Homeಮುಖಪುಟವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP...

ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಂದ ಶಿಕ್ಷಣ ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದೊಯ್ಯುವ ಹುನ್ನಾರವಿದು - ಡಾ.ವಿ.ಪಿ ನಿರಂಜನಾರಾಧ್ಯ

- Advertisement -
- Advertisement -

ರಾಜ್ಯದ ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

“ಎಲ್ಲೆಲ್ಲಿ ಸರ್ಕಾರದ ಹಣವಿದೆಯೊ ಅದನ್ನು ತಮ್ಮನ್ನು ಬೆಂಬಲಿಸುವ ಅಗಸ್ತ್ಯ ಫೌಂಡೇಶನ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಥರಹದ ಸರ್ಕಾರೇತರ ಸಂಘಟನೆಗಳಿಗೆ, ಅದರಲ್ಲಿಯೂ ಬ್ರಾಹ್ಮಣ ಒಡೆತನದ ಸಂಸ್ಥೆಗಳಿಗೆ ಸುರಿಯಲಾಗುತ್ತಿದೆ. ಅದರ ಭಾಗವಾಗಿ ಎ.ವಿ.ಎಂ ಸಂಸ್ಥೆಗೂ ಅನಗತ್ಯವಾಗಿ ಹಣ ವ್ಯಯಿಸಲಾಗುತ್ತಿದೆ” ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಕಿಡಿಕಾರಿದ್ದಾರೆ.

ನಮ್ಮ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲೆ ಮಾಟ, ಮಂತ್ರ, ಮ್ಯಾಜಿಕ್‌ನಂತಹ ಪಾಠಗಳನ್ನು ಹೇರುವುದು ಏಕೆ? ಇದರಿಂದ ಮಕ್ಕಳಿಗೆ ಬಹಳ ಗೊಂದಲವಾಗುತ್ತದೆ. ಆ ಗಣಿತ ಕಲಿಯಬೇಕಾ, ಈ ಗಣಿತ ಕಲಿಯಬೇಕಾ ಎಂದು ತಳಮಳಗೊಳ್ಳುತ್ತಾರೆ. ಈ ವೇದಗಣಿತ ಕಲಿಸುವ ಪ್ರಯೋಗಕ್ಕೆ ನಮ್ಮ ಸರ್ಕಾರಿ ಶಾಲಾ ಮಕ್ಕಳನ್ನೆ ಏಕೆ ಬಲಿಪಶು ಮಾಡಲಾಗುತ್ತಿದೆ? ಈ ಪ್ರಯೋಗಳನ್ನು ಅವರದೇ ಸಂಸ್ಥೆಗಳಿವೆಯಲ್ಲ ಅಲ್ಲಿ ಬೇಕಾದರೆ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಹಣವನ್ನು ಸರ್ಕಾರೇತರ ಸಂಘಟನೆಗಳಿಗೆ ಕೊಡುವುದು ಅಕ್ಷಮ್ಯ ಅಪರಾಧ. ಇವರ ಸಿದ್ಧಾಂತಗಳನ್ನು ಹೇರಲು ಸರ್ಕಾರಿ ಶಾಲೆಗಳನ್ನೆ ಆಯ್ಕೆ ಮಾಡಿಕೊಳ್ಳುವುದು ತಪ್ಪಬೇಕು. ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣದ ಗುಣಮಟ್ಟಕ್ಕೆ ಕತ್ತರಿಯಾಡಿಸಲಾಯಿತು. ಆದರೆ ಐಸಿಎಸ್‌ಸಿ, ಸಿಬಿಎಸ್‌ಸಿ ಹೆಸರಿನಲ್ಲಿ ಖಾಸಗಿ ಶಾಲೆಗಳ ಮಕ್ಕಳಿಗೆ ಯಾವುದೇ ತೊಂದರೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಯೋಗ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ನಿರಂಜನಾರಾಧ್ಯರು ಅಭಿಪ್ರಾಯಪಟ್ಟಿದ್ದಾರೆ.

ಈ ವೇದಗಣಿತದಿಂದ ಯಾವುದೇ ಪ್ರಯೋಜನವಾಗುವುದಿಲ್ಲವೆಂದು ಈ ಹಿಂದೆಯೇ ಹಲವಾರು ಗಣಿತಜ್ಞರು ವಾದಿಸಿದ್ದಾರೆ. ಅದು ವೈಜ್ಞಾನಿಕವೂ ಅಲ್ಲ, ಆಧುನಿಕ ಶಿಕ್ಷಣಕ್ಕೆ ಹೊಂದಿಕೊಳ್ಳುವುದು ಇಲ್ಲ. ನಮ್ಮಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿಗೆ ಅನುಗುಣವಾಗಿ ಗಣಿತ ಕಲಿಸುವ ಒಂದು ವಿಧಾನವಿದೆ. ಇಂತ ಸಂದರ್ಭದಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿನಲ್ಲಿ ಇಲ್ಲದ ವಿಷಯವನ್ನು ಏಕೆ ಕಲಿಸುತ್ತಿದ್ದಾರೆ? ಇದುವರೆಗೂ ಒಂದು ವಿಧಾನದಲ್ಲಿ ಗಣಿತ ಪಾಠ ಕಲಿತಿದ್ದ ಮಕ್ಕಳಿಗೆ ಏಕಾಏಕಿ ಈ ವಿಧಾನ ಹೇಳಿಕೊಟ್ಟರೆ ಆ ಚಿಕ್ಕ ಮಕ್ಕಳು ಎಷ್ಟರ ಮಟ್ಟಿಗೆ ಗಲಿಬಿಲಿಗೊಳ್ಳುತ್ತಾರೆ ಎಂಬ ಅರಿವು ಸರ್ಕಾರಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ

ಒಂದು ವೇಳೆ ಸರ್ಕಾರ ಯಾವುದೇ ಹೊಸ ಕಲಿಕೆ ಅಥವಾ ಕಾರ್ಯಕ್ರಮವನ್ನು ಆರಂಭಿಸಿದರೆ ಅದನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಪ್ರಾರಂಭಿಸಬೇಕಲ್ಲವೇ? ಏಕೆ ಕೇವಲ ಪರಿಶಿಷ್ಟ ಜಾತಿಯ ಮಕ್ಕಳನ್ನು ಆಯ್ಕೆ ಮಾಡಿ ಕಲಿಸಲಾಗುತ್ತಿದೆ? ಈ ಮಕ್ಕಳು ತೀರಾ ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಕಲಿಯುತ್ತಿದ್ದಾರೆ. ಇದರ ಹಿಂದೆ ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಅಂಬೇಡ್ಕರ್‌ರಂತಹ ಹಲವಾರು ಮಹನೀಯರ ಹೋರಾಟದ ಇತಿಹಾಸವಿದೆ. ಇಂತಹ ಸಂದರ್ಭದಲ್ಲಿ ಆ ಮಕ್ಕಳಿಂದ ಆಧುನಿಕ ಶಿಕ್ಷಣವನ್ನು ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದುಕೊಂಡು ಹೋಗುವು ಹುನ್ನಾರವನ್ನು ಪ್ರಜ್ಞಾವಂತರೆಲ್ಲರೂ ಬಲವಾಗಿ ವಿರೋಧಿಸಬೇಕು ಎಂದರು.

ವೇದಗಣಿತ ವೈಜ್ಞಾನಿಕವಾದುದು, ಉತ್ತಮವಾದುದು ಅಂದರೆ ಇಷ್ಟು ವರ್ಷ ಏಕೆ ಬೋಧಿಸಲಿಲ್ಲ? ನಮ್ಮದೇ ಆದ ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡು 75 ವರ್ಷ ಆದರೂ ಏಕೆ ಅದನ್ನು ಅಳವಡಿಸಲಿಲ್ಲ? ಈ ಹಿಂದಿನ ಶಿಕ್ಷಣ ಸಚಿವರಿಗೆ ಬುದ್ಧಿ ಇರಲಿಲ್ಲವೇ? ಆಗ ಏಕೆ ಕಲಿಸಲಿಲ್ಲವೆಂದರೆ ಅದು ನಿಷ್ಪ್ರಯೋಜಕವಾದುದು ಎಂಬುದು ಅವರಿಗೆ ಗೊತ್ತಿತ್ತು. ಅದನ್ನು ಕಲಿತರೆ ನಾವು ಹಿಂದಕ್ಕೆ ಹೋಗುತ್ತೇವೆ ಎಂಬ ಅರಿವಿತ್ತು. ಹಾಗಾಗಿ ಆಧುನಿಕ ಶಿಕ್ಷಣ ಬೇಕು ಎಂದು ಹೋರಾಟ ನಡೆಸಿದರು. ಅದರ ಮೇಲೆ ಒಂದು ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡಿದ್ದೇವೆ. ಆ ವ್ಯವಸ್ಥೆಯ ಹಳಿ ತಪ್ಪಿಸಿ ಮತ್ತೆ ಸನಾತನಾವಾದದೆಡೆ ಕರೆದುಕೊಂಡು ಹೋಗುವುದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದರು.

ಇಂದು ಹಲವಾರು ಶಾಲೆಗಳು ಶಿಕ್ಷಕರ ಕೊರತೆ ಎದುರಿಸುತ್ತಿವೆ. ಇಂದು ಸರ್ಕಾರೇತರ ಸಂಸ್ಥೆಗಳಿಗೆ ಸುರಿಯುತ್ತಿರುವ ಅದೇ ಹಣದಲ್ಲಿ ಸಮುದಾಯ ಕಲಿಕಾ ಕೇಂದ್ರಗಳಿಗೆ, ಮಕ್ಕಳಿಗೆ ಕಷ್ಟವಾದ ವಿಷಯಗಳನ್ನು ಕಲಿಸುವುದಕ್ಕೆ, ಹೊಸ ಶಿಕ್ಷಕರ ನೇಮಕಾತಿಗೆ ಬಳಸಬಹುದಿತ್ತಲ್ಲವೇ? ಎಂದು ನಿರಂಜನಾರಾಧ್ಯರು ಪ್ರಶ್ನಿಸಿದರು.

ನಮ್ಮ ಸಂವಿಧಾನದಲ್ಲಿ ವೈಜ್ಞಾನಿಕ ಮನೋಭಾವವನ್ನು ಬಿತ್ತುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ವಿಧಿಸಲಾಗಿದೆ. ಇಂತಹ ಸಂವಿಧಾನವನ್ನು ಉಲ್ಲಂಘಿಸಿ ಅವೈಜ್ಞಾನಿಕವಾಗಿ ಪಾಠ ಬೋಧಿಸುತ್ತಿರುವ, ಮೌಢ್ಯ ಬಿತ್ತುತ್ತಿರುವ ಸಂಸ್ಥೆಗಳ ಮುಖ್ಯಸ್ಥರನ್ನು ಬಂಧಿಸಬೇಕು. ಅವರಿಗೆ ಸರ್ಕಾರ ನೀಡಿರುವ ಅನುದಾನವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ನಿರಂಜನಾರಾಧ್ಯರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ

  2. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ ವೇದಗಣಿತ ಸೋಮಾರಿತನಕ್ಕೆ ನಾಂದಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...