Homeಅಂಕಣಗಳುಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

- Advertisement -
- Advertisement -

ಚಕ್ರತೀರ್ಥನ ಕಾಯಿಲೆ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಷಿಗೂ ಬಡಿದುಕೊಂಡಿದೆಯಂತಲ್ಲಾ. ಈ ಬಿಜೆಪಿಗಳದ್ದು ಅಂಟು ರೋಗ. ಈ ರೋಗದ ವಿಶೇಷ ಏನೆಂದರೆ ಎಲ್ಲವೂ ಒಂದೇ ತರಹ ಮಾತನಾಡುತ್ತವೆ ಮತ್ತು ಆಡಿದ್ದನ್ನು ಮಾಡಲು ಹೋಗುತ್ತವೆ. ಇದಕ್ಕೆ ನೂರಾರು ಉದಾಹರಣೆಗಳಿವೆ. ಈ ಸಾಹಿತ್ಯ ಪರಿಷತ್ ಜೋಷಿಯವರನ್ನೇ ನೋಡಿ; ಈತ ಆಯ್ಕೆಯಾಗಿ ಬಂದಾಗ ಬಡಿದುಕೊಂಡ ರೋಗ ಯಾವುದೆಂದರೆ ಜನರನ್ನು ಶುದ್ಧ ಕನ್ನಡದಲ್ಲಿ ಮಾತನಾಡುವಂತೆ ಮಾಡಬೇಕೆಂಬುದು; ಶುದ್ಧ ಕನ್ನಡ ಅಂದರೆ ಏನು ಎಂಬುದು ಆತನಿಗೇ ಗೊತ್ತಿರಲಿಲ್ಲ. ಹಲವು ಕನ್ನಡಗಳಲ್ಲಿ ಅದ್ಲಿಸಿದಾಗ ಸುಮ್ಮನಾದರು. ಆದರೆ ಕಾಯಿಲೆ ಜನಕ್ಕೆ ಹಲವು ಕಾಯಿಲೆಗಳು ಅಂಟುವುದು ಸಾಮಾನ್ಯ. ಈಗ ಜೋಷಿಗೆ ಪಂಪ ಮಹಾಕವಿಯ ರಸ್ತೆ ಹೆಸರು ಬದಲಿಸುವ ಕಾಯಿಲೆ ಕಾಣಿಸಿಕೊಂಡಿದೆ. ಅದಕ್ಕಾಗಿ ಆತನ ಅಣ್ಣನಂತಿರುವ ಬೊಮ್ಮಾಯಿಗೆ ಪರಮಿಷನ್ ಕೇಳಿದ್ದಾರಂತೆ! ಇಂಗ್ಲಿಷ್ ಭಾಷೆಯನ್ನ ಮಾತನಾಡುವ ಜನಗಳು ತೊಗಟೆಯನ್ನು ಸೊಂಟಕ್ಕೆ ಸುತ್ತಿಕೊಂಡು ನಾಗರಿಕ ಜಗತ್ತಿನೆಡೆಗೆ ನಡೆಯಲು ಯತ್ನಿಸುತ್ತಿದ್ದಾನೆ ಇಲ್ಲಿ ಕನ್ನಡದ ಆದಿಕವಿ ಪಂಪ ಮಹಾಕಾವ್ಯವನ್ನೆ ಬರೆದಿದ್ದ ಎಂದು ಕುವೆಂಪು ಹೇಳಿದ್ದಾರೆ. ಜೋಷಿ ಆ ಮಹಾಕಾವ್ಯವನ್ನು ಓದಿ ಜೀರ್ಣಿಸಿಕೊಂಡು ಮಾತನಾಡುವುದಬಿಟ್ಟು ರಸ್ತೆ ಹೆಸರನ್ನೇ ಬದಲಿಸಹೊರಟಿರುವುದು ಶುದ್ದ ಮೂರ್ಖತನ. ಪಂಪನ ಮಾರ್ಗದಿಂದಲೇ ಸಾಹಿತ್ಯ ಪರಿಷತ್ ಪ್ರವೇಶ ನಡೆಯುತ್ತ ಬಂದಿದೆ ಎಂಬುದೇ ಜೋಷಿಗೆ ಗೊತ್ತಿಲ್ಲವಂತಲ್ಲಾ, ಥೂತ್ತೇರಿ.

******

ತೇಜಸ್ವಿ ಸೂರ್ಯ ಎಂಬ ಸಂಸದ ಹೋಟಲಿಗೆ ಹೋಗಿ ದೋಸೆ ತಿನ್ನುವುದನ್ನು ಆಡಿಕೊಂಡ ಕೆಲವರು ದೋಸೆ ಸೂರ್ಯ ಎಂದು ನಾಮಕರಣ ಮಾಡಿದ್ದಾರಲ್ಲಾ. ಇಂತಹ ಹೆಸರನ್ನು ಸಂಪಾದಿಸುವುದು ಸಾಮಾನ್ಯವಲ್ಲ. ಬೊಂಡ ರಮೇಶ ಮುದ್ದೇಗೌಡರು, ಬಿರಿಯಾನಿ ಜಮೀರು, ಉಪ್ಪೆಸಾರಿನ ಪುಟ್ಟಸ್ವಾಮಿ, ತೂತುವಡೆ ಶ್ರೀಕಂಠಯ್ಯ, ಬಾಡೂಟದ ಕೃಷ್ಣಪ್ಪ ಇವೆಲ್ಲ ನಮ್ಮ ರಾಜಕಾರಣದಲ್ಲಿ ಹಿಂದೆ ನಮ್ಮ ನಾಯಕರು ಸಂಪಾದಿಸಿದ ಹೆಸರುಗಳು. ಅದರೊಳಕ್ಕೆ ಈಗ ದೋಸೆ ಸೂರ್ಯ ಸೇರಿಕೊಂಡಿದ್ದಾರೆ ಅಷ್ಟೇ. ಮುಖ್ಯವಾಗಿ ಆತನ ಕಡೆಯವರಿಗೆ ದೋಸೆ ಅಂದರೆ ಪ್ರಾಣ. ಮೂರು ದೋಸೆ ಕೊಟ್ಟರೆ ಈ ಕಡೆ ಬರುತ್ತವೆ ಆರು ದೋಸೆ ಕೊಟ್ಟರೆ ಈ ಕಡೆ ಹೋಗುತ್ತವೆ. ಅದರಲ್ಲೂ ಮಸಾಲದೋಸೆ ಎಂದರೆ ಮುಗಿದೇ ಹೋಯ್ತು, ಮೈ ಮರೆತು ತಿನ್ನುತ್ತವೆ. ಹಾಗೇ ತೇಜಸ್ವಿಸೂರ್ಯ ಇಡೀ ಬೆಂಗಳೂರು ಸೊಂಟಮಟ ಮುಳುಗಿರುವಾಗ ಬಿಸಿಬಿಸಿ ದೋಸೆ ತಿನ್ನುತ್ತ ನೀವು ಬಂದು ತಿನ್ನಿ ಎಂದು ಹೋಟೆಲ್ ಅಡ್ರೆಸ್ ಹೇಳಿದ್ದಕ್ಕೆ ಜನಗಳು ನಖಶಿಖಾಂತ ಕೆರಳಿ ಕ್ಯಾಕರಿಸಿದ್ದಾರೆ. ಸಿಟ್ಟಾಗಿರುವ ಆತನ ಸಂಬಂಧಿ ಭಗವಾನ್ ಎಂಬ ದೋಸೆ ಪ್ರಿಯ, ನಮ್ಮ ಸೂರ್ಯ ಸುಮ್ಮಸುಮ್ಮನೆ ದೋಸೆ ತಿಂದಿಲ್ಲ; ಕೆರೆಯಂತಾಗಿರುವ ಬೆಂಗಳೂರು ನೀರನ್ನು ಹೊರಗೆ ಹಾಕಲು ಏನು ಮಾಡಬೇಕೆಂದು ಯೋಚಿಸುತ್ತ ದೋಸೆ ಅಗಿದಿದ್ದಾರೆ; ಸಾರ್ವಜನಿಕರೊಂದಿಗೆ ಸೇರಲು ದೋಸೆಗಿಂತ ತಿನಿಸೇ ಇಲ್ಲ ಎಂದು ಕೂಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಕರ್ನಾಟಕಕ್ಕೆ ಇದು ಕೆಟ್ಟ ಕಾಲ. ಏಕೆಂದರೆ ಜನಾಭಿಪ್ರಾಯವಿಲ್ಲದ ಮತ್ತು ಶಾಸಕರ ಬೆಂಬಲವೂ ಇಲ್ಲದ ಮುಖ್ಯಮಂತ್ರಿಯೊಬ್ಬರು ಅಕಸ್ಮಾತ್ ವಕ್ಕರಿಸಿ ಅಬ್ಬರಿಸಿದ್ದಾರಂತಲ್ಲಾ. ಈ ಅಬ್ಬರದ ಹೆಸರು ’ಜನೋತ್ಸವ’. ಈ ಸರಕಾರದ ಸಾಧನೆಯ ಪಟ್ಟಿ ಮಾಡುವುದಾದರೆ ಜೋಗದಲ್ಲಿ ಜನರೇಟರ್ ಆನ್ ಆದ ಕೂಡಲೆ ಅರ್ಧ ನಾಡಿನ ಲೈಟ್ ಹಚ್ಚಿಕೊಳ್ಳುವಂತೆ, ಮುಸ್ಲಿಂ ಹೆಣ್ಣು ಮಕ್ಕಳ ಹಿಜಾಬ್ ಪ್ರತಿಭಟನೆ ಉಡುಪಿಯಿಂದ ಬೇರೆ ಕಡೆಗೆ ಹರಡಿಸಿದ್ದು. ನಂತರ ಮುಸ್ಲಿಮರ ಅಂಗಡಿಗೆ ಹೋಗದಂತೆ ಮಾಡಿ ಎಂದದ್ದು, ಮುಸ್ಲಿಂ ಹಣ್ಣಿನ ಅಂಗಡಿ ಧ್ವಂಸ ಮಾಡಿದ್ದು, ಅವರ ಆಜಾನ್ ಶಬ್ದ ನಿಲ್ಲಿಸಲು ಹೋರಾಡಿದ್ದು ಇತ್ಯಾದಿ. ಸುದೈವಕ್ಕೆ ನಲವತ್ತು ಪರಸೆಂಟ್ ಲಂಚ, ಪಿಎಸ್‌ಐ ಹಗರಣ, ಶಿಕ್ಷಣ ಇಲಾಖೆಯಲ್ಲಿನ ಹಗರಣ ಎಲ್ಲವೂ ಮುಸ್ಲಿಮರ ವಿರುದ್ಧದ ಹೋರಾಟಗಳು ಹಿನ್ನಡೆಯಾಗುವಂತೆ ಮಾಡಿದವು. ಇದರ ಜೊತೆಗೆ ಬೆಂಗಳೂರು ಹಿಂದೆಂದೂ ಕಂಡರಿಯದ ಜಲಪ್ರಳಯಕ್ಕೆ ಸಿಕ್ಕಿ ಮುಳುಗಿತು. ಇಂತಹ ಸಮಯದಲ್ಲಿ ಸಾಧನೆಯ ಸಮಾವೇಶ ಮಾಡಿ ನಿಮಗೆ ತಾಕತ್ತಿದ್ದರೆ ತಡೆಯಿರಿ ಎಂದು ಕೀರಲು ಗಂಟಲಲ್ಲಿ ಕಿರುಚಿದ ಬೊಮ್ಮಯಿ ಮಾತಿಗೆ ಜಾಕ್ಸನ್ ಮತ್ತು ಪ್ರಭುದೇವನೆ ನಾಚಿಕೊಳ್ಳುವಂತೆ ಎಂಟಿಬಿ ಫ್ರೆಂಡ್ಸ್ ಕುಣಿದರಂತಲ್ಲಾ. ಇತ್ತ ಕಾಂಗೈನ ಕಿಡಿಗೇಡಿಗಳು ಬೊಮ್ಮಾಯಿಯ ಮಾತಿಗೆ ಬಿದ್ದುಬಿದ್ದು ನಗುತ್ತ ನಮ್ಮ ಸಿದ್ದರಾಮಯ್ಯನ ತಾಕತ್ತಿನ ಬಗ್ಗೆ ಮಾತಾಡ್ತೀರಾ, ನಿಮಗೆ ತಾಕತ್ತಿದ್ದರೆ ಸಂಪುಟ ವಿಸ್ತರಿಸಿ ಸರಿಯಾಗಿ ನಡೆಯಿರಿ ನೋಡೋಣ ಎಂದವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...