Homeದಲಿತ್ ಫೈಲ್ಸ್ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು...

ರಾಜಸ್ಥಾನದಲ್ಲಿ ಮತ್ತೊಂದು ಘಟನೆ: ಸವರ್ಣೀಯರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ದಲಿತ ವ್ಯಕ್ತಿಗೆ ಥಳಿತ; ಗುಂಡು ಹಾರಾಟ

- Advertisement -
- Advertisement -

ಮೇಲ್ವರ್ಗದ ಜನರಿಗಾಗಿ ಮೀಸಲಾದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕಾಗಿ ದಲಿತ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳ ಗುಂಪೊಂದು ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಿಗ್ಗಾ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹಲ್ಲೆ ನಡೆಸಿದ್ದಲ್ಲದೆ ತನ್ನ ಮೇಲೆ ದುಷ್ಕರ್ಮಿಗಳು ಗುಂಡು ಕೂಡಾ ಹಾರಿಸಿದ್ದಾರೆ ಎಂದು ಸಂತ್ರಸ್ತ ಹೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಸಂಜೆ ಚತುರ ರಾಮ್ ತನ್ನ ಪತ್ನಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಪಾತ್ರೆಯಲ್ಲಿದ್ದ ನೀರು ಕುಡಿದಿದ್ದಾರೆ. ಈ ವೇಳೆ ನಾಲ್ಕೈದು ಜನರು ಅವರನ್ನು ನಿಂದಿಸಿ ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿದ್ದಾರೆ.

ಮೇಲ್ವರ್ಗದ ಜನರಿಗೆ ಇಟ್ಟಿದ್ದ ಪಾತ್ರೆಯಿಂದ ನೀರು ಕುಡಿದಿದ್ದಕ್ಕಾಗಿ ದುಷ್ಕರ್ಮಿಗಳು ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚತುರ ರಾಮ್ ಅವರ ಕಿವಿಯ ಹಿಂದೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ದು ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ: ಮಕ್ಕಳಿಗೆ ವೇದಗಣಿತ ಕಲಿಸುವುದಕ್ಕೆ ತಜ್ಞರು, ಹೋರಾಟಗಾರರ ವಿರೋಧ

ಸಂತ್ರಸ್ತ ಚತುರ ರಾಮ್ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಗುಂಡು ಹಾರಿಸಿದ್ದಾರೆ ಎಂಬ ಚತುರ ರಾಮ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು ಈ ಹೇಳಿಕೆಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನೀರಿನ ಮಡಕೆಯನ್ನು ಮುಟ್ಟಿದ ಆರೋಪದ ಮೇಲೆ ಒಂಬತ್ತು ವರ್ಷದ ದಲಿತ ವಿದ್ಯಾರ್ಥಿ ತನ್ನ ಶಿಕ್ಷಕನಿಂದ ಥಳಿಸಲ್ಪಟ್ಟು ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಶಿಕ್ಷಕನನ್ನು ಬಂಧಿಸಿ ಭಾರತೀಯ ದಂಡ ಸಂಹಿತೆ (IPC) ಮತ್ತು SC/ST ಕಾಯಿದೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

"ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ...

ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

ಬಿಜೆಪಿ ಜೊತೆ ಕೈಜೋಡಿಸುವ ಪ್ರಾದೇಶಿಗಳ ಪಕ್ಷಗಳು ಅಥವಾ ಸಣ್ಣ ಪಕ್ಷಗಳಿಗೆ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಭಾನುವಾರ (ಜ.18) ಎಚ್ಚರಿಕೆ ನೀಡಿದ್ದು, ಕೇಸರಿ ಪಕ್ಷ ಆರಂಭದಲ್ಲಿ ಮೈತ್ರಿ ಮಾಡಿಕೊಂಡು...

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ. ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ....

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...