Homeಕರ್ನಾಟಕಭಾರತ್‌ ಜೋಡೋ ಯಾತ್ರೆ ಯಶಸ್ವಿಗೆ ಕೆಪಿಸಿಸಿಯಿಂದ ಸಮಿತಿಗಳ ರಚನೆ: ಡಿ.ಕೆ.ಶಿವಕುಮಾರ್‌

ಭಾರತ್‌ ಜೋಡೋ ಯಾತ್ರೆ ಯಶಸ್ವಿಗೆ ಕೆಪಿಸಿಸಿಯಿಂದ ಸಮಿತಿಗಳ ರಚನೆ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕಾಂಗ್ರೆಸ್‌ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ (ಭಾರತ್ ಜೋಡೋ ಯಾತ್ರೆ) ಕರ್ನಾಟಕದಲ್ಲೂ ಸಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೆಲ ಸಮಿತಿಗಳನ್ನು ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕಾರ್ಯಕ್ರಮದ ಕುರಿತು ಮಾಹಿತಿಯನ್ನು ಮಾಧ್ಯಮಗಳಿಗೆ ಅವರು ನೀಡಿದ್ದಾರೆ. ಪ್ರಚಾರದ ಜವಾಬ್ದಾರಿಯನ್ನು ರಾಮಲಿಂಗಾರೆಡ್ಡಿ ಅವರಿಗೆ, ಬಳ್ಳಾರಿ ಬೃಹತ್ ಸಮಾವೇಶದ ಜವಾಬ್ದಾರಿಯನ್ನು ಪ್ರಚಾರ ಸಮಿತಿ ಅಧ್ಯಕ್ಷರ ನೇತೃತ್ವದ ಸಮಿತಿಗೆ ವಹಿಸಲಾಗಿದೆ. ಸಂಚಾರ ವ್ಯವಸ್ಥೆಯನ್ನು ರೇವಣ್ಣ ಅವರಿಗೆ, ಪ್ರತಿನಿತ್ಯದ ಸಭೆಗಳ ಜವಾಬ್ದಾರಿಯನ್ನು ಕೃಷ್ಣ ಭೈರೇಗೌಡ ಅವರ ನೇತೃತ್ವದ ಸಮಿತಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾಸ್ತವ್ಯ ವ್ಯವಸ್ಥೆಗೆ ದಿನೇಶ್ ಗುಂಡೂರಾವ್ ಅವರ ಸಮಿತಿ, ಮೈಸೂರು ಚಾಮರಾಜನಗರ ಭಾಗದ ಉಸ್ತುವಾರಿಯನ್ನು ಧ್ರುವನಾರಾಯಣ ಅವರ ಸಮಿತಿ, ಮೈಸೂರು ನಗರದ ಉಸ್ತುವಾರಿ ಮಹದೇವಪ್ಪ ಹಾಗೂ ಯತೀಂದ್ರ ಅವರಿಗೆ, ಮಂಡ್ಯ ಭಾಗದ ಉಸ್ತುವಾರಿ ಚಲುವರಾಯಸ್ವಾಮಿ, ತುಮಕೂರು ಭಾಗಕ್ಕೆ ಡಾ.ಜಿ.ಪರಮೇಶ್ವರ್, ಚಳ್ಳಕೆರೆ ಭಾಗದಲ್ಲಿ ಸಲೀಂ ಅಹ್ಮದ್ ಅವರು ಸ್ಥಳೀಯ ಶಾಸಕರ ಜತೆ ಜವಾಬ್ದಾರಿ ನಿಭಾಯಿಸುತ್ತಾರೆ. ರಾಯಚೂರು ಉಸ್ತುವಾರಿಯನ್ನು ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಮಹಿಳೆಯರ ಸಂಘಟನೆಗೆ ಐದಾರು ತಂಡಗಳನ್ನು ರಚಿಸಲಾಗಿದೆ. ಗಾಂಧಿ ಜಯಂತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಿ.ಎಲ್. ಶಂಕರ್ ಅವರ ಉಸ್ತುವಾರಿ ನೀಡಲಾಗಿದೆ. ಉಳಿದ ಜವಾಬ್ದಾರಿಗಳನ್ನು ಬೇರೆ ಶಾಸಕರುಗಳಿಗೆ ನೀಡಲಾಗುವುದು. ಪದಾಧಿಕಾರಿಗಳು ತಮ್ಮ ಕ್ಷೇತ್ರಗಳಲ್ಲಿ ಸಂಘಟನೆ ಮಾಡಲಿದ್ದಾರೆ ಎಂದಿದ್ದಾರೆ.

ಈ ಯಾತ್ರೆಗೆ ಪ್ರಿಯಾಂಕಾ ಗಾಂಧಿ ಅವರು ಆಗಮಿಸುತ್ತಾರಾ ಎಂಬ ಪ್ರಶ್ನೆಗೆ, “ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಪಾದಯಾತ್ರೆಗೆ ಆಗಮಿಸುತ್ತಾರೆ ಎಂಬ ಸುದ್ದಿ ಇದೆ. ಬಹುತೇಕ ರಾಷ್ಟ್ರೀಯ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ವೇಗಕ್ಕೆ ಬೇರೆಯವರು ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದೀರಿ ಎಂದು ಕೇಳಿದಾಗ, “ನಮ್ಮ ನಾಯಕರು ಸ್ಪಂದಿಸುತ್ತಿಲ್ಲ ಎಂದು ಹೇಳಿದವರು ಯಾರು? ಎಲ್ಲರೂ ಸ್ಪಂದಿಸುತ್ತಾ ಕೆಲಸ ಮಾಡುತ್ತಿದ್ದಾರೆ. ನನ್ನ ವೇಗ ಹೆಚ್ಚಾಗಿರಬಹುದು. ಕೆಲವರಿಗೆ ಅವರ ಕ್ಷೇತ್ರದಲ್ಲಿನ ಜವಾಬ್ದಾರಿ ಹೆಚ್ಚಾಗಿದೆ. ಎಲ್ಲವನ್ನೂ ನನ್ನಿಂದಲೇ ಮಾಡಲು ಆಗುವುದಿಲ್ಲ. ನಮ್ಮ ನಾಯಕರು ಅವರವರ ಕೆಲಸ ಮಾಡುತ್ತಿದ್ದಾರೆ. ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಪ್ರತಿ ಕ್ಷೇತ್ರಕ್ಕೂ ಹೋಗಬೇಕು, ಪ್ರಧಾನ ಕಾರ್ಯದರ್ಶಿಗಳು ಪ್ರತಿ ಪಂಚಾಯ್ತಿಗೆ ಹೋಗುವ ಜವಾಬ್ದಾರಿ ನೀಡಿದ್ದೇವೆ. ಆ ಪ್ರಕಾರ ಅವರು ಸಂಘಟನೆ ಮಾಡಬೇಕು. ಸಂಘಟನೆ ಇಲ್ಲದೇ ಯಶಸ್ಸು ಸಿಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಸಭೆಯ ನಿಮ್ಮ ಮಾತಿನಲ್ಲಿ, ಬೇರೆಯವರು ಸಹಕಾರ ನೀಡುತ್ತಿಲ್ಲ ಎಂಬ ನೋವಿತ್ತು ಎಂದು ಹೇಳಿದಾಗ, “ನನಗೆ ಅಸಹಕಾರದ ನೋವಿಲ್ಲ. ಸರ್ಕಾರ ಅಧಿವೇಶನ ಕರೆದಾಗ ಕೇವಲ ವಿರೋಧ ಪಕ್ಷದ ನಾಯಕರೇ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಅವರಿಗೆ ನಾನು ಸೇರಿದಂತೆ 69 ಶಾಸಕರ ಸಹಕಾರ ಇರಬೇಕು. ಇನ್ನು ಸರ್ಕಾರದ ಪರ ನೂರಕ್ಕೂ ಹೆಚ್ಚು ಶಾಸಕರಿದ್ದರೂ ಸಚಿವರುಗಳು ಅಧಿವೇಶನಕ್ಕೆ ಬರುತ್ತಿಲ್ಲ. ಅವರು ಸರ್ಕಾರದ ಸಾಧನೆ ಕಾರ್ಯಕ್ರಮ ಮಾಡಿದಾಗ ಎಷ್ಟು ಜನ ಸಚಿವರು ಹೋಗಿದ್ದರು? ಏನಾಯ್ತು? ಎಷ್ಟು ಜನ ಇದ್ದರು. ಯಡಿಯೂರಪ್ಪ ಅವರ ಭಾಷಣ ಮುಗಿದ ನಂತರ ಎಲ್ಲರೂ ಖಾಲಿ ಆದರು. ಇದರ ಬಗ್ಗೆ ಯಾಕೆ ಮಾತನಾಡುವುದಿಲ್ಲ? ಅದನ್ನು ಅಸಹಕಾರ ಚಳವಳಿ ಎನ್ನುತ್ತೀರಾ? ನಾನು ನಮ್ಮ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿ ತಿಳಿಸಿದ್ದೇನೆ ಅಷ್ಟೇ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

“ನಮ್ಮ ಶಾಸಕರುಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಅವರು ಟಾರ್ಗೆಟ್ ನೀಡಿದ್ದಾರೆ. ಶಾಸಕರು ಎಂದರೆ ಕೇವಲ ಮದುವೆ ಸಮಾರಂಭ, ಟೇಪ್ ಕಟ್ ಕಾರ್ಯಕ್ರಮಕ್ಕೆ ಹೋಗುವುದಲ್ಲ. ಮನೆ ಮನೆಗೆ ಹೋಗಿ ಬೂತ್ ಯಾತ್ರಾ ಮಾಡಬೇಕು ಎಂದು ಬಯಸುತ್ತೇನೆ. ಅವರು ಮೊದಲು ತಮ್ಮ ಹೊಲ ಚೆನ್ನಾಗಿ ಬೇಸಾಯ ಮಾಡಬೇಕು. ನಂತರ ಬಿತ್ತನೆ ಮಾಡಬೇಕು ಎಂದು ಹೇಳಿದ್ದೇನೆ” ಎಂದಿದ್ದಾರೆ.

ಇ.ಡಿ. ವಿಚಾರಣೆಗೆ ಹಾಜರಾಗುತ್ತೀರ ಎಂದು ಕೇಳಿದಾಗ, “ಮೈಸೂರು ಪ್ರವಾಸ ಮುಗಿಸಿದ ಬಳಿಕ ದೆಹಲಿಗೆ ಹೋಗಿ ಇಡಿ ತನಿಖೆ ಎದುರಿಸುತ್ತೇನೆ. ಅವರು ಯಾವ ಕಾರಣಕ್ಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಅಲ್ಲಿಗೆ ಹೋಗಿ ವಿಚಾರ ತಿಳಿಯುತ್ತೇನೆ. ಯಡಿಯೂರಪ್ಪ ಅವರ ಸರ್ಕಾರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ನೀಡಿದ್ದು, ಅದನ್ನು ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ ಹಾಕಿದ್ದೇನೆ. ಮೊದಲ ಬಾರಿಗೆ ಇಡಿ ನೋಟಿಸ್ ಬಂದಿದೆ. ಅವರ ಬಳಿ ಎಲ್ಲಾ ಮಾಹಿತಿ ಇದೆ. ಆದರೂ ಹೊಸತಾಗಿ ಯಾಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...