Homeಮುಖಪುಟವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP...

ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಪಡೆಯುತ್ತಿರುವ ದಲಿತ ಮಕ್ಕಳಿಂದ ಶಿಕ್ಷಣ ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದೊಯ್ಯುವ ಹುನ್ನಾರವಿದು - ಡಾ.ವಿ.ಪಿ ನಿರಂಜನಾರಾಧ್ಯ

- Advertisement -
- Advertisement -

ರಾಜ್ಯದ ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯ್ತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ರಿಂದ 8ನೇ ತರಗತಿವರೆಗಿನ 25 ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡುವ ಜವಾಬ್ದಾರಿಯನ್ನು ಹಿರಿಯೂರಿನ ಎ.ವಿ.ಎಂ ಅಕಾಡೆಮಿಗೆ ವಹಿಸಲಾಗಿದೆ. ಆ ಸಂಸ್ಥೆಯು ಸರ್ಕಾರಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಅವರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ಇನ್ನು ಶಿಕ್ಷಕರಿಗೆ ತರಬೇತಿ, ಕಲಿಕಾ ಕಿಟ್ ಮತ್ತು ಸಮವಸ್ತ್ರ ನೀಡುವ ಸರ್ಕಾರೇತರ ಸಂಸ್ಥೆಗೆ ಪ್ರತಿ ಗ್ರಾಮ ಪಂಚಾಯ್ತಿಗಳು ಸಹ ತಲಾ ಒಂದೊಂದು ಲಕ್ಷ ಹಣ ನೀಡುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

“ಎಲ್ಲೆಲ್ಲಿ ಸರ್ಕಾರದ ಹಣವಿದೆಯೊ ಅದನ್ನು ತಮ್ಮನ್ನು ಬೆಂಬಲಿಸುವ ಅಗಸ್ತ್ಯ ಫೌಂಡೇಶನ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಥರಹದ ಸರ್ಕಾರೇತರ ಸಂಘಟನೆಗಳಿಗೆ, ಅದರಲ್ಲಿಯೂ ಬ್ರಾಹ್ಮಣ ಒಡೆತನದ ಸಂಸ್ಥೆಗಳಿಗೆ ಸುರಿಯಲಾಗುತ್ತಿದೆ. ಅದರ ಭಾಗವಾಗಿ ಎ.ವಿ.ಎಂ ಸಂಸ್ಥೆಗೂ ಅನಗತ್ಯವಾಗಿ ಹಣ ವ್ಯಯಿಸಲಾಗುತ್ತಿದೆ” ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಕಿಡಿಕಾರಿದ್ದಾರೆ.

ನಮ್ಮ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲೆ ಮಾಟ, ಮಂತ್ರ, ಮ್ಯಾಜಿಕ್‌ನಂತಹ ಪಾಠಗಳನ್ನು ಹೇರುವುದು ಏಕೆ? ಇದರಿಂದ ಮಕ್ಕಳಿಗೆ ಬಹಳ ಗೊಂದಲವಾಗುತ್ತದೆ. ಆ ಗಣಿತ ಕಲಿಯಬೇಕಾ, ಈ ಗಣಿತ ಕಲಿಯಬೇಕಾ ಎಂದು ತಳಮಳಗೊಳ್ಳುತ್ತಾರೆ. ಈ ವೇದಗಣಿತ ಕಲಿಸುವ ಪ್ರಯೋಗಕ್ಕೆ ನಮ್ಮ ಸರ್ಕಾರಿ ಶಾಲಾ ಮಕ್ಕಳನ್ನೆ ಏಕೆ ಬಲಿಪಶು ಮಾಡಲಾಗುತ್ತಿದೆ? ಈ ಪ್ರಯೋಗಳನ್ನು ಅವರದೇ ಸಂಸ್ಥೆಗಳಿವೆಯಲ್ಲ ಅಲ್ಲಿ ಬೇಕಾದರೆ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜನರ ಹಣವನ್ನು ಸರ್ಕಾರೇತರ ಸಂಘಟನೆಗಳಿಗೆ ಕೊಡುವುದು ಅಕ್ಷಮ್ಯ ಅಪರಾಧ. ಇವರ ಸಿದ್ಧಾಂತಗಳನ್ನು ಹೇರಲು ಸರ್ಕಾರಿ ಶಾಲೆಗಳನ್ನೆ ಆಯ್ಕೆ ಮಾಡಿಕೊಳ್ಳುವುದು ತಪ್ಪಬೇಕು. ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣದ ಗುಣಮಟ್ಟಕ್ಕೆ ಕತ್ತರಿಯಾಡಿಸಲಾಯಿತು. ಆದರೆ ಐಸಿಎಸ್‌ಸಿ, ಸಿಬಿಎಸ್‌ಸಿ ಹೆಸರಿನಲ್ಲಿ ಖಾಸಗಿ ಶಾಲೆಗಳ ಮಕ್ಕಳಿಗೆ ಯಾವುದೇ ತೊಂದರೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಯೋಗ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ನಿರಂಜನಾರಾಧ್ಯರು ಅಭಿಪ್ರಾಯಪಟ್ಟಿದ್ದಾರೆ.

ಈ ವೇದಗಣಿತದಿಂದ ಯಾವುದೇ ಪ್ರಯೋಜನವಾಗುವುದಿಲ್ಲವೆಂದು ಈ ಹಿಂದೆಯೇ ಹಲವಾರು ಗಣಿತಜ್ಞರು ವಾದಿಸಿದ್ದಾರೆ. ಅದು ವೈಜ್ಞಾನಿಕವೂ ಅಲ್ಲ, ಆಧುನಿಕ ಶಿಕ್ಷಣಕ್ಕೆ ಹೊಂದಿಕೊಳ್ಳುವುದು ಇಲ್ಲ. ನಮ್ಮಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿಗೆ ಅನುಗುಣವಾಗಿ ಗಣಿತ ಕಲಿಸುವ ಒಂದು ವಿಧಾನವಿದೆ. ಇಂತ ಸಂದರ್ಭದಲ್ಲಿ ರಾಷ್ಟ್ರೀಯ ಪಠ್ಯಕ್ರವ ಚೌಕಟ್ಟಿನಲ್ಲಿ ಇಲ್ಲದ ವಿಷಯವನ್ನು ಏಕೆ ಕಲಿಸುತ್ತಿದ್ದಾರೆ? ಇದುವರೆಗೂ ಒಂದು ವಿಧಾನದಲ್ಲಿ ಗಣಿತ ಪಾಠ ಕಲಿತಿದ್ದ ಮಕ್ಕಳಿಗೆ ಏಕಾಏಕಿ ಈ ವಿಧಾನ ಹೇಳಿಕೊಟ್ಟರೆ ಆ ಚಿಕ್ಕ ಮಕ್ಕಳು ಎಷ್ಟರ ಮಟ್ಟಿಗೆ ಗಲಿಬಿಲಿಗೊಳ್ಳುತ್ತಾರೆ ಎಂಬ ಅರಿವು ಸರ್ಕಾರಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ

ಒಂದು ವೇಳೆ ಸರ್ಕಾರ ಯಾವುದೇ ಹೊಸ ಕಲಿಕೆ ಅಥವಾ ಕಾರ್ಯಕ್ರಮವನ್ನು ಆರಂಭಿಸಿದರೆ ಅದನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಪ್ರಾರಂಭಿಸಬೇಕಲ್ಲವೇ? ಏಕೆ ಕೇವಲ ಪರಿಶಿಷ್ಟ ಜಾತಿಯ ಮಕ್ಕಳನ್ನು ಆಯ್ಕೆ ಮಾಡಿ ಕಲಿಸಲಾಗುತ್ತಿದೆ? ಈ ಮಕ್ಕಳು ತೀರಾ ಇತ್ತೀಚಿಗಷ್ಟೇ ಶಿಕ್ಷಣಕ್ಕೆ ತೆರೆದುಕೊಂಡು ಆಧುನಿಕ ಶಿಕ್ಷಣ ಕಲಿಯುತ್ತಿದ್ದಾರೆ. ಇದರ ಹಿಂದೆ ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ, ಅಂಬೇಡ್ಕರ್‌ರಂತಹ ಹಲವಾರು ಮಹನೀಯರ ಹೋರಾಟದ ಇತಿಹಾಸವಿದೆ. ಇಂತಹ ಸಂದರ್ಭದಲ್ಲಿ ಆ ಮಕ್ಕಳಿಂದ ಆಧುನಿಕ ಶಿಕ್ಷಣವನ್ನು ಕಿತ್ತುಕೊಂಡು ಪೂರ್ವಾಶ್ರಮಕ್ಕೆ ಕರೆದುಕೊಂಡು ಹೋಗುವು ಹುನ್ನಾರವನ್ನು ಪ್ರಜ್ಞಾವಂತರೆಲ್ಲರೂ ಬಲವಾಗಿ ವಿರೋಧಿಸಬೇಕು ಎಂದರು.

ವೇದಗಣಿತ ವೈಜ್ಞಾನಿಕವಾದುದು, ಉತ್ತಮವಾದುದು ಅಂದರೆ ಇಷ್ಟು ವರ್ಷ ಏಕೆ ಬೋಧಿಸಲಿಲ್ಲ? ನಮ್ಮದೇ ಆದ ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡು 75 ವರ್ಷ ಆದರೂ ಏಕೆ ಅದನ್ನು ಅಳವಡಿಸಲಿಲ್ಲ? ಈ ಹಿಂದಿನ ಶಿಕ್ಷಣ ಸಚಿವರಿಗೆ ಬುದ್ಧಿ ಇರಲಿಲ್ಲವೇ? ಆಗ ಏಕೆ ಕಲಿಸಲಿಲ್ಲವೆಂದರೆ ಅದು ನಿಷ್ಪ್ರಯೋಜಕವಾದುದು ಎಂಬುದು ಅವರಿಗೆ ಗೊತ್ತಿತ್ತು. ಅದನ್ನು ಕಲಿತರೆ ನಾವು ಹಿಂದಕ್ಕೆ ಹೋಗುತ್ತೇವೆ ಎಂಬ ಅರಿವಿತ್ತು. ಹಾಗಾಗಿ ಆಧುನಿಕ ಶಿಕ್ಷಣ ಬೇಕು ಎಂದು ಹೋರಾಟ ನಡೆಸಿದರು. ಅದರ ಮೇಲೆ ಒಂದು ಶಿಕ್ಷಣ ವ್ಯವಸ್ಥೆ ಕಟ್ಟಿಕೊಂಡಿದ್ದೇವೆ. ಆ ವ್ಯವಸ್ಥೆಯ ಹಳಿ ತಪ್ಪಿಸಿ ಮತ್ತೆ ಸನಾತನಾವಾದದೆಡೆ ಕರೆದುಕೊಂಡು ಹೋಗುವುದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದರು.

ಇಂದು ಹಲವಾರು ಶಾಲೆಗಳು ಶಿಕ್ಷಕರ ಕೊರತೆ ಎದುರಿಸುತ್ತಿವೆ. ಇಂದು ಸರ್ಕಾರೇತರ ಸಂಸ್ಥೆಗಳಿಗೆ ಸುರಿಯುತ್ತಿರುವ ಅದೇ ಹಣದಲ್ಲಿ ಸಮುದಾಯ ಕಲಿಕಾ ಕೇಂದ್ರಗಳಿಗೆ, ಮಕ್ಕಳಿಗೆ ಕಷ್ಟವಾದ ವಿಷಯಗಳನ್ನು ಕಲಿಸುವುದಕ್ಕೆ, ಹೊಸ ಶಿಕ್ಷಕರ ನೇಮಕಾತಿಗೆ ಬಳಸಬಹುದಿತ್ತಲ್ಲವೇ? ಎಂದು ನಿರಂಜನಾರಾಧ್ಯರು ಪ್ರಶ್ನಿಸಿದರು.

ನಮ್ಮ ಸಂವಿಧಾನದಲ್ಲಿ ವೈಜ್ಞಾನಿಕ ಮನೋಭಾವವನ್ನು ಬಿತ್ತುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ವಿಧಿಸಲಾಗಿದೆ. ಇಂತಹ ಸಂವಿಧಾನವನ್ನು ಉಲ್ಲಂಘಿಸಿ ಅವೈಜ್ಞಾನಿಕವಾಗಿ ಪಾಠ ಬೋಧಿಸುತ್ತಿರುವ, ಮೌಢ್ಯ ಬಿತ್ತುತ್ತಿರುವ ಸಂಸ್ಥೆಗಳ ಮುಖ್ಯಸ್ಥರನ್ನು ಬಂಧಿಸಬೇಕು. ಅವರಿಗೆ ಸರ್ಕಾರ ನೀಡಿರುವ ಅನುದಾನವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ನಿರಂಜನಾರಾಧ್ಯರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ

  2. ಇದು ವೈಜ್ಞಾನಿಕ ನಡೆ ಅಲ್ಲ…….ಮಕ್ಕಳಿಗೆ ಎಳೆ ವಯಸ್ಸಿನಲ್ಲಿ ಸಂಸ್ಕಾರಯುಕ್ತ ಬದುಕು ನಡೆಸುವ ಉತ್ತಮ ವಿದ್ಯಾಭ್ಯಾಸ ನೀಡುವುದೇ ಆದರೆ ಮುಂದೆ ಸತ್ಯವಂತರಾಗುತ್ತಾರೆ ಭ್ರಷ್ಟಾಚಾರ ನಿರ್ಮೂಲನೆ ಯಾಗುವುದರಲ್ಲಿ ಸಂದೇಹವೇ ಇಲ್ಲ ವೇದಗಣಿತ ಸೋಮಾರಿತನಕ್ಕೆ ನಾಂದಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...