Homeಕರ್ನಾಟಕಭಾರತ್‌ ಜೋಡೋ ಯಾತ್ರೆ ಯಶಸ್ವಿಗೆ ಕೆಪಿಸಿಸಿಯಿಂದ ಸಮಿತಿಗಳ ರಚನೆ: ಡಿ.ಕೆ.ಶಿವಕುಮಾರ್‌

ಭಾರತ್‌ ಜೋಡೋ ಯಾತ್ರೆ ಯಶಸ್ವಿಗೆ ಕೆಪಿಸಿಸಿಯಿಂದ ಸಮಿತಿಗಳ ರಚನೆ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕಾಂಗ್ರೆಸ್‌ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ (ಭಾರತ್ ಜೋಡೋ ಯಾತ್ರೆ) ಕರ್ನಾಟಕದಲ್ಲೂ ಸಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೆಲ ಸಮಿತಿಗಳನ್ನು ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕಾರ್ಯಕ್ರಮದ ಕುರಿತು ಮಾಹಿತಿಯನ್ನು ಮಾಧ್ಯಮಗಳಿಗೆ ಅವರು ನೀಡಿದ್ದಾರೆ. ಪ್ರಚಾರದ ಜವಾಬ್ದಾರಿಯನ್ನು ರಾಮಲಿಂಗಾರೆಡ್ಡಿ ಅವರಿಗೆ, ಬಳ್ಳಾರಿ ಬೃಹತ್ ಸಮಾವೇಶದ ಜವಾಬ್ದಾರಿಯನ್ನು ಪ್ರಚಾರ ಸಮಿತಿ ಅಧ್ಯಕ್ಷರ ನೇತೃತ್ವದ ಸಮಿತಿಗೆ ವಹಿಸಲಾಗಿದೆ. ಸಂಚಾರ ವ್ಯವಸ್ಥೆಯನ್ನು ರೇವಣ್ಣ ಅವರಿಗೆ, ಪ್ರತಿನಿತ್ಯದ ಸಭೆಗಳ ಜವಾಬ್ದಾರಿಯನ್ನು ಕೃಷ್ಣ ಭೈರೇಗೌಡ ಅವರ ನೇತೃತ್ವದ ಸಮಿತಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾಸ್ತವ್ಯ ವ್ಯವಸ್ಥೆಗೆ ದಿನೇಶ್ ಗುಂಡೂರಾವ್ ಅವರ ಸಮಿತಿ, ಮೈಸೂರು ಚಾಮರಾಜನಗರ ಭಾಗದ ಉಸ್ತುವಾರಿಯನ್ನು ಧ್ರುವನಾರಾಯಣ ಅವರ ಸಮಿತಿ, ಮೈಸೂರು ನಗರದ ಉಸ್ತುವಾರಿ ಮಹದೇವಪ್ಪ ಹಾಗೂ ಯತೀಂದ್ರ ಅವರಿಗೆ, ಮಂಡ್ಯ ಭಾಗದ ಉಸ್ತುವಾರಿ ಚಲುವರಾಯಸ್ವಾಮಿ, ತುಮಕೂರು ಭಾಗಕ್ಕೆ ಡಾ.ಜಿ.ಪರಮೇಶ್ವರ್, ಚಳ್ಳಕೆರೆ ಭಾಗದಲ್ಲಿ ಸಲೀಂ ಅಹ್ಮದ್ ಅವರು ಸ್ಥಳೀಯ ಶಾಸಕರ ಜತೆ ಜವಾಬ್ದಾರಿ ನಿಭಾಯಿಸುತ್ತಾರೆ. ರಾಯಚೂರು ಉಸ್ತುವಾರಿಯನ್ನು ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಮಹಿಳೆಯರ ಸಂಘಟನೆಗೆ ಐದಾರು ತಂಡಗಳನ್ನು ರಚಿಸಲಾಗಿದೆ. ಗಾಂಧಿ ಜಯಂತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಿ.ಎಲ್. ಶಂಕರ್ ಅವರ ಉಸ್ತುವಾರಿ ನೀಡಲಾಗಿದೆ. ಉಳಿದ ಜವಾಬ್ದಾರಿಗಳನ್ನು ಬೇರೆ ಶಾಸಕರುಗಳಿಗೆ ನೀಡಲಾಗುವುದು. ಪದಾಧಿಕಾರಿಗಳು ತಮ್ಮ ಕ್ಷೇತ್ರಗಳಲ್ಲಿ ಸಂಘಟನೆ ಮಾಡಲಿದ್ದಾರೆ ಎಂದಿದ್ದಾರೆ.

ಈ ಯಾತ್ರೆಗೆ ಪ್ರಿಯಾಂಕಾ ಗಾಂಧಿ ಅವರು ಆಗಮಿಸುತ್ತಾರಾ ಎಂಬ ಪ್ರಶ್ನೆಗೆ, “ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಪಾದಯಾತ್ರೆಗೆ ಆಗಮಿಸುತ್ತಾರೆ ಎಂಬ ಸುದ್ದಿ ಇದೆ. ಬಹುತೇಕ ರಾಷ್ಟ್ರೀಯ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ವೇಗಕ್ಕೆ ಬೇರೆಯವರು ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದೀರಿ ಎಂದು ಕೇಳಿದಾಗ, “ನಮ್ಮ ನಾಯಕರು ಸ್ಪಂದಿಸುತ್ತಿಲ್ಲ ಎಂದು ಹೇಳಿದವರು ಯಾರು? ಎಲ್ಲರೂ ಸ್ಪಂದಿಸುತ್ತಾ ಕೆಲಸ ಮಾಡುತ್ತಿದ್ದಾರೆ. ನನ್ನ ವೇಗ ಹೆಚ್ಚಾಗಿರಬಹುದು. ಕೆಲವರಿಗೆ ಅವರ ಕ್ಷೇತ್ರದಲ್ಲಿನ ಜವಾಬ್ದಾರಿ ಹೆಚ್ಚಾಗಿದೆ. ಎಲ್ಲವನ್ನೂ ನನ್ನಿಂದಲೇ ಮಾಡಲು ಆಗುವುದಿಲ್ಲ. ನಮ್ಮ ನಾಯಕರು ಅವರವರ ಕೆಲಸ ಮಾಡುತ್ತಿದ್ದಾರೆ. ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಪ್ರತಿ ಕ್ಷೇತ್ರಕ್ಕೂ ಹೋಗಬೇಕು, ಪ್ರಧಾನ ಕಾರ್ಯದರ್ಶಿಗಳು ಪ್ರತಿ ಪಂಚಾಯ್ತಿಗೆ ಹೋಗುವ ಜವಾಬ್ದಾರಿ ನೀಡಿದ್ದೇವೆ. ಆ ಪ್ರಕಾರ ಅವರು ಸಂಘಟನೆ ಮಾಡಬೇಕು. ಸಂಘಟನೆ ಇಲ್ಲದೇ ಯಶಸ್ಸು ಸಿಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಸಭೆಯ ನಿಮ್ಮ ಮಾತಿನಲ್ಲಿ, ಬೇರೆಯವರು ಸಹಕಾರ ನೀಡುತ್ತಿಲ್ಲ ಎಂಬ ನೋವಿತ್ತು ಎಂದು ಹೇಳಿದಾಗ, “ನನಗೆ ಅಸಹಕಾರದ ನೋವಿಲ್ಲ. ಸರ್ಕಾರ ಅಧಿವೇಶನ ಕರೆದಾಗ ಕೇವಲ ವಿರೋಧ ಪಕ್ಷದ ನಾಯಕರೇ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಅವರಿಗೆ ನಾನು ಸೇರಿದಂತೆ 69 ಶಾಸಕರ ಸಹಕಾರ ಇರಬೇಕು. ಇನ್ನು ಸರ್ಕಾರದ ಪರ ನೂರಕ್ಕೂ ಹೆಚ್ಚು ಶಾಸಕರಿದ್ದರೂ ಸಚಿವರುಗಳು ಅಧಿವೇಶನಕ್ಕೆ ಬರುತ್ತಿಲ್ಲ. ಅವರು ಸರ್ಕಾರದ ಸಾಧನೆ ಕಾರ್ಯಕ್ರಮ ಮಾಡಿದಾಗ ಎಷ್ಟು ಜನ ಸಚಿವರು ಹೋಗಿದ್ದರು? ಏನಾಯ್ತು? ಎಷ್ಟು ಜನ ಇದ್ದರು. ಯಡಿಯೂರಪ್ಪ ಅವರ ಭಾಷಣ ಮುಗಿದ ನಂತರ ಎಲ್ಲರೂ ಖಾಲಿ ಆದರು. ಇದರ ಬಗ್ಗೆ ಯಾಕೆ ಮಾತನಾಡುವುದಿಲ್ಲ? ಅದನ್ನು ಅಸಹಕಾರ ಚಳವಳಿ ಎನ್ನುತ್ತೀರಾ? ನಾನು ನಮ್ಮ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿ ತಿಳಿಸಿದ್ದೇನೆ ಅಷ್ಟೇ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

“ನಮ್ಮ ಶಾಸಕರುಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಅವರು ಟಾರ್ಗೆಟ್ ನೀಡಿದ್ದಾರೆ. ಶಾಸಕರು ಎಂದರೆ ಕೇವಲ ಮದುವೆ ಸಮಾರಂಭ, ಟೇಪ್ ಕಟ್ ಕಾರ್ಯಕ್ರಮಕ್ಕೆ ಹೋಗುವುದಲ್ಲ. ಮನೆ ಮನೆಗೆ ಹೋಗಿ ಬೂತ್ ಯಾತ್ರಾ ಮಾಡಬೇಕು ಎಂದು ಬಯಸುತ್ತೇನೆ. ಅವರು ಮೊದಲು ತಮ್ಮ ಹೊಲ ಚೆನ್ನಾಗಿ ಬೇಸಾಯ ಮಾಡಬೇಕು. ನಂತರ ಬಿತ್ತನೆ ಮಾಡಬೇಕು ಎಂದು ಹೇಳಿದ್ದೇನೆ” ಎಂದಿದ್ದಾರೆ.

ಇ.ಡಿ. ವಿಚಾರಣೆಗೆ ಹಾಜರಾಗುತ್ತೀರ ಎಂದು ಕೇಳಿದಾಗ, “ಮೈಸೂರು ಪ್ರವಾಸ ಮುಗಿಸಿದ ಬಳಿಕ ದೆಹಲಿಗೆ ಹೋಗಿ ಇಡಿ ತನಿಖೆ ಎದುರಿಸುತ್ತೇನೆ. ಅವರು ಯಾವ ಕಾರಣಕ್ಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಅಲ್ಲಿಗೆ ಹೋಗಿ ವಿಚಾರ ತಿಳಿಯುತ್ತೇನೆ. ಯಡಿಯೂರಪ್ಪ ಅವರ ಸರ್ಕಾರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ನೀಡಿದ್ದು, ಅದನ್ನು ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ ಹಾಕಿದ್ದೇನೆ. ಮೊದಲ ಬಾರಿಗೆ ಇಡಿ ನೋಟಿಸ್ ಬಂದಿದೆ. ಅವರ ಬಳಿ ಎಲ್ಲಾ ಮಾಹಿತಿ ಇದೆ. ಆದರೂ ಹೊಸತಾಗಿ ಯಾಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...