Homeಕರ್ನಾಟಕಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

ಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

- Advertisement -
- Advertisement -

ಮಳೆಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಭರ್ಜರಿ ತಯಾರಿ ಮಾಡಿಕೊಂಡಿದೆ. ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರವೂ ಸೇರಿದಂತೆ ಹಲವು ವಿಷಯಗಳನ್ನಿಟ್ಟುಕೊಂಡು ವಾಗ್ದಾಳಿ ನಡೆಸಲು ಸಿದ್ಧವಾಗುತ್ತಿದೆ. ಇತ್ತ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿಯೂ ತಯಾರಾಗಿದೆ. ಹೀಗೆ ಸದನ ಸಮರಕ್ಕೆ ಸಿದ್ಧವಾಗುತ್ತಿರುವ ಬಿಜೆಪಿಗೆ ಸಣ್ಣ ಪ್ರಮಾಣದ ಕೋರಂ ಸಮಸ್ಯೆ ಎದುರಾಗಿದೆ.

ಆಡಳಿತ ಪಕ್ಷಕ್ಕೆ ಈ ಸಮಸ್ಯೆ ಎದುರಾಗಲು ಪ್ರಮುಖ ಕಾರಣ, ಇನ್ನೂ ಆಗದ ಸಂಪುಟ ವಿಸ್ತರಣೆ. ಇಂತದ್ದೊಂದು ವಿಚಾರವೀಗ ವಿಧಾನಸೌಧದ ಪಡಸಾಲೆಯಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂರಕವೆನ್ನುವಂತೆ ಮಳೆಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಬಿಜೆಪಿಯ ಕೆಲ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನದ ಕಡೆ ಮುಖ ಮಾಡದೆ ಕುಳಿತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮರಳಿ ಸಚಿವರಾಗುವ ಆಸೆ ಹೊತ್ತಿದ್ದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಮಾಮನಿ, ರಾಜುಗೌಡ ನಾಯಕ್, ಎ.ರಾಮದಾಸ್ ಸೇರಿದಂತೆ ಅನೇಕರು ಸದನದಿಂದ ದೂರ ಉಳಿದಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ 40% ಕಮಿಷನ್ ಆರೋಪ ಮತ್ತು ಆ ಹಿನ್ನೆಲೆಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಕಾರಣ ವಿವಾದವುಂಟಾಗಿ ವಿಪಕ್ಷ ಮತ್ತು ಜನರ ಒತ್ತಡದ ಮೇಲೆ ರಾಜೀನಾಮೆ ನೀಡಿದ್ದರು. ಇದರ ಬಳಿಕ ತಮ್ಮ ಮೇಲಿನ ಆರೋಪ ತೊಳೆದುಕೊಂಡು ಮರಳಿ ಬಂದಿದ್ದು, ಅವರ ಆಗಮನದ ಹೊತ್ತಿನಲ್ಲೇ ಸಂಪುಟ ವಿಸ್ತರಣೆ ಮಾತು ಕೇಳಿ ಬಂದಿತ್ತು.

ಈ ಎಲ್ಲ ಲೆಕ್ಕಾಚಾರಗಳಿಂದ ಈಶ್ವರಪ್ಪ ಮರಳಿ ಸಂಪುಟ ಸೇರಬಹುದೆಂಬ ನಿರೀಕ್ಷೆ ಇತ್ತು. ಆದರೆ ಮಳೆಗಾಲ ಅಧಿವೇಶನ ಸೋಮವಾರ ಆರಂಭವಾದರೂ ಸಂಪುಟದ ವಿಚಾರ ಮುಂದಕ್ಕೆ ಹೋಗದೆ ಇರುವುದು ಈಶ್ವರಪ್ಪನವರಿಗೆ ಬೇಸರ ತರಿಸಿದ್ದು, ಈ ಕಾರಣದಿಂದ ಅವರು ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮತ್ತೋರ್ವ ಸಚಿವಾಕಾಂಕ್ಷಿ, ಆಪರೇಷನ್ ಕಮಲದ ರೂವಾರಿ ರಮೇಶ್ ಜಾರಕಿಹೊಳಿ, ಸದನದ ಕಡೆ ಮುಖಮಾಡಿದ್ದರ ಬಗ್ಗೆ ನೆನಪೇ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಭಾಗವಾಗಿದ್ದ ವೇಳೆ ‘ಸಿಡಿ’ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ ಬಳಿಕವಂತೂ ಅವರು ವಿಧಾನಸೌಧದವನ್ನೇ ಮರೆತಂತೆ ಕಾಣುತ್ತಿದೆ ಎನ್ನುವುದು ಕೆಲವರ ಮಾತು.

ಇದನ್ನೂ ಓದಿ:ಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ! 

ಇವರೆಲ್ಲರ ನಡುವಲ್ಲಿ ಎಂ.ಪಿ. ರೇಣುಕಾಚಾರ್ಯ, ಲೆಕ್ಕಕ್ಕಿರಲಿ ಎನ್ನುವಂತೆ ಒಂದು ಬಾರಿ ಸದನಕ್ಕೆ ಬಂದು ಸಹಿಹಾಕಿ ಮತ್ತೆ ಕ್ಷೇತ್ರ ಸೇರಿಕೊಂಡಿದ್ದಾರೆ. ಇನ್ನುಳಿದಂತೆ ರಾಜೂಗೌಡ, ಆನಂದ್ ಮಾಮನಿ, ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ಎ. ರಾಮದಾಸ್ ಅವರು ಬೇರೆ ಬೇರೆ ಕಾರಣಗಳನ್ನು ನೀಡಿ ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿಗಳ ಹದಿಮೂರನೇ ದೆಹಲಿ ಪ್ರವಾಸದ ಬಳಿಕ, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ತಿಂಗಳ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗಬೇಕಿತ್ತು. ಆದರೆ ಆ ಕಾಲ ಕೂಡಿಬಾರದ ಹಿನ್ನೆಲೆಯಲ್ಲಿ ಪದೇ ಪದೇ ಈ ವಿಚಾರ ಮುಂದೂಡಿಕೆ ಆಗುತ್ತಲೇ ಬಂದಿದೆ. 2023ರ ಚುನಾವಣೆ ಗಮನದಲ್ಲಿಟ್ಟುಕೊಂಡ ಆಡಳಿತ ಪಕ್ಷ, ಕೆಲ ಹಿರಿಯರನ್ನು ಸಂಪುಟದಿಂದ ಕೈಬಿಟ್ಟು, ಸಂಘಟನೆ ಮತ್ತು ಪಕ್ಷ ಸಿದ್ದಾಂತ ಹಿನ್ನೆಲೆ ಹೊಂದಿದವರಿಗೆ ಅವಕಾಶ ಕೊಡಲು ನಿರ್ಧರಿಸಿತ್ತು.

ಸಂಪುಟ ವಿಸ್ತರಣೆ ಆಗಲೇಬೇಕೆನ್ನುವುದು ಬೊಮ್ಮಾಯಿಯವರ ಮಹದಾಸೆ. ತಮ್ಮ ಅವಧಿ ಪೂರ್ಣಗೊಳ್ಳುವುದರೊಳಗಾಗಿ ಪೂರ್ಣ ಸಂಪುಟದೊಂದಿಗೆ ಕರ್ತವ್ಯ ನಿರ್ವಹಿಸಬೆಕೆನ್ನುವುದು ಅವರ ಆಸೆ. ಆದರೆ ಇಲ್ಲಿಯವರೆಗೂ ದೆಹಲಿ ಪ್ರಮುಖರು ಇದಕ್ಕೆ ‘ಅಸ್ತು’ ಎನ್ನದಿರುವುದು ಸಚಿವಾಕಾಂಕ್ಷಿಗಳನ್ನು ಕಂಗೆಡುವಂತೆ ಮಾಡಿದೆ. ಇದಕ್ಕೆ ಮತ್ತೊಂದು ಮೂಲ ಕಾರಣವೂ ಇದೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನೂ ಒಳಗೊಂಡಂತೆ ಹಲವು ಸಚಿವರು ಹೆಚ್ಚುವರಿ ಖಾತೆಗಳನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಬಳಿಯೇ 8 ಖಾತೆ ಇದ್ದರೆ, ಡಾ ಸುಧಾಕರ್, ಅಶ್ವತ್ ನಾರಾಯಣ ಸೇರಿದಂತೆ ಇನ್ನು ಅನೇಕರಿಗೆ ಹೆಚ್ಚುವರಿ ಖಾತೆಗಳನ್ನು ನೀಡಲಾಗಿದೆ. ಇವೆಲ್ಲವೂ ಸಂಪುಟ ಸೇರಲು ಕಾದು ನಿಂತವರ ನಿದ್ದೆಗೆಡಿಸುವಂತೆ ಮಾಡಿದೆ.

ಇವೆಲ್ಲದರ ಜೊತೆಗೆ ಅಕಾಲಿಕವಾಗಿ ನಿಧನ ಹೊಂದಿದ ಸಚಿವ ಉಮೇಶ್ ಕತ್ತಿಯವರ ಖಾತೆಯನ್ನೂ ಒಳಗೊಂಡಂತೆ ಒಟ್ಟು 6 ಸ್ಥಾನಗಳು ಖಾಲಿ ಇವೆ. ಹೀಗಾಗಿ ಇಷ್ಟೆಲ್ಲ ಸ್ಥಾಗಳನ್ನು ಭರ್ತಿ ಮಾಡದೆ ಇಟ್ಟುಕೊಂಡು ಕಾಲಹರಣ ಮಾಡುತ್ತಿರುವುದೇಕೆ ಎನ್ನುವುದು ಮುನಿಸಿಕೊಂಡವರ ಅನಿಸಿಕೆಯಾಗಿರಬಹುದೆನ್ನುವ ಮಾತು ವಿಧಾನಸೌಧದಲ್ಲಿ ಕೇಳಿ ಬರುತ್ತಿದೆ. ಈ ಎಲ್ಲ ವಿಚಾರಗಳಿಂದ ಮನನೊಂದಿರುವ ಬಿಜೆಪಿಯ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನಕ್ಕೆ ಬರುವ ಮನಸ್ಸು ಮಾಡುತ್ತಿಲ್ಲ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...