Homeಮುಖಪುಟ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಪ್ರಯತ್ನ’: ಪ್ರಕರಣ ದಾಖಲಿಸಿದ ಪಂಜಾಬ್ ಪೊಲೀಸರು

‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಪ್ರಯತ್ನ’: ಪ್ರಕರಣ ದಾಖಲಿಸಿದ ಪಂಜಾಬ್ ಪೊಲೀಸರು

- Advertisement -
- Advertisement -

ಬಿಜೆಪಿ ತನ್ನ ಶಾಸಕರಿಗೆ ಲಂಚ ನೀಡಲು ಯತ್ನಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ದೂರಿನ ಮೇರೆಗೆ ಪಂಜಾಬ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ. ತನ್ನ ಸರ್ಕಾರವನ್ನು ಉರುಳಿಸಲು ಬಿಜೆಪಿಯ ಪ್ರಯತ್ನದ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಆಡಳಿತರೂಢ ಎಎಪಿ ಪೊಲೀಸರಿಗೆ ಕೋರಿದೆ. ಬಿಜೆಪಿ ಕನಿಷ್ಠ 10 ಶಾಸಕರಿಗೆ ತಲಾ 25 ಕೋಟಿ ರೂ. ಆಫರ್ ಮಾಡಿದೆ ಎಂದು ಎಎಪಿ ಹೇಳಿಕೊಂಡಿದೆ.

ದೆಹಲಿಯಲ್ಲಿ ಈ ಹಿಂದೆ ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಿತ್ತು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ಎಎಪಿಯ ಆರೋಪವನ್ನು ರಾಜ್ಯ ಬಿಜೆಪಿ ನಿರಾಕರಿಸಿದ್ದು, “ಆಧಾರರಹಿತ ಮತ್ತು ಸುಳ್ಳಿನ ಕಂತೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜ್ಯ ಸರ್ಕಾರವನ್ನು ಉರುಳಿಸುತ್ತಿದೆ ಎಂದು ಬಿಜೆಪಿ ವಿರುದ್ಧ ಪಂಜಾಬ್ ಸಚಿವ ಹರ್ಪಾಲ್ ಚೀಮಾ ಮಾಡಿರುವ ಆಧಾರರಹಿತ ಆರೋಪವು ಪಂಜಾಬ್‌ನಲ್ಲಿ ಎಎಪಿ ದೊಡ್ಡ ವಿಭಜನೆಯತ್ತ ಹೋಗುತ್ತಿದೆ ಎಂಬುವುದನ್ನು ತೋರಿಸುತ್ತದೆ. ಕೇಜ್ರಿವಾಲ್ ಹಸ್ತಕ್ಷೇಪದಿಂದ ಪಕ್ಷವು ಛಿದ್ರವಾಗುವ ಹಂತದಲ್ಲಿದೆ” ಎಂದು ಬಿಜೆಪಿ ನಾಯಕ ಸುಭಾಷ್ ಶರ್ಮಾ ಹೇಳಿದ್ದಾರೆ.

“ಬಿಜೆಪಿಯು ಒಕ್ಕೂಟ ಸರ್ಕಾರದ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡಿದ್ದು, ಬಿಜೆಪಿ ಪಕ್ಷ ಸೇರಿದರೆ ದೆಹಲಿ ಎಎಪಿ ಶಾಸಕರಿಗೆ ತಲಾ 20 ಕೋಟಿ ನೀಡುವುದಾಗಿ ಆಫರ್‌ ನೀಡಿದೆ” ಎಂದು ಈ ತಿಂಗಳ ಆರಂಭದಲ್ಲಿ ಎಎಪಿ ಆರೋಪಿಸಿತ್ತು.

ಇದನ್ನೂ ಓದಿ: ಡಿಸೆಂಬರ್ 2021 ರವರೆಗೆ ಬಾಕಿ ಉಳಿದ ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡಿದ ಪಂಜಾಬ್ ಸರ್ಕಾರ

“ಪಕ್ಷ ಬದಲಿಸಲು ಪ್ರತಿ ಶಾಸಕರಿಗೆ 25 ಕೋಟಿ ರೂ. ಬಿಜೆಪಿ ನೀಡುತ್ತಿದೆ. ಆಪರೇಷನ್ ಕಮಲವು ಕರ್ನಾಟಕದಲ್ಲಿ ಯಶಸ್ವಿಯಾಗಿರಬಹುದು, ಆದರೆ ದೆಹಲಿ ಶಾಸಕರು ದೃಢವಾಗಿ ಉಳಿದು ಬಿಜೆಪಿ ಕಾರ್ಯಾಚರಣೆಯನ್ನು ವಿಫಲಗೊಳಿಸಿದ್ದಾರೆ” ಎಂದು ಪಂಜಾಬ್ ಸಚಿವ ಚೀಮಾ ಹೇಳಿದ್ದಾರೆ.

“ಪಂಜಾಬ್‌ನಲ್ಲಿ ಸರ್ಕಾರ ಬದಲಾವಣೆಯಾದರೆ, ಶಾಸಕರಿಗೆ ದೊಡ್ಡ ಬಡ್ತಿಗಳು, ಹುದ್ದೆಗಳನ್ನು ನೀಡಲಾಗುವುದು ಬಿಜೆಪಿ ತನ್ನ ಶಾಸಕರಿಗೆ ಆಫರ್‌ ನೀಡಿರುವುದಾಗಿ” ಎಂದು ಸಚಿವ ಚೀಮಾ ಹೇಳಿದ್ದು, ಭಗವಂತ್ ಮಾನ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಹಲವಾರು ಕರೆಗಳು ಬಂದಿವೆ ಎಂದು ಪುನರುಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...