Homeಕರ್ನಾಟಕಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

ಶ್ರದ್ಧಾಂಜಲಿ; ಬಿಡುಗಡೆಯ ಕನಸುಗಾರ ಪ್ರೊ.ಗಂಗಾಧರಮೂರ್ತಿ

- Advertisement -
- Advertisement -

70ರ ದಶಕದಲ್ಲಿ ಇಡೀ ಕರ್ನಾಟಕ ರಾಜ್ಯದಲ್ಲಿ ಸಂಚಲನವನ್ನುಂಟುಮಾಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮತ್ತೊಬ್ಬ ಹಿರಿಯ ಒಡನಾಡಿ ಪ್ರೊ. ಗಂಗಾಧರ ಮೂರ್ತಿ ಅವರು ಸೆಪ್ಟಂಬರ್ 10ರಂದು ನಮ್ಮನ್ನಗಲಿದ್ದಾರೆ. ನಮಗೆಲ್ಲ ಈ ಸಮಯದಲ್ಲಿ ಅವರು ಇನ್ನಷ್ಟು ಕಾಲ ಇರಬೇಕಿತ್ತು ಎಂದು ಅನಿಸುವುದೊಂದು ಸಹಜ ಭಾವನೆ. ಕನ್ನಡದ ಮಹತ್ವದ ಕವಿಗಳಾದ ಮತ್ತು ಹಿರಿಯ ದಲಿತ ಚಳವಳಿಯ ನೇತಾರರಾಗಿದ್ದ ಡಾ. ಸಿದ್ದಲಿಂಗಯ್ಯ, ಪ್ರೊ. ಕೆ.ಬಿ ಸಿದ್ದಯ್ಯ ನಮ್ಮನ್ನು ಅಗಲಿದಾಗಲೂ ಅನೇಕರಲ್ಲಿ ಈ ರೀತಿಯ ಭಾವನೆ ಮೂಡಿತ್ತು.

ದಲಿತ ಸಂಘರ್ಷ ಸಮಿತಿಯು ಸಾಮಾಜಿಕವಾಗಿ ತುಳಿಯಲ್ಪಟ್ಟ ಅಥವಾ ಬಂಧಿಸಲ್ಪಟ್ಟ ಸಮಾಜದ ಬಿಡುಗಡೆಗಾಗಿ ಹಂಬಲಿಸಿ ಈ ನೆಲದಲ್ಲಿ ರೂಪುಗೊಂಡ ಒಂದು ಮಹತ್ವದ, ಐತಿಹಾಸಿಕ ಚಳವಳಿ. ಸಾಮಾನ್ಯವಾಗಿ ದಲಿತ ಚಳವಳಿಯೆಂದರೆ ತಮ್ಮ ಹಕ್ಕುಗಳಿಗಾಗಿ ದಲಿತರೇ ನಡೆಸಿದ ಹೋರಾಟ ಎಂಬ ಭಾವನೆ ನಮ್ಮ ಸಮಾಜದ ಅನೇಕರಲ್ಲಿದೆ. ಕೆಲವೊಮ್ಮೆ ಈ ಭಾವನೆ ಸಹಜವೂ ಇರಬಹುದು. ಆದರೆ ಕರ್ನಾಟಕದ ದಲಿತ ಚಳವಳಿ ಸ್ವರೂಪ ಈ ನಿಟ್ಟಿನಲ್ಲಿ ಬಹಳ ಭಿನ್ನವಾದುದು. ಕನ್ನಡದ ನೆಲದಲ್ಲಿ ಮೊದಲ ತಲೆಮಾರಿನ ದಲಿತರು ತಮ್ಮ ನೋವು ನಲಿವುಗಳನ್ನ, ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ದಬ್ಬಾಳಿಕೆಗಳನ್ನು ಪ್ರಶ್ನೆ ಮಾಡುವಂತಹ, ಅಭಿವ್ಯಕ್ತಿಸುವಂತಹ ಸಾಹಿತ್ಯವನ್ನು ಬರೆದಾಗ ಅದನ್ನು ಬಹಳ ಪ್ರೀತಿಯಿಂದ ಸ್ವಾಗತಿಸಿ, ಸ್ವೀಕರಿಸಿ, ಪ್ರೋತ್ಸಾಹಿಸಿದ ಅನೇಕ ಪ್ರಜ್ಞಾವಂತರು ಈ ನಾಡಿನಲ್ಲಿ ಬದುಕಿ ಹೋಗಿದ್ದಾರೆ ಮತ್ತು ಇನ್ನು ಬದುಕುತ್ತಿದ್ದಾರೆ. ಅದೇ ರೀತಿ ದಲಿತರು ಸಂಘಟಿತರಾಗಿ ಚಳವಳಿಯನ್ನು ರೂಪಿಸಿದಾಗ ದಲಿತ ಸಮುದಾಯಕ್ಕೆ ಅದರ ನೇತೃತ್ವವನ್ನು ಕೊಟ್ಟು ಚಳವಳಿಗೆ ಬೆನ್ನೆಲುಬಾಗಿ ನಿಂತ ಅನೇಕ ದಲಿತೇತರ ಸಂಗಾತಿಗಳು ಈ ನಾಡಿನಲ್ಲಿ ಇದ್ದಾರೆ ಅಂತಹ ಮಹತ್ವದ ವ್ಯಕ್ತಿತ್ವಗಳಲ್ಲಿ ಒಬ್ಬರಾಗಿದ್ದವರು ಪ್ರೊ. ಗಂಗಾಧರ ಮೂರ್ತಿಯವರು. ಇಂಗ್ಲಿಷ್ ಸಾಹಿತ್ಯದ ಮೇಷ್ಟ್ರಾಗಿ ಅಧ್ಯಾಪನದ ಜೊತೆಗೆ ಅವಿಭಜಿತ ಕೋಲಾರ ಜಿಲ್ಲೆಯ ಗೌರಿಬಿದನೂರಿನ ಸುತ್ತಮುತ್ತ ದಲಿತ ಚಳವಳಿಯ ಸಂಗಾತಿಗಳ ಜೊತೆಗೂಡಿ ಅದನ್ನು ಕಟ್ಟಿ ಬೆಳೆಸಿದವರು. ಹಾಗೆಯೇ ಈ ಚಳವಳಿಯು ನಡೆಸಿದ ಮಹತ್ವದ ಭೂಮಿ ಹೋರಾಟಗಳಲ್ಲಿ ಒಂದಾದ ನಾಗಸಂದ್ರ ಭೂ ಹೋರಾಟದ ಮುಂಚೂಣಿಯಲ್ಲಿದ್ದವರು.

ಈ ಕುರಿತು ಅವರು ’ನಾಗಸಂದ್ರ ಭೂ ಆಕ್ರಮಣ ಚಳವಳಿ’ ಎಂಬ ಮಹತ್ವದ ಪುಸ್ತಕವನ್ನು ಬರೆದು ದಾಖಲಿಸಿದ್ದಾರೆ.ಇದು ಒಂದು ಭಾಗವಾದರೆ, ಪ್ರೊ ಗಂಗಾಧರಮೂರ್ತಿಯಂತವರ ವ್ಯಕ್ತಿತ್ವ ಈ ದೇಶಕ್ಕೆ, ಈ ಸಮಾಜಕ್ಕೆ ಯಾಕೆ ಬಹಳ ಅವಶ್ಯಕ ಎಂಬುದನ್ನು ಈ ಸಮಯದಲ್ಲಿ ನಾವು ಗಂಭೀರವಾಗಿ ಅವಲೋಕಿಸಬೇಕಾಗಿದೆ. ಅವರು ಬದುಕಿದ್ದಷ್ಟು ಕಾಲ ತಾವು ನಂಬಿದ ವಿಚಾರಗಳಿಗೆ ಬದ್ಧರಾಗಿ ಜನ ಚಳವಳಿಗಳ ಜೊತೆಗೆ ಬದುಕಿ ಮಾದರಿಯಾದರು. ಮೊದಲ ಬಾರಿಗೆ ನಾನು ಅವರನ್ನು ಭೇಟಿಯಾಗಿದ್ದು 2011ರ ಇಸವಿ. ಭಾರತದ ಮೊದಲ ತಲೆಮಾರಿನ ಸ್ತ್ರೀವಾದಿ ಚಿಂತಕಿ ಮತ್ತು ಬರಹಗಾರ್ತಿ ಪ್ರೊ. ಸೂಸಿಥಾರು ಅವರ ಜೊತೆಗೆ ’ದಕ್ಷಿಣ ಭಾರತದ ದಲಿತ ಬರಹಗಳು’ ಎಂಬ ಯೋಜನೆಗೆ ಕಾರ್ಯನಿರ್ವಹಿಸುವಾಗ ಅವರನ್ನು ಸಂದರ್ಶಿಸಲು ಗೌರಿಬಿದನೂರಿನ ಅವರ ಮನೆಗೆ ಭೇಟಿ ನೀಡಿದ್ದೆವು. ಆ ದಿನ ಅವರು ದಲಿತ ಸಂಘರ್ಷ ಸಮಿತಿಯ ಜೊತೆಗಿನ ತಮ್ಮ ಒಡನಾಟ ಹಾಗೂ ಜೀತ ವಿಮುಕ್ತರಿಗೆ ಸರ್ಕಾರದಿಂದ ಪ್ರತ್ಯೇಕ ಜಾಗವನ್ನು ಮಂಜೂರು ಮಾಡಿಸಿ ಶಂಭೂಕ ನಗರ ಎಂಬ ಹೊಸ ಹಳ್ಳಿಯನ್ನೇ ಕಟ್ಟಿದ ಸಂಗತಿಗಳನ್ನು ಹಂಚಿಕೊಂಡಿದ್ದು ಮಾತ್ರವಲ್ಲದೆ ಅಂದು ಶಂಭೂಕ ನಗರ ಎಂಬ ಆ ಕಾಲೋನಿಗೆ ನಮ್ಮನ್ನೆಲ್ಲ ಕರೆದುಕೊಂಡು ಹೋಗಿದ್ದರು.

ಪ್ರೊ.ಗಂಗಾಧರ ಮೂರ್ತಿಯವರು ಅಂದು ಕಾಲೋನಿಗೆ ಭೇಟಿ ನೀಡಿದ ಕೂಡಲೇ ಅಲ್ಲಿದ್ದ ಜನರು ’ಸರ್ ಬಂದಿದ್ದಾರೆ’ ಎಂದು ಒಬ್ಬರಿಗೊಬ್ಬರು ಮಾಹಿತಿಯನ್ನು ನೀಡಿಕೊಂಡು ಅವರ ಜೊತೆಗೆ ಖುಷಿಯಿಂದ ನೆರೆದದ್ದನ್ನು ನಾವು ಕಂಡೆವು. ಕಾಲೋನಿಯ ಜನರ ಕಷ್ಟ ಸುಖಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಅವರ ಕೊನೆಯ ದಿನಗಳವರೆಗೂ ಶಂಭೂಕ ನಗರದ ಜನರ ಸಂಪರ್ಕವನ್ನು ಉಳಿಸಿಕೊಂಡಿದ್ದ ರೀತಿ ಅವರ ಚಳವಳಿಯ ಬದ್ಧತೆಯ ಮಾದರಿ.

1938ರಲ್ಲಿ ಗೌರಿಬಿದನೂರಿನ ವಿದುರಾಶ್ವತ್ಥದಲ್ಲಿ ನಡೆದ ಧ್ವಜ ಸತ್ಯಾಗ್ರಹ ಹತ್ಯಾಕಾಂಡದ (ದಕ್ಷಿಣದ ಜಲಿಯನ ವಾಲಾಬಾಗ್ ಎಂದೇ ಪ್ರಖ್ಯಾತವಾಗಿದೆ) ನೆನಪಿಗಾಗಿ ಸ್ಮಾರಕ ಮತ್ತು ಗ್ರಂಥಾಲಯ ರೂಪಿಸಿ ಅದರ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು ಪ್ರೊ.ಗಂಗಾಧರ ಮೂರ್ತಿಯವರು. ಜನಪರ ಚಳವಳಿಗಳಲ್ಲಿ ತೊಡಗಿಸಿಕೊಂಡೇ ಜತೆಜತೆಗೆ ಅತ್ಯುತ್ತಮವಾದ ಸಾಹಿತ್ಯ ಕೃತಿಗಳ ಅನುವಾದ ಮತ್ತು ರಚನೆಯಲ್ಲಿ ತೊಡಗಿ ಅಕ್ಷರದ ಮೂಲಕವೂ ಜಾಗೃತಿಯನ್ನು ಬಿತ್ತಿದರು. ಇಂದು ಜಾಗತಿಕ ಹಳ್ಳಿ ಎಂಬ ಹೆಬ್ಬಾವು ಚಳವಳಿಗಳನ್ನು ಸ್ವಲ್ಪಸ್ವಲ್ಪವೇ ನುಂಗಿಕೊಳ್ಳುತ್ತಿರುವ, ಬಂಡವಾಳಶಾಹಿಗಳು ಕೋಮುವಾದಿಗಳೊಂದಿಗೆ ಕೈಜೋಡಿಸಿರುವ ಈ ದುರಿತಕಾಲದಲ್ಲಿ ಪ್ರೊ. ಗಂಗಾಧರ ಮೂರ್ತಿಯವರು ನಮ್ಮೊಟ್ಟಿಗೆ ಇನ್ನಷ್ಟು ಕಾಲ ಇರಬೇಕಿತ್ತು ಎಂಬ ಭಾವನೆ ಮೂಡುವುದು ಈಗ ಸಹಜ. ಆದರೆ ಅವರು ಸದ್ಯ ಸ್ವಲ್ಪ ವಿಶ್ರಾಂತಿಯಲ್ಲಿದ್ದಾರೆಂದು ಭಾವಿಸಿ ನಾವೆಲ್ಲರೂ ಅವರ ಕೆಲಸಗಳನ್ನು ಮುಂದುವರಿಸೋಣ ಎಂಬುದಷ್ಟೇ ಈಗ ನಮಗೆ ನಾವೇ ಮಾಡಿಕೊಳ್ಳುವ ಸಾಂತ್ವನ.


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...