Homeಅಂತರಾಷ್ಟ್ರೀಯವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ, ಬಿಲಿಯನೇರ್ ಗೌತಮ್ ಅದಾನಿ ಅವರು ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಅವರು ಕಳೆದ ತಿಂಗಳಷ್ಟೆ ಎಲ್‌‌ವಿಎಂಹೆಚ್ ಮಾಲೀಕ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಅದಾನಿ ಕಳೆದ ತಿಂಗಳಷ್ಟೆ ವಿಶ್ವದ ಮೂರನೇ ಅತ್ಯಂತ ಶ್ರೀಮಂತರಾಗುವುದರೊಂದಿಗೆ ಈ ಸ್ಥಾನಕ್ಕೆ ಏರಿದ ಮೊದಲ ಭಾರತೀಯ ಮತ್ತು ಏಷ್ಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಚೀನಾದ ಜಾಕ್ ಮಾ ಕೂಡ ಇದನ್ನು ಸಾಧಿಸಲು ಸಾಧ್ಯವಾಗಿರಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟೆಸ್ಲಾ ಮುಖ್ಯಸ್ಥ ಎಲೋನ್‌ ಮಸ್ಕ್‌ 273.5 ಬಿಲಿಯನ್‌‌ ಡಾಲರ್‌‌‌‌‌ ನಿವ್ವಳ ಮೌಲ್ಯದೊಂದಿಗೆ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಉಳಿದಿದ್ದಾರೆ. ಗೌತಮ್ ಅದಾನಿ ಪ್ರಸ್ತುತ 154.7 ಬಿಲಿಯನ್ ಡಾಲರ್‌‌ ಮೌಲ್ಯವನ್ನು ಆಸ್ತಿಯನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಕಳೆದ ಸ್ವಲ್ಪ ಸಮಯದಿಂದ ಅದಾನಿಯ ಶ್ರೀಮಂತಿಕೆ ಸ್ಥಿರವಾಗಿ ಏರುತ್ತಿದೆ.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಶ್ರೀಮಂತರ ಪಟ್ಟಿಯಲ್ಲಿ ಅರ್ನಾಲ್ಟ್‌ ಮೂರನೇ ಸ್ಥಾನಕ್ಕೆ ಏರಿದರೆ, ಬೆಜೋಸ್‌‌ ಎರಡನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಫೋಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಮತ್ತೊಬ್ಬ ಭಾರತೀಯ ಮುಖೇಶ್ ಅಂಬಾನಿ 92 ಶತಕೋಟಿ ಡಾಲರ್‌‌ನೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.

ಸರಕುಗಳ ವ್ಯಾಪಾರದೊಂದಿಗೆ 1980 ರ ದಶಕದ ಉತ್ತರಾರ್ಧದಲ್ಲಿ ಅದಾನಿ ಗ್ರೂಪ್‌ ಪ್ರಾರಂಭವಾಯಿತು. ನಂತರ ಗಣಿಗಳು, ಬಂದರುಗಳು ಮತ್ತು ವಿದ್ಯುತ್ ಸ್ಥಾವರಳು, ವಿಮಾನ ನಿಲ್ದಾಣಗಳು, ಡೇಟಾ ಕೇಂದ್ರಗಳು ಮತ್ತು ರಕ್ಷಣಾ ಕ್ಷೇತ್ರದಲ್ಲೂ ಅದಾನಿ ಗ್ರೂಪ್ ಹೂಡಿಕೆ ಮಾಡಿದ್ದು, ಕಳೆದ ಕೆಲವು ವರ್ಷಗಳಿಂದ ಆಕ್ರಮಣಕಾರಿಯಾಗಿ ತನ್ನ ವ್ಯಾಪಾರದ ಸಾಮ್ರಾಜ್ಯವನ್ನು ವಿಸ್ತರಣೆ ಮಾಡಿದೆ.

ದೇಶದ ಪ್ರಮುಖ ಸುದ್ದಿ ಮಾಧ್ಯಮವಾದ ಎನ್‌ಡಿಟಿವಿ ಮತ್ತು ಕ್ರೆಡಿಟ್‌‌‌ಸೈಟ್‌ ಅನ್ನು ಸ್ವಾಧೀನಪಡಿಸಿಕೊಳ್ಳಲು ಅದಾನಿ ಗ್ರೂಪ್ ಇತ್ತೀಚೆಗೆ ಆಕ್ರಮಣಕಾರಿ ಕ್ರಮವನ್ನು ಕೈಗೊಂಡಿತ್ತು.

“ವಿಶ್ವದ ಶ್ರಿಮಂತ ವ್ಯಕ್ತಿಗಳಾದ ಅಮೆರಿಕಾದ ಕೆಲವು ಬಿಲಿಯೇರ್‌ಗಳು ತಮ್ಮ ಶ್ರಿಮಂತಿಕೆಯ ಪಟ್ಟಿಯಲ್ಲಿ ಇಳಿಕೆ ಕಂಡಿದ್ದು ಅವರು ಮಾಡುತ್ತಿರುವ ಲೋಕೊಪಯೋಗಿ ಯೋಜನೆಗಳು ಕೂಡಾ ಕಾರಣ” ಎಂದು ಬ್ಲೂಮ್‌ಬರ್ಗ್ ಕಳೆದ ತಿಂಗಳು ಉಲ್ಲೇಖಿಸಿತ್ತು.

ಇದನ್ನೂ ಓದಿ: ಬಹುಜನ ಭಾರತ: ಎನ್.ಡಿ.ಟಿ.ವಿ ಅದಾನಿ ಕೈವಶ; ಮತ್ತೊಂದು ಚಾನೆಲ್ ಮೋದಿ ಪದತಲಕ್ಕೆ

ಜುಲೈನಲ್ಲಿ ಬಿಲ್ ಗೇಟ್ಸ್ ಅವರು ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ಗೆ 20 ಶತಕೋಟಿ ಡಾಲರ್‌‌ ಅನ್ನು ವರ್ಗಾಯಿಸುತ್ತಿರುವುದಾಗಿ ಹೇಳಿದ್ದಾರೆ. ವಾರೆನ್ ಬಫೆಟ್ ಕೂಡಾ ಈಗಾಗಲೇ 35 ಶತಕೋಟಿ ಡಾಲರ್‌‌ಗಿಂತ ಹೆಚ್ಚಿನ ಹಣವನ್ನು ಚಾರಿಟಿಗೆ ದೇಣಿಗೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 2.21 lahk crores ಸಾಲ ಅದಾನಿ ಸಮೂಹದ ಸಾಲದ ಒಟ್ಟು ಮೊತ್ತ.. ಹೀಗೆ ಜನರ ದುಡ್ಡನ್ನ ಸಾಲ ಪಡೆದು ಪ್ರಪಂಚದ 2ಅಷ್ಟೇ ಅಲ್ಲ ಮೊದಲನೇ ಶ್ರೀಮಂತನಾದರೂ ಇದರಿಂದ ಯಾವೊಬ್ಬ ಭಾರತೀಯನ ಬದುಕು ಉದ್ದಾರವಾಗೋಲ್ಲ…. ಅದನಿಗೆ ಅಭಿನಂದನೆಗಳು 😏😏💐💐

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...