HomeಮುಖಪುಟBBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

BBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

- Advertisement -
- Advertisement -

ಬೆಂಗಳೂರಿನಲ್ಲಿ BBMP ಶಾಲೆ ನಿರ್ಮಾಣಕ್ಕೆ 2010ರಲ್ಲಿ ಬಿಡಿಎ ವತಿಯಿಂದ ಮಂಜೂರಾದ ನಾಗರಿಕ ಸೌಕರ್ಯಗಳ ನಿವೇಶನವನ್ನು ಅಕ್ರಮವಾಗಿ ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ ಚಂದ್ರಪ್ಪನವರು ಕಬಳಿಸಿದ್ದಾರೆ ಎಂದು ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆಯ ಬಿ.ಎಂ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೆಂಗೇರಿಯ ಸರ್.ಎಂ ವಿಶ್ವೇಶ್ವರಯ್ಯ ಬಡವಣೆಯ 2ನೇ ಬ್ಲಾಕ್‌ನಲ್ಲಿರುವ 25,225 ಚ.ಅಡಿಯ ಸಿಎ ನಿವೇಶನವನ್ನು ಬಿಬಿಎಂಪಿ ಕನ್ನಡ ಶಾಲೆ ನಿರ್ಮಾಣಕ್ಕೆ ಬಿಡಿಎ 2010ರ ಫೆಬ್ರವರಿ ತಿಂಗಳಿನಲ್ಲಿ ಹಂಚಿಕೆ ಮಾಡಿತ್ತು. ಅದೇ ವರ್ಷ ಜುಲೈನಲ್ಲಿ ಹಂಚಿಕೆ ಪತ್ರ ಸಹ ನೀಡಿತ್ತು. ಆದರೆ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮೂಲಕ ಹಾಲಿ ಶಾಸಕ ಎಂ ಚಂದ್ರಪ್ಪನವರು ಅದೇ ನಿವೇಶನವನ್ನು ತನ್ನ ಹೆಸರಿಗೆ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆಪಾದಿಸಿದ್ದಾರೆ.

ಚಂದ್ರಪ್ಪನವರು ಕುಮಾರಸ್ವಾಮಿ ಲೇಔಟ್‌ನಲ್ಲಿ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ನಿವೇಶನಗಳನ್ನು ಬೇರೆಯವರಿಗೆ ಹಂಚಿಯಾಗಿತ್ತು. ಹಾಗಾಗಿ ಅವರು ಕೆಂಗೇರಿಯ ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನಾದರೂ ತಮ್ಮ ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ನಿಡುವಂತೆ ಚಂದ್ರಪ್ಪ ಯಡಿಯೂರಪ್ಪರವರ ಬಳಿ ಕೇಳಿದ್ದರು. ಆಗ ಯಡಿಯೂರಪ್ಪನವರು ಬಿಡಿಎ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದರು. ಆದರೆ ಬಿಡಿಎ ಅಧಿಕಾರಿಗಳು ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನು ಶಾಸಕರಿಗೆ ನೀಡಲು ಬರುವುದಿಲ್ಲ ಎಂದು ಸಭೆಯಲ್ಲಿ ತಿರಸ್ಕರಿಸಿದ್ದರು ಎಂದು ಶಿವಕುಮಾರ್ ತಿಳಿಸಿದರು.

ಆದರೆ ಯಡಿಯೂರಪ್ಪರವರ ಮೂಲಕ ಒತ್ತಡ ತಂದ ಶಾಸಕ ಚಂದ್ರಪ್ಪನವರು ಕೊನೆಗೂ 2011ರ ಫೆಬ್ರವರಿ ತಿಂಗಳಿನಲ್ಲಿ ಆ ನಿವೇಶನವನ್ನು ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ವರ್ಗಾಹಿಸಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಅಲ್ಲಿ ಕನ್ನಡ ಶಾಲೆ ಮತ್ತು ಸಮುದಾಯ ಭವನ ನಿರ್ಮಿಸಬೇಕೆಂಬ ಷರತ್ತಗಳನ್ನು ಉಲ್ಲಂಘಿಸಿ 11 ವರ್ಷ ಕಳೆದರೂ ಆ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

2010 ರಲ್ಲಿ ಆ ನಿವೇಶನವನ್ನು 10 ಕೋಟಿ ರೂಗೆ ಶಾಸಕ ಚಂದ್ರಪ್ಪನವರಿಗೆ ಮಾರಲಾಗಿದೆ. ಅವರು 2022ರಲ್ಲಿ ಕೇವಲ 1 ಕೋಟಿ ರೂ ಮಾತ್ರ ಪಾವತಿಸಿದ್ದಾರೆ. ಆದರೆ ಆ ನಿವೇಶನದ ಮಾರುಕಟ್ಟೆ ಬೆಲೆ 38 ಕೋಟಿ ರೂ ಇದೆ. ಆದರೆ ಇಷ್ಟೆಲ್ಲಾ ಅಕ್ರಮ ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿ ಮತ್ತು ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್‌ರವರ ಚಕಾರ ಎತ್ತಿಲ್ಲ. ಕಾನೂನುಬಾಹಿರವಾಗಿ ಹಂಚಿಕೆಯಾಗಿರುವ ಈ ನಿವೇಶನವನ್ನು ರದ್ದುಪಡಿಸಬೇಕು ಎಂದು ಕಾನೂನ ಹೋರಾಟ ಮಾಡುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವರಿಗೆ ದೋಚುವುದು ಕಬಳಿಸುವುದು ಬಿಟ್ರೆ ಬೇರೇನೂ ಬರಲ್ಲ…..ಒಂದಾದ್ರು ಅಭಿವೃದ್ಧಿ ಕೆಲಸ ಕಾಣಿಸಿದ್ದಾರೆ ಇವರು ಶಾಸಕರಾಗಿ ಮಂತ್ರಿಗಳಾಗಿ ಏನ್ ಕಾಣ್ತಿದ್ದೀರಾ ಏನ್ ಅಭಿವೃದ್ಧಿಯಾಗಿದೆ ಜನರೆ ಹೇಳಬೇಕು …..ನ್ಯೂಸ್ ನೋಡಿ ಕಮೆಂಟ್ ಮಾಡುತ್ತೇವೆ ನಾವು ಅಷ್ಟೇ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...