ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಇಬ್ಬರು ದಲಿತ ಹದಿಹರೆಯದ ಸಹೋದರಿಯರ ಮೃತದೇಹಗಳು ಮರದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇಬ್ಬರು ಬಾಲಕಿಯರನ್ನು ಬೆಳಗ್ಗೆ ಮೋಟಾರ್ ಸೈಕಲ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಲಾಲ್ಪುರ ಗ್ರಾಮದ ನಿವಾಸಿಯಾಗಿರುವ ಅವರ ತಾಯಿ ಆರೋಪಿಸಿದ್ದಾರೆ.
“ನಾನು ಇಬ್ಬರು ಹುಡುಗಿಯರೊಂದಿಗೆ ನನ್ನ ಮನೆಯ ಹೊರಗೆ ಇದ್ದೆ… ನಾನು ಒಳಗೆ ಹೋದ ತಕ್ಷಣ, ಬೈಕ್ನಲ್ಲಿ ಹಳದಿ ಮತ್ತು ಬಿಳಿ ಅಂಗಿ ಧರಿಸಿದ್ದ ಇಬ್ಬರು ಹುಡುಗರು ನನ್ನ ಹೆಣ್ಣುಮಕ್ಕಳನ್ನು ಎಳೆದುಕೊಂಡು ಹೋಗಲು ಪ್ರಾರಂಭಿಸಿದರು. ನೀಲಿ ಶರ್ಟ್ನ ಇನ್ನೊಬ್ಬ ಯುವಕ ಬೈಕ್ ಅನ್ನು ಸ್ಟಾರ್ಟ್ ಮಾಡಿ ಅವರನ್ನು ಕರೆದೊಯ್ದನು” ಎಂದು ಬಾಲಕಿಯರ ತಾಯಿ ಆಜ್ತಕ್ಗೆ ಹೇಳಿದ್ದಾರೆ. ಆಪಾದಿತ ಅಪಹರಣಕಾರರೆಲ್ಲರೂ ಲಾಲ್ಪುರದ ನಿವಾಸಿಗಳು ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಲಖಿಂಪುರ ಖೇರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಶವಗಳು ಪತ್ತೆಯಾದ ಸ್ಥಳಕ್ಕೆ ತಲುಪಿದ್ದಾರೆ. ಘಟನಾ ಸ್ಥಳವನ್ನು ತನಿಖೆ ನಡೆಸಲಾಗುತ್ತಿದ್ದು, ಇಬ್ಬರು ಬಾಲಕಿಯರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು
ಬಾಲಕಿಯರಿಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
उत्तर प्रदेश: लखीमपुर से दिल दहलाने वाली घटना, दो दलित नाबालिग लड़कियों का शव पेड़ से लटका मिला। परिवार का आरोप- "हत्या करके शव को लटकाया गया है" सांसद रामजी गौतम ने की राष्ट्रपति से संज्ञान लेने की अपील। pic.twitter.com/uI3I82ZBZ8
— Dalit Times | दलित टाइम्स (@DalitTime) September 14, 2022
ಘಟನೆ ನಂತರ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಪಕ್ಷಗಳು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ.
निघासन पुलिस थाना क्षेत्र में 2 दलित बहनों को अगवा करने के बाद उनकी हत्या और उसके बाद पुलिस पर पिता का ये आरोप बेहद गंभीर है कि बिना पंचनामा और सहमति के उनका पोस्टमार्टम किया गया।
लखीमपुर में किसानों के बाद अब दलितों की हत्या ‘हाथरस की बेटी’ हत्याकांड की जघन्य पुनरावृत्ति है। pic.twitter.com/gFmea4bAUc
— Akhilesh Yadav (@yadavakhilesh) September 14, 2022
ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ
ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್, ಸ್ಥಳೀಯರು ರಸ್ತೆ ತಡೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಪೊಲೀಸರಿಗೆ ತನಿಖೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
In UP's Lakhimpur district, two sisters, 15 & 17, were found hanging from a tree in Nighasan area in the district. Victim's family members and locals alleging foul play staged protest and blocked road. Lakhimpur SP Sanjiv Suman trying to 'pacify' the agitated crowd. pic.twitter.com/JCajZWrAFa
— Piyush Rai (@Benarasiyaa) September 14, 2022
ಮೃತ ದೇಹಗಳ ವೀಡಿಯೋವನ್ನು ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷವು, ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮಹಿಳೆಯರ ಸುರಕ್ಷತೆಯ ಕುರಿತಾದ ಪೊಳ್ಳು ಹೇಳಿಕೆಗಳನ್ನು ಈ ಘಟನೆಯು ಸತ್ಯ ಏನೆಂದು ಬಹಿರಂಗಪಡಿಸಿದೆ ಎಂದು ಹೇಳಿದೆ.
“ಯೋಗಿ ಸರ್ಕಾರದ ಅಡಿಯಲ್ಲಿ, ಗೂಂಡಾಗಳು ಪ್ರತಿದಿನ ತಾಯಿ ಮತ್ತು ಸಹೋದರಿಯರಿಗೆ ಕಿರುಕುಳ ನೀಡುತ್ತಿದ್ದು, ಇದು ತುಂಬಾ ನಾಚಿಕೆಗೇಡಿನ ಸಂಗತಿ” ಎಂದು ಪಕ್ಷವು ಟ್ವೀಟ್ನಲ್ಲಿ ಬರೆದಿದೆ. ಸರ್ಕಾರ ಈ ಪ್ರಕರಣದ ತನಿಖೆ ನಡೆಸಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು.
ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ 35 ಪೊಲೀಸರ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಆಮ್ ಆದ್ಮಿ ಪಕ್ಷ ಕೂಡ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದೆ.
लखीमपुर खीरी में दो नाबालिग दलित बहनों का शव पेड़ से लटकता मिला, परिवार ने हत्या का आरोप लगाया है।
मामले की जांच कराए सरकार, दोषियों को मिले कठोर से कठोर सज़ा। https://t.co/X6MwtMQ2QQ
— Aam Aadmi Party- Uttar Pradesh (@AAPUttarPradesh) September 14, 2022


