Homeಕರ್ನಾಟಕಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

ಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

- Advertisement -
- Advertisement -

“ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೂ (ಆರ್‌ಡಿಪಿಆರ್‌) ವೇದಗಣಿತದ ಕಲಿಕೆಗೂ ಸಂಬಂಧವೇನು?” ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

ರಾಜ್ಯದ ಹಲವಾರು ಶಾಲೆಗಳಲ್ಲಿನ 5ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯಿತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯಿತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP, TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಡಿಪಿಆರ್‌ ಏಕೆ ವೇದಗಣಿತವನ್ನು ಕಲಿಸಲು ಹೊರಟಿದೆ? ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಟ್ಟಡಗಳು, ಅಂಗನವಾಡಿಗಳೆಲ್ಲ ಚೆನ್ನಾಗಿ ಅಭಿವೃದ್ಧಿಯಾಗಿವೆಯೇ? ಇವುಗಳನ್ನು ಆರ್‌ಡಿಪಿಆರ್‌‌ ದುರಸ್ತಿ ಮಾಡಬೇಕಾಲ್ಲವೇ? ಅಂಗನವಾಡಿ, ಶಾಲೆಗಳು ಸೋರುತ್ತಿವೆ ಎಂಬ ವಿಷಯ ಸದನದಲ್ಲಿ ಚರ್ಚೆಯಾಗುತ್ತಲೇ ಇದೆ. ಇದರ ಬಗ್ಗೆ ಆರ್‌ಡಿಪಿಆರ್‌ ಗಮನ ಹರಿಸುವುದನ್ನು ಬಿಟ್ಟು ವೇದಗಣಿತದ ಬಗ್ಗೆ ಆಸಕ್ತಿ ತೋರಿಸುತ್ತಿರುವುದು ಏತಕ್ಕೆ?” ಎಂದು ಕೇಳಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಆರ್‌ಡಿಪಿಆರ್‌ ಹಣವನ್ನು ಯಾವ ಕಾನೂನಿನ ಅಡಿಯಲ್ಲಿ ವೇದಗಣಿತ ಕಲಿಸಲು ಬಳಸಲು ಮುಂದಾಗಿದ್ದಾರೆ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಏನನ್ನು ಹೇಳುತ್ತದೆ? ಆರ್‌ಡಿಪಿಆರ್‌ನವರು ಶಿಕ್ಷಣವನ್ನು ನೀಡಬಹುದಾ? ಹಾಗಾದರೆ ನಾಳೆ ಶಿಕ್ಷಣ ಇಲಾಖೆಯವರು ರಸ್ತೆ ನಿರ್ಮಾಣ ಕೆಲಸ ಮಾಡುತ್ತಾರೆಯೇ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ 29,000 ಕೋಟಿ ರೂ. ಮೀಸಲಾಗಿದೆ. ಇಷ್ಟು ದೊಡ್ಡ ಬಜೆಟ್‌ನಲ್ಲಿ ದಲಿತ ಮಕ್ಕಳ ಭವಿಷ್ಯವನ್ನು ಬದಲಿಸುವುದನ್ನು ಬಿಟ್ಟು ಇಂಥವನ್ನೆಲ್ಲ ಮಾಡುವುದರಿಂದ ಏನು ಪ್ರಯೋಜನ? ಒಂದು ವೇಳೆ ಶಿಕ್ಷಣ ಇಲಾಖೆಯೇ ವೇದಗಣಿತ ಕಲಿಸುತ್ತೇನೆಂದರೂ ಇದರ ಹಿಂದಿನ ಉದ್ದೇಶವೇನು?” ಎಂದು ಪ್ರಶ್ನಿಸಿದರು.

“ವೈಜ್ಞಾನಿಕ ಮನೋಭಾವನೆ ಇಲ್ಲದೆ ಐದು ಟ್ರಿಲಿಯನ್‌ ಆರ್ಥಿಕತೆ ಸೃಷ್ಟಿಸಲು ಸಾಧ್ಯವೇ? ಶ್ರೇಷ್ಠ ಭಾರತ ಕಟ್ಟಲು ಸಾಧ್ಯವೇ? ಪುರಾಣ ಗ್ರಂಥಗಳನ್ನು ಅಧ್ಯಯನ ಮಾಡಿ. ಆದರೆ ಪುರಾಣಗಳನ್ನೇ ಇತಿಹಾಸ ಎನ್ನುವುದು ಸರಿಯೇ? ರಾಮಾಯಣದಲ್ಲಿ ಹನುಮಾನ್‌ ಸಂಜೀವಿನಿ ಬೆಟ್ಟವನ್ನು ಹೊತ್ತು ತಂದ ಎಂದು ಹೇಳಲಾಗುತ್ತದೆ. ವೈಜ್ಞಾನಿಕವಾಗಿ ಇದು ಸಾಧ್ಯವಿಲ್ಲ. ಆದರೆ ವಿಜ್ಞಾನಕ್ಕೂ ಪುರಾಣಕ್ಕೂ ಹೋಲಿಕೆ ಮಾಡುವುದು ಸರಿಯೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

“ವೈಜ್ಞಾನಿಕ ಮನೋಭಾವನೆಯನ್ನು ಇಟ್ಟುಕೊಂಡು ವೇದಗಣಿತವನ್ನು ಕಲಿಸುವುದಾದರೆ ಪಠ್ಯಕ್ರಮದಲ್ಲೇ ಅಳವಡಿಸಬಹುದಿತ್ತಲ್ಲ? ಹೀಗಾಗಲೇ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಹಿಂದುಳಿದ ವರ್ಗ ಹಾಗೂ ಸಮುದಾಯದ ವಿದ್ಯಾರ್ಥಿಗಳು ವಿಜ್ಞಾನ, ಗಣಿತದಂತಹ ವಿಷಯಗಳಲ್ಲಿ ವೀಕ್‌ ಇರುತ್ತಾರೆ. ಶಿಕ್ಷಣ ಇಲಾಖೆಯು ನಿಗದಿಪಡಿಸಿದ ಪಠ್ಯಕ್ರಮವನ್ನು ಶಾಲೆಗಳಲ್ಲಿ ಬೋಧಿಸಲಾಗುತ್ತಿದೆ. ಹೀಗಿರುವಾಗ ಪರ್ಯಾಯವಾಗಿ ಬೇರೊಂದು ಗಣಿತವನ್ನು ಕಲಿಸುವುದರಿಂದ ಏನು ಪ್ರಯೋಜನ?” ಎಂದು ಟೀಕಿಸಿದರು.

“ಬಡ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿವೇತನವನ್ನೇ ಸರ್ಕಾರ ಸರಿಯಾಗಿ ನೀಡುತ್ತಿಲ್ಲ. ಶಾಲಾ ಮಕ್ಕಳಿಗೆ ಸರಿಯಾಗಿ ಶೂ ಸಾಕ್ಸ್‌ ಕೊಡಲೂ ಆಗದವರು ವೇದಗಣಿತ ಹೇಳಿಕೊಡುತ್ತಾರಂತೆ” ಎಂದು ವ್ಯಂಗ್ಯವಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಮಕ್ಕಳಿಗೆ ಬೇಕಾಗಿರುವುದು ಗಣಿತವೇ ಹೊರತು ವೇದಗಣಿತ ಅಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಮೀಸಲಿಟ್ಟ ಹಣವನ್ನು ವೇದಗಣಿತ ಕಲಿಸಲು ಬಳಸುವುದು ಅಕ್ಷಮ್ಯ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...