Homeಕರ್ನಾಟಕಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

- Advertisement -
- Advertisement -

ಅವೈಜ್ಞಾನಿಕ ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪಕ್ಕೆ ಗುರಿಯಾಗಿ ವಿವಾದದ ಕೇಂದ್ರವಾಗಿರುವ ರೋಹಿತ್ ಚಕ್ರತೀರ್ಥ ಬರೆದ ಲೇಖನವೊಂದನ್ನು ಪಠ್ಯಪುಸ್ತಕ ಸಮಿತಿಯಲ್ಲಿ ಚರ್ಚೆಯನ್ನೇ ನಡೆಸದೇ ಕುವೆಂಪು ವಿಶ್ವವಿದ್ಯಾಲಯದ ಬಿಸಿಎ ಪದವಿಯ ಪಠ್ಯಕ್ಕೆ ಸೇರಿಸಿರುವುದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ‘ಪ್ರಜಾವಾಣಿ’ ದಿನಪತ್ರಿಕೆ ವಿಶೇಷ ವರದಿ ಮಾಡಿದ್ದು, “ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ಪಠ್ಯಗಳನ್ನು ಎನ್‌ಇಪಿ ಪಠ್ಯಕ್ರಮದಂತೆ ಪರಿಷ್ಕರಿಸಲಾಗುತ್ತಿದೆ. ಕನ್ನಡ ಭಾಷಾ ವಿಷಯದ ಪಠ್ಯದ ತಂತ್ರಜ್ಞಾನ ವಿಭಾಗದಲ್ಲಿನ ‘ಕೃತಕ ಬುದ್ದಿವಂತಿಕೆ; ಭವಿಷ್ಯ ತಂತ್ರಜ್ಞಾನದ ಹೆಬ್ಬಾಗಿಲು’ ಲೇಖನದ ಲೇಖಕರ ಹೆಸರು ರೋಹಿತ್‌ ಬೆಂಗಳೂರು ಎಂದು ಸೇರಿಸಲಾಗಿದೆ. ಇದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಾಗ, “ಇದು ರೋಹಿತ್ ಚಕ್ರತೀರ್ಥ ಅವರ ಲೇಖನ. ಅವರ ಪೂರ್ಣ ಹೆಸರನ್ನು ಮರೆಮಾಚಿ ಮೋಸ ಮಾಡಲಾಗಿದೆ” ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಭೆಯಲ್ಲಿ ಮಾತಿಗೆ ಮಾತು ಬೆಳೆದು, ಸದಸ್ಯರು ಪರಸ್ಪರ ಎಳೆದಾಡಿಕೊಂಡರು ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ರೋಹಿತ್‌ ಚಕ್ರತೀರ್ಥ ಸಂಪಾದಕತ್ವದ ‘ಸೂತ್ರ’ ಪತ್ರಿಕೆಯ 2021ರ ಆಗಸ್ಟ್‌ ಸಂಚಿಕೆಯಲ್ಲಿ ಈ ಲೇಖನ ಪ್ರಕಟವಾಗಿದೆ. ಮುದ್ರಿತ ಪ್ರತಿಯಲ್ಲಿ ಲೇಖಕರ ಹೆಸರು ‘ತತ್ವಬೋಧ’ ಎಂದಿದೆ. ಆದರೆ, ಕುವೆಂಪು ವಿಶ್ವವಿದ್ಯಾಲಯದ ಪಠ್ಯಪುಸ್ತಕದಲ್ಲಿ ರೋಹಿತ್ ಬೆಂಗಳೂರು ಹೆಸರು ನಮೂದಿಸಲಾಗಿದೆ. ಲೇಖನ ಬಳಸಿಕೊಳ್ಳಲು ಅನುಮತಿ ನೀಡಿದ ಪತ್ರಿಕೆಯ ಸಂಪಾದಕೀಯ ಬಳಗ, ಲೇಖಕರ ಹೆಸರನ್ನು ‘ರೋಹಿತ್‌ ಬೆಂಗಳೂರು’ ಎಂದು ಹಾಕುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

ವಿದ್ಯಾರ್ಥಿಗಳಿಗೆ ಲೇಖಕರ ಪರಿಚಯ ಮಾಡಿಕೊಡಬೇಕಲ್ಲವೇ?

ಒಂದು ಲೇಖನವನ್ನು ಪಠ್ಯದಲ್ಲಿ ಅಳವಡಿಸಿದರೆ ಅದನ್ನು ಬರೆದವರ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡಬೇಕಾಗುತ್ತದೆ. ಆದರೆ ಈ ರೀತಿಯಲ್ಲಿ ಪಠ್ಯವನ್ನು ಅಳವಡಿಸಿದರೆ ಲೇಖಕರ ಪರಿಚಯವನ್ನು ಮಾಡಿಕೊಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಇದನ್ನೂ ಓದಿರಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಈ ಕುರಿತು ಪ್ರಶ್ನಿಸಿರುವ ಕನ್ನಡ ಪ್ರಾಧ್ಯಾಪಕರು ಹಾಗೂ ಭಾಷಾ ತಜ್ಞರೂ ಆದ ಡಾ.ರಂಗನಾಥ ಕಂಟನಕುಂಟೆ, “ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಆಗುವ ಬರೆಹಗಳ ಕುರಿತು ಪಾಠ ಮಾಡುವಾಗ ಲೇಖಕರ ಪರಿಚಯ ಮಾಡುವುದು ಒಂದು ಕ್ರಮ. ವಿದ್ಯಾರ್ಥಿಗಳಿಗೆ ಆ ಮೂಲಕ ಬರೆಹಗಾರರ ಕುರಿತು ತಿಳಿವು ನೀಡಲಾಗುವುದು. ಅದಕ್ಕೆ ಲೇಖಕರ ಬಗೆಗೆ ಸರಿಯಾದ ಮಾಹಿತಿಯನ್ನು ಟಿಪ್ಪಣಿಯಾಗಿ ಕೊಡಲಾಗುವುದು. ಆದರೆ ಇಲ್ಲಿ ಲೇಖಕನ ಹೆಸರನ್ನೇ ಸರಿಯಾಗಿ ನೀಡದೆ ಇರುವುದು ಎದ್ದು ಕಾಣುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಲೇಖಕನ ಹೆಸರನ್ನು ಏಕೆ ಬಚ್ಚಿಡಲಾಗುತ್ತಿದೆ? ಹೀಗೆ ಮಾಡುವುದರಿಂದ ಪಠ್ಯದ ಅಧಿಕೃತತೆಯ ಪ್ರಶ್ನೆ ಮೂಡುವುದಿಲ್ಲವೇ? ಪಠ್ಯ ಪುಸ್ತಕ ಗುಪ್ತ ಸಾಹಿತ್ಯವೇ? ಯಾಕೆ ಇಂತಹ ಕಳ್ಳಾಟ? ಇದು ಕೊನೆಗೆ ವಿವಿಗಳ ಘನತೆಯನ್ನು ಪ್ರಶ್ನೆ ಮಾಡುವ ಸನ್ನಿವೇಶ ಸೃಷ್ಟಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಜಿ.ಎನ್‌.ಧನಂಜಯಮೂರ್ತಿ ಎಂಬವರು ಪ್ರತಿಕ್ರಿಯೆ ನೀಡಿದ್ದು, “ಕುವೆಂಪು ವಿಶ್ವವಿದ್ಯಾಲಯದ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿದೆ. ತಮ್ಮ ಆತ್ಮರತಿಯ ಬಗ್ಗೆ ಪರಸ್ಪರ ಭಜನೆ ಮಾಡಿಕೊಳ್ಳುವವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆ. ಕೆಲವರಿಗೆ ತಿಳಿ ಹೇಳಿದರೆ ಅಸಂಬದ್ಧವಾಗಿ ವರ್ತಿಸುತ್ತಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆಯೊ ನೋಡಬೇಕು. ಕುವೆಂಪು ಬಗ್ಗೆ ಟ್ರೋಲ್ ಮಾಡುವ ವ್ಯಕ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಓದಬೇಕಾದದ್ದು ದುರಂತ” ಎಂದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್‌ ಕುಗ್ವೆಯವರು ಈ ಕುರಿತು ಪೋಸ್ಟ್ ಮಾಡಿದ್ದು, “ಇದರ ನೇರ ಹೊಣೆಗಾರಿಕೆಯನ್ನು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಶಾಂತ್‌ ನಾಯಕ್‌ ಅವರು ಹೊರುವರೆ? ಯಾಕೆಂದರೆ ಪಠ್ಯ ಪುಸ್ತಕ ಸಮಿತಿಯ ಪ್ರಧಾನ ಸಂಪಾದಕರೂ ಅವರೇ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...