Homeಮುಖಪುಟಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

ಕೇರಳ: ಹೊಸದಾಗಿ ನಿರ್ಮಾಣಗೊಳ್ಳಲಿರುವ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಸ್‌ ನಿಲ್ದಾಣ

- Advertisement -
- Advertisement -

ಕಾಲೇಜು ಹುಡುಗ-ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುತ್ತಾರೆ ಎಂಬ ಕಾರಣಕ್ಕೆ ಮೂಲಭೂತವಾದಿಗಳು ಬಸ್‌ನಿಲ್ದಾಣದ ಬೆಂಚ್‌ ಅನ್ನು ಮುರಿದು ಅದರಲ್ಲಿ ಒಬ್ಬರಷ್ಟೆ ಕುಳಿತುಕೊಳ್ಳುವಂತೆ ತಯಾರುಗೊಳಿಸಿದ್ದ ಬಸ್‌ ನಿಲ್ದಾಣವನ್ನು ತಿರುವನಂದಪುರಂ ಕಾರ್ಪೋರೇಷನ್‌ ಅಧಿಕಾರಿಗಳು ಹೊಸದಾಗಿ ನಿರ್ಮಾಣ ಮಾಡಲು ಬೇಕಾಗಿ ತೆಗೆದು ಹಾಕಿದ್ದಾರೆ. ಬೆಂಚನ್ನು ಮುರಿದು ಒಬ್ಬರಿಗೆ ಕೂರುವಂತೆ ತಯಾರಿಗೊಳಿಸಿದ್ದ ಮೂಲಭೂತವಾದಿಗಳ ನಡೆಯನ್ನು ವಿರೋಧಿಸಿದ್ದ ಕಾಲೇಜು ವಿದ್ಯಾರ್ಥಿಗಳು, ‘ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕೂತು’ ಪ್ರತಿಭಟಿಸಿದ್ದು ದೇಶದ ಗಮನಸೆಳೆದಿತ್ತು.

ತಿರುವನಂತಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ (ಸಿಇಟಿ) ಬಳಿಯ ಶ್ರೀಕಾರ್ಯಂನ ಅದೇ ಸ್ಥಳದಲ್ಲಿ ಲಿಂಗ ತಟಸ್ಥ ಬಸ್ ನಿಲ್ದಾಣವನ್ನು ನಿರ್ಮಿಸುವುದಾಗಿ ನಗರದ ಮೇಯರ್ ಆರ್ಯ ಎಸ್. ರಾಜೇಂದ್ರನ್ ಭರವಸೆ ನೀಡಿದ ಎರಡು ತಿಂಗಳ ನಂತರ ಕಾರ್ಪೋರೇಷನ್‌ ಅಧಿಕಾರಿಗಳು ಅದನ್ನು ತೆಗೆದುಹಾಕಿದ್ದಾರೆ. ಇದೀಗ ಅಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಾಣಗೊಳ್ಳಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯಾರ್ಥಿಗಳು ಒಬ್ಬರ ಮಡಿಲಲ್ಲಿ ಮತ್ತೊಬ್ಬರು ಕುಳಿತು ಪ್ರತಿಭಟನೆ ನಡೆಸುತ್ತಿರುವ ಫೋಟೋಗಳು ವೈರಲ್ ಆದ ನಂತರ ಜುಲೈನಲ್ಲಿ ಮೇಯರ್‌‌ ಆರ್ಯ ರಾಜೇಂದ್ರನ್ ಅವರು ಪ್ರದೇಶಕ್ಕೆ ಭೇಟಿ ನೀಡಿದ್ದರು. ಮೂಲಭೂತವಾದಿಗಳ ಕ್ರಮವನ್ನು ವಿರೋಧಿಸಿದ್ದ ಅವರು “ಬೆಂಚ್ ಅನ್ನು ಮೂರು ಭಾಗಗಳಾಗಿ ಕತ್ತರಿಸುವ ವಿಧಾನವು ಅನುಚಿತ ಮಾತ್ರವಲ್ಲದೆ ಕೇರಳದಂತಹ ಪ್ರಗತಿಪರ ಸಮಾಜಕ್ಕೆ ಯೋಗ್ಯವಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

“ರಾಜ್ಯದಲ್ಲಿ ಹುಡುಗಿಯರು ಮತ್ತು ಹುಡುಗರು ಒಟ್ಟಿಗೆ ಕುಳಿತುಕೊಳ್ಳಲು ಯಾವುದೇ ನಿಷೇಧವಿಲ್ಲ. ಅನೈತಿಕ ಪೊಲೀಸ್‌ಗಿರಿಯನ್ನು ಇನ್ನೂ ನಂಬುವವರು ಪ್ರಾಚೀನ ಕಾಲದಲ್ಲಿ ವಾಸಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆಡಳಿತಾರೂಢ ಸಿಪಿಐ(ಎಂ)ನ ಯುವ ಘಟಕ ಡಿವೈಎಫ್‌ಐ ಕೂಡ ಬಸ್ ನಿಲ್ದಾಣದಲ್ಲಿ ಬೆಂಚ್ ಒಡೆಯುವುದನ್ನು ಒಪ್ಪಲಾಗದು ಎಂದು ಹೇಳಿತ್ತು.

ಅಂದು ನಡೆದಿದ್ದೇನು?

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು.

ಅದಕ್ಕಾಗಿ ಸ್ಥಳೀಯರು ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಮರುದಿನ ಇದನ್ನು ಗಮನಿಸಿದ್ದ ವಿದ್ಯಾರ್ಥಿಗಳು ಪ್ರತಿಭಟಿಸಲು ನಿರ್ಧರಿಸಿ, ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ಕೇರಳದಲ್ಲಿ ಬಂಡವಾಳಶಾಹಿಗಳೊಂದಿಗೆ ಕೈಜೋಡಿಸಿದ ಆಪ್; ಹುಸಿಯಾಗುತ್ತಿರುವ ಪರ್ಯಾಯ ರಾಜಕಾರಣದ ಭರವಸೆ

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷ ಕೆ.ಪೆ ಫೆಬಿ ಅಂದು ಹೇಳಿದ್ದರು.

ಈ ಕುರಿತು ಮಾತನಾಡಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ,“ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕೇರಳ: ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಪ್ರೊಟೆಕ್ಷನ್ ಯೋಜನೆ ಆರಂಭ

ಈ ಹಿಂದೆ ಕೂಡಾ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ಜಾರಿಗೆ ತಂದಾಗ ಭಾರಿ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....