Homeಮುಖಪುಟಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ 'ಗೆಟ್ ಔಟ್'!

ಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ ‘ಗೆಟ್ ಔಟ್’!

2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ

- Advertisement -
- Advertisement -

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ. ಇದರ ಬಗ್ಗೆ ಅಲ್ಲಿ ತೀವ್ರವಾದ ಚರ್ಚೆಗಳಾಗುತ್ತಿವೆ. ಇದರಿಂದಾಗಿ ಈ ಚಿತ್ರ ಅಲ್ಲಿ ಎಬ್ಬಿಸಿರುವ ಕಂಪನಗಳ ಮಹತ್ವದ ಅರಿವಾಗುತ್ತದೆ. ಇನ್ನೊಂದು ಮಹತ್ವದ ಸಂಗತಿಯೆಂದರೆ ಈ ಚಿತ್ರ ನೋಡಿದ ನಂತರ ಅಮೆರಿಕಾದ ಕರಿಯರು; ಹೀಗೆನ್ನುವ ಬದಲು ಅಮೆರಿಕಾದ ದಲಿತರು ಎನ್ನುವುದೇ ಹೆಚ್ಚು ಸೂಕ್ತ. ಇವರ ಮತ್ತು ಭಾರತದ ದಲಿತರ ಸಾಮಾಜಿಕ ಸ್ಥಿತಿಗತಿಗಳು ಒಂದೇ… ಇವರಿಬ್ಬರೂ ಸಮಾಜೋ –ರಾಜಕೀಯ ಸ್ಥಾನಮಾನಗಳಿಂದ ನಿಜವಾದ ಅರ್ಥದಲ್ಲಿ ವಂಚಿತರು ಎನಿಸುತ್ತದೆ.

ಇಂಥದ್ದೊಂದು ಥಿಯರಿಯನ್ನು ಹಾಲಿವುಡ್ ನಿರ್ದೇಶಕ ಜೋರ್ಡನ್ ಪಿಲೇ ಮುಂದಿಟ್ಟಿದ್ದಾರೆ ಎನಿಸುತ್ತದೆ. ಅವರ “ಗೆಟೌಟ್” ಸಿನೆಮಾ ಇಂಥದೊಂದು ಅಭಿಪ್ರಾಯವನ್ನು ಹುದುಗಿಸಿಕೊಂಡಿದೆ. ಇಂಥ ಥಿಯರಿ ಸುಮ್ಮನೆ ಮೂಡಿದ್ದಲ್ಲ. ಶತಶತಮಾನಗಳಿಂದಲೂ ಅಮೆರಿಕಾದಲ್ಲಿರುವ ಆಫ್ರಿಕನ್ –ಅಮೆರಿಕನ್ ಪ್ರಜೆಗಳು ತಾತ್ಸಾರ, ನಿಂದನೆ, ಅವಮಾನ, ಕಗ್ಗೊಲೆಗಳನ್ನು ಅನುಭವಿಸುತ್ತಲೇ ಬಂದಿದ್ದಾರೆ. ಅವರನ್ನು ಅವಮಾನಿಸುವ ಪ್ರಕರಣಗಳೂ ಇಂದಿಗೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಗೆಟೌಟ್ ಸಿನೆಮಾ ಮೂಡಿರುವಂತೆ ಕಾಣುತ್ತದೆ.

ಅಮೆರಿಕಾ ಸಿನೆ-ಟಿವಿರಂಗದಲ್ಲಿ ಜೋರ್ಡನ್ ಪಿಲೆಯದು ಖ್ಯಾತ ಹೆಸರು. ಹಲವು ಯಶಸ್ವಿ ಚಿತ್ರಗಳನ್ನು ಕೊಟ್ಟಿದ್ದಾರೆ. ಗೆಟೌಟ್ ಸಿನೆಮಾದ ವಿಶೇಷ ಸಂಗತಿಯೆಂದರೆ ನಿರ್ದೇಶಕರೇ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಅಂದಹಾಗೆ ಪಿಲೆ ಕೂಡ ಆಫ್ರಿಕನ್ ಅಮೆರಿಕನ್. ಇದು ಕೂಡ ಇಥದ್ದೊಂದು ಥಿಯರಿಗೆ ಮತ್ತಷ್ಟೂ ಬಲಕೊಟ್ಟಿದೆ.

ಅಮೆರಿಕಾದ ಕುಕೇಶಿಯನ್ (ಶ್ವೇತವರ್ಣಿಯರು) ಆಫ್ರಿಕಾದವರನ್ನು ಶತಶತಮಾನಗಳ ಕಾಲ ಗುಲಾಮರನ್ನಾಗಿ ನಡೆಸಿಕೊಂಡಿದೆ. ಇಂದು ಗುಲಾಮಗಿರಿ ಪದ್ಧತಿ ಅಳಿದಿದೆ. ಆದರೆ ಅದನ್ನು ಕುಕೇಶಿಯನ್ ಸಮಾಜ ಬೇರೊಂದು ರೀತಿಯಲ್ಲಿ ಮುಂದುವರಿಸಿಕೊಂಡು ಬರುತ್ತಿದೆ ಎಂಬ ವಾದವನ್ನು ಜೋರ್ಡನ್ ಪಿಲೆ ನಮ್ಮ ಮುಂದಿಡುತ್ತಾರೆ.

ತಮ್ಮ ವಾದವನ್ನು ಕಥಾರೂಪಕ್ಕೆ ತಂದಿರುವ ಪಿಲೆ ಅದಕ್ಕೆ ಸಶಕ್ತ ಚಿತ್ರಕಥೆ ಸ್ವರೂಪ ನೀಡಿದ್ದಾರೆ. ಇದು ಎಷ್ಟು ಪರಿಪಕ್ವವಾಗಿದೆ ಎಂದರೆ ಎಲ್ಲಿಯೂ ಗೋಜಲು – ಗೊಂದಲವಿಲ್ಲ. ಸಂಭಾಷಣೆ ಕೂಡ ಅಷ್ಟೆ ಸ್ಪಷ್ಟತೆ-ನಿಖರತೆ ಹೊಂದಿದೆ. ಇದನ್ನು ಪಿಲೆ ಮತ್ತು ಅವರ ಸಂಗಡಿಗ ತಂತ್ರಜ್ಞರು ತೆರೆ ಮುಂದೆ ಕಾಣಿಸಿರುವ ರೀತಿ ಅನನ್ಯ.

“ಗೆಟೌಟ್” ಸಾಮಾಜಿಕ-ರಾಜಕೀಯ ಕಥನ. ಕೊಂಚ ಹಳಿ ತಪ್ಪಿದ್ದರೂ ಇದೊಂದು ನಿರ್ದೇಶಕನ ಹಳಹಳಿಕೆಯ ದುರ್ಬಲ ಡಾಕ್ಯುಮೆಂಟರಿಯಾಗುವ ಸಾಧ್ಯತೆ ದಟ್ಟವಾಗಿತ್ತು. ಆದರೆ ಜೋರ್ಡನ್ ಪಿಲೆಯ ಪರಿಶ‍್ರಮ ಅದಕ್ಕೆ ಅವಕಾಶ ನೀಡಿಲ್ಲ. ಈ ಕಾರಣದಿಂದ ಸಿನೆಮಾದ ಎಲ್ಲ ದೃಷ್ಟಿಕೋನಗಳಲ್ಲಿಯೂ ಇದು ಅತ್ಯುತ್ತಮ.

ಗೆಟೌಟ್ ಹಂತಹಂತವಾಗಿ ಬೆಳೆಯುತ್ತಾ ಹೋಗುತ್ತದೆ. ಆಗರ್ಭ ಶ್ರೀಮಂತ ಕುಕೇಶಿಯನ್ ಮನೆತನದ ಯುವತಿ ರೋಸಿ ಆರ್ಮಿಟೆಜ್ ತನ್ನ ಆಫ್ರಿಕನ್ –ಅಮೆರಿನ್ ಬಾಯ್ ಫ್ರೆಂಡ್ ಕ್ರಿಸ್ ಜೊತೆ ತನ್ನ ಅರಮನೆಯಂಥ ಮನೆಗೆ ಅಡಿಯಿಡುತ್ತಾಳೆ. ಕಾಲಿಟ್ಟ ಗಳಿಗೆಯಿಂದಲೂ ಕ್ರಿಸ್ ಗೆ ನಾನಾರೀತಿಯ ಮಾನಸಿಕ ಯಾತನೆಗಳು ಶುರುವಾಗುತ್ತವೆ. ರೋಸಿ ಅಪ್ಪ ಡೀನ್ ಅರ್ಮಿಟೇಜ್ ನರರೋಗ ಶಾಸ್ತ್ರಜ್ಞ. ಅಮ್ಮ ಕ್ಯಾಥ್ರೆನ್ ಕೀನರ್ ಸಮ್ಮೋಹಿನಿ ತಜ್ಞೆ.

ಈ ಎರಡು ಪಾತ್ರಗಳು ಮಾಡುತ್ತಿರುವ ವೃತ್ತಿಗಳು ಕೂಡ ಸಾಂಕೇತಿಕ. ಡೀನ್ ಅರ್ಮಿಟೇಜ್ ತನ್ನ ಮನೆತನದ ಹೆಗ್ಗಳಿಕೆಗಳನ್ನು ಹೇಳಿಕೊಳ್ಳುತ್ತಾ ಹೋಗುತ್ತಾನೆ. ಪ್ರತಿಹಂತದಲ್ಲಿಯೂ ಆ ಎಲ್ಲ ಮಾತುಗಳು ಆತ ಆಫ್ರಿಕನ್ –ಅಮೆರಿಕನ್ ಸಮುದಾಯ (ಕರಿಯರು) ದವರ ಬಗ್ಗೆ ಹೊಂದಿರುವ ಹೇವರಿಕೆಗಳನ್ನು ವ್ಯಕ್ತ ಮಾಡುತ್ತಲೇ ಹೋಗುತ್ತವೆ. ಈತನ ಹೆಂಡತಿ, ಮಗ ಕೂಡ ಇದೇ ಸ್ವಭಾವದವರು: ಚಿತ್ರದ ಕೊನೆಕೊನೆ ಹಂತ ನಮ್ಮನ್ನು ಮತ್ತೊಂದು ಮಹಾನ್ ಶಾಕ್ ಗೆ ದೂಡುತ್ತದೆ. ಅದನ್ನು ನಾನಿಲ್ಲಿ ವಿವರಿಸಲು ಹೋಗುವುದಿಲ್ಲ.

ಗೆಟ್ ಔಟ್ ಚಿತ್ರದ ದೃಶ್ಯ

ಡೀನ್ ಅರ್ಮಿಟೇಜ್ ತಾನು ಲಿಬರಲ್ ಧೋರಣೆಯುಳ್ಳವನು, ಅಮೆರಿಕಾದ ಅಧ್ಯಕ್ಷಿಯ ಚುನಾವಣೆಯಲ್ಲಿ ಬರಾಕ್ ಒಬಾಮನನ್ನು ಬೆಂಬಲಿಸಿದೆ ಎನ್ನುತ್ತಾನೆ. ಮಾತುಗಳು ಪ್ರಗತಿಪರತೆಯ ಮುಖವಾಡ ಹೊಂದಿವೆ. ಆದರೆ ಆತನ ಅಂತರಂಗದಲ್ಲಿ ಜನಾಂಗೀಯ ದ್ವೇಷ ಮಡುಗಟ್ಟಿದೆ.

ಡೀನ್ ಅರ್ಮಿಟೇಜ್ ಮನೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಆಫ್ರಿಕನ್ –ಅಮೆರಿಕನ್ ಸಮುದಾಯದವರು. ಇವರ ವರ್ತನೆ, ಹಾವಭಾವ-ಸ್ವಭಾವ ಎಲ್ಲವೂ ಕೃತಕ ಎಂದು ಕ್ರಿಸ್ ಗೆ ಮೇಲಿಂದ ಮೇಲೆ ಅನಿಸತೊಡಗುತ್ತದೆ. ಈ ದೊಡ್ಡಮನೆಯ ಪಾರ್ಟಿಗೆ ಬಂದ ಕುಕೇಶಿಯನ್ ಸಮುದಾಯದವರಿಗೂ ಕೂಡ ಆಫ್ರಿಕನ್ –ಅಮೆರಿಕನ್ ಸಮುದಾಯದ ಬಗ್ಗೆ ಹೇವರಿಕೆ ನೋಟ. ಅಲ್ಲೊಬ್ಬ ಕಪ್ಪುವರ್ಣೀಯ ಯುವಕನ ಜೊತೆ ಆತನಿಗಿಂತ ವಯಸಿನಲ್ಲಿ ಸಾಕಷ್ಟು ಹಿರಿಯಳಾದ ಮಹಿಳೆ ಸಾಂಗತ್ಯ ಹೊಂದಿರುತ್ತಾಳೆ. ಅದ್ಹೇಕೆ ಎಂದು ಚಿತ್ರ ತನ್ನದೇ ಧಾಟಿಯಲ್ಲಿ ವಿವರಿಸುತ್ತದೆ.

ತನ್ನ ಗ್ರಹಿಕೆಗಳೆಲ್ಲವನ್ನೂ ಕ್ರಿಶ್ ತನ್ನ ಪೊಲೀಸ್ ಗೆಳೆಯನ ಜೊತೆ ಪೋನಿನಲ್ಲಿ ಹಂಚಿಕೊಳ್ಳುತ್ತಿರುತ್ತಾನೆ. ಅದು ಕೂಡ ಕೊನೆಯಲ್ಲಿ ಈತನ ನೆರವಿಗೆ ಬರುತ್ತದೆ. ಕ್ರಿಸ್ ಗೆ ಕುಕೇಶಿಯನ್ ರೋಸಿ ಮನೆತನದ ಎಲ್ಲರ  ಸ್ವಭಾವ ಆಷಾಢಭೂತಿತನದಿಂದ ಕೂಡಿದೆ, ಬೇಗನೆ ಇಲ್ಲಿಂದ ಪಾರಾಗಬೇಕು ಎಂದು ಮನದಟ್ಟಾಗುತ್ತದೆ. ಹೊರಡಲು ಅನುವಾಗುತ್ತಾನೆ. ಅಷ್ಟರಲ್ಲೆ ಆತನ ಕೊಲೆಯ ಪಿತೂರಿ ನಡೆಯುತ್ತದೆ. ಇದರಿಂದ ಕ್ರಿಸ್ ಹೇಗೆ ಪಾರಾದ ಎನ್ನುವುದನ್ನು ಸಿನೆಮಾ ನೋಡಿ ಅರಿಯುವುದೇ ಸೂಕ್ತ.

ಇಂದಿಗೂ ಅಮೆರಿಕಾದಲ್ಲಿ ಜನಾಂಗೀಯ ದ್ವೇಷ ನಿಂತಿಲ್ಲ. ಕುಕೇಶಿಯನ್ (ಶ್ವೇತವರ್ಣೀಯರು) ಆಫ್ರಿಕನ್ –ಅಮೆರಿಕನ್ಸ್ ವ್ಯಕ್ತಿಗಳನ್ನು ಕಗ್ಗೊಲೆ ಮಾಡಿದ ವರದಿಗಳು ಆಗಾಗ್ಗೆ ಬರುತ್ತಲೇ ಇವೆ. ಅಲ್ಲಿನ ಪೊಲೀಸ್ ಇಲಾಖೆಯ ಕುಕೇಶಿಯನ್ಸ್ ಗಳಲ್ಲಿಯೂ ಇಂಥ ಜನಾಂಗೀಯ ದ್ವೇಷವಿದೆ. ಕಪ್ಪುವರ್ಣೀಯರು, ಶ್ವೇತವರ್ಣೀಯ ಪೊಲೀಸ್ ಅಧಿಕಾರಿಗಳ ಗುಂಡೇಟಿಗೆ ವಿನಾಃಕಾರಣ ಬಲಿಯಾದ ಉದಾಹರಣೆಗಳು ಸಾಕಷ್ಟು.

ಇಂಥ ಉದಾಹರಣೆಗಳು ಕೂಡ “ಗೆಟೌಟ್” ಸಿನೆಮಾದ ಅಂತ್ಯ ಬದಲಾಗಲು ಕಾರಣವಾಗಿದೆ. ಈ ಮೊದಲು ಇದರ ಕ್ಲೈಮ್ಯಾಕ್ಸ್ ಬೇರೆಯದೇ ಆಗಿತ್ತು. ಯಾವಾಗ ಅಲ್ಲಿನ ಪೊಲೀಸರ ಎನ್ ಕೌಂಟರಿಗೆ ಕಪ್ಪುವರ್ಣೀಯರು ಬಲಿಯಾಗುವ ಪ್ರಕರಣಗಳು ಹೆಚ್ಚಾಯಿತೋ ಆಗ ನಿರ್ದೇಶಕ ಜೋರ್ಡನ್ ಪಿಲೆ ಮತ್ತು ತಂಡದವರು ಕ್ಲೈಮ್ಯಾಕ್ಸ್ ಗೆ ಬೇರೆಯದೇ ಸ್ವರೂಪ ನೀಡಲು ನಿರ್ಧರಿಸಿದರು.

ಕುಕೇಶಿಯನ್ ಸಮಾಜದಲ್ಲಿ ಮಡುಗಟ್ಟಿರುವ ಜನಾಂಗೀಯ ದ್ವೇಷ ಯಾವ ಆಯಾಮಗಳನ್ನು ತೆಗೆದುಕೊಂಡಿದೆ, ಅದು ಯಾವ ಸ್ವರೂಪದಲ್ಲಿ ಮುಂದುವರಿದಿದೆ ಎನ್ನುವುದನ್ನು ನಿರ್ದೇಶಕ ಜೋರ್ಡನ್ ಪಿಲೆ ಗ್ರಹಿಸಿ  ಮುಂದಿಟ್ಟಿರುವ ರೀತಿ ನಮ್ಮನ್ನು ಬೆಚ್ಚಿಬೀಳಿಸುತ್ತದೆ.

ಜೋರ್ಡನ್ ಪಿಲೆ

ಈ ಸಿನೆಮಾಕ್ಕೆ ಟೊನಿ ಲಿವರ್ ಕ್ಯಾಮೆರಾ ಹಿಡಿದಿದ್ದಾರೆ. ಅದು ಚಿತ್ರಕಥೆಯ ಸಶಕ್ತತೆಯನ್ನು ಮತ್ತಷ್ಟೂ ಹೆಚ್ಚಿಸಿದೆ. ಮೈಕೆಲ್ ಅಬ್ಲಸ್ ನೀಡಿರುವ ಸಂಗೀತಕ್ಕೂ ಇದೇ ಮಾತು ಸಲ್ಲುತ್ತದೆ. 2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ.

ಅಭಿನಯದ ಬಗ್ಗೆ ಹೇಳುವುದಾದರೆ ಕ್ರಿಸ್ ಆಗಿರುವ ಡ್ಯಾನಿಯಲ್ ಅಭಿನಯ ಅನನ್ಯ. ಈತನ ಕಂಗಳೇ ಸಂಭಾಷಣೆಗಳನ್ನು ಹೇಳುತ್ತವೆ. ಕೆಲವೊಂದು ದೃಶ್ಯಗಳಲ್ಲಿ ಈತನ ಅಭಿನಯ ಅಬ್ಬಾ ಎಂಬ ಉದ್ಗಾರದೊಡನೆ ಮೆಚ್ಚುಗೆ ಪಡೆಯುತ್ತದೆ. ರೋಸ್ ಅರ್ಮಿಟೇಜ್ ಆಗಿರುವ ಆಲಿಸನ್ ವಿಲಿಯಮ್ಸ್, ಮಿಸ್ಸಿ ಅರ್ಮಿಟೇಜ್ ಆಗಿರುವ ಕ್ಯಾಥೆರಿನ್ ಕೀರ್ನರ್, ಡೀನ್ ಅರ್ಮಿಟೇಜ್ ಪಾತ್ರಧಾರಿ ಬ್ರಾಡ್ಲಿ, ಜಿಮ್ ಹಡ್ಸನ್ ಆಗಿ ಅಭಿನಯಿಸಿರುವ ಸ್ಟಿಫನ್ ರೂಟ್ ಅಭಿನಯ ಮನೋಜ್ಞ.

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...