Homeಮುಖಪುಟಭಾರತ್ ಜೋಡೋ ಯಾತ್ರೆ; ಬೋಣಿ ಅಂತೂ ಚೆನ್ನಾಗಾಯ್ತು, ಆದರೆ ಮುಂದಿನ ದಾರಿ ದೊಡ್ಡದಿದೆ!

ಭಾರತ್ ಜೋಡೋ ಯಾತ್ರೆ; ಬೋಣಿ ಅಂತೂ ಚೆನ್ನಾಗಾಯ್ತು, ಆದರೆ ಮುಂದಿನ ದಾರಿ ದೊಡ್ಡದಿದೆ!

- Advertisement -
- Advertisement -

ಯಾತ್ರೆ ಹೇಗೆ ನಡೀತಿದೆ? ಏನಾದರೂ ಪರಿಣಾಮ ಆಯ್ತಾ? ಚುನಾವಣೆಯಲ್ಲಿ ಲಾಭ ಆಗಲುಂಟಾ? ಏನಾದರೂ ಸಾಧಿಸ್ತೀರೋ ಇಲ್ವೋ? ಯಾವಾಗ ಕನ್ಯಾಕುಮಾರಿಯಿಂದ ’ಭಾರತ ಜೋಡೊ ಯಾತ್ರಾ’ ಶುರುವಾಯ್ತೋ, ಆವಾಗಿನಿಂದ ಕರೆಗಳು ಬರುತ್ತಲೇ ಇವೆ. ಇಂತಹ ಪರಿಚಿತ ಪ್ರಶ್ನೆಗಳ ಸುರಿಮಳೆಯೇ ಆಗುತ್ತಿದೆ. ಟಿವಿಯಲ್ಲೂ ಕೋಳಿಜಗಳ ಶುರುವಾಗಿದೆಯಂತೆ. ಯಾತ್ರೆಯ ಹಿಂದಿನ ಇರಾದೆ ಏನಿದೆ ಎಂಬುದರ ಮೇಲೆ ಈ ಯಾತ್ರೆ ಏನು ಸಾಧಿಸುವುದು ಎಂಬುದು ನಿಂತಿದೆ. ಪಾದಯಾತ್ರೆಗಳ ಅನೇಕ ರೀತಿಯದ್ದಾಗಬಹುದು; ಕೆಲವರಿಗೆ ನಡಿಗೆಯಾದರೆ, ಕೆಲವರಿಗೆ ಕಸರತ್ತು. ಅಲೆಮಾರಿ ಸಮಾಜದವರಿಗೆ ಜೀವನಶೈಲಿ; ಹಾಗೂ ಬೀದಿ ಸುತ್ತಿ ಸರಕು ಮಾರಾಟ ಮಾಡುವವರಿಗೆ ವ್ಯಾಪಾರ. ಕೆಲವರು ಹರಕೆ ಹೊತ್ತು ನಡೆದರೆ, ಕೆಲವರು ದೇವರ ದರ್ಶನದ ಆಕಾಂಕ್ಷೆಯಿಟ್ಟು ನಡೆಯುತ್ತಾರೆ. ಕೆಲವೇ ಕೆಲವರು ತನ್ನೊಳಗಿನ ದೇವರನ್ನು ಹುಡುಕುತ್ತ ಕಾಲ್ನಡಿಗೆಯ ಯಾತ್ರೆ ಮಾಡುತ್ತಾರೆ.

ಇದೇ ಮಾತು ರಾಜಕೀಯ ಪಾದಯಾತ್ರೆಗಳಿಗೂ ಅನ್ವಯಿಸುತ್ತದೆ. ಇಲ್ಲಿಯೂ ಕೆಲವರು ಪ್ರವಾಸಿಗಳಿದ್ದಾರೆ, ಕೆಲವರಿಗೆ ದರ್ಶನದ ಆಕಾಂಕ್ಷೆಯಿದ್ದರೆ ಕೆಲವರಿಗೆ ಟಿಕೆಟ್‌ದ್ದು. ನಮ್ಮಲ್ಲಿ ಚುನಾವಣಾ ಪಾದಯಾತ್ರೆಗಳ ಇತಿಹಾಸವೂ ತುಂಬಾ ಹಳೆಯದು. ನಮ್ಮಲ್ಲಿ ಆದ ಕೆಲವು ಪಾದಯಾತ್ರೆಗಳಿಂದ ದೇಶವು ತನ್ನನ್ನು ತಾನು ಗುರುತಿಸಿಕೊಂಡಿದೆ, ಕಳೆದುಕೊಂಡ ತನ್ನ ಆತ್ಮಬಲವನ್ನು ಪಡೆದುಕೊಂಡಿದೆ.

ಸ್ವಾಭಾವಿಕವಾಗಿಯೇ ’ಭಾರತ ಜೋಡೊ ಯಾತ್ರೆ’ಯಲ್ಲಿ ಇವೆಲ್ಲವುಗಳ ಒಂದಿಷ್ಟು ಅಂಶಗಳಿವೆ. ಹಾಗಾಗಿ ದೇಶದ ಒಂದು ದೊಡ್ಡ ಪಕ್ಷದಿಂದ ಪ್ರಾಯೋಜಿತವಾದ ಇಂತಹ ಯಾತ್ರೆಗಳಲ್ಲಿ ಪ್ರವಾಸಿಗರೂ ಇರುತ್ತಾರೆ, ಅವರೊಂದಿಗೆ ಪೈಲ್ವಾನರೂ ಇರುತ್ತಾರೆ, ಟಿಕೆಟ್ ಆಕಾಂಕ್ಷಿಗಳೂ ಇರುತ್ತಾರೆ ಹಾಗೂ ದರ್ಶನಾರ್ಥಿಗಳೂ ಇರುತ್ತಾರೆ. ಈ ಯಾತ್ರೆಯ ಯಶಸ್ಸು, ವಿಫಲತೆಗಳನ್ನು ಈ ಸಣ್ಣ ಆಕಾಂಕ್ಷೆಗಳ ತಕ್ಕಡಿಯಲ್ಲಿ ಅಳೆಯಲು ಸಾಧ್ಯವಿಲ್ಲ. ಎಂದಿನಂತೆಯೇ ರಾಜಕೀಯ ಪಂಡಿತರು ಇದನ್ನು ಕಾಂಗ್ರೆಸ್ ಪಕ್ಷ ಅಥವಾ ರಾಹುಲ್ ಗಾಂಧಿಯ ಲಾಭ-ನಷ್ಟಗಳ ಲೆಕ್ಕದಲ್ಲಿ ಒರೆಗೆ ಹಚ್ಚಲಿದ್ದಾರೆ. ಆದರೆ, ಒಂದು ಪಕ್ಷದ ಅಥವಾ ಒಬ್ಬ ನಾಯಕನ ಲಾಭವು ರಾಷ್ಟ್ರದ ಹಿತಾಸಕ್ತಿಯ ಅಳತೆಗೋಲಾಗಲು ಸಾಧ್ಯವಿಲ್ಲ.

ಇಂದಿನ ಸಂದರ್ಭದಲ್ಲಿ ಭಾರತ ಜೋಡೊ ಯಾತ್ರೆಯ ಸಫಲತೆಯ ಒಂದೇ ಒಂದು ಅಳತೆ ಆಗಿರಬಹುದು. ಅದು, ದೇಶದ ಭವಿಷ್ಯದ ಮೇಲೆ ಕವಿದಿರುವ ಕಾರ್ಮೋಡಗಳನ್ನು ಇಲ್ಲವಾಗಿಸುವಲ್ಲಿ ಈ ಯಾತ್ರೆ ಸಹಕಾರಿಯಾಗುವುದೇ? ನಮ್ಮ ಪ್ರಜಾಪ್ರಭುತ್ವ, ಸಂವಿಧಾನ, ಸ್ವಾತಂತ್ರ್ಯ ಆಂದೋಲನ ಹಾಗೂ ಸಭ್ಯತೆಯ ಪರಂಪರೆಯನ್ನು ಉಳಿಸುವಲ್ಲಿ ಏನಾದರೂ ಯೋಗದಾನ ನೀಡುವುದೇ? ರಾಜಕೀಯ ಶಕ್ತಿಯ ಸಮತೋಲನವನ್ನು ಸ್ವಲ್ಪ ಮಟ್ಟಿಗಾದರೂ, ದೇಶವನ್ನು ಜೋಡಿಸುವ ಕಡೆಗೆ ತಿರುಗಿಸಬಲ್ಲದೇ? ನನ್ನಂತಹ ಜನರು ಇದೇ ನಿರೀಕ್ಷೆಯಲ್ಲಿ ಈ ಯಾತ್ರೆಯಲ್ಲಿ ಸೇರಿಕೊಂಡಿದ್ದೇವೆ. ದೇಶದ ಇತಿಹಾಸದಲ್ಲಿ ಸೂಕ್ಷ್ಮವಾದ ಮತ್ತು ನಿರ್ಣಾಯಕವಾದ ಸಮಯದಲ್ಲಿ ನಡೆಯುತ್ತಿರುವ ಈ ಯಾತ್ರೆಯನ್ನು ಬೇರೆ ಯಾವುದೇ ದೃಷ್ಟಿಕೋನದಲ್ಲಿ ನೋಡುವುದು ಒಂದು ದೊಡ್ಡ ಅಸಡ್ಡೆಯೆನಿಸುತ್ತದೆ.

ಸುಮಾರು 5 ತಿಂಗಳು ನಡೆಯಲಿರುವ ಈ ಯಾತ್ರೆಯ ಬಗ್ಗೆ ಮೊದಲ 5 ದಿನದ ಆಧಾರದ ಮೇಲೆ ಯಾವುದೇ ತೀರ್ಮಾನಕ್ಕೆ ಬರುವುದು ಹಾಸ್ಯಾಸ್ಪದವಾಗುವುದು; ಆದರೆ ಈ ಮೊದಲ ಝಲಕ್‌ನಿಂದ ಕೆಲವು ನಿರೀಕ್ಷೆಗಳನ್ನು ಇಟ್ಟುಕೊಳ್ಳಬಹುದು. ಮೊದಲ ವಾರದಲ್ಲಿ ಈ ಯಾತ್ರೆಯು ತಮಿಳುನಾಡಿನ ಕನ್ಯಾಕುಮಾರಿ ಹಾಗೂ ಕೇರಳದ ತಿರುವನಂತಪುರಂ ಜಿಲ್ಲೆಗಳಿಂದ ಹಾದುಹೋಗುತ್ತಿದೆ. ಇವೆರಡೂ ತುಲನಾತ್ಮಕವಾಗಿ ಕಾಂಗ್ರಸ್‌ನ ಪ್ರಬಲ ಕ್ಷೇತ್ರಗಳಾಗಿವೆ. ಹಾಗಾಗಿ ಯಾತ್ರೆಗೆ ಇಷ್ಟು ಬೃಹತ್ತಾಗಿ ಸಿಕ್ಕ ಜನರ ಸಮರ್ಥನೆಯಿಂದ ಅಚ್ಚರಿಯಾಗಲಾರದು. ಆದರೆ, ಗಮನಿಸಬೇಕಾದ ಅಂಶವೇನೆಂದರೆ, ಹೆಚ್ಚುಕಡಿಮೆ ಎಲ್ಲಾ ಸಮಯದಲ್ಲೂ ರಸ್ತೆಯ ಎರಡೂ ಬದಿಗಳಲ್ಲಿ ಈ ಯಾತ್ರೆಯನ್ನು ಸ್ವಾಗತಿಸಲು ಜನರ ನಿಂತಿದ್ದರು, ಹಾಗೂ ಅವರಲ್ಲಿ ಅನೇಕರು ಗಂಟೆಗಳವರೆಗೆ ನಿಂತಿದ್ದರು. ಸ್ವಾಭಾವಿಕವಾಗಿಯೇ, ಈ ಜನಸಮೂಹದಲ್ಲಿ ಹೆಚ್ಚಿನ ಜನರನ್ನು ಪಕ್ಷದ ಕಾರ್ಯಕರ್ತರು ಸೇರಿಸಿರಬಹುದು. ಹಾಗೆ ನೋಡಿದರೂ ಇದೂ ಒಂದು ಸಾಧನೆಯೇ.

ಕೆಲವರು ಕೇವಲ ನೋಡುಗರಾಗಿಯೂ ಇದ್ದರು. ಆದರೆ ಈ ಜನಸಮೂಹದಲ್ಲಿ ಸಾಧಾರಣ ಜನರು ಒಂದು ಭಾಗವೂ ಇತ್ತು, ಅವರನ್ನು ಯಾವುದೇ ಪಕ್ಷದವರು ಅಲ್ಲಿ ಸೇರಿಸಿದ್ದಲ್ಲ, ಅವರು ಖುದ್ದಾಗಿ ಬಂದಿದ್ದರು. ಕತ್ತಲೆಯಲ್ಲಿ ಒಂದು ಪುಟ್ಟ ಆಸೆಯ ಬೆಳಕನ್ನು ಕಂಡಾಗ ಕಾಣುವ ಒಂದು ಹೊಳಪು ಇವರ ಕಣ್ಣುಗಳಲ್ಲಿತ್ತು. ಇವರನ್ನು ಈಗಾಗಲೇ ಕಾಂಗ್ರೆಸ್ ಸಮರ್ಥಕ ಅಥವಾ ಮತದಾರರೆಂಬ ಹೆಸರು ಕೊಡುವುದು ಬೇಡ. ಒಂದು ಪಾದಯಾತ್ರೆಯ ಬಗ್ಗೆ ಗೌರವ ಭಾವನೆ ಇರಲೂ ಸಾಧ್ಯ ಮತ್ತು ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ ಎನ್ನಬಹುದು. ಮುಂದಿನ ಕೆಲವು ದಿನಗಳಲ್ಲೇ ತಿಳಿಯುವುದಾದರೂ, ಈ ಯಾತ್ರೆಯು ಒಂದು ಸಕಾರಾತ್ಮಕವಾದ ಜಾಗೃತಿಯನ್ನು ಮೂಡಿಸುತ್ತಿದೆ ಎಂಬುದನ್ನು ಅಲ್ಲಗಳೆಯಲಾಗದು.

ಚುನಾವಣೆಗಳಲ್ಲಿ ಇದರ ಪರಿಣಾಮ ಏನಾಗುವುದು ಎಂಬುದನ್ನು ಈಗಲೇ ಹೇಳಲು ಬರುವುದಿಲ್ಲ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆ ಮೇಲೆ ಏನು ಪರಿಣಾಮ ಎಂಬ ಬಗ್ಗೆಯೂ ಸ್ವಲ್ಪವೂ ಅಂದಾಜು ಮಾಡಲಾಗುವುದಿಲ್ಲ. ಆದರೆ ಈ ಸಕಾರಾತ್ಮಕತೆಯಿಂದ ಈಗಿರುವ ವಿಕಲ್ಪವಿಲ್ಲದಿರುವ ರಾಜಕೀಯ ವಾತಾವರಣವನ್ನು ಎಲ್ಲಿಯಾದರೂ ಒಡೆಯುವ ಸಾಮರ್ಥ್ಯವಂತೂ ಇದೆ.

ಈಗಲೇ ಈ ಯಾತ್ರೆಯು ದೇಶದ ಮನಸ್ಥಿತಿಯ ಮೇಲೆ ಬೀರುವ ಪರಿಣಾಮದ ಬಗ್ಗೆ ಮಾತನಾಡುವುದೂ ಹುಚ್ಚುತನವಾಗುತ್ತದೆ. ಆದರೆ ಒಂದಂತೂ ಸತ್ಯ; ಕಾಂಗ್ರೆಸ್ ಪಕ್ಷ ಕೈಗೆತ್ತಿಕೊಂಡಿರುವ ಈ ನಡಿಗೆ ದೇಶದ ಮೌನ ಮತ್ತು ಏಕತಾನತೆಯ ಭಾವನೆಯನ್ನು ಮುರಿದುಹಾಕಿದೆ. ತಾವೆಂದೂ ಕಾಂಗ್ರೆಸ್‌ನ ಬೆಂಬಲ ನೀಡದೇ ಇರುವ ಹಾಗೂ ಬೀದಿಗಳಲ್ಲಿ ಕಾಂಗ್ರೆಸ್‌ಅನ್ನು ವಿರೋಧಿಸಿದ ಅನೇಕರು ಈ ಯಾತ್ರೆಗೆ ಸಮರ್ಥನೆ ಮಾಡುತ್ತಿದ್ದಾರೆ. ದೇಶದ ಜನಾಂದೋಲನಗಳ ಒಂದು ಭಾಗವು ಕನ್ಯಾಕುಮಾರಿಯಿಂದಲೇ ಈ ಯಾತ್ರೆಯಲ್ಲಿ ಕೂಡಿಕೊಂಡಿದೆ.

ಹೊರಗಿನಿಂದ ಬಂದ ಈ ಅನಿರೀಕ್ಷಿತ ಸಮರ್ಥನೆಯಿಂದ ಕಾಂಗ್ರೆಸ್‌ನ ಪಾದಯಾತ್ರಿಗಳ ಆತ್ಮಸ್ಥೈರ್ಯವು ಹೆಚ್ಚಿದೆ. ಕಳೆದ ಇಡೀ ವಾರದಲ್ಲಿ ಈ ಯಾತ್ರೆಯಲ್ಲಿ ಜೊತೆಗೂಡುವ ಆಕಾಂಕ್ಷೆ ಇಟ್ಟುಕೊಂಡವರ ಸಂದೇಶಗಳು ಹೆಚ್ಚುತ್ತಿವೆ. ಕನಿಷ್ಠ ಒಂದು ಮಟ್ಟಕ್ಕಂತೂ ನಾವು ಒಬ್ಬಂಟಿಗಳಲ್ಲ ಎಂಬ ಭಾವನೆ ಮೂಡುತ್ತಿದೆ. ದೇಶ ಬದಲಿಸುವ ಮಾತು ಈಗ ಹೇಳಿದರೆ ದೊಡ್ಡ ಮಾತಾಗುತ್ತದೆ, ಆದರೆ ದೇಶವನ್ನು ಜೋಡಿಸುವ ಇಚ್ಛೆ ಹೊಂದಿದ್ದವರಲ್ಲಿ ತಮ್ಮನ್ನು ತಾವು ಬದಲಿಸಿಕೊಳ್ಳುವ ಪ್ರಕ್ರಿಯೆ ಶುರುವಾಗಿದೆ. ಬೋಣಿ ತುಂಬಾ ಚೆನ್ನಾಗಾಗಿದೆ.

ಯೋಗೇಂದ್ರ ಯಾದವ್

(ಕನ್ನಡಕ್ಕೆ): ರಾಜಶೇಖರ ಅಕ್ಕಿ


ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...