೋವಾದಲ್ಲಿ ಪ್ರಾರಂಭವಾಗಿದೆ. ದೇಶಾದ್ಯಂತ ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ” ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ರಾಘವ್ ಚಡ್ಡಾ, “ದೆಹಲಿ ಮತ್ತು ಪಂಜಾಬ್‌ನಲ್ಲಿ ಆಪರೇಷನ್ ಕಮಲ ವಿಫಲವಾಗಿದೆ, ಗೋವಾದಲ್ಲಿ ಯಶಸ್ವಿಯಾಗಿದೆ” ಎಂದು ಹೇಳಿದ್ದಾರೆ.

ಎಂಟು ಕಾಂಗ್ರೆಸ್ ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ ಬೆನ್ನಲ್ಲೇ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ವಿಲೀನಗೊಳ್ಳುವ ನಿರ್ಣಯವನ್ನು ಅಂಗೀಕರಿಸಿದೆ.

ಇದನ್ನೂ ಓದಿ: ಗೋವಾದಲ್ಲಿ ಬಿಜೆಪಿಯ ಗೆಲುವಿನ ಓಟ ಮುಂದುವರಿಯುತ್ತಿರುವುದು ಹೇಗೆ?

ಏಳು ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷದ ನಾಯಕ ಮೈಕೆಲ್ ಲೋಬೊ ನಿರ್ಣಯ ಮಂಡಿಸಿದ್ದು, ಈ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ದಿಗಂಬರ್ ಕಾಮತ್ ಅನುಮೋದಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿವೆ.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಶಾಸಕರನ್ನು ಹೊಂದಿತ್ತು ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು. 2019ರ ಜುಲೈ ತಿಂಗಳಲ್ಲಿ ಕೂಡಾ ಇದೇ ರೀತಿಯಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದರು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೊ ಅವರು ಪಕ್ಷದಲ್ಲಿ ಮೂರನೇ ಎರಡರಷ್ಟು ವಿಭಜನೆಗೆ ಪ್ರಯತ್ನಿಸಿದ್ದಾರೆ ಎಂದು ಜುಲೈನಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಬಿಜೆಪಿ ಸೇರಿರುವ ಪಕ್ಷದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, “ಬಿಜೆಪಿ ಪಕ್ಷದ ಶಾಸಕರಿಗೆ 25 ಕೋಟಿ ರೂ. ಗಳನ್ನು ನೀಡಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

ಪಕ್ಷದಲ್ಲಿ ಪಕ್ಷಾಂತರಕ್ಕೆ ಸಂಚು ರೂಪಿಸಿದ್ದಕ್ಕಾಗಿ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಅವರನ್ನು ಕಾಂಗ್ರೆಸ್ ಪದಚ್ಯುತಗೊಳಿಸಿದೆ. ಪಕ್ಷದಲ್ಲಿ ಒಡಕು ಮೂಡಿಸಲು ಯತ್ನಿಸಿದ ಶಾಸಕರಾದ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಅವರನ್ನು ಅನರ್ಹಗೊಳಿಸುವಂತೆ ಕೋರಿ ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರಿಗೆ ಮನವಿ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...