Homeಅಂಕಣಗಳುಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

- Advertisement -
- Advertisement -

ಚಕ್ರತೀರ್ಥನ ಕಾಯಿಲೆ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಷಿಗೂ ಬಡಿದುಕೊಂಡಿದೆಯಂತಲ್ಲಾ. ಈ ಬಿಜೆಪಿಗಳದ್ದು ಅಂಟು ರೋಗ. ಈ ರೋಗದ ವಿಶೇಷ ಏನೆಂದರೆ ಎಲ್ಲವೂ ಒಂದೇ ತರಹ ಮಾತನಾಡುತ್ತವೆ ಮತ್ತು ಆಡಿದ್ದನ್ನು ಮಾಡಲು ಹೋಗುತ್ತವೆ. ಇದಕ್ಕೆ ನೂರಾರು ಉದಾಹರಣೆಗಳಿವೆ. ಈ ಸಾಹಿತ್ಯ ಪರಿಷತ್ ಜೋಷಿಯವರನ್ನೇ ನೋಡಿ; ಈತ ಆಯ್ಕೆಯಾಗಿ ಬಂದಾಗ ಬಡಿದುಕೊಂಡ ರೋಗ ಯಾವುದೆಂದರೆ ಜನರನ್ನು ಶುದ್ಧ ಕನ್ನಡದಲ್ಲಿ ಮಾತನಾಡುವಂತೆ ಮಾಡಬೇಕೆಂಬುದು; ಶುದ್ಧ ಕನ್ನಡ ಅಂದರೆ ಏನು ಎಂಬುದು ಆತನಿಗೇ ಗೊತ್ತಿರಲಿಲ್ಲ. ಹಲವು ಕನ್ನಡಗಳಲ್ಲಿ ಅದ್ಲಿಸಿದಾಗ ಸುಮ್ಮನಾದರು. ಆದರೆ ಕಾಯಿಲೆ ಜನಕ್ಕೆ ಹಲವು ಕಾಯಿಲೆಗಳು ಅಂಟುವುದು ಸಾಮಾನ್ಯ. ಈಗ ಜೋಷಿಗೆ ಪಂಪ ಮಹಾಕವಿಯ ರಸ್ತೆ ಹೆಸರು ಬದಲಿಸುವ ಕಾಯಿಲೆ ಕಾಣಿಸಿಕೊಂಡಿದೆ. ಅದಕ್ಕಾಗಿ ಆತನ ಅಣ್ಣನಂತಿರುವ ಬೊಮ್ಮಾಯಿಗೆ ಪರಮಿಷನ್ ಕೇಳಿದ್ದಾರಂತೆ! ಇಂಗ್ಲಿಷ್ ಭಾಷೆಯನ್ನ ಮಾತನಾಡುವ ಜನಗಳು ತೊಗಟೆಯನ್ನು ಸೊಂಟಕ್ಕೆ ಸುತ್ತಿಕೊಂಡು ನಾಗರಿಕ ಜಗತ್ತಿನೆಡೆಗೆ ನಡೆಯಲು ಯತ್ನಿಸುತ್ತಿದ್ದಾನೆ ಇಲ್ಲಿ ಕನ್ನಡದ ಆದಿಕವಿ ಪಂಪ ಮಹಾಕಾವ್ಯವನ್ನೆ ಬರೆದಿದ್ದ ಎಂದು ಕುವೆಂಪು ಹೇಳಿದ್ದಾರೆ. ಜೋಷಿ ಆ ಮಹಾಕಾವ್ಯವನ್ನು ಓದಿ ಜೀರ್ಣಿಸಿಕೊಂಡು ಮಾತನಾಡುವುದಬಿಟ್ಟು ರಸ್ತೆ ಹೆಸರನ್ನೇ ಬದಲಿಸಹೊರಟಿರುವುದು ಶುದ್ದ ಮೂರ್ಖತನ. ಪಂಪನ ಮಾರ್ಗದಿಂದಲೇ ಸಾಹಿತ್ಯ ಪರಿಷತ್ ಪ್ರವೇಶ ನಡೆಯುತ್ತ ಬಂದಿದೆ ಎಂಬುದೇ ಜೋಷಿಗೆ ಗೊತ್ತಿಲ್ಲವಂತಲ್ಲಾ, ಥೂತ್ತೇರಿ.

******

ತೇಜಸ್ವಿ ಸೂರ್ಯ ಎಂಬ ಸಂಸದ ಹೋಟಲಿಗೆ ಹೋಗಿ ದೋಸೆ ತಿನ್ನುವುದನ್ನು ಆಡಿಕೊಂಡ ಕೆಲವರು ದೋಸೆ ಸೂರ್ಯ ಎಂದು ನಾಮಕರಣ ಮಾಡಿದ್ದಾರಲ್ಲಾ. ಇಂತಹ ಹೆಸರನ್ನು ಸಂಪಾದಿಸುವುದು ಸಾಮಾನ್ಯವಲ್ಲ. ಬೊಂಡ ರಮೇಶ ಮುದ್ದೇಗೌಡರು, ಬಿರಿಯಾನಿ ಜಮೀರು, ಉಪ್ಪೆಸಾರಿನ ಪುಟ್ಟಸ್ವಾಮಿ, ತೂತುವಡೆ ಶ್ರೀಕಂಠಯ್ಯ, ಬಾಡೂಟದ ಕೃಷ್ಣಪ್ಪ ಇವೆಲ್ಲ ನಮ್ಮ ರಾಜಕಾರಣದಲ್ಲಿ ಹಿಂದೆ ನಮ್ಮ ನಾಯಕರು ಸಂಪಾದಿಸಿದ ಹೆಸರುಗಳು. ಅದರೊಳಕ್ಕೆ ಈಗ ದೋಸೆ ಸೂರ್ಯ ಸೇರಿಕೊಂಡಿದ್ದಾರೆ ಅಷ್ಟೇ. ಮುಖ್ಯವಾಗಿ ಆತನ ಕಡೆಯವರಿಗೆ ದೋಸೆ ಅಂದರೆ ಪ್ರಾಣ. ಮೂರು ದೋಸೆ ಕೊಟ್ಟರೆ ಈ ಕಡೆ ಬರುತ್ತವೆ ಆರು ದೋಸೆ ಕೊಟ್ಟರೆ ಈ ಕಡೆ ಹೋಗುತ್ತವೆ. ಅದರಲ್ಲೂ ಮಸಾಲದೋಸೆ ಎಂದರೆ ಮುಗಿದೇ ಹೋಯ್ತು, ಮೈ ಮರೆತು ತಿನ್ನುತ್ತವೆ. ಹಾಗೇ ತೇಜಸ್ವಿಸೂರ್ಯ ಇಡೀ ಬೆಂಗಳೂರು ಸೊಂಟಮಟ ಮುಳುಗಿರುವಾಗ ಬಿಸಿಬಿಸಿ ದೋಸೆ ತಿನ್ನುತ್ತ ನೀವು ಬಂದು ತಿನ್ನಿ ಎಂದು ಹೋಟೆಲ್ ಅಡ್ರೆಸ್ ಹೇಳಿದ್ದಕ್ಕೆ ಜನಗಳು ನಖಶಿಖಾಂತ ಕೆರಳಿ ಕ್ಯಾಕರಿಸಿದ್ದಾರೆ. ಸಿಟ್ಟಾಗಿರುವ ಆತನ ಸಂಬಂಧಿ ಭಗವಾನ್ ಎಂಬ ದೋಸೆ ಪ್ರಿಯ, ನಮ್ಮ ಸೂರ್ಯ ಸುಮ್ಮಸುಮ್ಮನೆ ದೋಸೆ ತಿಂದಿಲ್ಲ; ಕೆರೆಯಂತಾಗಿರುವ ಬೆಂಗಳೂರು ನೀರನ್ನು ಹೊರಗೆ ಹಾಕಲು ಏನು ಮಾಡಬೇಕೆಂದು ಯೋಚಿಸುತ್ತ ದೋಸೆ ಅಗಿದಿದ್ದಾರೆ; ಸಾರ್ವಜನಿಕರೊಂದಿಗೆ ಸೇರಲು ದೋಸೆಗಿಂತ ತಿನಿಸೇ ಇಲ್ಲ ಎಂದು ಕೂಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಕರ್ನಾಟಕಕ್ಕೆ ಇದು ಕೆಟ್ಟ ಕಾಲ. ಏಕೆಂದರೆ ಜನಾಭಿಪ್ರಾಯವಿಲ್ಲದ ಮತ್ತು ಶಾಸಕರ ಬೆಂಬಲವೂ ಇಲ್ಲದ ಮುಖ್ಯಮಂತ್ರಿಯೊಬ್ಬರು ಅಕಸ್ಮಾತ್ ವಕ್ಕರಿಸಿ ಅಬ್ಬರಿಸಿದ್ದಾರಂತಲ್ಲಾ. ಈ ಅಬ್ಬರದ ಹೆಸರು ’ಜನೋತ್ಸವ’. ಈ ಸರಕಾರದ ಸಾಧನೆಯ ಪಟ್ಟಿ ಮಾಡುವುದಾದರೆ ಜೋಗದಲ್ಲಿ ಜನರೇಟರ್ ಆನ್ ಆದ ಕೂಡಲೆ ಅರ್ಧ ನಾಡಿನ ಲೈಟ್ ಹಚ್ಚಿಕೊಳ್ಳುವಂತೆ, ಮುಸ್ಲಿಂ ಹೆಣ್ಣು ಮಕ್ಕಳ ಹಿಜಾಬ್ ಪ್ರತಿಭಟನೆ ಉಡುಪಿಯಿಂದ ಬೇರೆ ಕಡೆಗೆ ಹರಡಿಸಿದ್ದು. ನಂತರ ಮುಸ್ಲಿಮರ ಅಂಗಡಿಗೆ ಹೋಗದಂತೆ ಮಾಡಿ ಎಂದದ್ದು, ಮುಸ್ಲಿಂ ಹಣ್ಣಿನ ಅಂಗಡಿ ಧ್ವಂಸ ಮಾಡಿದ್ದು, ಅವರ ಆಜಾನ್ ಶಬ್ದ ನಿಲ್ಲಿಸಲು ಹೋರಾಡಿದ್ದು ಇತ್ಯಾದಿ. ಸುದೈವಕ್ಕೆ ನಲವತ್ತು ಪರಸೆಂಟ್ ಲಂಚ, ಪಿಎಸ್‌ಐ ಹಗರಣ, ಶಿಕ್ಷಣ ಇಲಾಖೆಯಲ್ಲಿನ ಹಗರಣ ಎಲ್ಲವೂ ಮುಸ್ಲಿಮರ ವಿರುದ್ಧದ ಹೋರಾಟಗಳು ಹಿನ್ನಡೆಯಾಗುವಂತೆ ಮಾಡಿದವು. ಇದರ ಜೊತೆಗೆ ಬೆಂಗಳೂರು ಹಿಂದೆಂದೂ ಕಂಡರಿಯದ ಜಲಪ್ರಳಯಕ್ಕೆ ಸಿಕ್ಕಿ ಮುಳುಗಿತು. ಇಂತಹ ಸಮಯದಲ್ಲಿ ಸಾಧನೆಯ ಸಮಾವೇಶ ಮಾಡಿ ನಿಮಗೆ ತಾಕತ್ತಿದ್ದರೆ ತಡೆಯಿರಿ ಎಂದು ಕೀರಲು ಗಂಟಲಲ್ಲಿ ಕಿರುಚಿದ ಬೊಮ್ಮಯಿ ಮಾತಿಗೆ ಜಾಕ್ಸನ್ ಮತ್ತು ಪ್ರಭುದೇವನೆ ನಾಚಿಕೊಳ್ಳುವಂತೆ ಎಂಟಿಬಿ ಫ್ರೆಂಡ್ಸ್ ಕುಣಿದರಂತಲ್ಲಾ. ಇತ್ತ ಕಾಂಗೈನ ಕಿಡಿಗೇಡಿಗಳು ಬೊಮ್ಮಾಯಿಯ ಮಾತಿಗೆ ಬಿದ್ದುಬಿದ್ದು ನಗುತ್ತ ನಮ್ಮ ಸಿದ್ದರಾಮಯ್ಯನ ತಾಕತ್ತಿನ ಬಗ್ಗೆ ಮಾತಾಡ್ತೀರಾ, ನಿಮಗೆ ತಾಕತ್ತಿದ್ದರೆ ಸಂಪುಟ ವಿಸ್ತರಿಸಿ ಸರಿಯಾಗಿ ನಡೆಯಿರಿ ನೋಡೋಣ ಎಂದವಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...