Homeಮುಖಪುಟಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ 'ಗೆಟ್ ಔಟ್'!

ಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ ‘ಗೆಟ್ ಔಟ್’!

2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ

- Advertisement -
- Advertisement -

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ. ಇದರ ಬಗ್ಗೆ ಅಲ್ಲಿ ತೀವ್ರವಾದ ಚರ್ಚೆಗಳಾಗುತ್ತಿವೆ. ಇದರಿಂದಾಗಿ ಈ ಚಿತ್ರ ಅಲ್ಲಿ ಎಬ್ಬಿಸಿರುವ ಕಂಪನಗಳ ಮಹತ್ವದ ಅರಿವಾಗುತ್ತದೆ. ಇನ್ನೊಂದು ಮಹತ್ವದ ಸಂಗತಿಯೆಂದರೆ ಈ ಚಿತ್ರ ನೋಡಿದ ನಂತರ ಅಮೆರಿಕಾದ ಕರಿಯರು; ಹೀಗೆನ್ನುವ ಬದಲು ಅಮೆರಿಕಾದ ದಲಿತರು ಎನ್ನುವುದೇ ಹೆಚ್ಚು ಸೂಕ್ತ. ಇವರ ಮತ್ತು ಭಾರತದ ದಲಿತರ ಸಾಮಾಜಿಕ ಸ್ಥಿತಿಗತಿಗಳು ಒಂದೇ… ಇವರಿಬ್ಬರೂ ಸಮಾಜೋ –ರಾಜಕೀಯ ಸ್ಥಾನಮಾನಗಳಿಂದ ನಿಜವಾದ ಅರ್ಥದಲ್ಲಿ ವಂಚಿತರು ಎನಿಸುತ್ತದೆ.

ಇಂಥದ್ದೊಂದು ಥಿಯರಿಯನ್ನು ಹಾಲಿವುಡ್ ನಿರ್ದೇಶಕ ಜೋರ್ಡನ್ ಪಿಲೇ ಮುಂದಿಟ್ಟಿದ್ದಾರೆ ಎನಿಸುತ್ತದೆ. ಅವರ “ಗೆಟೌಟ್” ಸಿನೆಮಾ ಇಂಥದೊಂದು ಅಭಿಪ್ರಾಯವನ್ನು ಹುದುಗಿಸಿಕೊಂಡಿದೆ. ಇಂಥ ಥಿಯರಿ ಸುಮ್ಮನೆ ಮೂಡಿದ್ದಲ್ಲ. ಶತಶತಮಾನಗಳಿಂದಲೂ ಅಮೆರಿಕಾದಲ್ಲಿರುವ ಆಫ್ರಿಕನ್ –ಅಮೆರಿಕನ್ ಪ್ರಜೆಗಳು ತಾತ್ಸಾರ, ನಿಂದನೆ, ಅವಮಾನ, ಕಗ್ಗೊಲೆಗಳನ್ನು ಅನುಭವಿಸುತ್ತಲೇ ಬಂದಿದ್ದಾರೆ. ಅವರನ್ನು ಅವಮಾನಿಸುವ ಪ್ರಕರಣಗಳೂ ಇಂದಿಗೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಗೆಟೌಟ್ ಸಿನೆಮಾ ಮೂಡಿರುವಂತೆ ಕಾಣುತ್ತದೆ.

ಅಮೆರಿಕಾ ಸಿನೆ-ಟಿವಿರಂಗದಲ್ಲಿ ಜೋರ್ಡನ್ ಪಿಲೆಯದು ಖ್ಯಾತ ಹೆಸರು. ಹಲವು ಯಶಸ್ವಿ ಚಿತ್ರಗಳನ್ನು ಕೊಟ್ಟಿದ್ದಾರೆ. ಗೆಟೌಟ್ ಸಿನೆಮಾದ ವಿಶೇಷ ಸಂಗತಿಯೆಂದರೆ ನಿರ್ದೇಶಕರೇ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಅಂದಹಾಗೆ ಪಿಲೆ ಕೂಡ ಆಫ್ರಿಕನ್ ಅಮೆರಿಕನ್. ಇದು ಕೂಡ ಇಥದ್ದೊಂದು ಥಿಯರಿಗೆ ಮತ್ತಷ್ಟೂ ಬಲಕೊಟ್ಟಿದೆ.

ಅಮೆರಿಕಾದ ಕುಕೇಶಿಯನ್ (ಶ್ವೇತವರ್ಣಿಯರು) ಆಫ್ರಿಕಾದವರನ್ನು ಶತಶತಮಾನಗಳ ಕಾಲ ಗುಲಾಮರನ್ನಾಗಿ ನಡೆಸಿಕೊಂಡಿದೆ. ಇಂದು ಗುಲಾಮಗಿರಿ ಪದ್ಧತಿ ಅಳಿದಿದೆ. ಆದರೆ ಅದನ್ನು ಕುಕೇಶಿಯನ್ ಸಮಾಜ ಬೇರೊಂದು ರೀತಿಯಲ್ಲಿ ಮುಂದುವರಿಸಿಕೊಂಡು ಬರುತ್ತಿದೆ ಎಂಬ ವಾದವನ್ನು ಜೋರ್ಡನ್ ಪಿಲೆ ನಮ್ಮ ಮುಂದಿಡುತ್ತಾರೆ.

ತಮ್ಮ ವಾದವನ್ನು ಕಥಾರೂಪಕ್ಕೆ ತಂದಿರುವ ಪಿಲೆ ಅದಕ್ಕೆ ಸಶಕ್ತ ಚಿತ್ರಕಥೆ ಸ್ವರೂಪ ನೀಡಿದ್ದಾರೆ. ಇದು ಎಷ್ಟು ಪರಿಪಕ್ವವಾಗಿದೆ ಎಂದರೆ ಎಲ್ಲಿಯೂ ಗೋಜಲು – ಗೊಂದಲವಿಲ್ಲ. ಸಂಭಾಷಣೆ ಕೂಡ ಅಷ್ಟೆ ಸ್ಪಷ್ಟತೆ-ನಿಖರತೆ ಹೊಂದಿದೆ. ಇದನ್ನು ಪಿಲೆ ಮತ್ತು ಅವರ ಸಂಗಡಿಗ ತಂತ್ರಜ್ಞರು ತೆರೆ ಮುಂದೆ ಕಾಣಿಸಿರುವ ರೀತಿ ಅನನ್ಯ.

“ಗೆಟೌಟ್” ಸಾಮಾಜಿಕ-ರಾಜಕೀಯ ಕಥನ. ಕೊಂಚ ಹಳಿ ತಪ್ಪಿದ್ದರೂ ಇದೊಂದು ನಿರ್ದೇಶಕನ ಹಳಹಳಿಕೆಯ ದುರ್ಬಲ ಡಾಕ್ಯುಮೆಂಟರಿಯಾಗುವ ಸಾಧ್ಯತೆ ದಟ್ಟವಾಗಿತ್ತು. ಆದರೆ ಜೋರ್ಡನ್ ಪಿಲೆಯ ಪರಿಶ‍್ರಮ ಅದಕ್ಕೆ ಅವಕಾಶ ನೀಡಿಲ್ಲ. ಈ ಕಾರಣದಿಂದ ಸಿನೆಮಾದ ಎಲ್ಲ ದೃಷ್ಟಿಕೋನಗಳಲ್ಲಿಯೂ ಇದು ಅತ್ಯುತ್ತಮ.

ಗೆಟೌಟ್ ಹಂತಹಂತವಾಗಿ ಬೆಳೆಯುತ್ತಾ ಹೋಗುತ್ತದೆ. ಆಗರ್ಭ ಶ್ರೀಮಂತ ಕುಕೇಶಿಯನ್ ಮನೆತನದ ಯುವತಿ ರೋಸಿ ಆರ್ಮಿಟೆಜ್ ತನ್ನ ಆಫ್ರಿಕನ್ –ಅಮೆರಿನ್ ಬಾಯ್ ಫ್ರೆಂಡ್ ಕ್ರಿಸ್ ಜೊತೆ ತನ್ನ ಅರಮನೆಯಂಥ ಮನೆಗೆ ಅಡಿಯಿಡುತ್ತಾಳೆ. ಕಾಲಿಟ್ಟ ಗಳಿಗೆಯಿಂದಲೂ ಕ್ರಿಸ್ ಗೆ ನಾನಾರೀತಿಯ ಮಾನಸಿಕ ಯಾತನೆಗಳು ಶುರುವಾಗುತ್ತವೆ. ರೋಸಿ ಅಪ್ಪ ಡೀನ್ ಅರ್ಮಿಟೇಜ್ ನರರೋಗ ಶಾಸ್ತ್ರಜ್ಞ. ಅಮ್ಮ ಕ್ಯಾಥ್ರೆನ್ ಕೀನರ್ ಸಮ್ಮೋಹಿನಿ ತಜ್ಞೆ.

ಈ ಎರಡು ಪಾತ್ರಗಳು ಮಾಡುತ್ತಿರುವ ವೃತ್ತಿಗಳು ಕೂಡ ಸಾಂಕೇತಿಕ. ಡೀನ್ ಅರ್ಮಿಟೇಜ್ ತನ್ನ ಮನೆತನದ ಹೆಗ್ಗಳಿಕೆಗಳನ್ನು ಹೇಳಿಕೊಳ್ಳುತ್ತಾ ಹೋಗುತ್ತಾನೆ. ಪ್ರತಿಹಂತದಲ್ಲಿಯೂ ಆ ಎಲ್ಲ ಮಾತುಗಳು ಆತ ಆಫ್ರಿಕನ್ –ಅಮೆರಿಕನ್ ಸಮುದಾಯ (ಕರಿಯರು) ದವರ ಬಗ್ಗೆ ಹೊಂದಿರುವ ಹೇವರಿಕೆಗಳನ್ನು ವ್ಯಕ್ತ ಮಾಡುತ್ತಲೇ ಹೋಗುತ್ತವೆ. ಈತನ ಹೆಂಡತಿ, ಮಗ ಕೂಡ ಇದೇ ಸ್ವಭಾವದವರು: ಚಿತ್ರದ ಕೊನೆಕೊನೆ ಹಂತ ನಮ್ಮನ್ನು ಮತ್ತೊಂದು ಮಹಾನ್ ಶಾಕ್ ಗೆ ದೂಡುತ್ತದೆ. ಅದನ್ನು ನಾನಿಲ್ಲಿ ವಿವರಿಸಲು ಹೋಗುವುದಿಲ್ಲ.

ಗೆಟ್ ಔಟ್ ಚಿತ್ರದ ದೃಶ್ಯ

ಡೀನ್ ಅರ್ಮಿಟೇಜ್ ತಾನು ಲಿಬರಲ್ ಧೋರಣೆಯುಳ್ಳವನು, ಅಮೆರಿಕಾದ ಅಧ್ಯಕ್ಷಿಯ ಚುನಾವಣೆಯಲ್ಲಿ ಬರಾಕ್ ಒಬಾಮನನ್ನು ಬೆಂಬಲಿಸಿದೆ ಎನ್ನುತ್ತಾನೆ. ಮಾತುಗಳು ಪ್ರಗತಿಪರತೆಯ ಮುಖವಾಡ ಹೊಂದಿವೆ. ಆದರೆ ಆತನ ಅಂತರಂಗದಲ್ಲಿ ಜನಾಂಗೀಯ ದ್ವೇಷ ಮಡುಗಟ್ಟಿದೆ.

ಡೀನ್ ಅರ್ಮಿಟೇಜ್ ಮನೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಆಫ್ರಿಕನ್ –ಅಮೆರಿಕನ್ ಸಮುದಾಯದವರು. ಇವರ ವರ್ತನೆ, ಹಾವಭಾವ-ಸ್ವಭಾವ ಎಲ್ಲವೂ ಕೃತಕ ಎಂದು ಕ್ರಿಸ್ ಗೆ ಮೇಲಿಂದ ಮೇಲೆ ಅನಿಸತೊಡಗುತ್ತದೆ. ಈ ದೊಡ್ಡಮನೆಯ ಪಾರ್ಟಿಗೆ ಬಂದ ಕುಕೇಶಿಯನ್ ಸಮುದಾಯದವರಿಗೂ ಕೂಡ ಆಫ್ರಿಕನ್ –ಅಮೆರಿಕನ್ ಸಮುದಾಯದ ಬಗ್ಗೆ ಹೇವರಿಕೆ ನೋಟ. ಅಲ್ಲೊಬ್ಬ ಕಪ್ಪುವರ್ಣೀಯ ಯುವಕನ ಜೊತೆ ಆತನಿಗಿಂತ ವಯಸಿನಲ್ಲಿ ಸಾಕಷ್ಟು ಹಿರಿಯಳಾದ ಮಹಿಳೆ ಸಾಂಗತ್ಯ ಹೊಂದಿರುತ್ತಾಳೆ. ಅದ್ಹೇಕೆ ಎಂದು ಚಿತ್ರ ತನ್ನದೇ ಧಾಟಿಯಲ್ಲಿ ವಿವರಿಸುತ್ತದೆ.

ತನ್ನ ಗ್ರಹಿಕೆಗಳೆಲ್ಲವನ್ನೂ ಕ್ರಿಶ್ ತನ್ನ ಪೊಲೀಸ್ ಗೆಳೆಯನ ಜೊತೆ ಪೋನಿನಲ್ಲಿ ಹಂಚಿಕೊಳ್ಳುತ್ತಿರುತ್ತಾನೆ. ಅದು ಕೂಡ ಕೊನೆಯಲ್ಲಿ ಈತನ ನೆರವಿಗೆ ಬರುತ್ತದೆ. ಕ್ರಿಸ್ ಗೆ ಕುಕೇಶಿಯನ್ ರೋಸಿ ಮನೆತನದ ಎಲ್ಲರ  ಸ್ವಭಾವ ಆಷಾಢಭೂತಿತನದಿಂದ ಕೂಡಿದೆ, ಬೇಗನೆ ಇಲ್ಲಿಂದ ಪಾರಾಗಬೇಕು ಎಂದು ಮನದಟ್ಟಾಗುತ್ತದೆ. ಹೊರಡಲು ಅನುವಾಗುತ್ತಾನೆ. ಅಷ್ಟರಲ್ಲೆ ಆತನ ಕೊಲೆಯ ಪಿತೂರಿ ನಡೆಯುತ್ತದೆ. ಇದರಿಂದ ಕ್ರಿಸ್ ಹೇಗೆ ಪಾರಾದ ಎನ್ನುವುದನ್ನು ಸಿನೆಮಾ ನೋಡಿ ಅರಿಯುವುದೇ ಸೂಕ್ತ.

ಇಂದಿಗೂ ಅಮೆರಿಕಾದಲ್ಲಿ ಜನಾಂಗೀಯ ದ್ವೇಷ ನಿಂತಿಲ್ಲ. ಕುಕೇಶಿಯನ್ (ಶ್ವೇತವರ್ಣೀಯರು) ಆಫ್ರಿಕನ್ –ಅಮೆರಿಕನ್ಸ್ ವ್ಯಕ್ತಿಗಳನ್ನು ಕಗ್ಗೊಲೆ ಮಾಡಿದ ವರದಿಗಳು ಆಗಾಗ್ಗೆ ಬರುತ್ತಲೇ ಇವೆ. ಅಲ್ಲಿನ ಪೊಲೀಸ್ ಇಲಾಖೆಯ ಕುಕೇಶಿಯನ್ಸ್ ಗಳಲ್ಲಿಯೂ ಇಂಥ ಜನಾಂಗೀಯ ದ್ವೇಷವಿದೆ. ಕಪ್ಪುವರ್ಣೀಯರು, ಶ್ವೇತವರ್ಣೀಯ ಪೊಲೀಸ್ ಅಧಿಕಾರಿಗಳ ಗುಂಡೇಟಿಗೆ ವಿನಾಃಕಾರಣ ಬಲಿಯಾದ ಉದಾಹರಣೆಗಳು ಸಾಕಷ್ಟು.

ಇಂಥ ಉದಾಹರಣೆಗಳು ಕೂಡ “ಗೆಟೌಟ್” ಸಿನೆಮಾದ ಅಂತ್ಯ ಬದಲಾಗಲು ಕಾರಣವಾಗಿದೆ. ಈ ಮೊದಲು ಇದರ ಕ್ಲೈಮ್ಯಾಕ್ಸ್ ಬೇರೆಯದೇ ಆಗಿತ್ತು. ಯಾವಾಗ ಅಲ್ಲಿನ ಪೊಲೀಸರ ಎನ್ ಕೌಂಟರಿಗೆ ಕಪ್ಪುವರ್ಣೀಯರು ಬಲಿಯಾಗುವ ಪ್ರಕರಣಗಳು ಹೆಚ್ಚಾಯಿತೋ ಆಗ ನಿರ್ದೇಶಕ ಜೋರ್ಡನ್ ಪಿಲೆ ಮತ್ತು ತಂಡದವರು ಕ್ಲೈಮ್ಯಾಕ್ಸ್ ಗೆ ಬೇರೆಯದೇ ಸ್ವರೂಪ ನೀಡಲು ನಿರ್ಧರಿಸಿದರು.

ಕುಕೇಶಿಯನ್ ಸಮಾಜದಲ್ಲಿ ಮಡುಗಟ್ಟಿರುವ ಜನಾಂಗೀಯ ದ್ವೇಷ ಯಾವ ಆಯಾಮಗಳನ್ನು ತೆಗೆದುಕೊಂಡಿದೆ, ಅದು ಯಾವ ಸ್ವರೂಪದಲ್ಲಿ ಮುಂದುವರಿದಿದೆ ಎನ್ನುವುದನ್ನು ನಿರ್ದೇಶಕ ಜೋರ್ಡನ್ ಪಿಲೆ ಗ್ರಹಿಸಿ  ಮುಂದಿಟ್ಟಿರುವ ರೀತಿ ನಮ್ಮನ್ನು ಬೆಚ್ಚಿಬೀಳಿಸುತ್ತದೆ.

ಜೋರ್ಡನ್ ಪಿಲೆ

ಈ ಸಿನೆಮಾಕ್ಕೆ ಟೊನಿ ಲಿವರ್ ಕ್ಯಾಮೆರಾ ಹಿಡಿದಿದ್ದಾರೆ. ಅದು ಚಿತ್ರಕಥೆಯ ಸಶಕ್ತತೆಯನ್ನು ಮತ್ತಷ್ಟೂ ಹೆಚ್ಚಿಸಿದೆ. ಮೈಕೆಲ್ ಅಬ್ಲಸ್ ನೀಡಿರುವ ಸಂಗೀತಕ್ಕೂ ಇದೇ ಮಾತು ಸಲ್ಲುತ್ತದೆ. 2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ.

ಅಭಿನಯದ ಬಗ್ಗೆ ಹೇಳುವುದಾದರೆ ಕ್ರಿಸ್ ಆಗಿರುವ ಡ್ಯಾನಿಯಲ್ ಅಭಿನಯ ಅನನ್ಯ. ಈತನ ಕಂಗಳೇ ಸಂಭಾಷಣೆಗಳನ್ನು ಹೇಳುತ್ತವೆ. ಕೆಲವೊಂದು ದೃಶ್ಯಗಳಲ್ಲಿ ಈತನ ಅಭಿನಯ ಅಬ್ಬಾ ಎಂಬ ಉದ್ಗಾರದೊಡನೆ ಮೆಚ್ಚುಗೆ ಪಡೆಯುತ್ತದೆ. ರೋಸ್ ಅರ್ಮಿಟೇಜ್ ಆಗಿರುವ ಆಲಿಸನ್ ವಿಲಿಯಮ್ಸ್, ಮಿಸ್ಸಿ ಅರ್ಮಿಟೇಜ್ ಆಗಿರುವ ಕ್ಯಾಥೆರಿನ್ ಕೀರ್ನರ್, ಡೀನ್ ಅರ್ಮಿಟೇಜ್ ಪಾತ್ರಧಾರಿ ಬ್ರಾಡ್ಲಿ, ಜಿಮ್ ಹಡ್ಸನ್ ಆಗಿ ಅಭಿನಯಿಸಿರುವ ಸ್ಟಿಫನ್ ರೂಟ್ ಅಭಿನಯ ಮನೋಜ್ಞ.

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...