Homeಮುಖಪುಟದಲಿತರಿಲ್ಲದೆ ಹಿಂದುತ್ವ ಅಪೂರ್ಣ: ಬಿಜೆಪಿ ನಾಯಕ ಗುರು ಪ್ರಕಾಶ್ ಪಾಸ್ವಾನ್

ದಲಿತರಿಲ್ಲದೆ ಹಿಂದುತ್ವ ಅಪೂರ್ಣ: ಬಿಜೆಪಿ ನಾಯಕ ಗುರು ಪ್ರಕಾಶ್ ಪಾಸ್ವಾನ್

- Advertisement -
- Advertisement -

ದಲಿತರ ಸಬಲೀಕರಣವೇ ಹಿಂದುತ್ವ ಚಿಂತನೆ ಮತ್ತು ಭಾರತ ಸಂವಿಧಾನದ ತಿರುಳಾಗಿದೆ. ಭಾರತ ಸ್ವಾತಂತ್ರ್ಯ ಗಳಿಸಿದ 75 ವರ್ಷದಲ್ಲಿ ದಲಿತರ ಸಬಲೀಕರಣದ ಕಡೆಗೆ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಬಿಜೆಪಿ ವಕ್ತಾರ ಗುರು ಪ್ರಕಾಶ್ ಪಾಸ್ವಾನ್ ಹೇಳಿದ್ದಾರೆ.

ನ್ಯೂಜೆರ್ಸಿಯಲ್ಲಿ ನಡೆಯುತ್ತಿರುವ ‘ಇಂಡಿಕ್ ಡೈಲಾಗ್’ ಕಾರ್ಯಕ್ರಮದ ಮೊದಲ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು, “ದಲಿತರಿಗೆ ಸಂಬಂಧಿಸಿದಂತೆ ತಾರತಮ್ಯದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರೂ, ದಲಿತರ ಸಬಲೀಕರಣವು ಹಿಂದುತ್ವ ಚಿಂತನೆ ಮತ್ತು ಭಾರತೀಯ ಸಂವಿಧಾನದ ತಿರುಳಾಗಿದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಯುಎಸ್ ಪ್ರವಾಸದಲ್ಲಿರುವ ಪಾಸ್ವಾನ್, ಲಾಸ್ ಏಂಜಲೀಸ್ ಮತ್ತು ಸ್ಯಾನ್ ಜೋಸ್‌ನಲ್ಲಿ ನಡೆದ ‘ದಲಿತ, ಬಹುಜನ ಮತ್ತು ಹಿಂದುತ್ವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಭಾರತ ಸರ್ಕಾರದ ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯ ನೀತಿಗಳು’ ಎಂಬ ವಿಷಯದ ಕುರಿತು ಭಾಷಣ ಮಾಡಿದ್ದಾರೆ.

ಪಾಟ್ನಾ ವಿಶ್ವವಿದ್ಯಾನಿಲಯದ ಕಾನೂನು ಬೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಾಸ್ವಾನ್ ಅವರು ನ್ಯೂಜೆರ್ಸಿಯಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡುತ್ತಾ, “ರಾಮಾಯಣ, ಮಹಾಭಾರತ ಮತ್ತು ಭಾರತ ಸಂವಿಧಾನವು ಹಿಂದೂಗಳು ಮತ್ತು ಭಾರತವನ್ನು ವ್ಯಾಖ್ಯಾನಿಸುವ ಮೂರು ದಾಖಲೆಗಳಾಗಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಈ ಮೂರನ್ನೂ ದಲಿತರು (ರಾಮಾಯಣವನ್ನು ವಾಲ್ಮೀಕಿ ಮಹರ್ಷಿ, ಮಹಾಭಾರತವನ್ನು ವೇದವ್ಯಾಸರು ಮತ್ತು ಭಾರತದ ಸಂವಿಧಾನವನ್ನು ಡಾ.ಬಿ.ಆರ್‌.ಅಂಬೇಡ್ಕರ್‌‌) ರಚಿಸಿದ್ದಾರೆ. ಹಾಗಾದರೆ ದಲಿತರು ಭಾರತದ ಭಾಗವಾಗಿಲ್ಲ ಎಂಬ ಪ್ರಶ್ನೆ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯಗಳು ಮತ್ತು ದಬ್ಬಾಳಿಕೆಯ ಇತಿಹಾಸವನ್ನು ನಿರಾಕರಿಸಲು ಅಥವಾ ಮುಚ್ಚಿಡಲು ಸಾಧ್ಯವಿಲ್ಲ ಎಂದೂ ಪಾಸ್ವಾನ್ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿರಿ: ಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

“ಆದಾಗ್ಯೂ, ದಲಿತ ಸಬಲೀಕರಣವನ್ನು ಪ್ರತಿಪಾದಿಸುವ ಮೂಲಕ ಭಾರತವು 1950ರಿಂದ (ಜನವರಿ 26, 1950, ಭಾರತ ಗಣರಾಜ್ಯವು ಲಿಖಿತ ಸಂವಿಧಾನವನ್ನು ನೀಡಿದಾಗ) ಏನು ಮಾಡುತ್ತಿದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಫಲಿತಾಂಶಗಳನ್ನು ನೋಡುವುದು ಸಹ ಮುಖ್ಯವಾಗಿದೆ” ಎಂದಿದ್ದಾರೆ.

ತಮ್ಮ ಭಾಷಣದಲ್ಲಿ ದಲಿತ ಚೇಂಬರ್ ಆಫ್ ಕಾಮರ್ಸ್, ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಅವರಂತಹ ಅಪ್ರತಿಮ ದಲಿತ ನಾಯಕರ ಪ್ರಭಾವದ ಬಗ್ಗೆ ಮಾತನಾಡಿದ್ದಾರೆ.

ಸ್ವಚ್ಛ ಭಾರತ್ ಮಿಷನ್, ಪಿಎಂ ಮುದ್ರಾ, ರಾಜ್ಯಪಾಲರ ನೇಮಕ, ರಾಷ್ಟ್ರೀಯ ನಾಗರಿಕ ಪ್ರಶಸ್ತಿಗಳಿಗೆ ದಲಿತರನ್ನು ಗುರುತಿಸುವುದು ಮೊದಲಾದ ವಿಚಾರಗಳ ಕುರಿತು ಪಾಸ್ವಾನ್ ಪ್ರಸ್ತಾಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದುತ್ವ ಅದೊಂದು ಅಸಮಾನತೆಯಿಂದ ಕೂಡಿದ ಗೊಡ್ಡು ಸಂಪ್ರದಾಯ ಮತ್ತು ಅನಾಗರೀಕ ಸಂಸ್ಕೃತಿ. ಅನಾಗರೀಕ ಆರ್ಯರು ತಮ್ಮ ಸ್ವಾರ್ಥ ಸಾಧನೆಗಾಗಿ ಸೃಷ್ಟಿಸಿಕೊಂಡಿರುವ ಕಾನೂನು. ಮೂಲತಃ ದಲಿತರು ಹಿಂದೂಗಳು ಅಲ್ಲವೇ ಅಲ್ಲ. ಅವರು ವಿಶಿಷ್ಟ ವೈಚಾರಿಕತೆ ಹೊಂದಿದ್ದ ನಾಗ ಜನಾಂಗದವರು. ಅವರು ಗೌತಮ ಬುದ್ಧನನ್ನು ಅನುಸರಿಸುತ್ತಿದ್ದರು.

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...