Homeಮುಖಪುಟಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದುದರ ಪರಿಣಾಮವಾಗಿ ಭಾರತಕ್ಕೆ ಮರಳಿದ್ದ ಸುಮಾರು 20 ಸಾವಿರಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಭಾರತದ ವಿವಿಗಳಲ್ಲಿ ಸೀಟು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ಭಾರತದ ವೈದ್ಯ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆ ಉಂಟಾಗುವುದರಿಂದ ಆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ.

ಇಲ್ಲಿನ ನೀಟ್‌ ಪರೀಕ್ಷೆಯಲ್ಲಿ ಕಳಪೆ ಸಾಧನೆ ಮಾಡಿದ ಮತ್ತು ಅಗ್ಗದ ವೈದ್ಯಕೀಯ ವೆಚ್ಚದ ಕಾರಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್‌ನಂತಹ ರಾಷ್ಟ್ರಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಕಳಪೆ ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ನಾವು ಪ್ರವೇಶ ನೀಡಿದ್ದೆ ಆದರೆ ಅದು ಭವಿಷ್ಯದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗವು ಗುಣಮಟ್ಟ ಕಾಪಾಡುವ ಕುರಿತು ನಿರ್ದೇಶನ ನೀಡಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಈ ವಿದ್ಯಾರ್ಥಿಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ದಾಖಲು ಮಾಡಿಕೊಳ್ಳಲು ಅವಕಾಶ ನೀಡಿದರೂ ಸಹ ಆ ಕಾಲೇಜುಗಳ ಶುಲ್ಕವನ್ನು ಭರಿಸಲು ಅವರು ಶಕ್ತರಾಗಿಲ್ಲ ಎಂದೂ ಸಹ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಜಸ್ಟೀಸ್ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯ ನೇತೃತ್ವದ ಪೀಠವು ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹಲವಾರು ವಿರೋಧಭಾಸಗಳಿರುವುದು ಮೇಲ್ನೋಟಕ್ಕೆ ಕಂಡುಬರುವಂತಿದೆ ಎಂದು ಹಲವರು ಪ್ರಶ್ನಿಸಿದ್ದಾರೆ. ಒಂದು ಕಡೆ ನೀಟ್‌ನಲ್ಲಿ ಉತ್ತಮ ಅಂಕ ಗಳಿಸಿಲ್ಲ ಎಂದು ಹೇಳುವ ಸರ್ಕಾರ ಮ್ಯಾನೇಜ್‌ಮೆಂಟ್ ಕೋಟಾಗಳಿಗೆ ಕಳಪೆ ನೀಟ್ ಅಂಕಗಳನ್ನು ಮಾನದಂಡವಾಗಿ ನಿರ್ಧರಿಸಿರುವುದು ಏಕೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಉಕ್ರೇನ್‌ನಿಂದ ಮರಳಿದ ಹೆಸರು ಹೇಳಲು ಇಚ್ಛಿಸದ ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಕೇಂದ್ರ ಸರ್ಕಾರ ವಿದೇಶಗಳಲ್ಲಿ ಅಗ್ಗದ ಶಿಕ್ಷಣ ದೊರೆಯುತ್ತದೆ ಎಂದು ಹೇಳಿದೆ. ಆದರೆ ಭಾರತದಲ್ಲಿಯೇ ನಮಗೆ ಕಡಿಮೆ ವೆಚ್ಚದಲ್ಲಿ ಶಿಕ್ಷಣ ಕೊಡಲು ಅದು ಏಕೆ ಮುಂದಾಗುತ್ತಿಲ್ಲ? ಖಾಸಗೀ ಕಾಲೇಜುಗಳು ಅಧಿಕ ಶುಲ್ಕ ವಸೂಲಿ ಮಾಡಲು ಏಕೆ ಅವಕಾಶ ನೀಡುತ್ತಿದೆ? ನೀಟ್ ಪರೀಕ್ಷೆಯಲ್ಲಿ ನಮಗಿಂತಲೂ ಕಡಿಮೆ ಅಂಕ ಪಡೆದವರು ಮ್ಯಾನೇಜ್‌ಮೆಂಟ್ ಕೋಟಾದಲ್ಲಿ ವೈದ್ಯಕೀಯ ಸೀಟು ಪಡೆಯುತ್ತಿರುವಾಗ, ನಮಗೆ ಸೀಟು ನೀಡಿದರೆ ಶಿಕ್ಷಣದ ಗುಣಮಟ್ಟ ಕಡಿಮೆಯಾಗಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಕಡಿಮೆ ವೆಚ್ಚಕ್ಕೆ ವೈದ್ಯಕೀಯ ಶಿಕ್ಷಣ ಸಿಕ್ಕಿದ್ದರೆ ನಾವು ಯಾರೂ ವಿದೇಶಗಳಿಗೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ. ಅಲ್ಲದೆ ನಾವು ಉಕ್ರೇನ್‌ನಿಂದ ಶಿಕ್ಷಣ ಮೊಟಕುಗೊಳಿಸಿ ವಾಪಸ್ ಬರಲು ಯುದ್ಧ ಕಾರಣವೆ ಹೊರತು ನಾವಲ್ಲ. ಹಾಗಾಗಿ ನಾವು ಇಲ್ಲಿಯ ಕಾಲೇಜುಗಳಲ್ಲಿ ಶಿಕ್ಷಣ ಮುಂದುವರೆಸುವುದು ನಮ್ಮ ಹಕ್ಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...