Homeಕರ್ನಾಟಕಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

ಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

- Advertisement -
- Advertisement -

ಮಳೆಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಭರ್ಜರಿ ತಯಾರಿ ಮಾಡಿಕೊಂಡಿದೆ. ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರವೂ ಸೇರಿದಂತೆ ಹಲವು ವಿಷಯಗಳನ್ನಿಟ್ಟುಕೊಂಡು ವಾಗ್ದಾಳಿ ನಡೆಸಲು ಸಿದ್ಧವಾಗುತ್ತಿದೆ. ಇತ್ತ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿಯೂ ತಯಾರಾಗಿದೆ. ಹೀಗೆ ಸದನ ಸಮರಕ್ಕೆ ಸಿದ್ಧವಾಗುತ್ತಿರುವ ಬಿಜೆಪಿಗೆ ಸಣ್ಣ ಪ್ರಮಾಣದ ಕೋರಂ ಸಮಸ್ಯೆ ಎದುರಾಗಿದೆ.

ಆಡಳಿತ ಪಕ್ಷಕ್ಕೆ ಈ ಸಮಸ್ಯೆ ಎದುರಾಗಲು ಪ್ರಮುಖ ಕಾರಣ, ಇನ್ನೂ ಆಗದ ಸಂಪುಟ ವಿಸ್ತರಣೆ. ಇಂತದ್ದೊಂದು ವಿಚಾರವೀಗ ವಿಧಾನಸೌಧದ ಪಡಸಾಲೆಯಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂರಕವೆನ್ನುವಂತೆ ಮಳೆಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಬಿಜೆಪಿಯ ಕೆಲ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನದ ಕಡೆ ಮುಖ ಮಾಡದೆ ಕುಳಿತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮರಳಿ ಸಚಿವರಾಗುವ ಆಸೆ ಹೊತ್ತಿದ್ದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಮಾಮನಿ, ರಾಜುಗೌಡ ನಾಯಕ್, ಎ.ರಾಮದಾಸ್ ಸೇರಿದಂತೆ ಅನೇಕರು ಸದನದಿಂದ ದೂರ ಉಳಿದಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ 40% ಕಮಿಷನ್ ಆರೋಪ ಮತ್ತು ಆ ಹಿನ್ನೆಲೆಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಕಾರಣ ವಿವಾದವುಂಟಾಗಿ ವಿಪಕ್ಷ ಮತ್ತು ಜನರ ಒತ್ತಡದ ಮೇಲೆ ರಾಜೀನಾಮೆ ನೀಡಿದ್ದರು. ಇದರ ಬಳಿಕ ತಮ್ಮ ಮೇಲಿನ ಆರೋಪ ತೊಳೆದುಕೊಂಡು ಮರಳಿ ಬಂದಿದ್ದು, ಅವರ ಆಗಮನದ ಹೊತ್ತಿನಲ್ಲೇ ಸಂಪುಟ ವಿಸ್ತರಣೆ ಮಾತು ಕೇಳಿ ಬಂದಿತ್ತು.

ಈ ಎಲ್ಲ ಲೆಕ್ಕಾಚಾರಗಳಿಂದ ಈಶ್ವರಪ್ಪ ಮರಳಿ ಸಂಪುಟ ಸೇರಬಹುದೆಂಬ ನಿರೀಕ್ಷೆ ಇತ್ತು. ಆದರೆ ಮಳೆಗಾಲ ಅಧಿವೇಶನ ಸೋಮವಾರ ಆರಂಭವಾದರೂ ಸಂಪುಟದ ವಿಚಾರ ಮುಂದಕ್ಕೆ ಹೋಗದೆ ಇರುವುದು ಈಶ್ವರಪ್ಪನವರಿಗೆ ಬೇಸರ ತರಿಸಿದ್ದು, ಈ ಕಾರಣದಿಂದ ಅವರು ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮತ್ತೋರ್ವ ಸಚಿವಾಕಾಂಕ್ಷಿ, ಆಪರೇಷನ್ ಕಮಲದ ರೂವಾರಿ ರಮೇಶ್ ಜಾರಕಿಹೊಳಿ, ಸದನದ ಕಡೆ ಮುಖಮಾಡಿದ್ದರ ಬಗ್ಗೆ ನೆನಪೇ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಭಾಗವಾಗಿದ್ದ ವೇಳೆ ‘ಸಿಡಿ’ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ ಬಳಿಕವಂತೂ ಅವರು ವಿಧಾನಸೌಧದವನ್ನೇ ಮರೆತಂತೆ ಕಾಣುತ್ತಿದೆ ಎನ್ನುವುದು ಕೆಲವರ ಮಾತು.

ಇದನ್ನೂ ಓದಿ:ಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ! 

ಇವರೆಲ್ಲರ ನಡುವಲ್ಲಿ ಎಂ.ಪಿ. ರೇಣುಕಾಚಾರ್ಯ, ಲೆಕ್ಕಕ್ಕಿರಲಿ ಎನ್ನುವಂತೆ ಒಂದು ಬಾರಿ ಸದನಕ್ಕೆ ಬಂದು ಸಹಿಹಾಕಿ ಮತ್ತೆ ಕ್ಷೇತ್ರ ಸೇರಿಕೊಂಡಿದ್ದಾರೆ. ಇನ್ನುಳಿದಂತೆ ರಾಜೂಗೌಡ, ಆನಂದ್ ಮಾಮನಿ, ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ಎ. ರಾಮದಾಸ್ ಅವರು ಬೇರೆ ಬೇರೆ ಕಾರಣಗಳನ್ನು ನೀಡಿ ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿಗಳ ಹದಿಮೂರನೇ ದೆಹಲಿ ಪ್ರವಾಸದ ಬಳಿಕ, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ತಿಂಗಳ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗಬೇಕಿತ್ತು. ಆದರೆ ಆ ಕಾಲ ಕೂಡಿಬಾರದ ಹಿನ್ನೆಲೆಯಲ್ಲಿ ಪದೇ ಪದೇ ಈ ವಿಚಾರ ಮುಂದೂಡಿಕೆ ಆಗುತ್ತಲೇ ಬಂದಿದೆ. 2023ರ ಚುನಾವಣೆ ಗಮನದಲ್ಲಿಟ್ಟುಕೊಂಡ ಆಡಳಿತ ಪಕ್ಷ, ಕೆಲ ಹಿರಿಯರನ್ನು ಸಂಪುಟದಿಂದ ಕೈಬಿಟ್ಟು, ಸಂಘಟನೆ ಮತ್ತು ಪಕ್ಷ ಸಿದ್ದಾಂತ ಹಿನ್ನೆಲೆ ಹೊಂದಿದವರಿಗೆ ಅವಕಾಶ ಕೊಡಲು ನಿರ್ಧರಿಸಿತ್ತು.

ಸಂಪುಟ ವಿಸ್ತರಣೆ ಆಗಲೇಬೇಕೆನ್ನುವುದು ಬೊಮ್ಮಾಯಿಯವರ ಮಹದಾಸೆ. ತಮ್ಮ ಅವಧಿ ಪೂರ್ಣಗೊಳ್ಳುವುದರೊಳಗಾಗಿ ಪೂರ್ಣ ಸಂಪುಟದೊಂದಿಗೆ ಕರ್ತವ್ಯ ನಿರ್ವಹಿಸಬೆಕೆನ್ನುವುದು ಅವರ ಆಸೆ. ಆದರೆ ಇಲ್ಲಿಯವರೆಗೂ ದೆಹಲಿ ಪ್ರಮುಖರು ಇದಕ್ಕೆ ‘ಅಸ್ತು’ ಎನ್ನದಿರುವುದು ಸಚಿವಾಕಾಂಕ್ಷಿಗಳನ್ನು ಕಂಗೆಡುವಂತೆ ಮಾಡಿದೆ. ಇದಕ್ಕೆ ಮತ್ತೊಂದು ಮೂಲ ಕಾರಣವೂ ಇದೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನೂ ಒಳಗೊಂಡಂತೆ ಹಲವು ಸಚಿವರು ಹೆಚ್ಚುವರಿ ಖಾತೆಗಳನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಬಳಿಯೇ 8 ಖಾತೆ ಇದ್ದರೆ, ಡಾ ಸುಧಾಕರ್, ಅಶ್ವತ್ ನಾರಾಯಣ ಸೇರಿದಂತೆ ಇನ್ನು ಅನೇಕರಿಗೆ ಹೆಚ್ಚುವರಿ ಖಾತೆಗಳನ್ನು ನೀಡಲಾಗಿದೆ. ಇವೆಲ್ಲವೂ ಸಂಪುಟ ಸೇರಲು ಕಾದು ನಿಂತವರ ನಿದ್ದೆಗೆಡಿಸುವಂತೆ ಮಾಡಿದೆ.

ಇವೆಲ್ಲದರ ಜೊತೆಗೆ ಅಕಾಲಿಕವಾಗಿ ನಿಧನ ಹೊಂದಿದ ಸಚಿವ ಉಮೇಶ್ ಕತ್ತಿಯವರ ಖಾತೆಯನ್ನೂ ಒಳಗೊಂಡಂತೆ ಒಟ್ಟು 6 ಸ್ಥಾನಗಳು ಖಾಲಿ ಇವೆ. ಹೀಗಾಗಿ ಇಷ್ಟೆಲ್ಲ ಸ್ಥಾಗಳನ್ನು ಭರ್ತಿ ಮಾಡದೆ ಇಟ್ಟುಕೊಂಡು ಕಾಲಹರಣ ಮಾಡುತ್ತಿರುವುದೇಕೆ ಎನ್ನುವುದು ಮುನಿಸಿಕೊಂಡವರ ಅನಿಸಿಕೆಯಾಗಿರಬಹುದೆನ್ನುವ ಮಾತು ವಿಧಾನಸೌಧದಲ್ಲಿ ಕೇಳಿ ಬರುತ್ತಿದೆ. ಈ ಎಲ್ಲ ವಿಚಾರಗಳಿಂದ ಮನನೊಂದಿರುವ ಬಿಜೆಪಿಯ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನಕ್ಕೆ ಬರುವ ಮನಸ್ಸು ಮಾಡುತ್ತಿಲ್ಲ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...