HomeಮುಖಪುಟBBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

BBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

- Advertisement -
- Advertisement -

ಬೆಂಗಳೂರಿನಲ್ಲಿ BBMP ಶಾಲೆ ನಿರ್ಮಾಣಕ್ಕೆ 2010ರಲ್ಲಿ ಬಿಡಿಎ ವತಿಯಿಂದ ಮಂಜೂರಾದ ನಾಗರಿಕ ಸೌಕರ್ಯಗಳ ನಿವೇಶನವನ್ನು ಅಕ್ರಮವಾಗಿ ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ ಚಂದ್ರಪ್ಪನವರು ಕಬಳಿಸಿದ್ದಾರೆ ಎಂದು ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆಯ ಬಿ.ಎಂ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೆಂಗೇರಿಯ ಸರ್.ಎಂ ವಿಶ್ವೇಶ್ವರಯ್ಯ ಬಡವಣೆಯ 2ನೇ ಬ್ಲಾಕ್‌ನಲ್ಲಿರುವ 25,225 ಚ.ಅಡಿಯ ಸಿಎ ನಿವೇಶನವನ್ನು ಬಿಬಿಎಂಪಿ ಕನ್ನಡ ಶಾಲೆ ನಿರ್ಮಾಣಕ್ಕೆ ಬಿಡಿಎ 2010ರ ಫೆಬ್ರವರಿ ತಿಂಗಳಿನಲ್ಲಿ ಹಂಚಿಕೆ ಮಾಡಿತ್ತು. ಅದೇ ವರ್ಷ ಜುಲೈನಲ್ಲಿ ಹಂಚಿಕೆ ಪತ್ರ ಸಹ ನೀಡಿತ್ತು. ಆದರೆ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮೂಲಕ ಹಾಲಿ ಶಾಸಕ ಎಂ ಚಂದ್ರಪ್ಪನವರು ಅದೇ ನಿವೇಶನವನ್ನು ತನ್ನ ಹೆಸರಿಗೆ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆಪಾದಿಸಿದ್ದಾರೆ.

ಚಂದ್ರಪ್ಪನವರು ಕುಮಾರಸ್ವಾಮಿ ಲೇಔಟ್‌ನಲ್ಲಿ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ನಿವೇಶನಗಳನ್ನು ಬೇರೆಯವರಿಗೆ ಹಂಚಿಯಾಗಿತ್ತು. ಹಾಗಾಗಿ ಅವರು ಕೆಂಗೇರಿಯ ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನಾದರೂ ತಮ್ಮ ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ನಿಡುವಂತೆ ಚಂದ್ರಪ್ಪ ಯಡಿಯೂರಪ್ಪರವರ ಬಳಿ ಕೇಳಿದ್ದರು. ಆಗ ಯಡಿಯೂರಪ್ಪನವರು ಬಿಡಿಎ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದರು. ಆದರೆ ಬಿಡಿಎ ಅಧಿಕಾರಿಗಳು ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನು ಶಾಸಕರಿಗೆ ನೀಡಲು ಬರುವುದಿಲ್ಲ ಎಂದು ಸಭೆಯಲ್ಲಿ ತಿರಸ್ಕರಿಸಿದ್ದರು ಎಂದು ಶಿವಕುಮಾರ್ ತಿಳಿಸಿದರು.

ಆದರೆ ಯಡಿಯೂರಪ್ಪರವರ ಮೂಲಕ ಒತ್ತಡ ತಂದ ಶಾಸಕ ಚಂದ್ರಪ್ಪನವರು ಕೊನೆಗೂ 2011ರ ಫೆಬ್ರವರಿ ತಿಂಗಳಿನಲ್ಲಿ ಆ ನಿವೇಶನವನ್ನು ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ವರ್ಗಾಹಿಸಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಅಲ್ಲಿ ಕನ್ನಡ ಶಾಲೆ ಮತ್ತು ಸಮುದಾಯ ಭವನ ನಿರ್ಮಿಸಬೇಕೆಂಬ ಷರತ್ತಗಳನ್ನು ಉಲ್ಲಂಘಿಸಿ 11 ವರ್ಷ ಕಳೆದರೂ ಆ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

2010 ರಲ್ಲಿ ಆ ನಿವೇಶನವನ್ನು 10 ಕೋಟಿ ರೂಗೆ ಶಾಸಕ ಚಂದ್ರಪ್ಪನವರಿಗೆ ಮಾರಲಾಗಿದೆ. ಅವರು 2022ರಲ್ಲಿ ಕೇವಲ 1 ಕೋಟಿ ರೂ ಮಾತ್ರ ಪಾವತಿಸಿದ್ದಾರೆ. ಆದರೆ ಆ ನಿವೇಶನದ ಮಾರುಕಟ್ಟೆ ಬೆಲೆ 38 ಕೋಟಿ ರೂ ಇದೆ. ಆದರೆ ಇಷ್ಟೆಲ್ಲಾ ಅಕ್ರಮ ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿ ಮತ್ತು ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್‌ರವರ ಚಕಾರ ಎತ್ತಿಲ್ಲ. ಕಾನೂನುಬಾಹಿರವಾಗಿ ಹಂಚಿಕೆಯಾಗಿರುವ ಈ ನಿವೇಶನವನ್ನು ರದ್ದುಪಡಿಸಬೇಕು ಎಂದು ಕಾನೂನ ಹೋರಾಟ ಮಾಡುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವರಿಗೆ ದೋಚುವುದು ಕಬಳಿಸುವುದು ಬಿಟ್ರೆ ಬೇರೇನೂ ಬರಲ್ಲ…..ಒಂದಾದ್ರು ಅಭಿವೃದ್ಧಿ ಕೆಲಸ ಕಾಣಿಸಿದ್ದಾರೆ ಇವರು ಶಾಸಕರಾಗಿ ಮಂತ್ರಿಗಳಾಗಿ ಏನ್ ಕಾಣ್ತಿದ್ದೀರಾ ಏನ್ ಅಭಿವೃದ್ಧಿಯಾಗಿದೆ ಜನರೆ ಹೇಳಬೇಕು …..ನ್ಯೂಸ್ ನೋಡಿ ಕಮೆಂಟ್ ಮಾಡುತ್ತೇವೆ ನಾವು ಅಷ್ಟೇ.

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...