HomeಮುಖಪುಟBBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

BBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

- Advertisement -
- Advertisement -

ಬೆಂಗಳೂರಿನಲ್ಲಿ BBMP ಶಾಲೆ ನಿರ್ಮಾಣಕ್ಕೆ 2010ರಲ್ಲಿ ಬಿಡಿಎ ವತಿಯಿಂದ ಮಂಜೂರಾದ ನಾಗರಿಕ ಸೌಕರ್ಯಗಳ ನಿವೇಶನವನ್ನು ಅಕ್ರಮವಾಗಿ ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ ಚಂದ್ರಪ್ಪನವರು ಕಬಳಿಸಿದ್ದಾರೆ ಎಂದು ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆಯ ಬಿ.ಎಂ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೆಂಗೇರಿಯ ಸರ್.ಎಂ ವಿಶ್ವೇಶ್ವರಯ್ಯ ಬಡವಣೆಯ 2ನೇ ಬ್ಲಾಕ್‌ನಲ್ಲಿರುವ 25,225 ಚ.ಅಡಿಯ ಸಿಎ ನಿವೇಶನವನ್ನು ಬಿಬಿಎಂಪಿ ಕನ್ನಡ ಶಾಲೆ ನಿರ್ಮಾಣಕ್ಕೆ ಬಿಡಿಎ 2010ರ ಫೆಬ್ರವರಿ ತಿಂಗಳಿನಲ್ಲಿ ಹಂಚಿಕೆ ಮಾಡಿತ್ತು. ಅದೇ ವರ್ಷ ಜುಲೈನಲ್ಲಿ ಹಂಚಿಕೆ ಪತ್ರ ಸಹ ನೀಡಿತ್ತು. ಆದರೆ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮೂಲಕ ಹಾಲಿ ಶಾಸಕ ಎಂ ಚಂದ್ರಪ್ಪನವರು ಅದೇ ನಿವೇಶನವನ್ನು ತನ್ನ ಹೆಸರಿಗೆ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆಪಾದಿಸಿದ್ದಾರೆ.

ಚಂದ್ರಪ್ಪನವರು ಕುಮಾರಸ್ವಾಮಿ ಲೇಔಟ್‌ನಲ್ಲಿ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ನಿವೇಶನಗಳನ್ನು ಬೇರೆಯವರಿಗೆ ಹಂಚಿಯಾಗಿತ್ತು. ಹಾಗಾಗಿ ಅವರು ಕೆಂಗೇರಿಯ ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನಾದರೂ ತಮ್ಮ ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ನಿಡುವಂತೆ ಚಂದ್ರಪ್ಪ ಯಡಿಯೂರಪ್ಪರವರ ಬಳಿ ಕೇಳಿದ್ದರು. ಆಗ ಯಡಿಯೂರಪ್ಪನವರು ಬಿಡಿಎ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದರು. ಆದರೆ ಬಿಡಿಎ ಅಧಿಕಾರಿಗಳು ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನು ಶಾಸಕರಿಗೆ ನೀಡಲು ಬರುವುದಿಲ್ಲ ಎಂದು ಸಭೆಯಲ್ಲಿ ತಿರಸ್ಕರಿಸಿದ್ದರು ಎಂದು ಶಿವಕುಮಾರ್ ತಿಳಿಸಿದರು.

ಆದರೆ ಯಡಿಯೂರಪ್ಪರವರ ಮೂಲಕ ಒತ್ತಡ ತಂದ ಶಾಸಕ ಚಂದ್ರಪ್ಪನವರು ಕೊನೆಗೂ 2011ರ ಫೆಬ್ರವರಿ ತಿಂಗಳಿನಲ್ಲಿ ಆ ನಿವೇಶನವನ್ನು ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ವರ್ಗಾಹಿಸಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಅಲ್ಲಿ ಕನ್ನಡ ಶಾಲೆ ಮತ್ತು ಸಮುದಾಯ ಭವನ ನಿರ್ಮಿಸಬೇಕೆಂಬ ಷರತ್ತಗಳನ್ನು ಉಲ್ಲಂಘಿಸಿ 11 ವರ್ಷ ಕಳೆದರೂ ಆ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

2010 ರಲ್ಲಿ ಆ ನಿವೇಶನವನ್ನು 10 ಕೋಟಿ ರೂಗೆ ಶಾಸಕ ಚಂದ್ರಪ್ಪನವರಿಗೆ ಮಾರಲಾಗಿದೆ. ಅವರು 2022ರಲ್ಲಿ ಕೇವಲ 1 ಕೋಟಿ ರೂ ಮಾತ್ರ ಪಾವತಿಸಿದ್ದಾರೆ. ಆದರೆ ಆ ನಿವೇಶನದ ಮಾರುಕಟ್ಟೆ ಬೆಲೆ 38 ಕೋಟಿ ರೂ ಇದೆ. ಆದರೆ ಇಷ್ಟೆಲ್ಲಾ ಅಕ್ರಮ ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿ ಮತ್ತು ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್‌ರವರ ಚಕಾರ ಎತ್ತಿಲ್ಲ. ಕಾನೂನುಬಾಹಿರವಾಗಿ ಹಂಚಿಕೆಯಾಗಿರುವ ಈ ನಿವೇಶನವನ್ನು ರದ್ದುಪಡಿಸಬೇಕು ಎಂದು ಕಾನೂನ ಹೋರಾಟ ಮಾಡುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವರಿಗೆ ದೋಚುವುದು ಕಬಳಿಸುವುದು ಬಿಟ್ರೆ ಬೇರೇನೂ ಬರಲ್ಲ…..ಒಂದಾದ್ರು ಅಭಿವೃದ್ಧಿ ಕೆಲಸ ಕಾಣಿಸಿದ್ದಾರೆ ಇವರು ಶಾಸಕರಾಗಿ ಮಂತ್ರಿಗಳಾಗಿ ಏನ್ ಕಾಣ್ತಿದ್ದೀರಾ ಏನ್ ಅಭಿವೃದ್ಧಿಯಾಗಿದೆ ಜನರೆ ಹೇಳಬೇಕು …..ನ್ಯೂಸ್ ನೋಡಿ ಕಮೆಂಟ್ ಮಾಡುತ್ತೇವೆ ನಾವು ಅಷ್ಟೇ.

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...