Homeಮುಖಪುಟ‘40% ಕಮಿಷನ್ CMಗೆ ಸ್ವಾಗತ’: ಬೊಮ್ಮಾಯಿಯನ್ನು ವ್ಯಂಗ್ಯವಾಗಿ ಸ್ವಾಗತಿಸಿದ ತೆಲಂಗಾಣ ಆಡಳಿತರೂಢ ಪಕ್ಷ ಟಿಆರ್‌ಎಸ್

‘40% ಕಮಿಷನ್ CMಗೆ ಸ್ವಾಗತ’: ಬೊಮ್ಮಾಯಿಯನ್ನು ವ್ಯಂಗ್ಯವಾಗಿ ಸ್ವಾಗತಿಸಿದ ತೆಲಂಗಾಣ ಆಡಳಿತರೂಢ ಪಕ್ಷ ಟಿಆರ್‌ಎಸ್

- Advertisement -
- Advertisement -

‘ಹೈದರಾಬಾದ್‌‌‌ ವಿಮೋಚನಾ ದಿನ’ದ ಅಂಗವಾಗಿ ತೆಲಂಗಾಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಗುರಿಯಾಗಿಸಿರುವ ಆಡಳಿತರೂಢ ಪಕ್ಷವಾದ ಟಿಆರ್‌ಎಸ್‌‌, ‘40% ಕಮಿಷನ್ ಸಿಎಂಗೆ ಸ್ವಾಗತ’ ಎಂದು ಬರೆದಿರುವ ಬೃಹತ್‌ ಬ್ಯಾನರ್‌‌ ಅನ್ನು ಅಳವಡಿಸಿದೆ ಎಂದು ವರದಿಯಾಗಿದೆ.

ಒಕ್ಕೂಟ ಸರ್ಕಾರದ ವತಿಯಿಂದ ಇದೇ ಮೊದಲ ಬಾರಿ ನಡೆಯುತ್ತಿರುವ ‘ಸೆಪ್ಟೆಂಬರ್ 17’ರ ‘ಹೈದರಾಬಾದ್ ವಿಮೋಚನಾ ದಿನ’ದಲ್ಲಿ ಗೃಹ ಸಚಿವ ಅಮಿತ್‌‌ ಶಾ ಅವರು ತೆಲಂಗಾಣದ ಸಿಕಂದರಾಬಾದ್‌ನ ಸೇನಾ ಪರೇಡ್ ಮೈದಾನದಲ್ಲಿ  ಭಾಗವಹಿಸಲಿದ್ದಾರೆ. ಇದೇ ಮೈದಾನದ ಪಕ್ಕವೆ ಟಿಆರ್‌ಎಸ್‌ ಬೊಮ್ಮಾಯಿ ಅವರನ್ನು ಗುರಿಯಾಗಿಸಿ ಬ್ಯಾನರ್‌ ಅನ್ನು ಅಳವಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಳೆಯ ಹೈದರಾಬಾದ್‌‌ನಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರವು ಇರುವುದರಿಂದ ಈ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಕೂಡಾ ಆಹ್ವಾನವಿದ್ದು, ಇಬ್ಬರೂ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರಾಜ್ಯದ ಹೊಸ ಸಚಿವಾಲಯಕ್ಕೆ ಡಾ. ಅಂಬೇಡ್ಕರ್‌ ಹೆಸರು: ತೆಲಂಗಾಣ ಸಿಎಂ ಕೆಸಿಆರ್ ಘೋಷಣೆ

‘ಸೆಪ್ಟೆಂಬರ್ 17’ರ ದಿನಾಚರಣೆಯನ್ನು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಇಬ್ಬರೂ ಶನಿವಾರ ಹೈದರಾಬಾದ್‌ನಲ್ಲಿ ಪ್ರತ್ಯೇಕ ‘ಸೆಪ್ಟೆಂಬರ್ 17’ರ ಆಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದು, ರಾಜ್ಯದಲ್ಲಿ ತೀವ್ರ ಮತ್ತು ಸ್ಪರ್ಧಾತ್ಮಕ ರಾಜಕೀಯ ಚಟುವಟಿಕೆಯ ದಿನವಾಗಿ ನಿರ್ಮಾಣವಾಗುತ್ತಿದೆ.

ಒಕ್ಕೂಟ ಸರ್ಕಾರ ಇದೆ ಮೊದಲ ಬಾರಿಗೆ ಸೆಪ್ಟೆಂಬರ್ 17 ಅನ್ನು ‘ಹೈದರಾಬಾದ್ ವಿಮೋಚನಾ ದಿನ’ ಎಂದು ಆಚರಿಸುತ್ತಿದೆ. ಆದರೆ ತೆಲಂಗಾಣ ಸರ್ಕಾರವು ಸೆಪ್ಟೆಂಬರ್‌‌ 17ನ್ನು ‘ತೆಲಂಗಾಣ ಏಕೀಕರಣ ದಿನ’ ಎಂದು ಕರೆಯುವ ಯೋಜನೆಯನ್ನು ರೂಪಿಸಿದ್ದು, ಮೂರು ದಿನಗಳ ಹಬ್ಬಗಳನ್ನು ಘೋಷಿಸಿದೆ.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ನಿಜಾಮರ ಆಡಳಿತದ ಅಡಿಯಲ್ಲಿ ಇದ್ದ ಹೈದರಾಬಾದ್ ಭಾರತವು ಸ್ವಾತಂತ್ಯ್ರಗೊಂಡು ಒಂದು ವರ್ಷದ ನಂತರ ಸೆಪ್ಟೆಂಬರ್‌ 17ರಂದು ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....